ನಾಳೆ ಸ್ವಾತಂತ್ರ್ಯ ದಿನಾಚರಣೆ: ದೊಡ್ಡಬಳ್ಳಾಪುರದಲ್ಲಿ ಶಾಲಾ ಮಕ್ಕಳಿಗೆ ಸಿಹಿ ಹಂಚಿಕೆಯಲ್ಲಿ ತಾರತಮ್ಯ..?; ಬಹಿಷ್ಕಾರದ ಭೀತಿ.!

ದೊಡ್ಡಬಳ್ಳಾಪುರ, (ಆಗಸ್ಟ್.14):  ಭಾರತೀಯ ಇತಿಹಾಸದಲ್ಲಿ ಅತ್ಯಂತ ಪ್ರಮುಖ ದಿನ ಆಗಸ್ಟ್ 15. ಪ್ರತಿ ವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. 

ಈ ವರ್ಷ ನಮ್ಮ ಭಾರತ ತನ್ನ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಸುಮಾರು 200 ವರ್ಷಗಳ ಗುಲಾಮಗಿರಿಯ ನಂತರ ಭಾರತ ಆಗಸ್ಟ್ 15, 1947 ರಂದು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯವನ್ನು ಗಳಿಸಿತು.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಗಣರಾಜ್ಯವಾದ ಭಾರತದ ಎಲ್ಲಾ ರಾಜ್ಯಗಳಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಈಗ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಗುತ್ತಿದೆ. ಆದರೆ ದೊಡ್ಡಬಳ್ಳಾಪುರದಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಮಕ್ಕಳಿಗೆ ಸಿಹಿ ಹಂಚಿಕೆಯಲ್ಲಿ ಅಧಿಕಾರಿಗಳು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಶಿಕ್ಷಕರಲ್ಲಿ ಬೇಸರ, ಆಕ್ರೋಶಕ್ಕೆ ಕಾರಣವಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ನಗರದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಎಂಬ ಭೇದವಿಲ್ಲದೆ ಎಲ್ಲರೂ ಒಟ್ಟಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಸಂಭ್ರಮದಿಂದ ಆಚರಿಸಿಕೊಂಡು ಬರಲಾಗುತ್ತಿದೆ.

ಇತಿಹಾಸದಲ್ಲಿ ಮೊದಲು; ಆದರೆ ಏಕಾಏಕಿ ಈ ವರ್ಷದಿಂದ ಅಧಿಕಾರಿಗಳು ಮಕ್ಕಳಿಗೆ ಹಂಚುವ ಸಿಹಿಯಲ್ಲಿಯೂ ತಾರತಮ್ಯ ಅನುಸರಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರನ್ವಯ ಸರ್ಕಾರಿ ಶಾಲೆಗಳನ್ನು ಹೊರತು ಪಡಿಸಿ, ಖಾಸಗಿ ಶಾಲೆ ಮಕ್ಕಳಿಗೆ ಸಿಹಿಯನ್ನು ವಿತರಿಸುವುದಿಲ್ಲ ಎಂದಿರುವ ಮಾಹಿತಿ ಹೊರಬಿದ್ದಿದ್ದು, ಖಾಸಗಿ ಶಾಲೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ತಾಲೂಕಿನಲ್ಲಿ ಮೊದಲಿನಿಂದಲೂ ಸರ್ಕಾರಿ, ಖಾಸಗಿ ಎಂಬ ಯಾವುದೇ ಬೇಧವಿಲ್ಲದೆ ಎಲ್ಲರೂ ಒಟ್ಟಾಗಿ ಸಂಭ್ರಮದಿಂದ ಸ್ವಾತಂತ್ರ್ಯ ಮಹೋತ್ಸವ ಆಚರಿಸಲಾಗುತ್ತಿದೆ. ಆದರೆ ಏಕಾಏಕಿ ಅಧಿಕಾರಿಗಳ ಈ ನಡೆ ತೀವ್ರ ಚರ್ಚೆಗೆ ಕಾರಣವಾಗಿದ್ದು, ಭಗತ್ ಸಿಂಗ್ ಕ್ರೀಡಾಂಗಣ ನಡೆಯಲಿರುವ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳು ಬಹಿಷ್ಕರಿಸಿ, ತಮ್ಮ ತಮ್ಮ ಶಾಲೆಗಳಲ್ಲಿಯೇ ಆಚರಿಸಿಕೊಳ್ಳಲು ಮಾತುಕತೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ದೊಡ್ಡಬಳ್ಳಾಪುರ ತಾಲೂಕಿನ ಅಧಿಕಾರಿಗಳ ನಡುವೆ ಸಮನ್ವಯದ ಕೊರತೆ ಇಲ್ಲವೆಂಬುದು ಕೆಲ ತಿಂಗಳಿಂದ ಪದೇ ಪದೇ ಸುದ್ದಿಯಾಗುತ್ತಿದೆ. ಇದಕ್ಕೆ ಸಾಕ್ಷಿಯೆಂಬಂತೆ ಇಂಹ ಘಟನೆಗಳು ನಡೆಯುತ್ತಿವೆ.

ಈ ಕೂಡಲೇ ತಾಲೂಕು ಆಡಳಿತ, ನಗರಸಭೆ, ಶಿಕ್ಷಣ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಎಚ್ಚೆತ್ತು ಏಕಾಏಕಿ ಉದ್ಭವಾಗಿರುವ ಗೊಂದಲವನ್ನು ಬಗೆಹರಿಸಿಕೊಂಡು, ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆಗೆ ಯಾವುದೇ ದಕ್ಕೆಯಾಗದಂತೆ ಮುಂಜಾಗ್ರತೆ ವಹಿಸಬೇಕಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ತಿದ್ದುಪಡಿ ಮಸೂದೆಗೆ ಸೋಲು; ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

ತಿದ್ದುಪಡಿ ಮಸೂದೆಗೆ ಸೋಲು; ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಹೇಳಿದ್ದಾರೆ.

[ccc_my_favorite_select_button post_id="121096"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!