ದೊಡ್ಡಬಳ್ಳಾಪುರ ಸಮೀಪದ ಫಾಕ್ಸ್ ಕಾನ್ ಕಂಪನಿಗೆ ಸಂಪೂರ್ಣ ಸಹಕಾರ, ಹೆಚ್ಚಿನ ಹೂಡಿಕೆಗೆ ಕರೆ, 40 ಸಾವಿರ ಉದ್ಯೋಗ ಸೃಷ್ಟಿ: ಸಿಎಂ ಭರವಸೆ

ಬೆಂಗಳೂರು: ದೊಡ್ಡಬಳ್ಳಾಪುರದ ಬಳಿ 25 ಸಾವಿರ ಕೋಟಿ ರೂ. ಹೂಡಿಕೆ ಮೂಲಕ ತನ್ನ ಬೃಹತ್ ಉತ್ಪಾದನಾ ಘಟಕ ಸ್ಥಾಪಿಸುತ್ತಿರುವ ತೈವಾನ್ ಮೂಲದ ಫಾಕ್ಸ್ ಕಾನ್ ಕಂಪನಿಗೆ ಅಗತ್ಯ ಮೂಲಸೌಲಭ್ಯಗಳ ಜೊತೆಗೆ ಎಲ್ಲ ನೆರವನ್ನೂ ಕೊಡಲಾಗುವುದು. ಇದಲ್ಲದೆ,  ರಾಜ್ಯದಲ್ಲಿ ಇನ್ನೂ ಹೆಚ್ವು ಹೆಚ್ಚು ಹೂಡಿಕೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.

ಫಾಕ್ಸ್ ಕಾನ್ ಕಂಪನಿಯ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ನೇತೃತ್ವದ ಉನ್ನತ ಮಟ್ಟದ ನಿಯೋಗಕ್ಕೆ ಶುಕ್ತವಾರ ರಾತ್ರಿ ಆಯೋಜಿಸಿದ್ದ ಭೋಜನ ಕೂಟದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು.

ಫಾಕ್ಸ್ ಕಾನ್ ಕಂಪನಿಗೆ ರಾಜ್ಯ ಸರಕಾರದ ವತಿಯಿಂದ ಸಂಪೂರ್ಣ ಸಹಕಾರ ಕೊಡಲಾಗುವುದು. ನೀರು, ವಿದ್ಯುತ್, ರಸ್ತೆ, ಕಾನೂನು ಮತ್ತು ಇತ್ಯಾದಿಗಳನ್ನೆಲ್ಲ ನಾವು ಒದಗಿಸಲಿದ್ದೇವೆ. ಕಂಪನಿಯು ಫ್ಯಾಬ್ ಉದ್ಯಮ ವಲಯ ಸೇರಿದಂತೆ ಮಿಕ್ಕ ವಲಯಗಳಲ್ಲೂ ಹೆಚ್ಚು ಹೂಡಿಕೆ ಮಾಡಲು ಒಲವು ತೋರಿಸಬೇಕು. ರಾಜ್ಯವು ಅತ್ಯುತ್ತಮ ಮೌಲ್ಯಗಳಿಂದ ಕೂಡಿರುವ ಕೈಗಾರಿಕಾ ಸಂಸ್ಕೃತಿಯನ್ನು ಹೊಂದಿದೆ. ರಾಜ್ಯವು ಸಮಗ್ರ ಕೈಗಾರಿಕಾ ಅಭಿವೃದ್ಧಿಗೆ ಒತ್ತು ಕೊಟ್ಟಿದೆ ಎಂದು ಅವರು ಆಶ್ವಾಸನೆ ನೀಡಿದರು.

ಇದಕ್ಕೆ ಸ್ಪಂದಿಸಿದ ಯಂಗ್ ಲಿಯು, `ರಾಜ್ಯದಲ್ಲಿ ಸದ್ಯದಲ್ಲೇ ಕಾರ್ಯಾಚರಣೆ ಆರಂಭಿಸಲಿರುವ ಘಟಕವು ಚೀನಾದ ನಂತರದ ಎರಡನೇ ಅತ್ಯಂತ ಬೃಹತ್ ಘಟಕವಾಗಿದೆ. ಇಲ್ಲಿ 40,000 ಮಧ್ಯಮ ಸ್ತರದ ವಿದ್ಯಾವಂತರಿಗೆ ಉದ್ಯೋಗಾವಕಾಶ ಸಿಗಲಿದೆ. ಇವರನ್ನು ನಿರ್ವಹಿಸುವುದು ಸವಾಲಿನ ಕೆಲಸವಾಗಿದೆ. ಜತೆಗೆ ನಮ್ಮ ಹೂಡಿಕೆ ಇಷ್ಟಕ್ಕೇ ನಿಲ್ಲುವುದಿಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಪರಸ್ಪರ ವಿಶ್ವಾಸವಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು’ ಎಂದರು.

ಉದ್ಯೋಗಿಗಳಿಗೆ ಮನೆಗಿಂತಲೂ ಹೆಚ್ಚಿನ ನೆಮ್ಮದಿಯ ವಾತಾವರಣ ಇರಲಿದೆ. ಇವರಿಗೆ ಗುಣಮಟ್ಟದ ಮನೋರಂಜನೆ, ಜಿಮ್, ವಸತಿ ಸೌಲಭ್ಯ, ಆಹಾರ ಎಲ್ಲವನ್ನೂ ಫಾಕ್ಸ್ ಕಾನ್ ಕಂಪನಿ ಒದಗಿಸಲಿದೆ. ಈ ಮೂಲಕ ಜಾಗತಿಕ ಗುಣಮಟ್ಟದ ಕೈಗಾರಿಕಾ ಪರಿಸರವನ್ನು ನಿರ್ಮಿಸಲಾಗುವುದು ಎಂದು ಅವರು ನುಡಿದರು.

ಸಚಿವ ಎಂ ಬಿ ಪಾಟೀಲ ಮಾತನಾಡಿ, `ರಾಜ್ಯವು ಹೆಚ್ಚಿನ ಹೂಡಿಕೆಯನ್ನು ಮುಕ್ತವಾಗಿ ಸ್ವಾಗತಿಸಲಿದೆ. ಕೆಐಎಡಿಬಿ, ಕೆಪಿಟಿಸಿಎಲ್, ಅಗ್ನಿಶಾಮಕ ದಳ, ಮಾಲಿನ್ಯ ನಿಯಂತ್ರಣ ಮಂಡಳಿಗಳು ಫಾಕ್ಸ್ ಕಾನ್ ಕಂಪನಿಯ ಯೋಜನೆಯು ಸುಗಮವಾಗಿ ಅನುಷ್ಠಾನಕ್ಕೆ ಬರುವ ನಿಟ್ಟಿನಲ್ಲಿ ಬದ್ಧತೆಯಿಂದ ಶ್ರಮಿಸುತ್ತಿವೆ. ಕಂಪನಿಗೆ ಈಗಾಗಲೇ 300 ಎಕರೆ ಭೂಮಿಯನ್ನು ಕೊಡಲಾಗಿದೆ’ ಎಂದರು.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, `ರಾಜ್ಯವು ದೇಶದಲ್ಲೇ ಅತ್ಯುತ್ತಮವಾದ ಉದ್ಯಮಸ್ನೇಹಿ ನೀತಿಯನ್ನು ಹೊಂದಿದ್ದು, ಫಾಕ್ಸ್ ಕಾನ್ ಕಂಪನಿಯು ಇಲ್ಲಿಗೆ ಬರುತ್ತಿರುವುದು ಸ್ವಾಗತಾರ್ಹವಾಗಿದೆ’ ಎಂದರು.

ಸಭೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಐಟಿ ಇಲಾಖೆಯ ಕಾರ್ಯದರ್ಶಿ ಏಕರೂಪ್ ಕೌರ್ ಮುಂತಾದವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!