Doddaballapura; ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ.. ಸಾಧಕರಿಗೆ ಸನ್ಮಾನ, ಶಿಸ್ತಿನ ಕೊರತೆ

ದೊಡ್ಡಬಳ್ಳಾಪುರ, (ಆಗಸ್ಟ್.15); ನಾವೆಲ್ಲರೂ ಜವಾಬ್ದಾರಿಯನ್ನು ಅರಿತಿರುವ ಪ್ರಜ್ಞಾವಂತ ನಾಗರಿಕರಾದಾಗ ದೇಶದ ಸ್ವಾತಂತ್ರ್ಯಕ್ಕೆ ಅರ್ಥವಿದೆ. ದೇಶವನ್ನು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿಯ ಮಂಚೂಣಿಗೆ ಕೊಂಡೊಯ್ಯಲು ಹಾಗೂ ಪ್ರಸ್ತುತ ದೇಶವನ್ನು ಕಾಡುತ್ತಿರುವ ಭಯೋತ್ಪಾದನೆ ಮತ್ತು ಧಾರ್ಮಿಕ ಆಸಹಿಷ್ಣುತೆಯಂತಹ ಪಿಡುಗುಗಳಿಂದ ದೇಶವನ್ನು ಮುಕ್ತಗೊಳಿಸಲು ಪಣತೊಟ್ಟು ಶ್ರಮಿಸುವ ಮೂಲಕ ದೇಶ ಸೇವೆಯನ್ನು ಮಾಡಬೇಕಿದೆ  ಎಂದು ಉಪವಿಭಾಗಾಧಿಕಾರಿ ಎನ್.ದುರ್ಗಾಶ್ರೀ ಹೇಳಿದರು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ 78ನೇ ಭಾರತ ಸ್ವಾತಂತ್ರತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ದೇಶದ ಸ್ವಾತಂತ್ರ್ಯಕ್ಕೆ ದುಡಿದ ಮಹನೀಯರನ್ನು ನಾವು ಸದಾ ಸ್ಮರಿಸಬೇಕಿದೆ. ಕರ್ನಾಟಕ ರಾಜ್ಯದಲ್ಲಿಯೂ ಸಹ ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಅನೇಕ ಹೋರಾಟಗಳು ನಡೆದಿದೆ. ಬ್ರಿಟೀಷರ ವಿರುದ್ಧ ಕಿತ್ತೂರು ರಾಣಿ ಚೆನ್ನಮ್ಮನವರ ಸಂಸ್ಥಾನದ ಉಳಿವಿಗಾಗಿ ಮಾಡಿದ ಹೋರಾಟ, ಸ್ವಾತಂತ್ರ್ಯಕೋಸ್ಕರ ನೇಣುಗಂಬವನ್ನು ಏರಿದ ಸಂಗೊಳ್ಳಿ ರಾಯಣ್ಣ ರವರ ಜನ್ಮದಿನ ಈ ದಿನವೇ ಆಗಿದ್ದು, ಅವರ ತ್ಯಾಗವನ್ನು ನೆನೆಯಬೇಕಿದೆ. 

ದೇಶಭಕ್ತಿ ಮತ್ತು ದೇಶ ಸೇವೆ ಕೇವಲ ಸ್ವಾತಂತ್ರೋತ್ಸವದ ಮತ್ತು ಗಣರಾಜ್ಯೋತ್ಸವದ ಸಂದರ್ಭಗಳಲ್ಲಿ ನೆನಪು ಮಾಡಿಕೊಳ್ಳುವ ಕಾರ್ಯಕ್ರಮವಾಗದೆ ನಮ್ಮ ಬದುಕಿನ ಪ್ರತಿಯೊಂದು ಕ್ಷಣದಲ್ಲೂ ಈ ದೇಶದ ಏಳಿಗೆಗಾಗಿ ನಾಗರಿಕರ ಕಲ್ಯಾಣಕ್ಕಾಗಿ ದುಡಿಯುವುದರ ಮೂಲಕ ದೇಶ ಸೇವಕರಾಗೋಣ ಪ್ರತಿಯೊಬ್ಬ ಭಾರತೀಯರ ಬದುಕು ಹಸನಾದಾಗ ಮಾತ್ರ ಭಾರತ ದೇಶದ ಪ್ರಗತಿ ಆಗುತ್ತದೆ ಎಂಬ ಅರಿವು ನಮ್ಮಲ್ಲಿ ಇರಬೇಕು ಎಂದರು. 

ಈ ವೇಳೆ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಾದ  ಸಿದ್ದಯ್ಯ (ಶಿಕ್ಷಣ), ಹಳ್ಳಿ ರೈತ ಅಂಬರೀಶ್ (ಕೃಷಿ), ಅಶ್ವತ ನಾರಾಯಣ (ರಂಗಭೂಮಿ), ಅಂಜನ್ ಗೌಡ (ಸಾಹಿತ್ಯ), ಡಾ.ರಾಜು.ಜಿ. (ವೈದ್ಯಕೀಯ), ಹಿತೇಶ್.ಜಿ.(ಎನ್.ಸಿ.ಸಿ), ಜಯಕುಮಾರ್ (ಶುಶ್ರೂಷೆ), ಕೊತ್ತೂರಪ್ಪ (ಪತ್ರಿಕೋದ್ಯಮ) ಅವರನ್ನು ಸನ್ಮಾನಿಸಲಾಯಿತು.

ಇವರೊಂದಿಗೆ ತಾಲೂಕಿನಿಂದ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪಡೆದ ಕೆ.ಎಂ.ಕೃಷ್ಣಮೂರ್ತಿ, ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿರುವ ಟಿ.ಎಚ್.ಲವಕುಮಾರ್, ಸಂಗೀತ ಅಕಾಡೆಮಿ ಸದಸ್ಯೆ ಡಿ.ಆರ್.ನಿರ್ಮಲ, ಜಾನಪದ ಅಕಾಡೆಮಿ ಸದಸ್ಯ ಹುಲಿಕುಂಟೆ ಮೂರ್ತಿ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.

2022-23ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ವಿತರಿಸಲಾಯಿತು.

ಸಮಾರಂಭದಲ್ಲಿ ಶಾಸಕ ಧೀರಜ್ ಮುನಿರಾಜು, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ನಿಕಟ ಪೂರ್ವ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ತಹಶೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷೆ ವಿಭಾ ವಿದ್ಯಾರಾಥೋಡ್, ನಗರಸಭೆ ಪೌರಾಯುಕ್ತ ಕಾರ್ತಿಕ್ ಈಶ್ವರ್, ತಾಲೂಕು ಪಂಚಾಯಿತಿ ಕಾರ್‍ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು, ಕ್ಷೇತ್ರಶಿಕ್ಷಣಾಧಿಕಾರಿ ಸೈಯದ್ ಅನೀಸ ಸೇರಿದಂತೆ ನಗರಸಭಾ ಸದಸ್ಯರು, ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಎನ್‌ಸಿಸಿ ಅಧಿಕಾರಿ ಕ್ಯಾಪ್ಟನ್ ಶ್ರೀನಿವಾಸ್ ನೇತೃತ್ವದಲ್ಲಿ, ಎನ್‌ಸಿಸಿ, ಶಾಲಾ ಕಾಲೇಜು ವಿದ್ಯಾರ್ಥಿಗಳು, ಬ್ಯಾಂಡ್‌ಸೆಟ್‌ಗಳ 1500 ಕ್ಕೂ ಹೆಚ್ಚು ಮಂದಿಯಿಂದ ಪಥಸಂಚಲನ ನಡೆಸಲಾಯಿತು.

ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್‍ಯಕ್ರಮಗಳು ನಡೆದವು.

ಶಿಸ್ತಿನ ಕೊರತೆ: ಇಲ್ಲಿ ಆಚರಿಸಲ್ಪಟ್ಟ ಸ್ವಾತಂತ್ರ್ಯ ದಿನಾಚರಣೆಯು ಅವ್ಯವಸ್ಥೆಯ ಆಗರವಾಗಿ ಜನಸಾಮಾನ್ಯರಿಂದ ಟೀಕೆಗೊಳಗಾಯಿತು.

ಮೊದಲಿಗೆ ಕಾರ್ಯಕ್ರಮದಲ್ಲಿ ಶಿಸ್ತಿನ ಕೊರತೆ ಎದ್ದು ಕಾಣುತ್ತಿತ್ತು. ಒಂಬತ್ತು ಗಂಟೆಯಾದರೂ ಕೂಡ ಶಾಲಾ ಮಕ್ಕಳು ಇನ್ನೂ ಆಗಮಿಸುತ್ತಿದ್ದರು. ಅತಿಥಿಗಳು ಬಂದಿದ್ದೇ ತಡವಾಗಿ. ಇನ್ನು ಕಾರ್ಯಕ್ರಮ ನೋಡಲು ಬಂದಿದ್ದ ಜನ ತಮಗೆ ಬೇಕಾದಲೆಲ್ಲ ನಿಂತಿದ್ದರು.

ಶಿಸ್ತಿಗೆ ಹೆಸರಾದ ಎನ್.ಸಿ.ಸಿ.ಯ ಹಿರಿಯ ವಿದ್ಯಾರ್ಥಿಗಳೇ ತಮಗೆ ಬೇಕಾದಂತೆ ತಿರುಗಾಡುತ್ತಿದ್ದರು.

ಒಟ್ಟಿನಲ್ಲಿ ಶಿಸ್ತಿನ ಚೌಕಟ್ಟಿನೊಳಗೆ ನಡೆಯಬೇಕಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಶಿಸ್ತಿನ ಚೌಕಟ್ಟಿನಲ್ಲಿ ಇರದೇ ಇದ್ದುದು ಬಾರೀ ಟೀಕೆಗೆ ಗುರಿಯಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!