Astrology: ಈ ರಾಶಿಯವರ ಕೆಲಸದಲ್ಲಿ ಪೈಪೋಟಿ ಹೆಚ್ಚಾಗಲಿದೆ| ದಿನ ಭವಿಷ್ಯ

ಮಂಗಳವಾರ, ಸೆಪ್ಟೆಂಬರ್ 10, 2024, ದೈನಂದಿನ ರಾಶಿ ಭವಿಷ್ಯ 

ಮೇಷ ರಾಶಿ: ನಿಮ್ಮ ಶಕ್ತಿಯನ್ನು ನಿಮ್ಮ ಸುತ್ತಲ ಜನ ಅನುಮಾನಿಸುತ್ತಾರೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಅರ್ಥ ಮಾಡಿಸುವುದು ಉತ್ತಮ. ಇಲ್ಲವಾದಲ್ಲಿ ನಿಮ್ಮನ್ನು ಕೆಲಸದಲ್ಲಿ ಕಡೆಗಣಿಸಲಾಗುತ್ತದೆ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಯಾವುದಾದರು ಕ್ರೀಡೆ ಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಶ್ರಮವಹಿಸಿ ಕೆಲಸ ಮಾಡುವುದರಿಂದ ಘನತೆ ಗೌರವ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಹಣ ಮತ್ತು ಸಂಪತ್ತು ಸಂಬಂಧಗಳಷ್ಟು ದೊಡ್ಡದಲ್ಲ ಎಂದು ಅರ್ಥ ಮಾಡಿಕೊಳ್ಳಿ. ನೀವು ಹಣವನ್ನು ಸಂಪಾದಿಸಬಹುದು ಆದರೆ ಯಾರ ಪ್ರೀತಿ ಮತ್ತು ವಿಶ್ವಾಸವನ್ನು ಸಂಪಾದಿಸಲು ಸಾಧ್ಯವಿಲ್ಲ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಹೆಚ್ಚು ಪ್ರಭಾವಿ ವ್ಯಕ್ತಿಗಳ ಬೆಂಬಲವು ನಿಮ್ಮ ನೈತಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ. ಅನುಭವಿಯೊಂದಿಗೆ ಚರ್ಚಿಸುವ ಮೂಲಕ ಹೂಡಿಕೆ ಮಾಡಿದರೆ ನೀವು ಉತ್ತಮ ಹಣವನ್ನು ಗಳಿಸುವಿರಿ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ವಿನಾಕಾರಣ ಖರ್ಚು ಮಾಡಬೇಡಿ. ಸ್ವಂತ ಕೆಲಸವನ್ನು ಆರಂಭಿಸಲು ಚಿಂತಿಸಿ. ಇದು ನಿಮಗೆ ಉತ್ತಮ ಲಾಭವನ್ನು ತಂದು ಕೊಡುತ್ತದೆ. ಆದರೆ ಇದರಲ್ಲಿ ನಿಮ್ಮ ಶ್ರಮ ಮತ್ತು ಶ್ರದ್ಧೆ ಮುಖ್ಯವಾಗಿರುತ್ತದೆ. (ಭಕ್ತಿಯಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ವಿವಿಧ ಮೂಲಗಳಿಂದ ವಿತ್ತೀಯ ಲಾಭದಾಯಕ ಯೋಗವಿದೆ. ಕೆಲಸದಲ್ಲಿ ನಿಮ್ಮೊಂದಿಗೆ ಪೈಪೋಟಿ ಹೆಚ್ಚಾಗಲಿದೆ. ಆದರೆ ನೀವು ತಾಳ್ಮೆ ಕಳೆದುಕೊಳ್ಳಬೇಡಿ. ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು. ಇತರರಿಗೆ ಮನವರಿಕೆ ಮಾಡುವ ನಿಮ್ಮ ಕೌಶಲ್ಯ ಗುಣ ಉತ್ತಮ ಲಾಭಾಂಶವನ್ನು ನೀಡುತ್ತದೆ. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಹಣ ಹೂಡಿಕೆ ಮತ್ತು ಉಳಿತಾಯದ ಬಗ್ಗೆ ನೀವು ಇಂದು ನಿಮ್ಮ ಕುಟುಂಬದ ಸದಸ್ಯರ ಸಲಹೆ ಪಡೆಯುವುದು ಉತ್ತಮ. ಅವರ ಸಲಹೆಯು ನಿಮ್ಮ ಆರ್ಥಿಕ ಪರಿಸ್ಥಿತಿ ಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೆಲವು ಜನರು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಆಸೆಯನ್ನು ಹೊಂದಿರುತ್ತಾರೆ. ಯಾವುದೇ ಫಲಿತಾಂಶವನ್ನು ನೀಡದ ಜನರನ್ನು ಮರೆತುಬಿಡಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ನಿಮ್ಮ ಆತ್ಮ ವಿಶ್ವಾಸದಿಂದ ನಿಮ್ಮ ಸುತ್ತಮುತ್ತಲಿನ ಜನರನ್ನು ನೀವು ಮೆಚ್ಚಿಸುವ ಸಾಧ್ಯತೆಯಿದೆ.ವ್ಯಾಪಾರ ಸಾಲಕ್ಕಾಗಿ ನಿಮ್ಮನ್ನು ಸಂಪರ್ಕಿಸುವವ ರನ್ನು ನಿರ್ಲಕ್ಷಿಸಿ. ಪೋಷಕರ ಮುಂದೆ ಗುಪ್ತ ವಿಚಾರಗಳನ್ನು ಬಹಿರಂಗ ಪಡಿಸಲು ಇದು ಸರಿಯಾದ ಸಮಯ. ಅವರು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾರೆ. ಯಾವುದೇ ಕೆಲಸ ಕೈಗೊಂಡರೂ ಅದನ್ನು ಸಾಧಿಸಲು ಶ್ರಮಿಸಬೇಕು. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿಮಗೆ ಹಣದ ಅವಶ್ಯಕತೆ ಇರುವಾಗ ಹಣದ ಬೆಲೆ ನಿಮಗೆ ತಿಳಿಯಲಿದೆ. ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಹಣ ಖರ್ಚು ಮಾಡುವ ಮುನ್ನ ಯೋಚಿಸಿ. ನಿಮ್ಮ ಕುಟುಂಬದ ಸದಸ್ಯರು ನೀಡುವ ಸಲಹೆಯನ್ನು ಅನುಸರಿಸಿ. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ನಿಮ್ಮ ಆಕರ್ಷಕ ನಡವಳಿ ಕೆಯು ಇಂದು ಎಲ್ಲರ ಗಮನ ಸೆಳೆಯು ತ್ತದೆ. ಇಲ್ಲಿಯವರೆಗೆ ಹೆಚ್ಚು ಯೋಚಿಸದೆ ಹಣವನ್ನು ಖರ್ಚು ಮಾಡುತ್ತಿದ್ದರೆ ಅದನ್ನು ತಪ್ಪಿಸಿ. ಜೀವನದಲ್ಲಿ ಅದರ ಮಹತ್ವವನ್ನು ಅರ್ಥಮಾಡಿಕೊಳ್ಳಿ. ಏಕೆಂದರೆ ತುರ್ತು ಅಗತ್ಯವಿದ್ದಾಗ ನಿಮಗೆ ಹಣದ ಮಹತ್ವ ಅರ್ಥವಾಗುತ್ತದೆ. (ಭಕ್ತಿಯಿಂದ ಶ್ರೀ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಸಾಮಾನ್ಯ ಜ್ಞಾನ ಮತ್ತು ತಿಳುವಳಿಕೆಯೊಂದಿಗೆ ನಿಮ್ಮ ನಿರಂತರ ಪ್ರಯತ್ನವು ನಿಮ್ಮ ಯಶಸ್ಸನ್ನು ಅಭಿವೃದ್ಧಿಪಡಿಸುತ್ತದೆ. ಇದಕ್ಕಾಗಿ ನಿಮ್ಮ ತಾಳ್ಮೆ ಮುಖ್ಯವಾಗುತ್ತದೆ. ಊಹಾ ಪೋಹ ಅಥವಾ ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ನೀವು ನಿರ್ಧಾರಗಳನ್ನು ತೆಗೆದುಕೊಳ್ಳಲು ಮನಸ್ಸಿನ ಸ್ಪಷ್ಟತೆ ಮುಖ್ಯವಾಗಿದೆ. ಕೆಲಸದಲ್ಲಿ ಶ್ರಮ ವಹಿಸಿ ಕೆಲಸ ಮಾಡುವುದು ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಇದು ನಿಮಗೆ ಆರ್ಥಿಕವಾಗಿ ಪ್ರಯೋಜನವನ್ನು ನೀಡುತ್ತದೆ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಕುಂಭ ರಾಶಿ: ಕೆಲಸದ ಕ್ಷೇತ್ರದಲ್ಲಿ ನೀವು ಉತ್ತಮ ಲಾಭವನ್ನು ಪಡೆಯಬಹುದು. ನೀವು ಮಾಡುವ ಯಾವುದೇ ಕೆಲಸವು ತಕ್ಷಣವೇ ಫಲಿತಾಂಶವನ್ನು ನೀಡುತ್ತದೆ. ನೀವು ಮಕ್ಕಳಿಗಾಗಿ ಯಾವುದೇ ಹೂಡಿಕೆ ಅಥವಾ ಆಸ್ತಿಯನ್ನು ತೆಗೆದುಕೊಳ್ಳಬಹುದು. (ಭಕ್ತಿಯಿಂದ ಮನೋ ನಿಯಾಮಕ ಶ್ರೀರುದ್ರ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನೀವು ಅದೃಷ್ಟದ ಸಂಪೂ ರ್ಣ ಬೆಂಬಲವನ್ನು ಪಡೆಯುತ್ತೀರಿ. ಹೊಸ ಗುರಿಗಳನ್ನು ಹೊಂದಲು ಈ ದಿನವು ಮಂಗಳಕರವಾಗಿದೆ. ಈಗ ಆದಾಯ ಹೆಚ್ಚಿಸುವ ಪ್ರಯತ್ನಗಳು ಸಫಲವಾದಂತೆ ಕಾಣುತ್ತಿದೆ. ನೀವು ಹಳೆಯ ಸಾಲಗಳಿಂದ ಮುಕ್ತರಾಗುತ್ತೀರಿ. (ಭಕ್ತಿಯಿಂದ ಶ್ರೀ ಚಂದ್ರಮೌಳೇ ಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಸಪ್ತಮಿ 

ನಕ್ಷತ್ರ: ಅನೂರಾಧ ನಕ್ಷತ್ರ.

ರಾಹುಕಾಲ: 03:00PM ರಿಂದ 04:30PM

ಗುಳಿಕಕಾಲ: 12:00PM ರಿಂದ 01:30PM

ಯಮಗಂಡಕಾಲ: 09:00AM ರಿಂದ 10:30AM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]