ಗೌರಿ ಹಬ್ಬದ ದಿನ ಪ್ರತ್ಯೇಕ ಅಪಘಾತದಲ್ಲಿ 13 ಮಂದಿ ದುರ್ಮರಣ..!

ಬೆಂಗಳೂರು, (ಸೆ.07): ಗೌರಿ ಹಬ್ಬದ ಸಂಭ್ರಮ ದಿನ ದಂದೇ ರಾಜ್ಯದ ಹಲವು ಕಡೆ ರಸ್ತೆ ಅಪ ಘಾತಗಳು ಸಂಭವಿಸಿದ್ದು, ಒಟ್ಟು 13 ಜನರು ಮೃತಪಟ್ಟಿದ್ದಾರೆ.

ವಿಜಯಪುರ, ಬಾಗಲಕೋಟೆ, ರಾಮನಗರ, ಮಂಗಳೂರಿನಲ್ಲಿ ರಸ್ತೆ ಅಪಘಾತಗಳು ಸಂಭವಿಸಿವೆ. ಮೃತರ ಕುಟುಂಬಸ್ಥರ ಪಾಲಿಗೆ ಕರಾಳ ದಿನವಾಗಿದೆ. ರಾಜ್ಯದಲ್ಲಿ ಇತ್ತೀಚಿಗೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದ್ದು, ಗೌರಿ ಹಬ್ಬದ ದಿನದಂದು ವಿವಿಧ ರಸ್ತೆ ದುರಂತಗಳಲ್ಲಿ 13 ಮಂದಿ ಮೃತಪಟ್ಟಿದ್ದಾರೆ.

ರಾಯಚೂರು: ಟಂಟಂ ವಾಹನ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ರಾಯ ಚೂರು ಹೈದರಾಬಾದ್ ಹೆದ್ದಾರಿಯಲ್ಲಿ ನಡೆ ದಿದೆ. ಓವರ್‌ ಟೆಕ್ ಮಾಡುವ ವೇಳೆ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿಯಲ್ಲಿದ್ದ ಕ್ಲೀನರ್ ಸಾವನ್ನಪ್ಪಿದ್ದಾನೆ.

ಅಪಘಾತದ ವೇಳೆ ತರಕಾರಿ ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಟಂಟಂ ವಾಹನ ಚಾಲಕರು, ಕ್ಲೀನ‌ರ್ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮನಗರ: ಲಾರಿಗೆ ಬೈಕ್ ಡಿಕ್ಕಿ ಹೊಡೆದು ಮೂವರ ಸಾವನ್ನಪ್ಪಿದ ಘಟನೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದೆ. ಮೃತರನ್ನು ಗುರುಮೂರ್ತಿ (39), ಶೇಕ್ ಹಫೀಜ್ (45), ವೆಂಕಟೇಶ್ (50) ಎಂದು ಗುರುತಿಸಲಾಗಿದೆ. ಮೃತ ರೆಲ್ಲರೂ ಗಾರೆ ಕೆಲಸವರಾಗಿದ್ದು, ಗಾಯಾಳು ಹನುಮಂತಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಯ ಸರ್ವೀಸ್ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ರಾಮನಗರದಿಂದ ಬಿಡದಿ ಕಡೆಗೆ ಹೋಗುತ್ತಿದ್ದಾಗ ಬೈಕ್ ಲಾರಿಗೆ ಡಿಕ್ಕಿ ಹೊಡೆದಿದೆ. ಒಂದೇ ಬೈಕ್ ನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲಾರಿ ಅಡ್ಡ ಬಂದ ಹಿನ್ನಲೆ ಬೈಕ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಉತ್ತರ ಕನ್ನಡ: ಯಲ್ಲಾಪುರ ತಾಲೂಕಿನ ಅರಬೈಲ್‌ನ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಸಿಮೆಂಟ್ ತುಂಬಿದ್ದ ಲಾರಿ ನಿಯಂತ್ರಣ ತಪ್ಪಿ ಕಂಟೈನರ್ ಹಾಗೂ ಮಂಗಳೂರಿಗೆ ತೆರಳುತ್ತಿದ್ದ ಬಸ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಮಂಗಳೂರಿಗೆ ತೆರಳುತ್ತಿದ್ದ ರೇಷ್ಮಾ ಹೆಸರಿನ ಬಸ್ ಹಿಂಬಂದಿಗೆ ಡಿಕ್ಕಿ ಹೊಡೆದಿದೆ.

ಲಾರಿ ಹಿಂಭಾಗದಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ನಿಯಂತ್ರಣ ತಪ್ಪಿ ಮುಂಭಾಗದಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆ ದಿದ್ದಾನೆ. ಬಸ್ ನಲ್ಲಿದ್ದ ಚಾಲಕ ಅಯೂಬ್‌ಗೆ ಗಾಯವಾಗಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆ: ಎರಡು ಬೈಕ್‌ಗಳ ನಡುವೆ ಡಿಕ್ಕಿಯಾದ ಪರಿಣಾಮ ಮೂವರ ಸಾವನ್ನಪ್ಪಿದೆ ಘಟನೆ ಬಾಗಲಕೋಟೆಯ ನವನಗರದಲ್ಲಿ ತಡರಾತ್ರಿ ನಡೆದಿದೆ. ಸ್ಕೂಟಿಯಲ್ಲಿದ್ದ ಗೆಳತಿಯರಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇನ್ನೊಂದು ಬೈಕ್‌ನಲ್ಲಿದ್ದ ಇಬ್ಬರು ಯುವಕರ ಪೈಕಿ ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಾಯವಾಗಿದೆ.

ನವನಗರದ ಅಬಕಾರಿ ಇಲಾಖೆ ಸಮೀಪದಲ್ಲಿ ನಡೆದಿರುವ ಘಟನೆ ಇದಾಗಿದೆ. ಪ್ರೊಫೆಸರ್ ಕೃತಿಕಾ ಒಂಟಕುದರಿ (32), ಸ್ನೇಹಿತೆ ರಜನಿ ಒಂಟಕುದರಿ (34), ಅಭಿಷೇಕ ಬಂಡಿ ವಡ್ಡರ ಮೃತರು ಎಂದು ಗುರುತಿಸಲಾಗಿದೆ.

ಮಂಗಳೂರು: ಬೈಕ್‌ ಅಪಘಾತದಲ್ಲಿ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು ಹೊರ ವಲಯದ ಯೆಯ್ಯಾಡಿಯ ಹರಿಪದವು ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿಯ ಚೇತನ್ (24) ಮತ್ತು ಕೋಡಿಕಲ್‌ನ ಕಾಶೀನಾಥ್ (17) ಮೃತ ದುರ್ದೈವಿಗಳು.

ಲಾರಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಬೈಕ್ ನಿಯಂತ್ರಣ ತಪ್ಪಿದೆ. ಬೈಕ್‌ನಿಂದ ಬಿದ್ದು ಸವಾರರು ಮೃತ ಪಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!