ಭಾರತದ ಕೊನೆಯ ಭಾಗಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ HD ದೇವೇಗೌಡರು| ವಿಡಿಯೋ ನೋಡಿ

ನವದೆಹಲಿ/ಶ್ರೀನಗರ. (ಮಾ.29): ತಾವು ಪ್ರಧಾನಿಗಳಾದ 28 ವರ್ಷಗಳ ನಂತರ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು ಖುದ್ದು  ವೀಕ್ಷಿಸಿದರು.

ಬುಧವಾರವೇ ಶ್ರೀನಗರಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿಗಳು, 28 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಗ್ಗೆಯೇ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿ; ತಾವು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಈ ರೇಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದನ್ನು ನೆನಪು ಮಾಡಿಕೊಂಡರು.

ಬಾರಾಮುಲ್ಲಾದಿಂದ ಉರಿಗೆ ತೆರಳಿದ ಅವರು; ಅಲ್ಲಿನ ರಾಷ್ಟ್ರೀಯ ಜಲವಿದ್ಯುತ್ ಉತ್ಪಾದನಾ ಘಟಕ (National Hydroelectric Power Corporation Private Limited- NHPC) ಕ್ಕೆ ಭೇಟಿ ಕೊಟ್ಟರು. 480 ಮೆಗಾವ್ಯಾಟ್ ಸಾಮರ್ಥ್ಯದ ಈ ವಿದ್ಯುತ್ ಘಟಕವೂ ದೇವೇಗೌಡರು ಪ್ರಧಾನಿಯಾಗಿದ್ದಾಗಲೇ ಉದ್ಘಾಟನೆ ಆಗಿತ್ತು. ಈ ವಿದ್ಯುತ್ ಉತ್ಪಾದನಾ ಘಟಕವೂ ಉರಿಯ ಝಿಲಂ ನದಿ ದಂಡೆಯಲ್ಲಿ, ಭಾರತ – ಪಾಕಿಸ್ತಾನದ ನಡುವಿನ ನಿಯಂತ್ರಣ ರೇಖೆಗೆ (LOC) ಅತಿ ಸಮೀಪದಲ್ಲಿದೆ.

ವಿದ್ಯುತ್ ಸ್ಥಾವರದ ಉದ್ದಗಲಕ್ಕೂ ತೆರಳಿದ ಮಾಜಿ ಪ್ರಧಾನಿಗಳು, ತಾವು ಘಟಕಕ್ಕೆ ಭೇಟಿ ನೀಡಿದ್ದ ಸಂದರ್ಭವನ್ನು ಸ್ಮರಣೆ ಮಾಡಿಕೊಂಡರಲ್ಲದೆ; ಅಲ್ಲಿನ ಸಿಬ್ಬಂದಿ, ಅಧಿಕಾರಿಗಳ ಜತೆ ಅಂದಿನ ಸಂದರ್ಭವನ್ನು, ಸೇನೆಯ ಎಚ್ಚರಿಕೆಯನ್ನು ಲೆಕ್ಕಿಸದೆ ಘಟಕದ ಸುರಂಗಕ್ಕೆ ಭೇಟಿ ಕೊಟ್ಟಿದ್ದನ್ನು ನೆನಪು ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು; ನಾನು ಪ್ರಧಾನಿ ಸ್ಥಾನದಿಂದ ಕೆಳಗಿಳಿದ 28 ವರ್ಷಗಳ ನಂತರ ನಾನು ಕಾಶ್ಮೀರಕ್ಕೆ ಭೇಟಿ ನೀಡಿದ್ದೇನೆ. ಅಂದಿನ ಕಾಶ್ಮೀರಕ್ಕೂ ಇಂದಿನ ಕಾಶ್ಮೀರಕ್ಕೂ ಬಹಳಷ್ಟು ವ್ಯತ್ಯಾಸ ಕಾಣುತ್ತಿದೆ.

ನಾನು ಪ್ರಧಾನಿ ಆಗಿದ್ದಾಗ 13 ಫೆಬ್ರವರಿ 1997ರಂದು ಈ ಘಟಕವನ್ನು ದೇಶಕ್ಕೆ ಸಮರ್ಪಣೆ ಮಾಡಿದ್ದೆ. ನಿರ್ಮಾಣ ಹಂತದಲ್ಲಿದ್ದ ಈ ಘಟಕಕ್ಕೆ ಎರಡು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆ. ಆ ಭೇಟಿಗಳು ನನ್ನ ಪಾಲಿಗೆ ರೋಚಕ ಅನುಭವ ಎಂದು ಹೇಳಬಹುದು. ಮತ್ತೆ ಈ ವಿದ್ಯುತ್ ಘಟಕಕ್ಕೆ ಭೇಟಿ ನೀಡಿದ್ದು ಬಹಳ ಸಂತೋಷ ಉಂಟು ಮಾಡಿದೆ ಎಂದು ಹೇಳಿದರು.

ಇದೇ ವೇಳೆ ಮಾಜಿ ಪ್ರಧಾನಿಗಳು ಈ ವಿದ್ಯುತ್ ಘಟಕದ ಉದ್ಘಾಟನಾ ಫಲಕದ ಮುಂದೆ ನಿಂತು ಬಹಳ ಸಂತೋಷದಿಂದ ಫೋಟೋ ತೆಗೆಸಿಕೊಂಡರು. ಅಂದಿನ ಕಾರ್ಯಕ್ರಮದ ಕ್ಷಣಗಳನ್ನು ಅಧಿಕಾರಿಗಳ ಜತೆ ಹಂಚಿಕೊಂಡರು. ಅಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಮನಸೋತರು.

ರೈಲು ಪ್ರಯಾಣದ ಬಗ್ಗೆ ಸಂತಸ: ಶ್ರೀನಗರ – ಬಾರಮುಲ್ಲಾ ನಡುವಿನ ರೈಲು ಪ್ರಯಾಣದ ಬಗ್ಗೆಯೂ ಸಂತಸ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು; ತಾವು ಪ್ರಧಾನಿಯಾಗಿದ್ದಾಗ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ಈ ರೇಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ ಸಂದರ್ಭವನ್ನು ಮೆಲುಕು ಹಾಕಿದರು.

1996, 1997ರ ಸಂದರ್ಭದಲ್ಲಿ ಕಾಶ್ಮೀರದ ಜನರು ಸಂಪರ್ಕ ಜಾಲದಿಂದ ವಂಚಿತರಾಗಿದ್ದರು. ಭಯೋತ್ಪಾದಕ ಚಟುವಟಿಕೆಗಳಿಂದ ಜರ್ಜರಿತರಾಗಿದ್ದರು. ಆ ಸಂದರ್ಭದಲ್ಲಿ ಬಾರಾಮುಲ್ಲಾ ಮತ್ತು ಶ್ರೀನಗರ ನಡುವೆ ರೇಲ್ವೆ ಮಾರ್ಗ ನಿರ್ಮಿಸುವ ಯೋಜನೆಗೆ ನಾನು ಮಂಜೂರಾತಿ ಕೊಟ್ಟೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದ್ದೆ. ಇವತ್ತು ಅದೇ ರೈಲು ಮಾರ್ಗದ ರೇಲಿನಲ್ಲಿ ಪ್ರಯಾಣ ಮಾಡಿದ್ದು ನನಗೆ ಮರೆಯಲಾಗದ ಅವಿಸ್ಮರಣೀಯ ಕ್ಷಣ ಎಂದು ಅವರು ಭಾವುಕರಾದರು.

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳನ್ನು ರೇಲ್ವೆ ಅಧಿಕಾರಿಗಳು ಆತ್ಮೀಯವಾಗಿ ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ರೇಲ್ವೆ ಮಾರ್ಗದ ಬಗ್ಗೆ, ಜತೆಗೆ ಆಗುತ್ತಿರುವ ಉಪಯೋಗದ ಬಗ್ಗೆ ಮಾಜಿ ಪ್ರಧಾನಿಗಳು ಮಾಹಿತಿ ಪಡೆದುಕೊಂಡರು.

ಬೆಳಗ್ಗೆ 11:30ಕ್ಕೆ ಶ್ರೀನಗರದಲ್ಲಿ ರೈಲು ಹಿಡಿದ ಮಾಜಿ ಪ್ರಧಾನಿಗಳು, 12:30 ಗಂಟೆಗೆ ಬಾರಮುಲ್ಲಾ ತಲುಪಿದರು. 

ತಾವು ಪ್ರಧಾನಿಯಾಗಿದ್ದಾಗ ಕಾಶ್ಮೀರದ ರೈತರಿಗಾಗಿ ಒಟ್ಟು ₹200 ಕೋಟಿ ಸಾಲ ಮನ್ನಾ ಮಾಡಿದೆ. ಕಣಿವೆ ರಾಜ್ಯದ ಪ್ರತಿ ರೈತರ ₹50,000 ಸಾಲ ಮನ್ನಾ ಮಾಡಲಾಯಿತು. ಅಂದು ಪ್ರಧಾನಿಯಾಗಿ ರೈತರನ್ನು ಭೇಟಿಯಾಗಿ ಅವರ ಸಂಕಷ್ಟವನ್ನು ಆಲಿಸಿದ್ದೆ. ಅವರಿಗೆ ನೆರವಾಗುವ ಉದ್ದೇಶದಿಂದ ಸಾಲ ಮನ್ನಾ ಮಾಡಲಾಯಿತು ಎಂದು ಮಾಜಿ ಪ್ರಧಾನಿಗಳು ಸುದ್ದಿಗಾರರ ಜತೆ ಮಾತಾಡುತ್ತಾ ಹೇಳಿದರು.

ನಾಳೆ ದಾಲ್ ಸರೋವರ, ಶಂಕರರ ದೇಗುಲಕ್ಕೆ ಭೇಟಿ: ಶುಕ್ರವಾರವೂ ಮಾಜಿ ಪ್ರಧಾನಿಗಳು ಶ್ರೀನಗರದ ದಾಲ್ ಸರೋವರ ಹಾಗೂ ಶ್ರೀ ಶಂಕರಾಚಾರ್ಯ ದೇಗುಲಕ್ಕೆ ಭೇಟಿ ನೀಡಲಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನೀವು ಮತ್ತು ಸಿದ್ದರಾಮಯ್ಯ ಅವರು ದುಬಾರಿ ವಾಚ್ ಧರಿಸಿದ್ದರ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕೇಳಿದಾಗ, “ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ

[ccc_my_favorite_select_button post_id="116998"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!