ನಮಗಿಲ್ಲಿ ಫುಲ್​ ಮೆಜಾರಿಟಿ ಇದೆ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುತ್ತಾ..? ಮೊದಲು ಕೇಳಿ: ಸಂತೋಷ್ ಲಾಡ್ ತಿರುಗೇಟು

ಹುಬ್ಬಳ್ಳಿ, (ಸೆ.10); ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡುವುದು ಅಪ್ರಸ್ತುತ. ಯಾರಾದ್ರೂ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದರೆ, ಅದು ಅವರ ವೈಯಕ್ತಿಕ. ನಮ್ಮ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲವೆಂದು ಸಚಿವ ಸಂತೋಷ ಲಾಡ್ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಖ್ಯಮಂತ್ರಿಗಳ ಬದಲಾವಣೆ ಕುರಿತಂತೆ ವೇಣುಗೋಪಾಲ ಹಾಗೂ ಸುರ್ಜೇವಾಲಾ ಸ್ಪಷ್ಟನೆ ಕೊಟ್ಟಿದ್ದಾರೆ. ಹೈಕಮಾಂಡ್​‌ನಿಂದ ಸಿದ್ದರಾಮಯ್ಯ ಅವರಿಗೆ ಬೆಂಬಲವಿದೆ ಎಂದು ಹೇಳಿದ್ದಾರೆ. ಆದರೆ ವೈಯಕ್ತಿಕ ಅಭಿಪ್ರಾಯಗಳು ನನಗೆ ಗೊತ್ತಿಲ್ಲ. ಅವರನ್ನೇ ಕೇಳಬೇಕು‌.

ಬಿಜೆಪಿಯವರಿಗೆ ಭವಿಷ್ಯ ಹೇಳುವುದೇ ಕಾಯಕವಾಗಿದೆ. ದೀಪಾವಳಿ ಒಳಗೆ ಸರ್ಕಾರ ಬೀಳುತ್ತದೆ ಎಂದು ಹೇಳಿದ್ದಾರೆ. ಒಂದು ವರ್ಷದಿಂದ ಇದನ್ನೇ ಹೇಳುತ್ತಿದ್ದಾರೆ. ಬೇರೆ ವಿಷಯಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ. ನಮಗೆ 136 ಸೀಟುಗಳಿವೆ. ಯಾವುದೇ ಕಾರಣಕ್ಕೂ ಆ ರೀತಿ ಆಗುವುದಿಲ್ಲ. ಹಾಗೇನಾದರೂ ಆದರೆ ಕೇಂದ್ರದಲ್ಲಿ ಆಗಬಹುದು. ಯಾಕೆಂದರೆ ಅವರ ಹತ್ತಿರ ಫುಲ್​ ಮೆಜಾರಿಟಿ ಇಲ್ಲ. 

ನಾಳೆ ಜಮ್ಮು ಕಾಶ್ಮೀರ, ಹರಿಯಾಣ, ಮಹಾರಾಷ್ಟ್ರ ಸೋಲುವ ಸಾಧ್ಯತೆ ಇದೆ. ಬಿಹಾರ ಕೂಡ ಸೋಲಬಹುದು. ಮುಂದೆ ನಾಲ್ಕು ರಾಜ್ಯಗಳ ಚುನಾವಣೆಯಾದ್ರೆ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಇರುತ್ತಾ ಎಂಬ ಪ್ರಶ್ನೆಯನ್ನು ಅವರನ್ನು ಕೇಳಬೇಕು. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಬೀಳುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಫೋಟೋಗಳು ವೈರಲ್ ಆಗಿರುವ ವಿಚಾರದಲ್ಲಿ ಆರೋಪ ಮಾಡುತ್ತಿರುವ ಪ್ರಹ್ಲಾದ್ ಜೋಶಿ ಅವರದ್ದೇ ಕೈವಾಡ ಇರಬಹುದು. ಇಷ್ಟು ನಿಖರವಾಗಿ ಫೋಟೋ ಬಿಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ ಅಂದ್ರೆ ಅವರಿಗೆ ಮಾಹಿತಿ ಇರಬೇಕು ಎಂದು ತಿರುಗೇಟು ನೀಡಿದರು.

ಮುಡಾ, ವಾಲ್ಮೀಕಿ ಹಗರಣ ಮರೆಮಾಚುವ ಪ್ರಶ್ನೆ ಇಲ್ಲ. ಈ ಪ್ರಕರಣ ಓಪನ್ ಇದೆ. ಮುಡಾ ಹಗರಣದ ಬಗ್ಗೆ ಜೋಶಿಯವರಿಗೆ ಪ್ರಶ್ನೆ ಮಾಡಿ ಆವಾಗ ಸತ್ಯ ಗೊತ್ತಾಗಲಿದೆ. ಇದರಲ್ಲಿ ಸಿದ್ದರಾಮಯ್ಯ ಅವರ ಮೇಲೆ ಯಾಕೆ ಪ್ರಾಸಿಕ್ಯೂಷನ್ ಹಾಕಿದ್ದಾರೆ. ಇನ್ನು 127 ಸೈಟ್ ಪಡೆದವರ ಮೇಲೆ ಯಾಕೆ ಇಲ್ಲ ಎಂದು ಪ್ರಶ್ನಿಸಿದರು.

ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ ತಕ್ಷಣ ಮಹಾದಾಯಿ ಕ್ಲಿಯರೆನ್ಸ್​ ಮಾಡುತ್ತೇವೆ ಎಂದು ಬಿಜೆಪಿಯವರು ಹೇಳಿದ್ದರು. ಇಲ್ಲಿಯವರೆಗೂ ಯಾಕೆ ಆಗಿಲ್ಲ? ಮಹಾದಾಯಿ ಕ್ಲಿಯರೆನ್ಸ್​ ಯಾಕೆ ಕೊಡಲಾಗುತ್ತಿಲ್ಲ? ರಾಜ್ಯ ಸರ್ಕಾರಕ್ಕೆ ಕೇಂದ್ರ ಬರಹದಲ್ಲಿ ನೀಡಲಿ. ಎನ್ವಿರಾನ್​ಮೆಂಟ್​ ಕ್ಲಿಯರೆನ್ಸ್​ ನೀಡಲು ಇಷ್ಟು ಮರಗಳ ಕಡಿಯಬೇಕಾಗುತ್ತದೆ ಅಂತ ತಿಳಿಸಲಿ ಎಂದು ಸವಾಲು ಹಾಕಿದರು.

ಕೇಂದ್ರ ಸಚಿವರು ರಾಜ್ಯಕ್ಕೆ ಬಂದು ಸರ್ಕಾರಕ್ಕೆ ಬಯ್ಯುವುದೊಂದೇ ಕೆಲಸವಾಗಿದೆ. ಕೇಂದ್ರದಲ್ಲಿ ಬಿಜೆಪಿ ಬಂದಾಗಿನಿಂದ ಎಷ್ಟು ಉಗ್ರರ ದಾಳಿಯಾಗಿದೆ. ಅದರ ಬಗ್ಗೆ ಜೋಶಿಯವರು ಮಾತಾಡ್ತಾರಾ? ಈ ಹಿಂದೆ ಕರ್ನಾಟಕ, ಗೋವಾ, ಕೇಂದ್ರ, ಜತೆಗೆ ಮಹಾರಾಷ್ಟ್ರದಲ್ಲಿ ಬಿಜೆಪಿಯವರದೇ ಸರ್ಕಾರಗಳಿದ್ದರೂ, ಅಂದು ಮಹಾದಾಯಿಗೆ ಯಾವುದೇ ಕ್ಲಿಯರೆನ್ಸ್​ ಕೊಡಲಿಲ್ಲ. ಇತ್ತೀಚೆಗೆ ಬೇರೆ ರಾಜ್ಯಕ್ಕೆ ಪವರ್ ಲೈನ್​ ಹೋಗಲು ಕ್ಲಿಯರೆನ್ಸ್ ನೀಡಿದ್ದಾರೆ.

ನಮ್ಮ ರಾಜ್ಯದ ಮಹಾದಾಯಿಗೆ ಕ್ಲಿಯರೆನ್ಸ್ ನೀಡಲು ಮಾತ್ರ ಬಿಜೆಪಿಗೆ ಯಾಕೆ ಆಗುತ್ತಿಲ್ಲ? ಜೋಶಿಯವರು ಮೊದಲು ಇದರ ಬಗ್ಗೆ ಮಾತಾಡಲಿ‌. ಈಗ ಮಹದಾಯಿ ವಿಚಾರವಾಗಿ ಸರ್ವಪಕ್ಷ ನಿಯೋಗ ಹೋಗುತ್ತಿದೆ. ಈ ಹಿಂದೆ ಇವರು ಐದು ವರ್ಷ ಅಧಿಕಾರದಲ್ಲಿದ್ದಾಗ ಏನ ಮಾಡಿದ್ರು? ಬಾಕಿಯಿರುವ ಕೆಲಸವನ್ನು ರಾತ್ರೋರಾತ್ರೀ ಮೋದಿಯವರು ಕ್ಲಿಯರ್​ ಮಾಡ್ತಾರಂತೆ. ಮಹಾದಾಯಿಗೊಂದು ಅನುಮೋದನೆ ನೀಡಲಿ ಎಂದರು.

ಪಡಿತರ ಅಕ್ಕಿ ಖರೀದಿಗೆ ರಾಜ್ಯ ಸರ್ಕಾರದ ಬಳಿ‌ ದುಡ್ಡಿಲ್ಲ ಎಂಬ ಬಿಜೆಪಿಗರ ಹೇಳಿಕೆ ವಿಚಾರಕ್ಕೆ ‌ಪ್ರತಿಕ್ರಿಯೇ‌ ನೀಡಿದ ಅವರು, ಆಹಾರ ಭದ್ರತೆ ಕಾಯ್ದೆ ತಂದವರು ನಾವು. ಮೋದಿ ಅಕ್ಕಿ ಮೋದಿ‌ ಅಕ್ಕಿ ಅಂತಿದ್ದಾರೆ. ಈಗ ಪಡಿತರ ಅಕ್ಕಿ ಕೊಡಲು ಸಿದ್ಧವಾಗಿರುವ ಕೇಂದ್ರ, ಈ ಹಿಂದೆ ಯಾಕೆ ನೀಡಲಿಲ್ಲ. 

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಈ ಹಿಂದೆ ಯಾಕೆ ಅಕ್ಕಿ ಕೊಡಲಿಲ್ಲ‌ ಹೇಳಲಿ. ಈಗ ಕೊಡುತ್ತೇವೆ ಅಂತಿದ್ದಾರೆ. ಈಗ ಯಾಕೆ ಕೊಡಲು ಒಪ್ಪಿಕೊಂಡರು ಎಂಬುದನ್ನು ರೈಟಿಂಗ್​ನಲ್ಲಿ ಜೋಶಿಯವರು ಉತ್ತರಿಸಲಿ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!