ಮೀನ ರಾಶಿಯ ಆಗಸ್ಟ್ 2024 ರ ಭವಿಷ್ಯ: ಹೆಚ್ಚು ಖರ್ಚುಗಳಿರುತ್ತವೆ ಎಚ್ಚರ

ವೇದ ಜ್ಯೋತಿಷ್ಯದ ಆಧಾರದ ಮೇಲೆ ಮೀನ ರಾಶಿಯ ಜಾತಕದಲ್ಲಿ ಆರೋಗ್ಯ, ಶಿಕ್ಷಣ, ಉದ್ಯೋಗ, ಆರ್ಥಿಕ ಸ್ಥಿತಿ, ಕುಟುಂಬ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಫಲಿತಾಂಶಗಳು ಹೀಗಿದೆ.

ರಾಶಿ ಚಕ್ರದಲ್ಲಿ ಹನ್ನೆರಡನೆ ಜ್ಯೋತಿಷ್ಯ ರಾಶಿಯಾಗಿದ್ದು, ಆಕಾಶ ರೇಖಾಂಶದ 330-360 ಡಿಗ್ರಿಗಳನ್ನು ವ್ಯಾಪಿಸಿದೆ.

ಈ ತಿಂಗಳು ನಿಮಗೆ ಮಿಶ್ರ ಫಲಿತಾಂಶ ಉಂಟಾಗುತ್ತದೆ. ವೃತ್ತಿ ದೃಷ್ಠಿಯಿಂದ, ಮೊದಲ ಎರಡು ವಾರಗಳು ಸಾಮಾನ್ಯ ವಾಗಿ ಇರುತ್ತವೆ. ಕಷ್ಟಪಟ್ಟು ಕೆಲಸ ಮಾಡಿದ ನಂತರವೂ, ನಿಮ್ಮಿಗೆ ಕಡಿಮೆ ಹೆಸರು-ಮಹತ್ವ ಮತ್ತು ಗುರುತಿನ ಮೌಲ್ಯ ಸಿಕ್ಕಬಹುದು.

ಮೂರನೇ ವಾರದಿಂದ ನಿಮ್ಮ ವೃತ್ತಿಯಲ್ಲಿ ಉತ್ತಮ ಬದಲಾವಣೆ ಗಳನ್ನು ಕಾಣುತ್ತೀರಿ. ನೀವು ಹೆಚ್ಚು ಪ್ರಯತ್ನಿಸದೆ ಅಪೇಕ್ಷಿತ ಫಲಿತಾಂಶವನ್ನು ಪಡೆಯುತ್ತೀರಿ. ಮೂರನೇ ಅಥವಾ ನಾಲ್ಕನೇ ವಾರದಲ್ಲಿ ನಿಮ್ಮ ಉದ್ಯೋಗ ದಲ್ಲಿ ಅಥವಾ ಕೆಲಸ ಮಾಡುವ ಸ್ಥಳದಲ್ಲಿ ಬದಲಾವಣೆ ಸಂಭವಿಸುತ್ತದೆ.

ಈ ಸಮಯದಲ್ಲಿ, ನಿಮ್ಮ ಸಹೋದ್ಯೋಗಿಗ ಳಿಂದ ಗೌರವ, ಮಾನ್ಯತೆ ಮತ್ತು ಬೆಂಬಲ ಹೆಚ್ಚಾಗುವುದನ್ನು ಕಾಣುತ್ತೀರಿ. ನೀವು ಬಹಳ ಕಾಲದಿಂದ ಬಾಕಿ ಇಟ್ಟಿರುವ ಕೆಲಸಗಳನ್ನು ಈ ಸಮಯದಲ್ಲಿ ಪೂರ್ಣಗೊಳಿಸಬಹುದು. ನೀವು ಉದ್ಯೋಗಕ್ಕಾಗಿ ಅಥವಾ ಉದ್ಯೋಗ ದಲ್ಲಿ ಬದಲಾವಣೆಯಿಗಾಗಿ ಕಾಯುತ್ತಿ ರುವಾಗ, ಈ ತಿಂಗಳ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ಅದು ಈಡೇರಬಹುದು. ಈ ತಿಂಗಳ ಕೊನೆಯವರೆಗೂ ಕುಜನ ಸಂಚಾರವು ಅನುಕೂಲಕರವಾಗಿರುವುದರಿಂದ, ನೀವು ಉತ್ಸಾಹ ಕಳೆದುಕೊಳ್ಳದೇ ಕೈಗೆತ್ತಿಕೊಂಡ ಕೆಲಸಗಳನ್ನು ಪೂರ್ಣಗೊಳಿಸಬಹುದು.

ಆರ್ಥಿಕವಾಗಿ ನಿಮಗೆ ಮಿಶ್ರ ಫಲಿತಾಂಶ ಸಿಗುತ್ತದೆ. ಮೊದಲ ಎರಡು ವಾರಗಳಲ್ಲಿ ನಿಮ್ಮ ಸಾಮಾನ್ಯ ಆದಾಯ ಮತ್ತು ಹೆಚ್ಚು ಖರ್ಚುಗಳಿರುತ್ತವೆ. ಕೆಲವು ಸಮಯಗಳಲ್ಲಿ ಆಸಕ್ತಿಯ ಕಾರಣ ಅಥವಾ ಅಭ್ಯಾಸಗಳಿಗಾಗಿ ಹಣ ಖರ್ಚು ಮಾಡುವ ಸಾಧ್ಯತೆಯಿರುತ್ತದೆ. ಮೂರನೇ ವಾರದಿಂದ ನಿಮ್ಮ ಆದಾಯದಲ್ಲಿ ಉತ್ತಮ ಬೆಳವಣಿಗೆ ಕಾಣಬಹುದು. ನಿಮ್ಮ ಖರ್ಚುಗಳಲ್ಲಿ ಕಡಿತವನ್ನು ಕೂಡಾ ನೀವು ನೋಡಬಹುದು.

ನೀವು ಆಸ್ತಿ ಖರೀದಿಸಲು ಅಥವಾ ದೊಡ್ಡ ಮೊತ್ತದಲ್ಲಿ ಹಣ ಹೂಡಲು ಬಯಸಿದರೆ, ಮೂರನೇ ವಾರದವರೆಗೂ ಕಾಯುವುದು ಉತ್ತಮ. ನಿಮ್ಮ ಹೂಡಿಕೆಗಳಿಂದ ಉತ್ತಮ ಆದಾಯವನ್ನು ಕೂಡಾ ನೀವು ಕಾಣಬಹುದು.

ಕುಟುಂಬದ ದೃಷ್ಟಿಯಿಂದ, ಈ ತಿಂಗಳು ಉತ್ತಮವಾಗಿರುತ್ತದೆ. ನಿಮ್ಮ ಮಕ್ಕಳು ತಮ್ಮ ಕ್ಷೇತ್ರದಲ್ಲಿ ಚೆನ್ನಾಗಿ ಮಿಂಚುತ್ತಾರೆ. ನಿಮ್ಮ ತಂದೆ-ತಾಯಿ ಆರೋಗ್ಯದಲ್ಲಿ ಸುಧಾರಣೆಯನ್ನು ಕಾಣುತ್ತಾರೆ. ನಿಮ್ಮ ಜೀವನಸಂಗಾತಿಯೊಂದಿಗೆ ಪ್ರೀತಿ- ಭಾವನೆಗಳು ಉತ್ತಮಗೊಳ್ಳುತ್ತವೆ. ಅವರ ಸಹಾಯ ಮತ್ತು ಬೆಂಬಲ ಪಡೆಯುತ್ತೀರಿ.

ಸಂತಾನಕ್ಕಾಗಿ ಕಾಯುತ್ತಿರುವವರು ಈ ತಿಂಗಳಲ್ಲಿ ಉತ್ತಮ ಫಲಿತಾಂಶವನ್ನು ಕಾಣುತ್ತಾರೆ. ಈ ತಿಂಗಳ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ನೀವು ಕುಟುಂಬದಲ್ಲಿ ನಡೆಯುವ ಶುಭ ಕಾರ್ಯ ಕ್ಕೆ ಹಾಜರಾಗಬಹುದು. ಈ ತಿಂಗಳ ಅಂತ್ಯ ಕುಜನ ಸಂಚಾರವು ಅನುಕೂಲಕರವಾಗಿ ರುವುದರಿಂದ, ಕುಟುಂಬದ ಸದಸ್ಯ ರೊಂದಿಗೆ ಹೆಚ್ಚಾಗಿ ಪ್ರಯಾಣ ಮಾಡುವ ಸಾಧ್ಯತೆಯಿದೆ.

ಪ್ರಯಾಣಗಳಲ್ಲಿ ನಿಮ್ಮ ಅತ್ಯುತ್ಸಾಹದಿಂದಾಗಿ ವಿವಾದಗಳು ಉಂಟಾಗುವ ಸಾಧ್ಯತೆಯಿದೆ, ಆದ್ದರಿಂದ ಪ್ರಯಾಣದಲ್ಲಿ ಜಾಗರೂಕರಾಗಿರುವುದು ಉತ್ತಮ.

ಆರೋಗ್ಯದ ದೃಷ್ಟಿಯಿಂದ ನಿಮ್ಮಿಗೆ ಉತ್ತಮ ಸಮಯವಿರುತ್ತದೆ. ಮೊದಲಾರ್ಧದಲ್ಲಿ ಕೆಲವು ಆರೋಗ್ಯ ಸಮಸ್ಯೆಗಳಿದ್ದರೂ, ಎರಡನೇ ಅರ್ಧದಲ್ಲಿ ಆರೋಗ್ಯ ಸಮಸ್ಯೆಗಳಿಂದ ಹೆಚ್ಚಿನ ಸುಧಾರಣೆಯನ್ನು ಕಾಣುತ್ತೀರಿ. ಆದರೆ ಈ ತಿಂಗಳಲ್ಲಿ ನಿಮ್ಮ ಆಹಾರದ ತ್ಯಾಜ್ಯಗಳ ಬಗ್ಗೆ ಜಾಗರೂಕರಾಗಿರಿ.

ಏಕೆಂದರೆ ಈ ತಿಂಗಳ ನಾಲ್ಕನೇ ವಾರದಲ್ಲಿ ಕುಜನ ಸಂಚಾರವು ಅನುಕೂಲಕರವಾಗಿರು ವುದರಿಂದ, ಇದು ಕೆಲವು ಆರೋಗ್ಯ ಸಮಸ್ಯೆಗಳನ್ನುಂಟುಮಾಡಬಹುದು. ಎಲುಬುಗಳು, ಚರ್ಮ ಮತ್ತು ಕಿಡ್ನಿ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಲ್ಲಿ ಜಾಗ್ರತೆ ಅವಶ್ಯಕ.

ವ್ಯಾಪಾರಸ್ಥರು ಮೂರನೇ ವಾರದಿಂದ ತಮ್ಮ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆಯನ್ನು ಕಾಣುತ್ತಾರೆ. ನಿಮಗೆ ಮೂರನೇ ವಾರದಿಂದ ಉತ್ತಮ ಆದಾಯ ಕೂಡ ಇರುತ್ತದೆ. ಆರ್ಥಿಕ ಕಾರಣಗಳಿಂದ ನಿಮ್ಮ ಪಾಲುದಾರರೊಂದಿಗೆ ಕೆಲವು ಸಮಸ್ಯೆಗಳು ಇರಬಹುದು. ನೀವು ಆರ್ಥಿಕ ವ್ಯವಹಾರಗಳಲ್ಲಿ ಜಾಗ್ರತೆಯಿರಬೇಕು.

ಕಳೆದ ಕೆಲವು ಕಾಲದಿಂದ ವ್ಯಾಪಾರದಲ್ಲಿ ಬೆಳವಣಿಗೆಯಾಗದೇ ಇರುವವರಿಗೆ ಈ ತಿಂಗಳಿಂದ ಉತ್ತಮ ಬದಲಾವಣೆ ಕಾಣಬಹುದು. ಹೊಸ ವ್ಯಾಪಾರ ಒಪ್ಪಂದಗಳಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳಿ. ಕೊನೆಯ ವಾರದಲ್ಲಿ ವ್ಯಾಪಾರದಲ್ಲಿ ಅಥವಾ ವ್ಯವಹಾರ ಮಾಡುವ ಸ್ಥಳದಲ್ಲಿ ಅಚಾನಕ ಬದಲಾವಣೆಗಳು ಸಂಭವಿಸಬಹುದು.

ವಿದ್ಯಾರ್ಥಿಗಳು ತಮ್ಮ ಓದಲಿನಲ್ಲಿ ಉತ್ತಮವಾಗಿ ನಿರ್ವಹಿಸುತ್ತಾರೆ. ಅವರು ಅಪೇಕ್ಷಿತ ಫಲಿತಾಂಶವನ್ನು ಸಾಧಿಸುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಹವುದುವರು ತಮ್ಮ ಪರೀಕ್ಷೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ. ಓದುವಿಕೆ ಮೇಲೆ ಆಸಕ್ತಿ ಹೆಚ್ಚಾಗುತ್ತದೆ. ಜೊತೆಗೆ ಹೊಸ ವಿಷಯಗಳನ್ನು ಕಲಿಯುವ ಆಸಕ್ತಿ ಹೆಚ್ಚಾಗುತ್ತದೆ.

ಈ ತಿಂಗಳಾದಂತೂ ಕುಜನ ಸಂಚಾರವು 3ನೇ ಮನೆಯಲ್ಲಿ ಇರುವುದರಿಂದ, ಸಹಪಾಠಿಗಳೊಂದಿಗೆ ಸ್ಪರ್ಧೆ ಮಾಡಿ ಓದುವಿರಿ. ಆದರೆ ಕೆಲವು ವೇಳೆ ಅತ್ಯುತ್ಸಾಹದಿಂದ ಓದುವಿಕೆಯಿಂದ ಗಮನ ಬೇರೆ ವಿಷಯಗಳಿಗೆ ಹರಿಯಬಹುದು, ಆದ್ದರಿಂದ ಈ ಸಮಯದಲ್ಲಿ ಉತ್ಸಾಹವನ್ನು ನಿಯಂತ್ರಿಸಿಕೊಳ್ಳುವುದು ಉತ್ತಮ.

ಮೀನ ರಾಶಿ: ಪೂರ್ವಭಾದ್ರ ನಕ್ಷತ್ರ (4ನೇ ಪಾದ), ಉತ್ತರಭಾದ್ರ ನಕ್ಷತ್ರ(4), ರೇವತಿ ನಕ್ಷತ್ರ (4) ಅಡಿಯಲ್ಲಿ ಜನಿಸಿದ ಜನರು ಮೀನಾ ರಾಶಿ ಅಡಿಯಲ್ಲಿ ಬರುತ್ತಾರೆ. ಈ ರಾಶಿ ಅಧಿಪತಿ ಗುರು.

ಮೀನ ರಾಶಿಗೆ ಸೂಚಿಸಲಾದ ಅಕ್ಷರಗಳು: ದಿ , ದು, ದೆ, ದೊ, ಚ, ಚಿ

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!