ದೊಡ್ಡಬಳ್ಳಾಪುರ: ಅಧಿಕಾರಿಗಳ ವಿರುದ್ಧ ನಗರಸಭೆ ಬಿಜೆಪಿ ಸದಸ್ಯರ ಪ್ರತಿಭಟನೆ..!, ಕಾಂಗ್ರೆಸ್ ಮುಖಂಡರ ಲೇವಡಿ..!! ಇಷ್ಟಕ್ಕೂ ಆಗಿದ್ದೇನು ನೋಡಿ

ದೊಡ್ಡಬಳ್ಳಾಪುರ, (ಆಗಸ್ಟ್.29): ನಗರದಲ್ಲಿನ ತಾಯಿ ಮಗು ಆಸ್ಪತ್ರೆ ಆವರಣದಲ್ಲಿ ಗುರುವಾರ ವಿವಿಧ ಕಾಮಾಗಾರಿಗಳ ಶಂಕುಸ್ಥಾಪನೆಗೆ ಬರುವಂತೆ ನಗರಸಭೆ ಸದಸ್ಯರಿಗೆ ಆಹ್ವಾನ ನೀಡಿದ್ದ ಅಧಿಕಾರಿಗಳು ಕಾರ್ಯಕ್ರಮವನ್ನು ಕೊನೆ ಗಳಿಗೆಯಲ್ಲಿ ರದ್ದು ಮಾಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಬಿಜೆಪಿ ನಗರಸಭಾ ಸದಸ್ಯರು ಹಾಗೂ ಮುಖಂಡರು ತಾವೇ ಗುದ್ದಲಿ ಪೂಜೆ ನೆರವೇರಿಸಿ ಪ್ರತಿಭಟನೆ ನಡೆಸಿದರು.

ಆಸ್ಪತ್ರೆ ಅವರಣದಲ್ಲಿ ರೂ.5 ಕೋಟಿ ವೆಚ್ಚದಲ್ಲಿ ಕಾಂಪೌಂಡ್, ಸ್ವಾಗತ ಕಾಮಾನು ಸೇರಿದಂತೆ ಇತರೆ ಕಾಮಾಗಾರಿಗಳ ಶಂಕುಸ್ಪಾಪನೆಗೆ ಗುರುವಾರ ಬೆಳಿಗ್ಗೆ ಸಮಯ ನಿಗದಿಯಾಗಿತ್ತು. ಅಧಿಕಾರಿಗಳು ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನವನ್ನು ಸಹ ನೀಡಿದ್ದರು. ಆದರೆ ನಿಗದಿತ ಸಮಯಕ್ಕೆ ಸ್ಥಳಕ್ಕೆ ಬಂದಾಗಲಷ್ಟೇ ಕಾರ್ಯಕ್ರಮ ರದ್ದಾಗಿರುವ ಮಾಹಿತಿ ತಿಳಿದಿದೆ. ಅಧಿಕಾರಿಗಳ ಈ ನಡೆಯನ್ನು ಖಂಡಿಸಿದ ಬಿಜೆಪಿ ನಗರಸಭೆ ಸದಸ್ಯರು ಆರೋಗ್ಯಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿ ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿಗಳು ಬರುವಂತೆ ಪಟ್ಟು ಹಿಡಿದರು. 

ಈ ಕುರಿತು ಮಾಹಿತಿ ನೀಡಿದ, ಬಂತಿ ವೆಂಕಟೇಶ್, ಕಾರ್ಯಕ್ರಮ ರದ್ದಾಗಿರುವ ಬಗ್ಗೆ ಕನಿಷ್ಠ ಮಾಹಿತಿಯನ್ನು ನೀಡಿಲ್ಲ. ಶಾಸಕರು ಸೇರಿದಂತೆ ಜನಪ್ರತಿನಿಧಿಗಳಿಗೆ ಅವಮಾನ ಮಾಡುವ ಕೆಲಸವನ್ನು ಅಧಿಕಾರಿಗಳು ಮಾಡಿದ್ದಾರೆ.

ಕಾರ್ಯಕ್ರಮ ರದ್ದಾಗಲು ಕಾರಣ ಕೇಳಿದರೆ ಜಿಲ್ಲಾ ಉಸ್ತುವಾರಿ ಸಚಿವರು ಬಾರದೇ ಇರುವ ನೆಪವನ್ನು ಹೇಳುತ್ತಿದ್ದಾರೆ. ಪದೇ ಪದೇ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಿ ಸಾರ್ವಜನಿಕರ ಹಣವನ್ನು ವ್ಯರ್ಥ ಮಾಡುತ್ತಿದ್ದಾರೆ. ಸ್ಥಳೀಯ ಕೆಲ ಮುಖಂಡರ ಒತ್ತಡಕ್ಕೆ ಮಣಿದು ಕಾರ್ಯಕ್ರಮವನ್ನು ರದ್ದು ಮಾಡಿದ್ದು, ಅಧಿಕಾರಿಗಳ ವರ್ತನೆಗೆ ಬೇಸತ್ತು ನಾವೇ ಗುದ್ದುಲಿ ಪೂಜೆ ಮಾಡುತ್ತಿದ್ದೇವೆ ಎಂದರು.

ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯರಾದ ಪದ್ಮನಾಬ್, ಸುಧಾಲಕ್ಷ್ಮೀನಾರಾಯಣ್, ಸುಮಿತ್ರಆನಂದ್, ಹಂಸಪ್ರಿಯ, ಮುಖಂಡರಾದ ಗೋಪಿ, ಮುದ್ದಪ್ಪ ಇದ್ದರು.

ಹಾಸ್ಯಾಸ್ಪದ; ಅಭಿವೃದ್ಧಿ ಕೆಲಸಗಳಿಗೆ ಅಡ್ಡಿ ಪಡಿಸುವ ಪಾಠವನ್ನು ಕಲಿಸಿಕೊಟ್ಟವರೇ ಬಿಜೆಪಿ ಮುಖಂಡರು. ಈಗ ಬೇರೆಯವರಿಗೆ ಸಾರ್ವಜನಿಕ ಹಣ ವ್ಯರ್ಥವಾಗುವ ಬಗ್ಗೆ ತಿಳುವಳಿಕೆ ಹೇಳುತ್ತಿರುವುದು ಹಸ್ಯಾಸ್ಪದವಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಜನಪರಮಂಜು ಲೇವಡಿ ಮಾಡಿದ್ದಾರೆ.

ಜಿಲ್ಲಾ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಹಣ ಬಿಡಿಗಡೆಯಾಗಿ, ಶಂಕುಸ್ಥಾಪನೆಗೆ ಒಂದು ಗಂಟೆ ಸಮಯ ಇರುವಾಗ ಆಗಿನ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವರಾಗಿದ್ದ ಡಾ.ಕೆ.ಸುಧಾಕರ್ ಅವರು ತುರ್ತು ಕಾರ್ಯನಿಮಿತ ಬರುತ್ತಿಲ್ಲ ಎನ್ನುವ ನೆಪಹೇಳಿ ಮುಂದೂಡಿದರು. ಇಂದಿಗೂ ಜಿಲ್ಲಾ ಆಸ್ಪತ್ರೆ ಶಂಕುಸ್ಥಾಪನೆಯಾಗಿಲ್ಲ. 

ನಗರಸಭೆ ಕಾರ್ಯಾಲಯ ಸಿದ್ದವಾಗಿ ಮೂರು ಬಾರಿ ಉದ್ಘಾಟನೆಗೆ ದಿನಾಂಕ ನಿಗದಿಯಾಗಿ ಕೊನೆ ಗಳಿಗೆಯಲ್ಲಿ ಮುಂದೂಡಲಾಯಿತು. ಇಂತಹ ಇನ್ನೂ ಹತ್ತಾರು ದೊಡ್ಡಪಟ್ಟಿಗಳೆ ಇವೆ. 

ಈ ಎಲ್ಲವನ್ನೂ ಸಹ ಈಗಿನ ಬಿಜೆಪಿ ಮುಖಂಡರು, ಸದಸ್ಯರು ನೆನಪು ಮಾಡಿಕೊಳ್ಳಬೇಕು. ಹೆಸರಿನ ಹಂಬಲಕ್ಕೆ ಜೋತುಬಿದ್ದು ಅಭಿವೃದ್ಧಿ ಕೆಲಸಗಳಿಗೆ ಅಡ್ಡಿ ಪಡಿಸುವ ಪಾಠವನ್ನು ಕಲಿಸಿಕೊಟ್ಟವರೇ ಬಿಜೆಪಿ ಮುಖಂಡರು. ಈಗ ಬೇರೆಯವರಿಗೆ ಸಾರ್ವಜನಿಕ ಹಣ ವ್ಯರ್ಥವಾಗುವ ಬಗ್ಗೆ ತಿಳುವಳಿಕೆ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದ ಜನಪರಮಂಜು ಹೇಳಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!