ಬೆಂಗಳೂರು, (ಸೆ.13); ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ. ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.
ಕೇಜ್ರಿವಾಲ್ ಅವರಿಗೆ ಜಾಮೀನು ದೊರೆತಿರುವ ಕುರಿತು ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಸುಪ್ರೀಂಕೋರ್ಟ್ ನ ಈ ಆದೇಶ ಸಾಂವಿಧಾನಿಕ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷ ಸಾಧನೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕೊಟ್ಟ ತಪರಾಕಿಯಾಗಿದೆ.
ದ್ವೇಷದ ರಾಜಕಾರಣಕ್ಕೆ ಇಳಿದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನ್ಯಾಯಾಲಯದ ಈ ಆದೇಶದಿಂದಾದರೂ ಪಾಠ ಕಲಿತು ಎಚ್ಚೆತ್ತುಕೊಳ್ಳಲಿ.
ಅಂತಿಮವಾಗಿ ಸತ್ಯವೇ ಗೆಲ್ಲುವುದು, ನ್ಯಾಯವೇ ಬಾಳುವುದು. ಸತ್ಯಮೇವ ಜಯತೆ ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….