ಹೊಸಹಳ್ಳಿಯಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ; ಕೆವಿಕೆ ವಿಜ್ಞಾನಿಗಳಿಂದ ಹಲವು ಮಹತ್ವದ ಮಾಹಿತಿ

ದೊಡ್ಡಬಳ್ಳಾಪುರ, (ಆಗಸ್ಟ್.29); ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವಾರು ಭಾಗಗಳಲ್ಲಿ ಕೃಷಿ ಜಮೀನಿನಲ್ಲಿ ಅಡಿಕೆ ಬೆಳೆ ಹೆಚ್ಚಾಗುತ್ತಿರುವುದು ಕಳೆದ ಎರಡು ಮೂರು ವರ್ಷಗಳಿಂದ ಕಂಡು ಬರುತ್ತಿದೆ.  

ಹೊಸದಾಗಿ ಅಡಿಕೆ ನಾಟಿ ಮಾಡಿದ ಜಮೀನುಗಳಲ್ಲಿ ಅಡಿಕೆ ಸಾಲುಗಳ ಮಧ್ಯೆ ಇರುವ ಭಾಗದಲ್ಲಿ ವಿವಿಧ ರೀತಿಯ ಅಂತರ ಬೆಳೆಗಳನ್ನು ಬೆಳೆಯುವುದರಿಂದ ಸಮರ್ಪಕವಾಗಿ ಜಾಗ ಬೆಳೆಸಿಕೊಂಡು ರೈತರು ಉತ್ತಮ ಇಳುವರಿ ಪಡೆಯಬಹುದು ಎನ್ನುವ ನಿಟ್ಟಿನಲ್ಲಿ ಕೃಷಿ ವಿಜ್ಞಾನ ಕೇಂದ್ರ, ಹಾಡೋನಹಳ್ಳಿ ವತಿಯಿಂದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 

ಹೊಸದಾಗಿ ನಾಟಿ ಮಾಡಿದ ಅಡಿಕೆ ತೋಟಗಳಲ್ಲಿ ಬೆಳೆಯ ಬಹುದಾದ ಅಂತರ ಬೆಳೆಗಳು: ಸೂಕ್ತ ಆಹಾರ ಬೆಳೆಗಳು – ರಾಗಿ, ಅಲಸಂದೆ, ಹೆಸರು, ಉದ್ದು, ಹುರುಳಿಕಾಳು ಇತ್ಯಾದಿಗಳನ್ನು ನಾಟಿ ಮಾಡಿದ 3 ರಿಂದ 5 ವರ್ಷಗಳ ಕಾಲ ಬೆಳೆಯಬಹುದಾಗಿದೆ.

ವಿಶೇಷವಾಗಿ ದ್ವಿದಳ ಧಾನ್ಯ ಬೆಳೆಗಳನ್ನು ಅಂತರ ಬೆಳೆಯಾಗಿ ಬೆಳೆಯುವುದರಿಂದ ವಾತಾವರಣದ ಸಾರಜನಕವನ್ನು ಅವುಗಳು ಬೇರುಗಂಟಿನಲ್ಲಿರುವ ರೈಜೋಬಿಯಂ ಸೂಕ್ಷ್ಮಾಣುವಿನ ಮೂಲಕ ಸ್ಥಿರೀಕರಿಸಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವಲ್ಲಿ ಸಹಕರಿಸುತ್ತವೆ ಎಂದು ಕೇಂದ್ರದ ಮಣ್ಣು ವಿಜ್ಞಾನಿ ಡಾ.ಪಿ.ವೀರನಾಗಪ್ಪರವರು ತಾಂತ್ರಿಕ ಮಾಹಿತಿ ನೀಡಿದರು.

ಅಡಿಕೆಯನ್ನು 7 x 8 ಅಡಿ, 8 x 8 ಅಡಿ, 9x 9 ಅಡಿ, 8 x 9 ಅಡಿ ವಿವಿಧ ಅಂತರದಲ್ಲಿ ರೈತರು ನಾಟಿ ಮಾಡುತ್ತಿದ್ದಾರೆ. ಅಡಿಕೆಯಲ್ಲಿ ಪೋಷಕಾಂಶಗಳ ಮಹತ್ವ ಮತ್ತು ನೀರು ನಿರ್ವಹಣೆ, ಬೇಸಿಗೆಯಲ್ಲಿ ತೇವಾಂಶ ಹಾಗೂ ಬೆಳೆಯ ರಕ್ಷಣೆಯ ಕುರಿತು ಉಪನ್ಯಾಸ ನೀಡಿದರು. 

ಕೇಂದ್ರದ ಮುಖ್ಯಸ್ಥರಾದ ಡಾ.ಬಿ.ಜಿ.ಹನುಮಂತರಾಯ ಮಾತನಾಡಿ, ಬಯಲು ಸೀಮೆಯಲ್ಲಿ ಅಡಿಕೆ ಬೆಳೆಯಲು ಅನುಸರಿಸಬೇಕಾದ ಕೆಲವು ಪದ್ಧತಿಗಳ ಕುರಿತು ಮಾಹಿತಿ ನೀಡಿದರು.

ಅಡಿಕೆಗೆ ಸೂಕ್ತ ತೋಟಗಾರಿಕೆ ಬೆಳೆಗಳು: ಬೀನ್ಸ್, ಕ್ಯಾರೆಟ್, ಬೀಟ್‌ರೂಟ್, ಕಡ್ಡಿ ಬೀನ್ಸ್, ಬಾಳೆ, ಚಪ್ಪರದ ಅವರೆ ಇತ್ಯಾದಿಗಳನ್ನು ಮೊದಲು 3 ವರ್ಷಗಳವರೆಗೆ ಬೆಳೆಯಬಹುದು. 

ಹತ್ತು ವರ್ಷಗಳ ನಂತರ ಅಡಿಕೆಯಲ್ಲಿ ಅಂತರ ಬೆಳೆಯಾಗಿ ವೀಳ್ಯದೆಲೆ, ಕಾಳು ಮೆಣಸು, ಏಲಕ್ಕಿ, ಕೊಕೋನಾ, ಜಾಯಿಕಾಯಿ ಇತ್ಯಾದಿ ಬಹುವಾರ್ಷಿಕ ಬೆಳೆಗಳನ್ನು ಬೆಳೆಯಬಹುದಾಗಿದ್ದು ರೈತರು ಆದಾಯ ಹೆಚ್ಚಿಸಿಕೊಳ್ಳಬಹುದಾಗಿದೆಯೆಂದು ತಿಳಿಸಿದರು.  

ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವ್ಯವಸಾಯ ಪೂರಕ ಚಟುವಟಿಕೆಗಳಿಗೆ ಮಂತಾರ್ ಲೀ ಸೋಷಿಯಲ್ ಇನ್ನೋವೇಷನ್ ಫೆಡರೇಶನ್, ಬೆಂಗಳೂರು ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಸಂಸ್ಥೆಯ ಕಾರ್ಪೋರೇಟ್ ಸೇವಾ ಜವಾಬ್ದಾರಿ ಉಪಕ್ರಮಗಳ ಅಡಿಯಲ್ಲಿ ಪ್ರಾಯೋಜಿಸಲಾಗುತ್ತಿದೆ ಎಂದು ರೋಹಿಣಿ ಅವರು ತಿಳಿಸಿದರು.

ಕೇಂದ್ರದ ವತಿಯಿಂದ ರೈತರುಗಳಿಗೆ ಅಡಿಕೆ ಬೆಳೆಯಲ್ಲಿ ಪ್ರಾತ್ಯಕ್ಷಿಕೆಗಳು, ಸುಗಂಧರಾಜ ಬೆಳೆಯಲ್ಲಿ ವೈಜ್ಞಾನಿಕ ಬೇಸಾಯ ಪದ್ಧತಿಗಳು ಕುರಿತು ಹಲವು ತರಬೇತಿ ಮತ್ತು ಪದ್ಧತಿ ಪ್ರಾತ್ಯಕ್ಷಿಕೆಗಳನ್ನು ರೈತರ ತಾಕುಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಸ್ಥರು ತಿಳಿಸಿದರು. 

ಕಾರ್ಯಕ್ರಮದಲ್ಲಿ ಹೊಸಹಳ್ಳಿ ಗ್ರಾಮದ ರೈತ ಹಾಗೂ ರೈತ ಮಹಿಳೆಯರು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!