ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ: ರಕ್ಷಣೆಗೆ ಮುಂದಾಗುವಂತೆ ಹಿಂದೂಪರ ಸಂಘಟನೆಗಳ ಆಗ್ರಹ

ದೊಡ್ಡಬಳ್ಳಾಪುರ, (ಆಗಸ್ಟ್.13); ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಅಕ್ರಮಣವನ್ನು ನಿಲ್ಲಿಸಿ, ಹಿಂದೂಗಳಿಗೆ ರಕ್ಷಣೆ ನೀಡಿ ಹಾಗೂ ಸಂತ್ರಸ್ಥರ ನೆರವಿಗೆ ವಿಶ್ವಸಂಸ್ಥೆ ಧಾವಿಸಲಿ ಎಂದು ಹಿಂದೂ ಹಿತರಕ್ಷಣಾ ಸಮಿತಿಯ ಮುಖಂಡ ಕೆ.ಎಂ.ಹನುಮಂತರಾಯಪ್ಪ ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಆಕ್ರಮಣವನ್ನು ತಡೆಯುವ ನಿಟ್ಟಿನಲ್ಲಿ  ವಿಶ್ವಸಂಸ್ಥೆ ಮುಂದಾಗಬೇಕಿದೆ. ಹಾಗೂ ಭಾರತ ದೇಶದ ರಾಷ್ಟ್ರಪತಿಗಳು ಹಾಗೂ ಪ್ರಧಾನ ಮಂತ್ರಿಗಳು ಬಾಂಗ್ಲಾದೇಶದ ಹಿಂದುಗಳ ನೆರವಿಗೆ ನಿಲ್ಲಬೇಕಿದೆ ಎಂದರು.

ಕೇವಲ 3-4 ದೇಶಗಳಲ್ಲಿ ಮಾತ್ರ ಉಳಿದಿರುವ ಹಿಂದುಗಳನ್ನು ರಕ್ಷಿಸುವ ಹೊಣೆ ಎಲ್ಲರ ಮೇಲಿದೆ ಬಾಂಗ್ಲಾದೇಶದಲ್ಲಿ ಹಿಂದುಗಳು ಅಲ್ಪಸಂಖ್ಯಾತರಾಗಿದ್ದಾರೆ  ಅವರ ಮೇಲೆ ಹಿಂಸಾತ್ಮಕ ಕೃತ್ಯಗಳು ನಿರಂತರವಾಗಿ ನಡೆಯುತ್ತಿದ್ದು ಈ ಕುರಿತು ಜವಾಬ್ದಾರಿಯುತ ಇಲಾಖೆಗಳು ಮಾತನಾಡಬೇಕಿದೆ. ವಿಶ್ವಸಂಸ್ಥೆ ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವಂತೆ ಹಿಂದು ಹಿತರಕ್ಷಣ ಸಮಿತಿ ಒತ್ತಾಯಿಸುತ್ತದೆ ಎಂದರು.

ಸಮಿತಿಯ ಮುಖಂಡ ನರೇಶ್ ರೆಡ್ಡಿ ಮಾತನಾಡಿ, ನಮ್ಮ  ಪಕ್ಕದ ನೆರೆಯ ಬಾಂಗ್ಲಾದೇಶವು ತೀವ್ರ ಹಿಂಸಾಚಾರದಿಂದ ಬಳಲುತ್ತಿದೆ. ಬಾಂಗ್ಲಾದೇಶದ ಚುನಾಯಿತ ಪ್ರಧಾನಿ  ದೇಶವನ್ನು ತೊರೆದ ನಂತರ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. 

ಈ ಗೊಂದಲಮಯ ಪರಿಸ್ಥಿತಿಯಲ್ಲಿ ಅಲ್ಲಿನ ಹಿಂದೂ ಧಾರ್ಮಿಕ ಕೇಂದ್ರಗಳು, ಹಿಂದೂ ವ್ಯಾಪಾರ ಸಂಸ್ಥೆಗಳು, ಮತ್ತು ಹಿಂದೂ ಮನೆಗಳನ್ನು ಗುರಿಯಾಗಿಸಿಕೊಂಡು ತೀವ್ರ ರೀತಿಯ ಧಾಳಿ ನಡೆಯುತ್ತಿದೆ. ಬಾಂಗ್ಲಾದೇಶದಾದ್ಯಂತ ಪ್ರತಿ ಜಿಲ್ಲೆಯಲ್ಲೂ ಹಿಂದೂ ರುದ್ರ ಭೂಮಿಗಳು, ನೂರಾರು ಮಠ ಮಂದಿರಗಳು ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. 

ಕಾಲಕಾಲಕ್ಕೆ ಸಂಭವಿಸುವ ಇಂತಹ ಗಲಭೆಗಳ ಪರಿಣಾಮ ವಿಭಜನೆಯ ಸಮಯದಲ್ಲಿ ಬಾಂಗ್ಲಾದೇಶದಲ್ಲಿ ಶೇಕಡಾ 28ರಷ್ಟಿದ್ದ  ಹಿಂದೂಗಳು ಈಗ ಶೇಕಡಾ 8ಕ್ಕೆ ಬಂದು ಇಳಿದಿದ್ದಾರೆ. ಹೀಗಾಗಿ ಬಾಂಗ್ಲಾದೇಶದಲ್ಲಿರುವ  ಹಿಂದೂಗಳ ಸಂರಕ್ಷಣೆಗೆ ಭಾರತ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಸಮಿತಿಯು ಮನವಿ ಮಾಡುತ್ತದೆ. 

ಗೌರವಾನ್ವಿತ ರಾಷ್ಟ್ರಪತಿಯವರಿಗೆ ಹಿಂದೂ ಹಿತರಕ್ಷಣಾ ಸಮಿತಿಯ ಮೂಲಕ ಆಗ್ರಹ ಪಡಿಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹಿಂದೂ ಮುಖಂಡರಾದ ಭಾಸ್ಕರ್ ಭಗತ್, ರವಿಕುಮಾರ್, ಮುದ್ದಪ್ಪ, ನಾಗೇಶ್, ವೆಂಕಟರಾಜು, ನರಸಿಂಹಮೂರ್ತಿ, ಡಾ. ನಾರಾಯಣ, ಶ್ರೀನಿವಾಸ್ ಗುರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದಿನ ಭವಿಷ್ಯ: ಈ ರಾಶಿಯವರಿಂದು ಉದ್ವಿಗ್ನತೆಗೆ ಒಳಗಾಗದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಉದ್ವಿಗ್ನತೆಗೆ ಒಳಗಾಗದಿರಿ

ರಾಹುಕಾಲ: 07:30AM ರಿಂದ 09:00AM ಗುಳಿಕಕಾಲ: 01:30PM ರಿಂದ 03:00PM ಯಮಗಂಡಕಾಲ: 10:30AM ರಿಂದ 12:00PM Astrology

[ccc_my_favorite_select_button post_id="120054"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!