ಹೊಸಹಳ್ಳಿಯಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ; ಕೆವಿಕೆ ವಿಜ್ಞಾನಿಗಳಿಂದ ಹಲವು ಮಹತ್ವದ ಮಾಹಿತಿ

ದೊಡ್ಡಬಳ್ಳಾಪುರ, (ಆಗಸ್ಟ್.29); ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವಾರು ಭಾಗಗಳಲ್ಲಿ ಕೃಷಿ ಜಮೀನಿನಲ್ಲಿ ಅಡಿಕೆ ಬೆಳೆ ಹೆಚ್ಚಾಗುತ್ತಿರುವುದು ಕಳೆದ ಎರಡು ಮೂರು ವರ್ಷಗಳಿಂದ ಕಂಡು ಬರುತ್ತಿದೆ.  

ಹೊಸದಾಗಿ ಅಡಿಕೆ ನಾಟಿ ಮಾಡಿದ ಜಮೀನುಗಳಲ್ಲಿ ಅಡಿಕೆ ಸಾಲುಗಳ ಮಧ್ಯೆ ಇರುವ ಭಾಗದಲ್ಲಿ ವಿವಿಧ ರೀತಿಯ ಅಂತರ ಬೆಳೆಗಳನ್ನು ಬೆಳೆಯುವುದರಿಂದ ಸಮರ್ಪಕವಾಗಿ ಜಾಗ ಬೆಳೆಸಿಕೊಂಡು ರೈತರು ಉತ್ತಮ ಇಳುವರಿ ಪಡೆಯಬಹುದು ಎನ್ನುವ ನಿಟ್ಟಿನಲ್ಲಿ ಕೃಷಿ ವಿಜ್ಞಾನ ಕೇಂದ್ರ, ಹಾಡೋನಹಳ್ಳಿ ವತಿಯಿಂದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 

ಹೊಸದಾಗಿ ನಾಟಿ ಮಾಡಿದ ಅಡಿಕೆ ತೋಟಗಳಲ್ಲಿ ಬೆಳೆಯ ಬಹುದಾದ ಅಂತರ ಬೆಳೆಗಳು: ಸೂಕ್ತ ಆಹಾರ ಬೆಳೆಗಳು – ರಾಗಿ, ಅಲಸಂದೆ, ಹೆಸರು, ಉದ್ದು, ಹುರುಳಿಕಾಳು ಇತ್ಯಾದಿಗಳನ್ನು ನಾಟಿ ಮಾಡಿದ 3 ರಿಂದ 5 ವರ್ಷಗಳ ಕಾಲ ಬೆಳೆಯಬಹುದಾಗಿದೆ.

ವಿಶೇಷವಾಗಿ ದ್ವಿದಳ ಧಾನ್ಯ ಬೆಳೆಗಳನ್ನು ಅಂತರ ಬೆಳೆಯಾಗಿ ಬೆಳೆಯುವುದರಿಂದ ವಾತಾವರಣದ ಸಾರಜನಕವನ್ನು ಅವುಗಳು ಬೇರುಗಂಟಿನಲ್ಲಿರುವ ರೈಜೋಬಿಯಂ ಸೂಕ್ಷ್ಮಾಣುವಿನ ಮೂಲಕ ಸ್ಥಿರೀಕರಿಸಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವಲ್ಲಿ ಸಹಕರಿಸುತ್ತವೆ ಎಂದು ಕೇಂದ್ರದ ಮಣ್ಣು ವಿಜ್ಞಾನಿ ಡಾ.ಪಿ.ವೀರನಾಗಪ್ಪರವರು ತಾಂತ್ರಿಕ ಮಾಹಿತಿ ನೀಡಿದರು.

ಅಡಿಕೆಯನ್ನು 7 x 8 ಅಡಿ, 8 x 8 ಅಡಿ, 9x 9 ಅಡಿ, 8 x 9 ಅಡಿ ವಿವಿಧ ಅಂತರದಲ್ಲಿ ರೈತರು ನಾಟಿ ಮಾಡುತ್ತಿದ್ದಾರೆ. ಅಡಿಕೆಯಲ್ಲಿ ಪೋಷಕಾಂಶಗಳ ಮಹತ್ವ ಮತ್ತು ನೀರು ನಿರ್ವಹಣೆ, ಬೇಸಿಗೆಯಲ್ಲಿ ತೇವಾಂಶ ಹಾಗೂ ಬೆಳೆಯ ರಕ್ಷಣೆಯ ಕುರಿತು ಉಪನ್ಯಾಸ ನೀಡಿದರು. 

ಕೇಂದ್ರದ ಮುಖ್ಯಸ್ಥರಾದ ಡಾ.ಬಿ.ಜಿ.ಹನುಮಂತರಾಯ ಮಾತನಾಡಿ, ಬಯಲು ಸೀಮೆಯಲ್ಲಿ ಅಡಿಕೆ ಬೆಳೆಯಲು ಅನುಸರಿಸಬೇಕಾದ ಕೆಲವು ಪದ್ಧತಿಗಳ ಕುರಿತು ಮಾಹಿತಿ ನೀಡಿದರು.

ಅಡಿಕೆಗೆ ಸೂಕ್ತ ತೋಟಗಾರಿಕೆ ಬೆಳೆಗಳು: ಬೀನ್ಸ್, ಕ್ಯಾರೆಟ್, ಬೀಟ್‌ರೂಟ್, ಕಡ್ಡಿ ಬೀನ್ಸ್, ಬಾಳೆ, ಚಪ್ಪರದ ಅವರೆ ಇತ್ಯಾದಿಗಳನ್ನು ಮೊದಲು 3 ವರ್ಷಗಳವರೆಗೆ ಬೆಳೆಯಬಹುದು. 

ಹತ್ತು ವರ್ಷಗಳ ನಂತರ ಅಡಿಕೆಯಲ್ಲಿ ಅಂತರ ಬೆಳೆಯಾಗಿ ವೀಳ್ಯದೆಲೆ, ಕಾಳು ಮೆಣಸು, ಏಲಕ್ಕಿ, ಕೊಕೋನಾ, ಜಾಯಿಕಾಯಿ ಇತ್ಯಾದಿ ಬಹುವಾರ್ಷಿಕ ಬೆಳೆಗಳನ್ನು ಬೆಳೆಯಬಹುದಾಗಿದ್ದು ರೈತರು ಆದಾಯ ಹೆಚ್ಚಿಸಿಕೊಳ್ಳಬಹುದಾಗಿದೆಯೆಂದು ತಿಳಿಸಿದರು.  

ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವ್ಯವಸಾಯ ಪೂರಕ ಚಟುವಟಿಕೆಗಳಿಗೆ ಮಂತಾರ್ ಲೀ ಸೋಷಿಯಲ್ ಇನ್ನೋವೇಷನ್ ಫೆಡರೇಶನ್, ಬೆಂಗಳೂರು ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಸಂಸ್ಥೆಯ ಕಾರ್ಪೋರೇಟ್ ಸೇವಾ ಜವಾಬ್ದಾರಿ ಉಪಕ್ರಮಗಳ ಅಡಿಯಲ್ಲಿ ಪ್ರಾಯೋಜಿಸಲಾಗುತ್ತಿದೆ ಎಂದು ರೋಹಿಣಿ ಅವರು ತಿಳಿಸಿದರು.

ಕೇಂದ್ರದ ವತಿಯಿಂದ ರೈತರುಗಳಿಗೆ ಅಡಿಕೆ ಬೆಳೆಯಲ್ಲಿ ಪ್ರಾತ್ಯಕ್ಷಿಕೆಗಳು, ಸುಗಂಧರಾಜ ಬೆಳೆಯಲ್ಲಿ ವೈಜ್ಞಾನಿಕ ಬೇಸಾಯ ಪದ್ಧತಿಗಳು ಕುರಿತು ಹಲವು ತರಬೇತಿ ಮತ್ತು ಪದ್ಧತಿ ಪ್ರಾತ್ಯಕ್ಷಿಕೆಗಳನ್ನು ರೈತರ ತಾಕುಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಸ್ಥರು ತಿಳಿಸಿದರು. 

ಕಾರ್ಯಕ್ರಮದಲ್ಲಿ ಹೊಸಹಳ್ಳಿ ಗ್ರಾಮದ ರೈತ ಹಾಗೂ ರೈತ ಮಹಿಳೆಯರು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]