ದೇವನಹಳ್ಳಿ, (ಸೆ.02); ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಶ್ರೀಲಂಕಾದ ಕೊಲೊಂಬೊದಿಂದ ವಿಮಾನವು ಕೆಂಪೇಗೌಡ ಏರ್ಪೊಟ್ನಲ್ಲಿ ಲ್ಯಾಂಡ್ ಆಗಿದೆ. ಈ ವೇಳೆ ಪ್ರಯಾಣಿಕರ ತಪಾಸಣೆಯ ವೇಳೆ ಮೂವರು ಸಿಕ್ಕಿಬಿದ್ದಾರೆ.
ತಪಾಸಣೆ ವೇಳೆ ಮೂವರು ಆರೋಪಿಗಳು ಪೇಸ್ಟ್ ರೂಪದಲ್ಲಿ ಗುದದ್ವಾರದಲ್ಲಿ ಚಿನ್ನ ಅಡಗಿಸಿ ಇಟ್ಟುಕೊಂಡಿರೋದು ಬೆಳಕಿಗೆ ಬಂದಿದೆ.
ಕೂಡಲೇ ಮೂವರನ್ನು ವಶಕ್ಕೆ ಪಡೆದ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಅಲ್ಲದೇ ಪೇಸ್ಟ್ ರೂಪದಲ್ಲಿದ್ದ 1 ಕೋಟಿ 19 ಲಕ್ಷದ 38 ಸಾವಿರ ಮೌಲ್ಯದ 1670 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….