Doddaballapura; ಮೆಡಿಕಲ್ ಸ್ಟೋರ್ ಹೋಗುವ ಮುನ್ನ ಈ ಮಾಹಿತಿ ತಿಳಿಯಿರಿ

ದೊಡ್ಡಬಳ್ಳಾಪುರ, (ಆಗಸ್ಟ್.19); ವರಮಹಾಲಕ್ಷ್ಮಿ ಹಬ್ಬಕ್ಕೂ ಮುನ್ನ ‘ಭೀಮ’ ಸಿನಿಮಾ ಕನ್ನಡ ಚಿತ್ರರಂಗಕ್ಕೆ ಸಕ್ಸಸ್ ತಂದುಕೊಟ್ಟಿದೆ. ದುನಿಯಾ ವಿಜಯ್ ನಿರ್ದೇಶಿಸಿ, ನಟಿಸಿರುವ ಈ ಸಿನಿಮಾ ಬಿ ಮತ್ತು ಸಿ ಸೆಂಟರ್‌ಗಳಲ್ಲಿ ದೊಡ್ಡ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಮೊದಲ ದಿನದಿಂದಲೇ ವಿಜಯ್ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಡಿಸೆಂಟ್ ಕಲೆಕ್ಷನ್ ಮಾಡುತ್ತಿದೆ.

‘ಭೀಮ’ ಸಿನಿಮಾ ಮಾದಕ ವ್ಯಸನಿಗಳಾಗಿರುವ ಯುವಕರನ್ನು ಇಟ್ಟುಕೊಂಡು ಹೆಣೆಯಲಾಗಿದ್ದ ಕಥೆ. ಬೆಂಗಳೂರಿನ ಏರಿಯಾಗಳಲ್ಲಿ ಡ್ರಗ್ಸ್ ಮಾಫಿಯಾ ಹೇಗಿದೆ? ಯಾವ್ಯಾವ ಏರಿಯಾಗಳಲ್ಲಿ ಈ ದಂಧೆ ಹೇಗೆ ನಡೆಯುತ್ತೆ? ಮೆಡಿಕಲ್ ಸ್ಟೋರ್ ಗಳಲ್ಲಿ ದೊರೆಯುವ ಔಷಧಿಗಳ ದುರ್ಬಳಕೆಯ ಕುರಿತು ದುನಿಯಾ ವಿಜಯ್ ಮತ್ತು ಅವರ ತಂಡ ಈ ಸಿನಿಮಾದಲ್ಲಿ ಹಸಿ ಬಿಸಿಯಾಗಿ ತೋರಿಸಿದೆ. ಹೀಗಾಗಿ ಬಿ ಮತ್ತು ಸಿ ಸೆಂಟರ್‌ಗಳಲ್ಲಿರುವ ಯುವಕರನ್ನು ಈ ಸಿನಿಮಾ ಸೆಳೆಯುತ್ತಿದೆ.

ಅಲ್ಲದೆ ಮೆಡಿಕಲ್ ಸ್ಟೋರ್ ಗಳಲ್ಲಿ ದೊರೆಯುವ ಔಷಧಿಗಳನ್ನು ಮಾದಕವಸ್ತುವಾಗಿ ಯುವಕರು ಬಳಸುತ್ತಿರುವುದು, ಹಣದ ಆಸೆಗೆ ವೈದ್ಯರ ಚೀಟಿ ಇಲ್ಲದೆ ಕೆಲ ಮೆಡಿಕಲ್ ಸ್ಟೋರ್ ಅವರು ಔಷಧಿ ನೀಡುವುದರ ಕುರಿತು ದುನಿಯಾ ವಿಜಯ್ ಸ್ಟ್ರಿಂಗ್ ಆಪರೇಷನ್ ಮೂಲಕ ಪತ್ತೆಹಚ್ಚಿದ್ದಾರೆ‌.

ಇದರ ಬೆನ್ನಲ್ಲೇ ದೊಡ್ಡಬಳ್ಳಾಪುರದಲ್ಲಿ ಔಷಧಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಸುದ್ದಿಗೋಷ್ಠಿ ಕರೆಯಲಾಗಿದ್ದು, ತಜ್ಞ ವೈದ್ಯರ ಸಲಹಾ ಚೀಟಿ ಇಲ್ಲದೆ ಯಾವುದೇ ಔಷಧಗಳನ್ನಾಗಲಿ, ರೋಗ ನಿರೋಧಕ ಮಾತ್ರೆಗಳನ್ನಾಗಲಿ ಸಾರ್ವಜನಿಕರಿಗೆ ನೀಡಬಾರದು ಎಂದು ಔಷಧಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘ ಸೂಚನೆ ನೀಡಿ ಅಚ್ಚರಿ ಮೂಡಿಸಿದೆ‌.

ಈ ವೇಳೆ ಮಾತನಾಡಿರುವ ಪದಾಧಿಕಾರಿಗಳು  ಕೆಲವೊಂದು ಔಷಧಿಗಳನ್ನು ಹೊರತು ಹಳೇಯ ದಿನಾಂಕ ಇರುವ ಚೀಟಿಗಳನ್ನು ನೋಡಿಯು ಸಹ ಔಷಧಿ ನೀಡುವಂತಿಲ್ಲ ಎನ್ನುವ ನಿಯಮವನ್ನು ಎಲ್ಲಾ ಔಷಧಿ ಮಾರಾಟಗಾರರು ಕಟ್ಟುನಿಟ್ಟಾಗಿ ಪಾಲಿಸುವುದು ಕಡ್ಡಾಯವಾಗಿದೆ ಎಂದಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬಂದ ನಂತರ ಜಿಲ್ಲಾ ಸಹಾಯಕ ಔಷಧ ನಿಯಂತ್ರಕರು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಔಷಧಿ ಅಂಗಡಿಗಳಿಗೆ ದಿಢೀರ್ ಭೇಟಿ ವೇಳೆ ನಿಯಮ ಮೀರಿದ್ದು ಕಂಡು ಬಂದರೆ ಕಠಿಣ ಶಿಸ್ತು ಕ್ರಮ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ. 

ಭ್ರೂಣ ಹತ್ಯೆ ಸೇರಿದಂತೆ ಡೆಂಗ್ಯು ಜ್ವರ ಇತರೆ ಪ್ರಕರಣಗಳನ್ನು ತಡೆಗಟ್ಟುವಲ್ಲಿಯೂ ಔಷಧ ವ್ಯಾಪಾರಿಗಳ ಪಾತ್ರ ಪ್ರಮುಖವಾಗಿದೆ. ಎಂಟಿಪಿ ಕಿಟ್, ಎನ್ಡಿಪಿಎಸ್ ಹಾಗೂ ರೋಗ ನಿರೋಧ ಔಷಧಿಗಳನ್ನು ತಜ್ಞ ವೈದ್ಯರ ಅನುಮತಿ ಇಲ್ಲದೇ ನೀಡುವಂತೆಯೇ ಇಲ್ಲ. 

ಗ್ರಾಹಕರು ಸಹ ವೈದ್ಯರ ಸಲಹೆ ಮೇರೆಗೆ ಔಷಧಿ ಖರೀದಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ತಾಲ್ಲೂಕಿನಲ್ಲಿ 150 ಔಷಧಿ ಅಂಗಡಿಗಳು ಇವೆ. ಪ್ರತಿ ತಿಂಗಳು ನಡೆಯುವ ಮಾಸಿಕ ಸಭೆಯಲ್ಲಿ ಸರ್ಕಾರದ ನಿಯಮಗಳು ಹಾಗೂ ಆಯಾ ಸಂದರ್ಭಕ್ಕೆ ಜಿಲ್ಲಾ ಸಹಾಯಕ ಔಷಧ ನಿಯಂತ್ರಕರಿಂದ ಬರುವ  ಸೂಚನೆಗಳ ಬಗ್ಗೆಯು ಎಲ್ಲರಿಗು ಮಾಹಿತಿ ನೀಡಲಾಗುತ್ತಿದೆ. 

ಸರ್ಕಾರದ ನಿಯಮಗಳು ಆನ್ ಲೈನ್ ಮೂಲಕ ಔಷಧಿ ಮಾರಾಟ ಮಾಡುವವರಿಗು ಅನ್ವಯಿಸಬೇಕಿದೆ. ಕೆಲವೊಂದು ಔಷಧಿಗಳನ್ನು ಸ್ವಚ್ಛ ಹಾಗೂ ತಂಪನೆಯ ವಾತಾವರಣದಲ್ಲಿ ಸಂರಕ್ಷಣೆ ಮಾಡಬೇಕು. 

ಈ ನಿಯಮಗಳು ಆನ್ ಲೈನ್ ಮೂಲಕ ಔಷಧಿ ಮಾರಾಟ ಮಾಡುವವರು ಕಡ್ಡಾಯವಾಗಿ ಪಾಲಿಸುವಂತೆ ಮಾಡಬೇಕಿದೆ. ಜನರಿಕ್ ಔಷಧಿ ಮಳಿಗೆಯಲ್ಲಿ ಸರ್ಕಾರ ರಿಯಾಯಿತಿ ದರದಲ್ಲಿ ಮಾರಾಟ ಮಾಡುವ ಔಷಧಿಗಳ ಹೊರತು ಇತರೆ ಔಷಧಿಗಳನ್ನು ಮಾರಾಟ ಮಾಡದಂತೆಯು ನಿಯಮ ಜಾರಿಗೆ ತರಲು ಆಗ್ರಹಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!