ಗಗನಕ್ಕೇರಿದ ಬೆಲೆಗಳ ನಡುವೆ ವರಮಹಾಲಕ್ಷ್ಮೀ ಹಬ್ಬಕ್ಕೆ ಸ್ವಾಗತ

ದೊಡ್ಡಬಳ್ಳಾಪುರ, (ಆಗಸ್ಟ್.16); ತಾಲೂಕಿನಲ್ಲಿ ಈ ಬಾರಿ ತಡವಾಗಿ ಮಳೆಯಾಗುತ್ತಿದ್ದು, ಹೂಗಳ ಇಳುವರಿ ಮೇಲೆ ಪ್ರಭಾವ ಬೀರಿದೆ. ವರಮಹಾಲಕ್ಷ್ಮೀ ಹಬ್ಬ ಇನ್ನೆರಡು ದಿನವಿದ್ದಂತೆ ಹೂವು, ಹಣ್ಣು ಹಾಗೂ ಅಗತ್ಯವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಇದರ ನಡುವೆಯೂ ಮಾರುಕಟ್ಟೆಯಲ್ಲಿ ಹಬ್ಬದ ಸಂಭ್ರಮ ಕಾಣುತ್ತಿದೆ. 

ತರಕಾರಿ, ಹಣ್ಣುಗಳು ಹಾಗೂ ಹೂಗಳ ಬೆಲೆ ಹಬ್ಬಕ್ಕೆಂದೇ ದುಬಾರಿಯಾಗಿ ಸಾರ್ವಜನಿಕರನ್ನು ಕಂಗಾಲಾಗಿಸಿದೆ. ಇದರೊಂದಿಗೆ ವರಲಕ್ಷ್ಮೀ ಮೂರ್ತಿಗಳ ಪ್ರತಿಮೆಗಳು, ಮುಖವಾಡಗಳು ಸಹ ಭರದಿಂದ ಮಾರಾಟವಾಗುತ್ತಿದ್ದು, ಅವೂ ದುಬಾರಿ ಬೆಲೆಯೆನಿಸಿವೆ. 

ನಗರದ ಮಾರ್ಕೆಟ್‌ನಲ್ಲಿ ಹಣ್ಣುಗಳ ನೂರಾರು ಅಂಗಡಿಗಳು ಹಬ್ಬಕ್ಕೆಂದೇ ತೆರೆದಿವೆ. ಆದರೆ ಹೂವು ಹಣ್ಣಿನ ಬೆಲೆಗಳು ಹಿಂದೆಂದೂ ಕಾಣದಷ್ಟು ಗಗನಕ್ಕೇರಿವೆ.

ಕಾಕಡ, ಮಲ್ಲಿಗೆ, ಮಳ್ಳೆ ಹೂವಿನ ಬೆಲೆ 800ರಿಂದ 1000 ರೂ, ಕನಕಾಂಬರ ಕೆ.ಜಿಗೆ 2500 ರೂ ಇದ್ದು, 50 ಗ್ರಾಂಗೆ 150 ರೂನಂತೆ ಮಾರಾಟವಾಗುತ್ತಿತ್ತು. ಶಾಮಂತಿಗೆ 250ರೂ, ಬಟನ್ಸ್, ಗುಲಾಬಿ ಮೊದಲಾದ ಹೂವಿನ ಬೆಲೆಗಳು 200 ರವರೆಗೂ ಇವೆ. ಇನ್ನು ತಾವರೆ ಹೂ ಜೊತೆಗೆ 80 ರೂ, ಡೇರಾ ಒಂದು ಹೂವಿಗೆ 10 ರೂ ಇದರೊಂದಿಗೆ ಸೇಬಿನ ಬೆಲೆ 250ರೂ, ದ್ರಾಕ್ಷಿ 200ರೂ ದಾಟಿದ್ದು, ಮಿಕ್ಕ ಹಣ್ಣುಗಳ ಬೆಲೆಗಳೂ ಕೆಜಿಗೆ 20 ರಿಂದ 30 ಹೆಚ್ಚಾಗಿವೆ. ಅಲಂಕಾರಿಕ ಹೂಗಳು ಒಂದು ಕುಚ್ಚಿಗೆ 200 ರೂಗಳಂತೆ ಮಾರಾಟವಾಗುತ್ತಿತ್ತು.

ಬಾಳೆಕಂದುಗಳು ಸಹ ತುಸು ಬೆಲೆ ಹೆಚ್ಚಾಗಿಯೇ ಇವೆ.  ಆಷಾಢ ಮಾಸ ಹಾಗೂ ಅಕ ಶ್ರಾವಣ ಮಾಸದಲ್ಲಿಯೂ ಸಹ ಹೂವುಗಳ ಬೆಲೆ ಅಷ್ಟೇನೂ ಇಳಿಕೆಯಾಗಿರಲಿಲ್ಲ. 

ಕಡಿಮೆಯಾದ ಹೂ ಇಳುವರಿ: ತಾಲೂಕಿನಲ್ಲಿ ಸೇವಂತಿಗೆ, ಗುಲಾಬಿ, ಚೆಂಡು ಹೂಗಳು ಹೆಚ್ಚಾಗಿ ಬೆಳೆಯುತ್ತಿವೆ. ಆದರೆ ಕಾಕಡ, ಮಲ್ಲಿಗೆ, ಕನಕಾಂಬರ ಹೂಗಳನ್ನು ಬೆಳೆಯುವವರೇ ಕಡಿಮೆಯಾಗುತ್ತಿದ್ದಾರೆ.

ದಶಕದ ಹಿಂದೆ ತೋಟಗಳಿಂದ ನೂರಾರು ಕೆಜಿಗಳಷ್ಟು ಬಸ್‌ಗಳ ಮೂಲ ರೈತರು ಮಾರುಕಟ್ಟೆಗೆ ಕಳುಹಿಸುತ್ತಿದ್ದರು. ಆದರೆ ಈಗ ಹತ್ತು ಕೆಜಿಗಳು ಸಿಗುವುದು ಸಹ ಕಷ್ಟವಾಗಿದೆ. ಹಾಗಾಗಿ ಬೇರೆಡೆಯಿಂದ ಹೂಗಳನ್ನು ತರಿಸಬೇಕಾದ ಅನಿವಾರ್‍ಯತೆ ಇದೆ. ಹೂ ಕೀಳಲು ಕೂಲಿ ಕಾರ್ಮಿಕರ ಸಮಸ್ಯೆ, ನಿರ್ವಹಣೆ ವೆಚ್ಚ ಹೂ ಬೆಳೆಗಾರರ ಸಂಖ್ಯೆ ಕಡಿಮೆಯಾಗುವಂತೆ ಮಾಡಿದೆ ಎನ್ನುತ್ತಾರೆ ಹೂ ಮಾರಾಟಗಾರ ಲೋಕೇಶ್.

ಲಕ್ಷ್ಮೀ ಅಲಂಕೃತ ಮೂರ್ತಿಗಳು: ವರಮಹಾಲಕ್ಷ್ಮೀ ಹಬ್ಬ ಹದಿನೈದು ದಿನವಿದ್ದಂತೆ ವಿವಿಧ ಮಳಿಗೆಗಳಲ್ಲಿ ಲಕ್ಷ್ಮೀ ಅಲಂಕೃತ ಮೂರ್ತಿಗಳು ಹಾಗೂ ಲಕ್ಷ್ಮೀ ಮುಖವಾಡಗಳು ಸಹ ಭರದಿಂದ ಮಾರಾಟವಾಗುತ್ತಿದ್ದು, ಒಂದು ಸೆಟ್ ಪೂರ್ಣ ಪ್ರತಿಮೆಗೆ 3 ಸಾವಿರದಿಂದ 10 ಸಾವಿರದವರೆಗೆ ಮಾರಾಟವಾಗುತ್ತಿದೆ.

ಈ ಬಾರಿ ಹೆಚ್ಚಿನ ಮೂರ್ತಿಗಳು ಅಂಗಡಿಗಳಲ್ಲಿ ಮಾರಾಟವಾಗುತ್ತಿರುವುದು ವಿಶೇಷವಾಗಿದೆ. ಲಕ್ಷ್ಮೀ ಕಳಸಕ್ಕೆ ಇಡುವ ಲಕ್ಷ್ಮೀ ಮುಖವಾಡಗಳನ್ನು ಮಹಿಳೆಯರು ಕೊಂಡೊಯ್ಯುತ್ತಿದ್ದುದು ಸಾಮಾನ್ಯವಾಗಿತ್ತು. ಪ್ಲಾಸ್ಟಿಕ್ ಹೂಗಳು, ಅಲಂಕಾರಿಕ ಸಾಮಗ್ರಿಗಳ ಮಾರಾಟ ಸಹ ಭರದಿಂದ ಸಾಗಿತ್ತು.

ತಾಲೂಕಿನಲ್ಲಿ ನೇಕಾರಿಕೆ ಸಂಕಷ್ಟದಲ್ಲಿದೆ. ಆದರೂ ಹಬ್ಬಕ್ಕೆಂದು ಮಾರುಕಟ್ಟೆಯಲ್ಲಿ ಕೊಳ್ಳುವವರಿಗೇನೂ ಕಡಿಮೆಯಿಲ್ಲ.  ಹೂ ಹಣ್ಣು, ತರಕಾರಿಗಳ ಬೆಲೆಗಳು ಸಹ ಈಗ ಹಬ್ಬಕ್ಕೆಂದೇ ಏರಿಕೆಯಾಗಿವೆ. ಇಷ್ಟೆಲ್ಲಾ ನಡುವೆಯೂ ವರಲಕ್ಷ್ಮಿ ಹಬ್ಬಕ್ಕಾಗಿ ಎಷ್ಟಾದರೂ ಸರಿ ಹಬ್ಬ ಮಾಡಲೇಬೇಕೆಂದು ನಾಗರಿಕರು ಕೊಂಡು ಹೊಯ್ಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮಾರುಕಟ್ಟೆ ಪ್ರದೇಶದಲ್ಲಿನ  ಜನಸಂದಣಿ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾಗಿತ್ತು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!