ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ: ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಸಿ.ದಿನಕರ್ ಭಾಗಿ..!

ದೊಡ್ಡಬಳ್ಳಾಪುರ, (ಆಗಸ್ಟ್.15); ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಂ.ಎಸ್.ವಿ. ಪಬ್ಲಿಕ್ ಶಾಲೆಯಲ್ಲಿ 78ನೇ ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಸಿ.ದಿನಕರ್ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಅವರು, “ಮಕ್ಕಳಾದ ತಾವುಗಳು ಚೆನ್ನಾಗಿ ಓದಿ ಭಾರತೀಯ ರಕ್ಷಣಾ ವ್ಯವ್ಯಸ್ಥೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಮತ್ತು ದೇಶಸೇವೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. 

ಪ್ರತಿ ವಿದ್ಯಾರ್ಥಿಯು ಸಮಯ ಪಾಲನೆ, ಮಹಿಳೆ ಮತ್ತು ಗುರು ಹಿರಿಯರಿಗೆ ಗೌರವ, ವೈಯಕ್ತಿಕ ಸ್ವಚ್ಛತೆ, ನಿರಂತರ ಪ್ರಯತ್ನ, ಮೌಲ್ಯಯುತ ವಿಚಾರಗಳು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಎ.ಸುಬ್ರಹ್ಮಣ್ಯ ಮಾತನಾಡಿ, “ಭಾರತ ದೇಶ ಇಂದು ಜಗದ್ವಿಖ್ಯಾತಿಯನ್ನು ಪಡೆಯುತ್ತಿರುವ ರಾಷ್ಟ್ರವಾಗಿದೆ. ದೇಶದ ಯುವಕರಿಗೆ ದೇಶ ಬದಲಾಯಿಸುವ ಸಾಮರ್ಥ್ಯವಿರುತ್ತದೆ. ಪ್ರತಿ ರಂಗದಲ್ಲಿಯೂ ಇಂದು ದೇಶ ಅಭಿವೃದ್ಧಿ ಹೊಂದುತ್ತಿರುವುದು ಯುವ ಶಕ್ತಿಯ ಇಚ್ಛಾಶಕ್ತಿ, ಉತ್ತಮ ಆಡಳಿತ ಹಾಗೂ ಪ್ರತಿಯೊಬ್ಬರ ಹೃದಯ ದೇಶಾಭಿಮಾನದಿಂದ ಮಾತ್ರ. 

ದೇಶವನ್ನು 200 ವರ್ಷಗಳ ಕಾಲ ಬ್ರಿಟೀಷರ ಕಪಿಮುಷ್ಠಿಯಿಂದ ನಮ್ಮ ದೇಶ ಸ್ವಾತಂತ್ರ ಪಡೆದ ಸಂಭ್ರಮ. ಅದಕ್ಕಾಗಿ ದೇಶದ ಜನ ವೈಯಕ್ತಿಕ ಜೀವನದ ಸ್ವಾತಂತ್ರ್ಯ ಬದಿಗೊತ್ತಿ ದೇಶಕ್ಕೆ ಸ್ವಾತಂತ್ರ ದೊರಕಿಸಿಕೊಡುವಲ್ಲಿ ತಮ್ಮ ಜೀವನ-ಜೀವವನ್ನು ತ್ಯಾಗ ಮಾಡಿದ್ದು, ಇವೆಲ್ಲವನ್ನೂ ಸ್ಮರಿಸಿ ಅವರಿಗೆ ಗೌರವ ಸಲ್ಲಿಸುವ ಸುದಿನ ಇದು. ಅವರು ತಂದು ಕೊಟ್ಟ ಸ್ವಾತಂತ್ರ್ಯವನ್ನು ನಾವು ಸವಿಯುತ್ತಿದ್ದೇವೆ. ಅದನ್ನು ಉಳಿಸಿಕೊಂಡು ಹೋಗುವುದರ ಜೊತೆಗೆ ದೇಶವನ್ನು ಶಕ್ತಿಯುತಗೊಳಿಸುವುದು ನಮ್ಮ ಕರ್ತವ್ಯವಾಗಿದೆ” ಎಂದರು.

ಕಾರ್ಯಕ್ರಮದ ಅಂಗವಾಗಿ ಶಾಲೆಯ ಬೋಧಕೇತರ ಸಿಬ್ಬಂದಿಯಾದ  ನಾರಾಯಣ ಗೌಡ ಅವರ ಕಾರ್ಯದಕ್ಷತೆ, ಸೇವಾ ಸಮರ್ಪಣೆ ಹಾಗೂ ಆದರ್ಶಗಳಿಗಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್ ಎಸ್., ಆಡಳಿತಾಧಿಕಾರಿ ನಯನಾ ಸ್ವರೂಪ್, ಪ್ರಾಂಶುಪಾಲರಾದ ರೆಮ್ಯ ಬಿ.ವಿ., ಉಪ ಪ್ರಾಂಶುಪಾಲರಾದ ಪ್ರತಿಮಾ ಪೈ, ಶಿಕ್ಷಕವೃಂದ, ಮಕ್ಕಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಶಾಲೆಯ ಮಕ್ಕಳಿಂದ ವಿವಿಧ ಮಹಾನ್ ನಾಯಕರ ವೇಷಭೂಷಣಗಳು, ದೇಶಭಕ್ತಿ ಗೀತೆ, ನೃತ್ಯ, ಹಾಗೂ ಪಿರಾಮಿಡ್ ಶೋ ಗಳು ನೋಡುಗರ ಮನಸೂರೆಗೊಂಡವು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!