ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, (ಆಗಸ್ಟ್.27); ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. 

ಗಾಂಧಿನಗರ ವಿಧಾನಸಭಾ ಕ್ಷೇತ್ರದ  ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. 

ಕಾರ್ಯಕ್ರಮದ ವೇದಿಕೆಯಲ್ಲೇ ಜಯದೇವ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ಇನ್ನು ಮುಂದೆ ದಿನದ 24 ಗಂಟೆ ಜಯದೇವದಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆ ಒದಗಿಸಬೇಕು. ಇದಕ್ಕೆ ತಕ್ಕ ಸಿದ್ದತೆಗಳನ್ನು ಮಾಡಿಕೊಳ್ಳಿ ಎನ್ನುವ ಸೂಚನೆ ನೀಡಿದರು. 

ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ ಎಂದು ನುಡಿದರು.

ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟ ಮತ್ತು ಶುಚಿತ್ವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಬರಬೇಕು. ಆಗ ಮಾತ್ರ ಸರ್ಕಾರ ಕೊಡುವ ಅನುದಾನಕ್ಕೆ ಅರ್ಥ ಬರುತ್ತದೆ ಎಂದರು.

ನಾನು ಸೇರಿ ಮಂತ್ರಿಗಳು,  ರಾಜರಣಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವುದಿಲ್ಲ. ಉಪ ಇದರಲ್ಲಿ ನಮ್ಮಗಳ ತಪ್ಪು ಕೂಡ ಇದೆ. ಆದರೆ ಖಾಸಗಿ ಆಸ್ಪತ್ರೆಗಳ ಗುಣಮಟ್ಟ ಮತ್ತು ಶುಚಿತ್ವ ಸರ್ಕಾರಿ ಆಸ್ಪತ್ರೆಗಳಲ್ಲೂ ಇರುವಂತೆ ನೋಡಿಕೊಳ್ಳಲು ಅಗತ್ಯ ಅನುದಾನ ಕೊಡುತ್ತಲೇ ಇದ್ದೇವೆ. ಆಸ್ಪತ್ರೆಯ ಆಡಳಿತ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಸೇವೆ ಸಲ್ಲಿಸಿದರೆ ಇದು ಸಾಧ್ಯವಿದೆ ಎಂದರು.

ಅಪಘಾತ ವಲಯಗಳ ಹತ್ತಿರದಲ್ಲೇ ಟ್ರಾಮಾ ಸೆಂಟರ್ ಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಗಾಯಾಳುಗಳ ಜೀವ ಉಳಿಸಲು ಗೋಲ್ಡನ್ ಹವರ್ ಬಹಳ ಮುಖ್ಯ ಎನ್ನುವುದನ್ನು ಪರಿಗಣಿಸಿ ಸರ್ಕಾರ ಈ ಕಾರ್ಯಕ್ಕೆ ಮುಂದಾಗಿದೆ ಎಂದರು. 

ನಾನು ಬಜೆಟ್ ನಲ್ಲಿ ಹೇಳಿದ್ದನ್ನು ಜಾರಿ ಮಾಡಿ:ಬಜೆಟ್ ನಲ್ಲಿ ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನು ಜವಾಬ್ದಾರಿಯಿಂದ ಜಾರಿ ಮಾಡಿ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ವೇದಿಕೆಯಿಂದಲೇ ಸೂಚನೆ ನೀಡಿದರು. 

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಿಟ್ಟ ಬೇಡಿಕೆಗಳನ್ನು ಅನುಮೋದಿಸಿ ಹಣ ಬಿಡುಗಡೆ ಮಾಡಿದ್ದೇನೆ. ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ ಎಂದು ಸಚಿವರಿಗೆ ಸೂಚನೆ ನೀಡಿದರು. 

ಡಿಸಿಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲಾ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ;

ಸಿದ್ದರಾಮಯ್ಯ (Siddaramaiah) ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು, ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. D.K.Shivakumar

[ccc_my_favorite_select_button post_id="110764"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!