ಕಾಂಗ್ರೆಸ್ ಸರ್ಕಾರ ಅಸಮಾನತೆ ತೊಲಗಿಸುವ ಕಾರ್ಯಕ್ರಮ ರೂಪಿಸಿದರೆ ಬಿಜೆಪಿ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, (ಆಗಸ್ಟ್‌ 20); ರಾಜೀವಗಾಂಧಿ ಹಾಗೂ ದೇವರಾಜ ಅರಸರ ಬದುಕು- ಕೆಲಸಗಳು ನಮಗೆ ಮಾರ್ಗದರ್ಶಿಯಾಗಿದೆ. ಅವರ ಹಾದಿಯಲ್ಲಿ ನಾವು ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಜಯಂತಿ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಉಭಯ ನಾಯಕರಿಗೆ ಗೌರವ ಸಲ್ಲಿಸಿ ಮಾತನಾಡಿದರು.

ರಾಜೀವ್‌ ಗಾಂಧಿಯವರು ಚಿಕ್ಕ ವಯಸ್ಸಿನಲ್ಲಿಯೇ ದೇಶದ ಪ್ರಧಾನಿಯಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಆಧುನಿಕ ಭಾರತದ ಕನಸನ್ನು ಕಂಡಿದ್ದರು. ಯುವಜನತೆಯ ಮೇಲೆ ಅಪಾರ ವಿಶ್ವಾಸವಿಟ್ಟುಕೊಂಡಿದ್ದರು.

ಅವರು ದೇಶದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗೆ ಕಾರಣಕರ್ತರಾಗಿದ್ದರು. ಯಾವಾಗಲೂ ಸಾಮಾಜಿಕ ನ್ಯಾಯದ ಪರವಿದ್ದರು. ದೇಶದಲ್ಲಿ ಬದಲಾವಣೆ ಆಗಬೇಕು. ಸಮಾನ ಅವಕಾಶ ಸಿಗಬೇಕು ಎಂದು ಹಂಬಲಿಸಿದರು. ಯಾವುದೇ ಜಾತಿ, ಧರ್ಮ, ಭಾಷೆ, ಪ್ರಾದೇಶಿಕತೆ ಭೇದ ಮರೆತು, ಎಲ್ಲೇ ಇದ್ದರೂ ಭಾರತೀಯರು ಒಗ್ಗಟ್ಟಾಗಿರಬೇಕು ಎಂಬ ಕನಸನ್ನು ಕಂಡಿದ್ದರು.

ವಿಶೇಷವಾಗಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಪಾಲು ಸಿಗಬೇಕು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಸಂವಿಧಾನಕ್ಕೆ 73 ಮತ್ತು 74 ನೇ ತಿದ್ದುಪಡಿ ಜಾರಿಗೆ ತಂದರು. ಈ ದೇಶದಲ್ಲಿ ಏನಾದರೂ ಮಹಿಳೆಯರಿಗೆ ರಾಜಕೀಯದಲ್ಲಿ ಪಾಲು ಸಿಕ್ಕಿದ್ದರೆ, ಸಂವಿಧಾನಕ್ಕೆ ತಂದ ಈ ತಿದ್ದುಪಡಿಗಳು ಕಾರಣ ಎಂದು ಹೇಳ ಬಯಸುತ್ತೇನೆ ಎಂದರು.

ಭಾರತೀಯ ಜನತಾ ಪಕ್ಷದವರು ತಾವು ಹಿಂದುಳಿದವರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡವರ ಪರ ಎಂದು ಎಷ್ಟೇ ಹೇಳಿಕೊಂಡರೂ, ಅವರು ಬಡವರು , ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರ ಇರಲು ಸಾಧ್ಯವೇ ಇಲ್ಲ. ಬಡವರಿಗೆ ಅವರು ಯಥಾ ಸ್ಥಿತಿಯಲ್ಲಿರಬೇಕು. ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಬಾರದು ಎಂದು ಬಯಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಬಾಯಿ ಮಾತೇ ಬೇರೆ, ಕೃತಿಯೇ ಬೇರೆ.ಇವತ್ತು ದೇಶದ ಸಂಪರ್ಕ ಕ್ಷೇತ್ರದಲ್ಲಿ ಆಗಿರುವ ಕ್ರಾಂತಿಗೆ ರಾಜೀವ ಗಾಂಧಿಯವರು ಕಾರಣ. ರಾಜೀವ ಗಾಂಧಿಯವರು ಯುವ ಶಕ್ತಿ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದರು. ಆದ್ದರಿಂದ ಮತದಾನದ ವಯಸ್ಸು 21 ರಿಂದ 18 ಕ್ಕೆ ಇಳಿಸಿದರು. ಅವರು ಇನ್ನೂ ಬದುಕಿರಬೇಕಾಗಿತ್ತು. ಅವರು ಇದ್ದಿದ್ದರೆ ದೇಶದಲ್ಲಿ ನಿಜವಾದ ಬದಲಾವಣೆ ಆಗಿರುತ್ತಿತ್ತು. ದೂರದೃಷ್ಟಿ, ದೇಶ, ಸಮಾಜದ ಬಗ್ಗೆ ಕಾಳಜಿ ಇದ್ದವರು, ಬಹಳ ಚಿಕ್ಕ ವಯಸ್ಸಿನಲ್ಲಿಯೇ ನಮ್ಮನ್ನು ಅಗಲಿದರು ಎಂದು ವಿಷಾದಿಸಿದರು.

ದೇವರಾಜ ಅರಸು ಅವರು 1972 ರಿಂದ ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು. 

ಅರಸು ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. ಹಾವನೂರ ಆಯೋಗದ ರಚನೆ ಮಾಡಿ, ಹಿಂದುಳಿದವರಿಗೆ ಶಿಕ್ಷಣ ಉದ್ಯೋಗದಲ್ಲಿ ಮೀಸಲಾತಿ ಒದಗಿಸಿದರು; ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ರಾಜಕೀಯವಾಗಿ ಗುರುತಿಸಿ, ಅವರಿಗೆ ಚುನಾವಣೆಯಲ್ಲಿ ನಿಲ್ಲಲು ಅವಕಾಶ ಕೊಟ್ಟರು. ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವೇ ಇಲ್ಲ ಎಂದುಕೊಂಡವರೂ ವಿಧಾನ ಸೌಧ ಪ್ರವೇಶಿಸುವಂತೆ ಮಾಡಿದರು ಎಂದರು.

ಈ ಕುರಿತು ಪತ್ರಿಕೆಯಲ್ಲಿ ಓದಿದ ಘಟನೆಯೊಂದನ್ನು ನೆನಪಿಸಿ ಕೊಂಡ ಮುಖ್ಯಮಂತ್ರಿಗಳು, “ಅರಸು ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ, ಜಾಫರ್‌ ಷರೀಫ್‌ ಅವರಿಗೆ ಟಿಕೆಟ್‌ ಕೊಟ್ಟರು. ನಾಗರತ್ನಮ್ಮ ಅವರು ಜಟಕಾ ಗಾಡಿ ಓಡಿಸುವವರಿಗೆ ಟಿಕೆಟ್‌ ಕೊಡ್ತೀಯಲ್ಲ ಎಂದು ಕೇಳಿದರು. ನೋಡಮ್ಮಾ, ಇನ್ನು ಮೇಲೆ ಜಟಕಾ ಸಾಹೇಬರಿಗೆ, ಕ್ಷೌರ ಮಾಡುವವರಿಗೆ ಟಿಕೆಟ್‌ ಕೊಡೋದು, ಶೋಕಿ ಮಾಡುವವರಿಗಲ್ಲ ಎಂದು ಉತ್ತರಿಸಿದರಂತೆ” ಎಂದು ತಾವು ಓದಿದ್ದನ್ನು ಸ್ಮರಿಸಿದರು.

ಮಲ ಹೊರುವ ಪದ್ಧತಿ, ಜೀತ ಪದ್ಧತಿ ನಿಷೇಧ, ಸಾಲ ಮನ್ನಾ ಇಂತಹ ಅನೇಕ ಪ್ರಗತಿ ಪರ ಕಾನೂನುಗಳನ್ನು ಮಾಡಿದ ಅವರು, ಅರಸು ಮನೆತನದಲ್ಲಿ ಹುಟ್ಟಿದರೂ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡಿದರು.

ಅಂತೆಯೇ ಕಾಂಗ್ರೆಸ್‌ ಪಕ್ಷ ಅಸಮಾನತೆಯನ್ನು ಹೋಗಲಾಡಿಸಲು ಬಯಸುತ್ತದೆ. ಈಗಲೂ ಅಸಮಾನತೆ ವಿರುದ್ಧ ಹೋರಾಟ ಮಾಡುತ್ತಿದೆ. ಅದಕ್ಕೆ ಬಿಜೆಪಿಯವರಿಗೆ ಸಹಿಸಲಾಗುತ್ತಿಲ್ಲ. ಅಸಮಾನತೆ ವಿರುದ್ಧ ಕಾರ್ಯಕ್ರಮ ನೀಡುತ್ತೇನೆಂಬ ಕಾರಣಕ್ಕೇ ಬಿಜೆಪಿ ನನ್ನನ್ನು ಸಹಿಸುತ್ತಿಲ್ಲ ಎಂದು ತಿಳಿಸಿದರು. 

ಈಗ ಗ್ಯಾರಂಟಿಗಳನ್ನು ಜಾರಿ ಮಾಡಿದ್ದಕ್ಕೆ ಹೊಟ್ಟೆಯುರಿಯಿಂದ ಮಾಡಬಾರದ್ದನ್ನೆಲ್ಲ ಮಾಡುತ್ತಿದ್ದಾರೆ. ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಜೆ. ಜಾರ್ಜ್‌, ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ ಮತ್ತಿತರರು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗಾಗಿ ಸಿಎಂ ಸಿದ್ದರಾಮಯ್ಯ (Cmsiddaramaiah) ಹಸ್ತಾಂತರಿಸಿದರು.

[ccc_my_favorite_select_button post_id="117055"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!