ಹರಿತಲೇಖನಿ ದಿನಕ್ಕೊಂದು ಕಥೆ: ಮಜ್ಜಿಗೆ ರಾಮಾಯಣ

ಒಂದು ಊರಿನಲ್ಲಿ ಒಬ್ಬ ಮುದುಕಿಯಿದ್ದಳು. ಅವಳು ಗುಡಿಸಲಿನಲ್ಲಿ ‘ವಾಸವಾಗಿ ಕೂಲಿ ಕೆಲಸ ಮಾಡುತ್ತಾ ತನ್ನ ಜೀವನ ಸಾಗಿಸುತ್ತಿದ್ದಳು. ಅದೇ ಊರಿನಲ್ಲಿ ಒಂದು ಶ್ರೀಮಂತ ಮನೆತನವಿತ್ತು. ಆ ಮನೆಯ ಒಡತಿ ಗೌರಮ್ಮ ದೀನ ದಲಿತರ ಬಗ್ಗೆ ಅನುಕಂಪವುಳ್ಳವಳಾಗಿದ್ದಳು. ತನ್ನ ಮನೆಗೆ ಬಂದ ಅತಿಥಿಗಳಿಗೆ ಉಣಿಸಿ ಅವರ ಮನ ತಣಿಸುತ್ತಿದ್ದಳು ಹಾಗೂ ಬಡವರಿಗೆ ದಾನ ಮಾಡುತ್ತಿದ್ದಳು.

ಒಮ್ಮೆ ಆ ಊರಿಗೆ ಒಬ್ಬ ಕೀರ್ತನಕಾರ ಬಂದನು. ಅವನು ಅಲ್ಲಿಯ ಶ್ರೀ ಮಾರುತಿಯ ದೇವಸ್ಥಾನದಲ್ಲಿ ಪ್ರತಿ ದಿನ ಸಂಜೆಯ ವೇಳೆಗೆ ರಾಮಾಯಣ ಹೇಳುತ್ತಿದ್ದನು. ಆ ಶಾಸ್ತ್ರಿ ಯು ಹೇಳುವ ರಾಮಾಯಣವನ್ನು ಕೇಳಲು ಜನ ಕಿಕ್ಕಿರಿದು ತುಂಬಿರುತ್ತಿದ್ದರು.

ಆ ಜನರ ಗುಂಪಿನಲ್ಲಿ ಬಡ ಮುದುಕಿಯೂ ಇರುತ್ತಿದ್ದಳು. ಆದರೆ ಶ್ರೀಮಂತ ಮನೆಯ ಗೌರಮ್ಮನಿಗೆ ಅನೇಕ ಮನೆ ಕೆಲಸಗಳಿಂದ ರಾಮಾಯಣ ಕೇಳಲು ಆಗುತ್ತಿರಲಿಲ್ಲ. ಅದಕ್ಕಾಗಿ ಗೌರಮ್ಮನು ತನ್ನ ಮನದೊಳಗೆ ಚಿಂತಿಸುತ್ತಿದ್ದಳು.

ಒಂದು ದಿನ ಆ ಬಡ ಮುದುಕಿಯು ಎಂದಿನಂತೆ ಕೂಲಿ ಕೆಲಸಕ್ಕೆ ಹೋಗಬೇಕಾಗಿದ್ದರಿಂದ ಬೇಗ ಉಂಡು ಹೋಗಬೇಕೆಂದು ಗೌರಮ್ಮನ ಮನೆಗೆ ಮಜ್ಜಿಗೆ ತರಲಿಕ್ಕೆಂದು ಬಂದಳು. ಈ ಮುದುಕಿಯು ಗೌರಮ್ಮನಿಗೆ ‘ನೀವು ಮಾರುತಿ ದೇವಸ್ಥಾನಕ್ಕೆ ರಾಮಾಯಣ ಕೇಳಲು ಬರುವುದಿಲ್ಲವಲ್ಲ! ಶಾಸ್ತ್ರಿಗಳು ಬಹಳ ಚೆನ್ನಾಗಿ ಹೇಳುತ್ತಾರೆ. ಈ ದಿನವಾದರೂ ಬನ್ನಿ’ ಎಂದಳು.

ಆಗ ಗೌರಮ್ಮನು, ‘ನನಗೆ ಮನೆಗೆಲಸದಿಂದಾಗಿ ಅಲ್ಲಿಗೆ ಹೋಗಲು ಆಗುವುದಿಲ್ಲ. ಏನು ಮಾಡುವುದು, ಮಕ್ಕಳು ಮರಿಗಳಿಗೆ ಅಡುಗೆ ಮಾಡಿ ಉಣಿಸುವುದರಲ್ಲಿಯೇ ವೇಳೆ ಕಳೆದು ಹೋಗುತ್ತದೆ. ನೀನು ಅಲ್ಲಿಗೆ ದಿನಾ ಕೇಳಲು ಹೋಗುವಿಯಲ್ಲ! ಅವರು ಏನು ಹೇಳಿದರೆಂಬುದನ್ನು ನೀನು ಕೇಳಿರುವಿ. ಅದನ್ನೇ ನನಗೆ ಈಗ ಹೇಳು’ ಎಂದಳು.

ಈ ಮಾತುಗಳನ್ನು ಕೇಳಿ ಮುದುಕಿಗೆ ದಿಕ್ಕೇ ತೋಚದಂತಾಯಿತು. ತಾನು ಬೇಗ ಮಜ್ಜಿಗೆ ಒಯ್ದು ಉಂಡು ಬೇರೆಯವರ ಹೊಲಕ್ಕೆ ಕೂಲಿ ಕೆಲಸಕ್ಕೆ ಹೋಗಬೇಕು. ರಾಮಾಯಣ ಎಷ್ಟು ಹೇಳಿದರೂ ಮುಗಿಯುವುದಿಲ್ಲ. ಏನು ಮಾಡುವುದು, ಹೇಗೆ ಹೇಳಬೇಕು ಎಂಬುದೇ ಅವಳಿಗೆ ತಿಳಿಯದಂತಾಯಿತು.

ಕೊನೆಗೆ ಅವಳು ತನ್ನ ಬುದ್ದಿಯನ್ನು ಉಪಯೋಗಿಸಿ, ‘ರಾಮ ಬಂದ, ರಾವಣನ ಕೊಂದ, ಸೀತೆಯನ್ನು ತಂದ, ತರಿ ಮಜ್ಜಿಗೆ’ ಎಂದಳು. ಈ ಮೂರು ಮಾತುಗಳನ್ನು ಕೇಳಿ ಗೌರಮ್ಮ ಸಂತೋಷದಿಂದ ರಾಮಾಯಣ ಇಷ್ಟೇ ಇರಬಹುದೆಂದು ತಿಳಿದು ಆ ಮುದುಕಿಗೆ ಮಜ್ಜಿಗೆಯನ್ನು ಕೊಟ್ಟಳು. ಮುದುಕಿಯು ಹಿಗ್ಗಿನಿಂದ ಮಜ್ಜಿಗೆಯನ್ನು ತೆಗೆದುಕೊಂಡು ತನ್ನ ಗುಡಿಸಲಿಗೆ ಹೋದಳು.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಾಗಿಲ್ಲ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!