ಉಪನಗರ ರೈಲು ಯೋಜನೆ ವಿಳಂಬ: ಗುತ್ತಿಗೆ ಸಂಸ್ಥೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಎಂ.ಬಿ.ಪಾಟೀಲ

ಬೆಂಗಳೂರು, (ಆಗಸ್ಟ್.27); ಚಿಕ್ಕಬಾಣಾವಾರ- ಬೈಯ್ಯಪ್ಪನಹಳ್ಳಿ (ಕಾರಿಡಾರ್‌ -2) ನಡುವಿನ ಉಪನಗರ ರೈಲು ಯೋಜನೆ ಆಮೆಗತಿಯಲ್ಲಿ ಸಾಗುತ್ತಿದ್ದು, ಇದಕ್ಕೆ ಕಾರಣವಾದ ಗುತ್ತಿಗೆದಾರ ಸಂಸ್ಥೆಯಾದ ಎಲ್‌ ಆಂಡ್‌ ಟಿ ಅಧಿಕಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಮಂಗಳವಾರ ಇಲ್ಲಿ ತರಾಟೆಗೆ ತೆಗೆದುಕೊಂಡರು.

ಉಪನಗರ ರೈಲು ಯೋಜನೆಯ ಪ್ರಗತಿ ಪರಿಶೀಲನೆ ಸಭೆ ಖನಿಜ ಭವನದಲ್ಲಿ ನಡೆಯಿತು. ಈ ವೇಳೆ ನಿರೀಕ್ಷಿತ ಪ್ರಗತಿ ಕಾಣದಿದ್ದಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. 2025ರ ಆಗಸ್ಟ್‌ ವೇಳೆಗೆ ಮೊದಲ ರೈಲು ಸಂಚಾರ ಆರಂಭಿಸುವುದಾಗಿ ಜನರಿಗೆ ಮಾತು ಕೊಟ್ಟಿದ್ದೇವೆ. ಆದರೆ, ಕಾಮಗಾರಿಯ ವೇಗ ನೋಡಿದರೆ ಕಾರ್ಯರೂಪಕ್ಕೆ ಬರುವುದು ಅನುಮಾನವಾಗಿದೆ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

ಇದುವರೆಗೂ ಕೇವಲ ಶೇ 28ರಷ್ಟು ಭೌತಿಕ ಹಾಗೂ ಶೇ 22ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದೆ. ಇದೇ ವೇಗದಲ್ಲಿ ಹೋದರೆ ನಿಗದಿತ ಅವಧಿಯಲ್ಲಿ ಯೋಜನೆ ಪೂರ್ಣಗೊಳಿಸಲು ಸಾಧ್ಯ ಇಲ್ಲ. ಹೀಗಾಗಿ ವಾರ ಮತ್ತು ತಿಂಗಳ ಆಧಾರದಲ್ಲಿ ಪ್ರಗತಿಯನ್ನು ಕೆ-ರೈಡ್‌ ಅಧಿಕಾರಿಗಳು ಪರಿಶೀಲಿಸಬೇಕು. ವಿಳಂಬ ಆಗಿರುವ ಕಾಮಗಾರಿಗಳನ್ನು ಚುರುಕುಗೊಳಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಯೋಜನೆ ಪ್ರಕಾರ ತಿಂಗಳಿಗೆ ಕನಿಷ್ಠ 55 ಯು.ಗರ್ಡರ್‌, 22 ಪೈಯರ್‌, 42 ಐ-ಗರ್ಡರ್‌ ನಿರ್ಮಿಸಲೇಬೇಕು. ಅಂದರೆ ತಿಂಗಳಿಗೆ ಕನಿಷ್ಠ 54 ಕೋಟಿ ರೂಪಾಯಿ ವೆಚ್ಚ ಮಾಡಬೇಕು. ಆದರೆ, ಈಗ ಕೇವಲ 9 ಕೋಟಿ ಬಿಲ್‌ ಮಾಡುತ್ತಿದ್ದು, ಇದು ತೀರಾ ಕಡಿಮೆ ಎಂದು ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇದುವರೆಗೂ ಒಟ್ಟು 459 ಕೋಟಿ ರೂಪಾಯಿ ಆರ್ಥಿಕ ಪ್ರಗತಿ ಸಾಧಿಸಬೇಕಾಗಿತ್ತು. ಆದರೆ, ಆಗಿರುವುದು ಕೇವಲ 86 ಕೋಟಿ ರೂಪಾಯಿ. ಇದೇ ಪರಿಸ್ಥಿತಿ ಮುಂದುವರಿದರೆ ಗುತ್ತಿಗೆದಾರ ಸಂಸ್ಥೆ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ವಿಳಂಬದಿಂದ ಆಗುವ ನಷ್ಟವನ್ನು ಗುತ್ತಿಗೆದಾರ ಸಂಸ್ಥೆಯಿಂದಲೇ ವಸೂಲಿ ಮಾಡಬೇಕಾಗುತ್ತದೆ ಎಂದೂ ಅವರು ಎಚ್ಚರಿಸಿದರು.

ಹೀಲಲಗಿ- ರಾಜಾನುಕುಂಟೆ (ಕಾರಿಡಾರ್‌-4) ಯೋಜನೆಯನ್ನು ಕೂಡ ಎಲ್‌ ಆಂಡ್‌ ಟಿ ಸಂಸ್ಥೆ ಗುತ್ತಿಗೆ ಪಡೆದಿದ್ದು, ಕಾಮಗಾರಿಯನ್ನು ಚುರುಕುಗೊಳಿಸಬೇಕಾಗಿದೆ. ವಿದ್ಯುತ್‌, ಚರಂಡಿ ಪೈಪ್‌ ಇತ್ಯಾದಿ ಸೇವೆಗಳನ್ನು ಸ್ಥಳಾಂತರಿಸುವ ಕೆಲಸವನ್ನು ಶೇ 65ರಷ್ಟು ಮುಗಿಸಿದೆ. ಇದಲ್ಲದೆ, ಗರ್ಡರ್‌ ನಿರ್ಮಾಣ ಯಾರ್ಡ್‌ ಸ್ಥಾಪಿಸಲು ಜಾಗ ಗುರುತಿಸಿದ್ದು, ಕಾಮಗಾರಿ ತ್ವರಿತಗತಿಯಲ್ಲಿ ಸಾಗಬೇಕು. ಸೇತುವೆಗಳ ನಿರ್ಮಾಣ ಕೂಡ ಆರಂಭವಾಗಿದ್ದು, ಕಾಮಗಾರಿಗೆ ಮತ್ತಷ್ಟು ಚುರುಕು ನೀಡಬೇಕು ಎಂದು ಅವರು ಸೂಚಿಸಿದರು.

ಎಲ್‌ ಆಂಡ್‌ ಟಿ ಗುತ್ತಿಗೆದಾರ ಸಂಸ್ಥೆಯ ಹಿರಿಯ ಅಧಿಕಾರಿಗಳ ಜತೆಗೂ ಮಾತುಕತೆ ನಡೆಸಿ, ಕಾಮಗಾರಿಗೆ ವೇಗ ನೀಡಬೇಕು ಎನ್ನುವ ಸೂಚನೆಯನ್ನು ಸಚಿವರು ಕೆ-ರೈಡ್‌ ಅಧಿಕಾರಿಗಳಿಗೆ ನೀಡಿದರು. ಯಾವುದೇ ಕಾರಣಕ್ಕೂ ಕಾಮಗಾರಿ ಮುಗಿಯುವ ಅವಧಿಯನ್ನು ವಿಸ್ತರಿಸುವುದಿಲ್ಲ. ನಿಗದಿತ ಅವಧಿಯೊಳಗೇ ಮುಗಿಸುವ ಹಾಗೆ ರಾತ್ರಿ-ಹಗಲು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿಯೂ ಆದ ಕೆ-ರೈಡ್‌ ವ್ಯವಸ್ಥಾಪಕ ನಿರ್ದೇಶಕಿ ಡಾ.ಎನ್.‌ಮಂಜುಳಾ, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ, ಕೆ-ರೈಡ್‌ ಅಧಿಕಾರಿಗಳು ಮತ್ತು ಸಮಾಲೋಚಕರು ಸಭೆಯಲ್ಲಿ ಭಾಗವಹಿಸಿದ್ದರು.

ಗುತ್ತಿಗೆದಾರ ಸಂಸ್ಥೆಯ ಪ್ರಾಜೆಕ್ಟ್ ವ್ಯವಸ್ಥಾಪಕರೂ ಸಭೆಯಲ್ಲಿ ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

LPG ಸಮಸ್ಯೆಯನ್ನು ಕೇಂದ್ರ ಸರಕಾರ ಸಮರ್ಥವಾಗಿ ನಿಭಾಯಿಸಿದೆ; ಪ್ರಲ್ಹಾದ್ ಜೋಶಿ

LPG ಸಮಸ್ಯೆಯನ್ನು ಕೇಂದ್ರ ಸರಕಾರ ಸಮರ್ಥವಾಗಿ ನಿಭಾಯಿಸಿದೆ; ಪ್ರಲ್ಹಾದ್ ಜೋಶಿ

ಅಮೆರಿಕ ಮತ್ತು ಇಸ್ರೇಲ್ ಜತೆಗೂಡಿ ಇರಾನ್ ವಿರುದ್ದ ನಡೆಸುತ್ತಿರುವ ಯುದ್ಧ ಸೋಮವಾರ 38ನೇ ದಿನಕ್ಕೆ ಕಾಲಿಟ್ಟಿದೆ. ಯುದ್ಧದ ಕಾರಣವಾಗಿ ಇರಾನ್ ಹೊರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದರಿಂದ ನೈಸರ್ಗಿಕ ಅನಿಲ ಮತ್ತು ಎಲ್‌ಪಿಜಿ (LPG) ಪೂರೈಕೆ

[ccc_my_favorite_select_button post_id="120766"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]