ಬೆಂಗಳೂರು, (ಸೆ.02): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಕುರಿತು ಸಮಗ್ರ ತನಿಖೆಗೆ ಒಳಪಡಿಸುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ. ಇದರಿಂದ ಯಡಿಯೂರಪ್ಪ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ ಎನ್ನಲಾಗಿದೆ.
ತಾನು ಸಹಾಯ ಕೋರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಹೋಗಿದ್ದಾಗ ಅವರು ನನ್ನ ಮಗಳೊಡನೆ ಅನುಚಿತವಾಗಿ ವರ್ತಿಸಿದರು ಎಂದು ಸಂತ್ರಸ್ತೆಯ ತಾಯಿ ಪ್ರಕರಣ ದಾಖಲಿಸಿದ್ದರು. ಬಳಿಕ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆ ಮೃತಪಟ್ಟಿದ್ದರು.
ದೌರ್ಜನ್ಯಕ್ಕೆ ಓಳಗಾದ ಸಂತ್ರಸ್ತೆಯು ಮಾನಸಿಕವಾಗಿ ವೈಕಲ್ಯ ಹೊಂದಿದ್ದು ಅವಳ ಪರವಾಗಿ ತಾಯಿಯೇ ದೂರು ದಾಖಲಿಸಿದ್ದರು.
ಈ ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ನಾಗಲಕ್ಷ್ಮಿಚೌದರಿ, ಮಹಿಳೆಯ ಸಾವು ಅನುಮಾನಾಸ್ಪದವಾಗಿದೆ.
ಪ್ರಕರಣವು ವಿಚಾರಣಾ ಹಂತದಲ್ಲಿರುವಾಗಲೇ ದೂರು ನೀಡಿರುವ ಮಹಿಳೆ ಮೃತಪಟ್ಟಿದ್ದಾಳೆ. ಹೀಗಾಗಿ ಇಡೀ ಪ್ರಕರಣವನ್ನು ಮತ್ತೆ ಸಮಗ್ರ ಮರುತನಿಖೆಗೆ ಒಳಪಡಿಸಬೇಕೆಂದು ಕೋರಿ ಮನವಿ ಸಲ್ಲಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….