ನ್ಯಾಯಾಂಗ ಆಡಳಿತ ಹಾಗೂ ವಕೀಲ ವೃತ್ತಿಯ ತರಬೇತಿಗಾಗಿ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಸೆಪ್ಟೆಂಬರ್ 05): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ (ಪ್ರವರ್ಗ-1, 2ಎ, 3ಎ ಮತ್ತು 3ಬಿ) ಕಾನೂನು ಪಧವೀಧರರಿಂದ ನ್ಯಾಯಾಂಗ ಆಡಳಿತದಲ್ಲಿ 4 ವರ್ಷಗಳ ಅವಧಿಗೆ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಈ ಕಛೇರಿಯಲ್ಲಿ ನಿಗದಿತ ಅವಧಿಯೊಳಗೆ ಕಛೇರಿ ವೇಳೆಯಲ್ಲಿ ಪಡೆದು ಭರ್ತಿ ಮಾಡಲಾದ ಅರ್ಜಿಗಳನ್ನು ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಅಧಿಕಾರಿಗಳ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.215, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಇಲ್ಲಿಗೆ  ಅಕ್ಟೋಬರ್ 04 ರೊಳಗೆ ಸಲ್ಲಿಸಬೇಕು ಎಂದು  ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಬಂಧನೆಗಳು:

1. ಅಭ್ಯರ್ಥಿಯು ಕಾನೂನು ಪದವೀಧರರಾಗಿದ್ದು ಈ ತರಬೇತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿಯನ್ನು ಮುಗಿಸಿ 2 (ಎರಡು) ವರ್ಷಗಳು ಮೀರಿರಬಾರದು.

2. ಅಭ್ಯರ್ಥಿಗಳು ಸರ್ಕಾರದ ಆದೇಶ ಸಂಖ್ಯೆ: ಎಸ್.ಡಬ್ಲ್ಯೂ.ಡಿ 225, ಬಿ.ಸಿ.ಎ 2000, ದಿನಾಂಕ, 30.03.2002 ರ ಆದೇಶದ ಅನುಸಾರ ಹಿಂದುಳಿದ ಪ್ರವರ್ಗ-1, 2ಎ, 3ಎ ಮತ್ತು 3ಬಿ ವರ್ಗೀಕರಣಕ್ಕೆ ಒಳಪಟ್ಟಿರಬೇಕು ಹಾಗೂ ಮೇಲ್ಕಂಡ ವರ್ಗಗಳಿಗೆ ನಿಗದಿಪಡಿಸಲಾದ ಜಾತಿ ಆದಾಯ  ಪ್ರಮಾಣ ಪತ್ರಗಳೊಂದಿಗೆ ವಿವರಗಳನ್ನು ಭರ್ತಿ ಮಾಡಲಾದ ಅರ್ಜಿಯೊಂದಿಗೆ ಲಗತ್ತಿಸಿ  ಸಲ್ಲಿಸಬೇಕು.

3. ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ಆದಾಯ ಮಿತಿ ಪ್ರವರ್ಗ 1 ರ ಅಭ್ಯರ್ಥಿಗಳಿಗೆ ರೂ. 3.50ಲಕ್ಷ ಹಾಗೂ ಪ್ರವರ್ಗ 2 (ಎ), 3 (ಎ) ಅಥವಾ 3 (ಬಿ) ಅಭ್ಯರ್ಥಿಗಳಿಗೆ ರೂ. 2.50 ಲಕ್ಷಗಳ ಮಿತಿ ಇರಬೇಕು.

4. ಭರ್ತಿ ಮಾಡಲಾದ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳ ವಯಸ್ಸು ಪ್ರವರ್ಗ-1ಕ್ಕೆ 40 ವರ್ಷ ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ 38 ವರ್ಷಗಳನ್ನು ಮೀರಿರಬಾರದು.

5. ಆಯ್ಕೆಯಾದ ಅಭ್ಯರ್ಥಿಗಳಿಗೆ 4 ವರ್ಷಗಳ ತರಬೇತಿ ಅವಧಿ ಇದ್ದು, ಈ ಅವಧಿಯೊಳಗೆ ತರಬೇತಿಯನ್ನು ಬಿಡಲು ಅವಕಾಶವಿರುವುದಿಲ್ಲ ಹಾಗೂ ಅಭ್ಯರ್ಥಿಯು ಸುಳ್ಳು ಮಾಹಿತಿ ನೀಡಿದಲ್ಲಿ ಅಥವಾ ತರಬೇತಿ ಅವಧಿಯ ಮಧ್ಯದಲ್ಲಿ ತರಬೇತಿಯಿಂದ ಬಿಟ್ಟು ಹೋದಲ್ಲಿ ಸರ್ಕಾರ ಅವರಿಗಾಗಿ ಖರ್ಚು ಮಾಡಿದ ಹಣವನ್ನು ವರ್ಷಕ್ಕೆ ಶೇ.10 ರ ಬಡ್ಡಿಯೊಂದಿಗೆ ಭೂ ಕಂದಾಯದ ಬಾಕಿ ಎಂದು ಪರಿಗಣಿಸಿ ವಸೂಲು ಮಾಡಲಾಗುವುದು. ಆದರೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಅನ್ವಯಿಸುವುದಿಲ್ಲ.

6. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ ರೂ. 4,000/- ಗಳ ತರಬೇತಿ ಭತ್ಯೆಯನ್ನು ದಿನಚರಿ ಆಧಾರದ ಮೇರೆಗೆ ನೀಡಲಾಗುವುದು. 

7. ಆಯ್ಕೆಯಾದ ಅಭ್ಯರ್ಥಿಗಳಿಗೆ ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ /ಸರ್ಕಾರಿ ವಕೀಲರು ಅಥವಾ 20 ವರ್ಷಗಳಿಗಿಂತ ಹೆಚ್ಚಿನ ವರ್ಷಗಳು ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ವಕೀಲರಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನು ತರಬೇತಿ ಪಡೆಯುವ ಸಲುವಾಗಿ ತರಬೇತಿಗೆ ನಿಯೋಜಿಸಲಾಗುವುದು.

8. ಆಯ್ಕೆಯಾದ ಅಭ್ಯರ್ಥಿಯು ಈ ಇಲಾಖೆಯ ನಿಬಂಧನೆಗಳು ಹಾಗೂ ಕಾಲಕಾಲಕ್ಕೆ ಹೊಂದಿರುವ ಸರ್ಕಾರದ ಆದೇಶಗಳಿಗೆ ಬದ್ಧನಾಗಿರುತ್ತೇನೆಂದು ಮುಚ್ಚಳಿಕೆಯನ್ನು ಬರೆದು ಕೊಡಬೇಕು. 

9. ಹೆಚ್ಚಿನ ಮಾಹಿತಿಯನ್ನು ಅಭ್ಯರ್ಥಿಗಳು, ಜಿಲ್ಲಾ ಅಧಿಕಾರಿಗಳ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.215, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಇವರ ಕಛೇರಿಯಲ್ಲಿ ಕೆಲಸದ ವೇಳೆಯಲ್ಲಿ ಪಡೆಯಬಹುದು.

10. ಅರ್ಹ ಅಭ್ಯರ್ಥಿಗಳಿಗೆ ಆಯ್ಕೆ ಸಮಿತಿಯ ಸಂದರ್ಶನದ ದಿನಾಂಕ ಹಾಗೂ ಸ್ಥಳವನ್ನು ತಿಳಿಸಿದಾಗ ಸಂದರ್ಶನಕ್ಕೆ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.

11. ಅಭ್ಯರ್ಥಿಗಳು ಭರ್ತಿ ಮಾಡಲಾದ ಅರ್ಜಿಯೊಂದಿಗೆ ಅವಶ್ಯಕ ಮಾಹಿತಿಗಳಾದ ಕಾನೂನು ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಗಳ ದೃಢೀಕರಣ ಪ್ರತಿ ಹಾಗೂ ಜನ್ಮ ದಿನಾಂಕದ ಆಧಾರಕ್ಕಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಟಿ.ಸಿ ದೃಢೀಕೃತ ಪ್ರತಿಯನ್ನು ಲಗತ್ತಿಸಬೇಕು. 

12. ಅರ್ಜಿಗಳನ್ನು ಸ್ವೀಕರಿಸಲು ಅಕ್ಟೊಬರ್ 04 ಕೊನೆದಿನವಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!