ವಿದ್ಯುತ್ ಖಾಸಗೀಕರಣ ವಿರೋಧಿಸಿ ಸೆ.4ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ದೊಡ್ಡಬಳ್ಳಾಪುರ, (ಆಗಸ್ಟ್ 30); ರೈತರ ಕೃಷಿ ಪಂಪ್‌ಸೆಟ್ ಮೀಟರ್‌ಗಳಿಗೆ ಆಧಾರ್ ಜೋಡಣೆ ಮಾಡುವ ಮೂಲಕ ವಿದ್ಯುತ್ ಖಾಸಗೀಕರಣದ ಹುನ್ನಾರ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಇದಲ್ಲದೇ ವಿದ್ಯುತ್ ಲೈನ್‌ಗಳಿಗೆ, ಕೈಗಾರಿಕೆಗಳಿಗೆ ಫಲವತ್ತಾದ ಕೃಷಿ ಭೂಮಿ ಸ್ವಾಧೀನ ಪಡಿಸಿಕೊಂಡು ಕೃಷಿಗೆ ಸಂಚಕಾರ ತರುವ ಸರ್ಕಾರದ ನೀತಿಗಳನ್ನು ವಿರೋಧಿಸಿ, ಸೆ.4ರಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ.

ಈ ಕುರಿತು ನಗರದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಕೆಂಚೇಗೌಡ, ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಮೀಟರ್ ಅಳವಡಿಸಿದ್ದ ಉಗ್ರವಾಗಿ ಹೋರಾಟ ನಡೆಸಲಾಗಿತ್ತು. ಈ ಮುಂಚೆ ಇದ್ದ ಕರ್ನಾಟಕ ವಿದ್ಯುತ್ ಮಂಡಲಿ (ಕೆಇಬಿ)ಯನ್ನು  ಐದು ವಿದ್ಯುತ್ ಸರಬರಾಜು ಕಂಪನಿಗಳನ್ನಾಗಿ ಮಾಡಿ, ಕಂಪನಿಗಳನ್ನು ಖಾಸಗೀಕರಣಕ್ಕೆ ವಹಿಸಲಾಗಿದೆ.

ಈ ಕಂಪನಿಗಳು ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್, ಭಾಗ್ಯ ಜ್ಯೋತಿ ಮೊದಲಾದ ಯೋಜನೆಗಳನ್ನು ಜಾರಿಗೆ ತರಲು ಹಿಂದೇಟು ಹಾಕಿ ಸರ್ಕಾರವನ್ನು ಪರೋಕ್ಷವಾಗಿ ಒತ್ತಾಯಿಸುವ ಫಲವಾಗಿ ಇಂದು ಕ್ರಮೇಣ, ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡುವ ಹೆಜ್ಜೆ ಇರಿಸಿದೆ. ಡಿಜಿಟಲ್ ಮೀಟರ್, ಸಿಮ್ ಕಾರ್ಡ್ಗಳ ಅಳವಡಿಕೆ ಮಾಡುವ ಮೂಲಕ ದುಬಾರಿ ವೆಚ್ಚ ಹೇರುತ್ತಿವೆ. ಹಾಗಾಗಿ ವಿದ್ಯುತ್ ಖಾಸಗೀಕರಣಕ್ಕೆ ನಮ್ಮ ಪ್ರಬಲ ವಿರೋಧವಿದೆ.

ಸರ್ಕಾರ ಚುನಾವಣಾ ಪೂರ್ವದಲ್ಲಿ  ನೀಡಿದ್ದ ಭರವಸೆ ಒಂದನ್ನೂ ಈಡೇರಿಸಿಲ್ಲ. ಭೂಸ್ವಾಧೀನದ ವಿರುದ್ದ ಚೆನ್ನರಾಯಪಟ್ಟಣದ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ನೀಡಿದ್ದ ಭರವಸೆಗಳು ಈಡೇರಿಲ್ಲ. 

ಈ ಹಿಂದೆ ಹೊಸಕೋಟೆ ತಾಲೂಕಿನಲ್ಲಿ ಎಸ್.ಇ.ಜೆಡ್ ವಿಶೇಷ ವಲಯದ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಅದನ್ನು ಕೈಬಿಟ್ಟು ಈಗ ಉಪ ನಗರದ ಯೋಜನೆಯಡಿ ಹೆಸರು ಬದಲಾವಣೆ ಮಾಡಿ, ರೈತರ ಭೂಮಿ ಪಡೆಯಲಾಗುತ್ತದೆ. ಫಲವತ್ತಾದ ಕೃಷಿ ಭೂಮಿ ಸ್ವಾಧೀನವಿಲ್ಲ ಎಂದು ಹೇಳುತ್ತಾರೆ. ಆದರೆ ಶೇ.65 ರಿಂದ 70 ಭಾಗ ನೀರಾವರಿ ಭೂಮಿಯೇ ಇದೆ. ಭೂಮಿ ವಶ ಪಡಿಸಿಕೊಳ್ಳುವದರಲ್ಲಿ ಶೇ.35 ಭಾಗ ಜಮೀನು ರಸ್ತೆ, ವಿದ್ಯುತ್ ಗೆ ಕಳೆದುಹೋಗುತ್ತಿದೆ. ಇದರ ಬಗ್ಗೆ ನಮ್ಮ ವಿರೋಧವಿದೆ ಎಂದರು.

ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಸನ್ನ ಮಾತನಾಡಿ, ವಿದ್ಯುತ್ ಖಾಸಗೀಕರಣದ ಪ್ರಕ್ರಿಯೆಗಳು ಕ್ರಮೇಣ ಜರುಗುತ್ತಿದ್ದು, ಇದು ರೈತರಿಗೆ ಮಾರಕವಾಗಿದೆ. ಪವರ್ ಗ್ರಿಡ್‌ನಿಂದ ರೈತರ ಜಮೀನುಗಳಲ್ಲಿ ಹಾದು ಹೋಗುವ ಬೃಹತ್ ವಿದ್ಯುತ್ ಕಂಬಗಳು ರೈತರ ಕೃಷಿಗೆ ಸಂಚಕಾರ ತಂದಿವೆ. ಇದರಿಂದ ರೈತರ ಜಮೀನಿಗೆ ಬೆಲೆಯೂ ಸಿಗುವುದಿಲ್ಲ.

ಸರ್ಕಾರ 1:4 ದರದಲ್ಲಿ ಭೂಮಿ ಖರೀದಿ ಮಾಡಿ, ಆನಂತರ ವಿದ್ಯುತ್ ಲೈನ್‌ಗಳನ್ನು ಎಳೆಯಲಿ. ಇಲ್ಲವೇ ಅಂಡರ್ ಗ್ರೌಂಡ್ ಕೇಬಲ್‌ಗಳನ್ನು ಅಳವಡಿಸಲಿ. ಅದು ಬಿಟ್ಟು ರೈತರ ಜಮೀನುಗಳ ಮೇಲೆ ಅತಿಕ್ರಮಣ ಮಾಡುವುದು ಎಷ್ಟು ಸರಿ. ಕೈಗಾರಿಕೆಗಳಿಂದ ಜನಸಾಂದ್ರತೆ ಹೆಚ್ಚಾಗಿ ಜನರ ಜೀವನ ಕಷ್ಟವಾಗುತ್ತದೆ ಎಂದರು.

ಜಿಲ್ಲಾ ಕಾರ್ಯದರ್ಶಿ ಜಿಂಕೆಬಚ್ಚಹಳ್ಳಿ ಸತೀಶ್ ಮಾತನಾಡಿ, ಬಾಶೆಟ್ಟಿಹಳ್ಳಿಯಲ್ಲಿ ಅಪೇರೆಲ್ ಪಾರ್ಕ್ ಮೂರನೇ ಹಂತಕ್ಕೆ ವಶಪಡಿಸಿಕೊಂಡ ಜಮೀನಿನಲ್ಲಿ  ಬಹಳಷ್ಟು ಇನ್ನೂ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ಆದರೆ ಸರ್ಕಾರ ಇದೀಗ ದೊಡ್ಡಬಳ್ಳಾಪುರದ ಸುತ್ತಮುತ್ತ ಕೈಗಾರಿಕೆಗಳಿಗೆ ಭೂಸ್ವಾಧೀನ ಮಾಡಿಕೊಳ್ಳುತ್ತಿದೆ. ದೊಡ್ಡಬಳ್ಳಾಪುರ ದಾಬಸ್ ಪೇಟೆ ನಡುವೆ ಸ್ಥಾಪನೆಯಾಗಲಿರುವ ಕೆ.ಎಚ್.ಐ.ಆರ್ ಸಿಟಿಗೆ 2 ಸಾವಿರ ಎಕರೆ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಆದರೆ ಸ್ಥಳೀಯರಿಗೆ ಕೆಲಸ ಮಾತ್ರ ಸಿಗುವುದಿಲ್ಲ. 

ಕೈಗಾರಿಕೆಗಳಿಂದ ಕೊಳಗೇರಿ ಆರಂಭವಾಗಿ, ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಅಂತರ್ಜಲ ಕಲುಷಿತ ಗೊಳ್ಳಲಿದೆ. ಕೃಷಿ ಬದುಕನ್ನು ಅಸ್ಥಿರಗೊಳಿಸುವ ಇಂತಹ ಯೋಜನೆಗಳನ್ನು ನಾವು ವಿರೋಧಿಸಬೇಕಿದ್ದು, ಸೆ.4 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಈ ವೇಳೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲೂಕು ಘಟಕದ ಅಧ್ಯಕ್ಷ ಹನುಮೇಗೌಡ, ಕಾರ್ಯದರ್ಶಿ ಆರ್.ಎಸ್.ಸತೀಶ್, ಮುಖಂಡರಾದ ಶಿರವಾರ ರವಿ, ದೇವನಹಳ್ಳಿ ತಾಲೂಕು ಕಾರ್ಯದರ್ಶಿ ರಮೇಶ್, ದೇವನಹಳ್ಳಿ ನಾರಾಯಣಸ್ವಾಮಿ ಮೊದಲಾದವರು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!