ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ: ರಕ್ಷಣೆಗೆ ಮುಂದಾಗುವಂತೆ ಹಿಂದೂಪರ ಸಂಘಟನೆಗಳ ಆಗ್ರಹ

ದೊಡ್ಡಬಳ್ಳಾಪುರ, (ಆಗಸ್ಟ್.13); ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಅಕ್ರಮಣವನ್ನು ನಿಲ್ಲಿಸಿ, ಹಿಂದೂಗಳಿಗೆ ರಕ್ಷಣೆ ನೀಡಿ ಹಾಗೂ ಸಂತ್ರಸ್ಥರ ನೆರವಿಗೆ ವಿಶ್ವಸಂಸ್ಥೆ ಧಾವಿಸಲಿ ಎಂದು ಹಿಂದೂ ಹಿತರಕ್ಷಣಾ ಸಮಿತಿಯ ಮುಖಂಡ ಕೆ.ಎಂ.ಹನುಮಂತರಾಯಪ್ಪ ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಆಕ್ರಮಣವನ್ನು ತಡೆಯುವ ನಿಟ್ಟಿನಲ್ಲಿ  ವಿಶ್ವಸಂಸ್ಥೆ ಮುಂದಾಗಬೇಕಿದೆ. ಹಾಗೂ ಭಾರತ ದೇಶದ ರಾಷ್ಟ್ರಪತಿಗಳು ಹಾಗೂ ಪ್ರಧಾನ ಮಂತ್ರಿಗಳು ಬಾಂಗ್ಲಾದೇಶದ ಹಿಂದುಗಳ ನೆರವಿಗೆ ನಿಲ್ಲಬೇಕಿದೆ ಎಂದರು.

ಕೇವಲ 3-4 ದೇಶಗಳಲ್ಲಿ ಮಾತ್ರ ಉಳಿದಿರುವ ಹಿಂದುಗಳನ್ನು ರಕ್ಷಿಸುವ ಹೊಣೆ ಎಲ್ಲರ ಮೇಲಿದೆ ಬಾಂಗ್ಲಾದೇಶದಲ್ಲಿ ಹಿಂದುಗಳು ಅಲ್ಪಸಂಖ್ಯಾತರಾಗಿದ್ದಾರೆ  ಅವರ ಮೇಲೆ ಹಿಂಸಾತ್ಮಕ ಕೃತ್ಯಗಳು ನಿರಂತರವಾಗಿ ನಡೆಯುತ್ತಿದ್ದು ಈ ಕುರಿತು ಜವಾಬ್ದಾರಿಯುತ ಇಲಾಖೆಗಳು ಮಾತನಾಡಬೇಕಿದೆ. ವಿಶ್ವಸಂಸ್ಥೆ ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವಂತೆ ಹಿಂದು ಹಿತರಕ್ಷಣ ಸಮಿತಿ ಒತ್ತಾಯಿಸುತ್ತದೆ ಎಂದರು.

ಸಮಿತಿಯ ಮುಖಂಡ ನರೇಶ್ ರೆಡ್ಡಿ ಮಾತನಾಡಿ, ನಮ್ಮ  ಪಕ್ಕದ ನೆರೆಯ ಬಾಂಗ್ಲಾದೇಶವು ತೀವ್ರ ಹಿಂಸಾಚಾರದಿಂದ ಬಳಲುತ್ತಿದೆ. ಬಾಂಗ್ಲಾದೇಶದ ಚುನಾಯಿತ ಪ್ರಧಾನಿ  ದೇಶವನ್ನು ತೊರೆದ ನಂತರ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. 

ಈ ಗೊಂದಲಮಯ ಪರಿಸ್ಥಿತಿಯಲ್ಲಿ ಅಲ್ಲಿನ ಹಿಂದೂ ಧಾರ್ಮಿಕ ಕೇಂದ್ರಗಳು, ಹಿಂದೂ ವ್ಯಾಪಾರ ಸಂಸ್ಥೆಗಳು, ಮತ್ತು ಹಿಂದೂ ಮನೆಗಳನ್ನು ಗುರಿಯಾಗಿಸಿಕೊಂಡು ತೀವ್ರ ರೀತಿಯ ಧಾಳಿ ನಡೆಯುತ್ತಿದೆ. ಬಾಂಗ್ಲಾದೇಶದಾದ್ಯಂತ ಪ್ರತಿ ಜಿಲ್ಲೆಯಲ್ಲೂ ಹಿಂದೂ ರುದ್ರ ಭೂಮಿಗಳು, ನೂರಾರು ಮಠ ಮಂದಿರಗಳು ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. 

ಕಾಲಕಾಲಕ್ಕೆ ಸಂಭವಿಸುವ ಇಂತಹ ಗಲಭೆಗಳ ಪರಿಣಾಮ ವಿಭಜನೆಯ ಸಮಯದಲ್ಲಿ ಬಾಂಗ್ಲಾದೇಶದಲ್ಲಿ ಶೇಕಡಾ 28ರಷ್ಟಿದ್ದ  ಹಿಂದೂಗಳು ಈಗ ಶೇಕಡಾ 8ಕ್ಕೆ ಬಂದು ಇಳಿದಿದ್ದಾರೆ. ಹೀಗಾಗಿ ಬಾಂಗ್ಲಾದೇಶದಲ್ಲಿರುವ  ಹಿಂದೂಗಳ ಸಂರಕ್ಷಣೆಗೆ ಭಾರತ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಸಮಿತಿಯು ಮನವಿ ಮಾಡುತ್ತದೆ. 

ಗೌರವಾನ್ವಿತ ರಾಷ್ಟ್ರಪತಿಯವರಿಗೆ ಹಿಂದೂ ಹಿತರಕ್ಷಣಾ ಸಮಿತಿಯ ಮೂಲಕ ಆಗ್ರಹ ಪಡಿಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹಿಂದೂ ಮುಖಂಡರಾದ ಭಾಸ್ಕರ್ ಭಗತ್, ರವಿಕುಮಾರ್, ಮುದ್ದಪ್ಪ, ನಾಗೇಶ್, ವೆಂಕಟರಾಜು, ನರಸಿಂಹಮೂರ್ತಿ, ಡಾ. ನಾರಾಯಣ, ಶ್ರೀನಿವಾಸ್ ಗುರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ (KIADB) ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯಲ್ಲಿ ಉದ್ದೇಶಿಸಿರುವ 2100 ಎಕರೆ ಭೂ ಸ್ವಾಧೀನದ ವಿರುದ್ಧ ರೈತರು ಕೆರಳಿದ್ದು, ಬಿರು ಬಿಸಿಲಿನಲ್ಲಿಯೂ ಪ್ರತಿಭಟನೆ ನಡೆಸಿದರು.

[ccc_my_favorite_select_button post_id="120437"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!