ಹರಿತಲೇಖನಿ ದಿನಕ್ಕೊಂದು ಕಥೆ: ಮೊಲ ತೋರಿದ ಮಾರ್ಗ

ಬೇಟೆಗಾರ ಭದ್ರಯ್ಯ ಯಾವಾಗಲೂ ಬಿಲ್ಲು- ಬಾಣ, ಈಟಿ- ಭರ್ಜಿ, ಕತ್ತಿ-ಮಚ್ಚುಗಳನ್ನು ಹಿಡಿದುಕೊಂಡು ಕಾಡಿನಲ್ಲಿರುವ ಪ್ರಾಣಿ- ಪಕ್ಷಿಗಳನ್ನು ಬೇಟೆಯಾಡುತ್ತಾ ಅಟ್ಟಹಾಸಗೈಯುತ್ತಿದ್ದ. ಅವನನ್ನು ಕಂಡರೆ ಸಾಕು, ಕಾಡಿನಲ್ಲಿರುವ ಪ್ರಾಣಿ- ಪಕ್ಷಿಗಳೆಲ್ಲಾ ಹೆದರಿ ಥರಥರನೆ ನಡುಗುತ್ತಾ ಓಡಿ ಹೋಗುತ್ತಿದ್ದವು.

ಹೀಗೆ ಕಾಡಿನ ಪ್ರಾಣಿ- ಪಕ್ಷಿಗಳಿಗೆಲ್ಲಾ ಯಮದೂತನಂತಿದ್ದ ಬೇಟೆಗಾರ ಭದ್ರಯ್ಯ, ಒಂದುದಿನ ಇದ್ದಕ್ಕಿದ್ದಂತೆ ತನ್ನ ಆಯುಧಗಳನ್ನು ತ್ಯಜಿಸಿ ಒಂದು ಮರದ ಕೆಳಗೆ ತಲೆ ಮೇಲೆ ಕೈಹೊತ್ತು ಚಿಂತಾಕ್ರಾಂತನಾಗಿ ಸನ್ಯಾಸಿಯಂತೆ ಕುಳಿತುಕೊಂಡಿದ್ದ. ಇಂಥ ಸ್ಥಿತಿಯಲ್ಲಿ ಅವನನ್ನು ನೋಡಿದ ಕಾಡಿನ ಪ್ರಾಣಿ- ಪಕ್ಷಿಗಳೆಲ್ಲಾ ಆಶ್ಚರ್ಯಗೊಂಡು, ‘ಇವನೇನೋ ನಾಟಕ ಮಾಡುತ್ತಿದ್ದಾನೆ’ ಎಂದು ಮಾತನಾಡಿಕೊಂಡವು. ಯಾವುದಕ್ಕೂ ತಾವು ಎಚ್ಚರಿಕೆಯಿಂದಿರಬೇಕು ಎಂದುಕೊಂಡು ಭಯದಿಂದ ಅವನ ಹತ್ತಿರಕ್ಕೆ ಹೋಗದೆ ದೂರ ದೂರ ಹೊರಟವು.

ನರಿಯೊಂದು ಬಹುದೂರದಲ್ಲೇ ನಿಂತು, ‘ಈ ಬೇಟೆಗಾರ ಭದ್ರಯ್ಯ ಸಾಮಾನ್ಯನಲ್ಲ. ಜೀವ ತೆಗೆಯುವ ರಾಕ್ಷಸ. ಇಂದು ಏನೋ ಆಟ ಕಟ್ಟುತ್ತಿದ್ದಾನೆ. ನಂಬಬೇಡಿ ಎಚ್ಚರಿಕೆಯಿಂದಿರಿ’ ಎಂದು ಕೂಗಿ ಎಚ್ಚರಿಸಿತು. ದೊಡ್ಡ ಆಲದ ಮರದ ತುದಿಯಲ್ಲಿ ಕುಳಿತಿದ್ದ ರಣಹದ್ದು ಸಹ ನರಿಯ ಎಚ್ಚರಿಕೆಯ ಕೂಗಿಗೆ ದನಿಗೂಡಿಸಿ, ‘ನರಿ ಹೇಳುತ್ತಿರುವುದು ನಿಜ. ಈ ಕೊಲೆಗಡುಕ ಬೇಟೆಗಾರ ಭದ್ರಯ್ಯ ಸನ್ಯಾಸಿಯಂತೆ ನಟಿಸುತ್ತಾ ಏನೋ ಮಸಲತ್ತು ಮಾಡುತ್ತಿದ್ದಾನೆ. ಜೋಕೇ’ ಎಂದು ಜೋರಾಗಿ ಕಿರುಚಿತು.

ಇದನ್ನೆಲ್ಲಾ ಬಹಳ ಹೊತ್ತಿನಿಂದಲೂ ಸೂಕ್ಷ್ಮವಾಗಿ ಒಂದು ಮೊಲ ಗಮನಿಸುತ್ತಿತ್ತು. ಅದಕ್ಕೆ ಬೇಟೆಗಾರ ಭದ್ರಯ್ಯ ನಾಟಕವಾಡುತ್ತಿದ್ದಾನೆ ಎಂದು ಎನಿಸಲಿಲ್ಲ. ಬದಲಿಗೆ ಅವನು ಯಾವುದೋ ಕಷ್ಟಕ್ಕೆ ಸಿಲುಕಿಕೊಂಡಿರಬಹುದು ಎನಿಸಿತು. ಏನಾದರೂ ಸರಿ, ಅವನನ್ನೇ ವಿಚಾರಿಸಿಬಿಡೋಣವೆಂದು ಮೊಲವು ಧೈರ್ಯ ತಂದುಕೊಂಡು ಭದ್ರಯ್ಯನ ಬಳಿಗೆ ಹೋಯಿತು. ಅವನು ಸುಮ್ಮನೆ ಮೊಲವನ್ನು ನೋಡಿದನೇ ಹೊರತು ಅದಕ್ಕೆ ತೊಂದರೆ ಮಾಡಲಿಲ್ಲ.

ಮೊಲ ಅವನ ಮೈಮೇಲೆಲ್ಲಾ ಹತ್ತಿ ಕುಣಿಯಿತು. ಆದರೂ ಅವನು ಸಾಧುವಿನಂತೆ ಸುಮ್ಮನಿದ್ದ. ಚಿಂತಾಕ್ರಾಂತನಾಗಿದ್ದ ಅವನ ಕಣ್ಣುಗಳಲ್ಲಿ ನೀರು ತುಂಬಿಕೊಂಡಿತ್ತು. ಮುಖ ದುಃಖದಿಂದ ಮುದುಡಿಕೊಂಡಿತ್ತು. ಅವನ ಸ್ಥಿತಿ ಕಂಡು ಮೊಲ ಮರುಗಿತು. ಬಹಳ ಒತ್ತಾಯ ಮಾಡಿ ಅವನ ಈ ಸ್ಥಿತಿಗೆ ಕಾರಣವೇನೆಂದು ಮೊಲ ಕೇಳಿತು. ಬಹಳ ಹೊತ್ತು ಸುಮ್ಮನಿದ್ದ ಅವನು, ಮೊಲದ ಒತ್ತಾಯಕ್ಕೆ ಮಣಿದು ತನ್ನ ಕಷ್ಟದ ಕಥೆ ಹೇಳಿದ.

‘ಕೇಳು ಮೊಲವೇ, ನೀವೆಲ್ಲಾ ತಿಳಿದುಕೊಂಡಿರುವಂತೆ ನಾನು ಕ್ರೂರಿಯಲ್ಲ. ನಿಜವಾದ ಕ್ರೂರಿ ನನ್ನ ಹೆಂಡತಿ. ಅವಳನ್ನು ತೃಪ್ತಿ ಪಡಿಸಲು ಈ ಬೇಟೆಗಾರ ವೃತ್ತಿಯಲ್ಲಿ ತೊಡಗಿದ್ದೇನೆ. ನಾನು ಬೇಟೆಯಾಡಿ ಎಷ್ಟು ತಂದು ಸುರಿದರೂ ಅವಳಿಗೆ ಸಾಲದು. ಮರ ಕಡಿಯುವ ನಮ್ಮ ಹಾಳು ಮನುಷ್ಯರ ದುರಾಸೆಯಿಂದಾಗಿ ಕಾಡು ಕಡಿಮೆಯಾಗಿದೆ. ಪ್ರಾಣಿ- ಪಕ್ಷಿಗಳೂ ಕಡಿಮೆಯಾಗಿವೆ. ಹಾಗಾಗಿ ನನ್ನ ಬೇಟೆಗೂ ಕುತ್ತು ಬಂದಿದೆ.

ಒಂದು ವಾರದಿಂದ ನನಗೆ ಸರಿಯಾಗಿ ಬೇಟೆಯೇ ಸಿಕ್ಕಿಲ್ಲ. ಇದು ನನ್ನ ಹೆಂಡತಿಗೆ ಅರ್ಥವಾಗುವುದಿಲ್ಲ. ಸರಿಯಾದ ಬೇಟೆ ಹೊಡೆದು ಕೊಂಡು ಬರುವ ತನಕ ನೀನು ಮನೆಗೆ ಬರಬೇಡವೆಂದು ನನ್ನ ಹೆಂಡತಿ ನನ್ನನ್ನು ಮನೆಯಿಂದ ಹೊರದಬ್ಬಿದ್ದಾಳೆ.

ಜೀವ ತೆಗೆಯುವ ಈ ಬೇಟೆಗಾರ ವೃತ್ತಿಯೇ ನನಗೆ ಬೇಸರ ತಂದಿದೆ. ಹಾಗಾಗಿ ನಿಮ್ಮನ್ನೆಲ್ಲಾ ಕೊಲ್ಲುವುದಕ್ಕಿಂತ ನನ್ನನ್ನು ನಾನು ಕೊಂದುಕೊಳ್ಳಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ಬೇಟೆಗಾರ ಭದ್ರಯ್ಯ ಮೊಲದ ಮುಂದೆ ತನ್ನ ಕಷ್ಟ ಹೇಳಿಕೊಂಡು ಗೋಳಾಡಿದ.

ಬೇಟೆಗಾರ ಭದ್ರಯ್ಯನ ಗೋಳಿನ ಕಥೆ ಕೇಳಿ ಮೊಲದ ಮನಸ್ಸು ಕರಗಿತು. ‘ನೀನೇನೂ ಸಾಯಬೇಕಾಗಿಲ್ಲ. ಬದುಕಲು ಸಾವಿರಾರು ದಾರಿಗಳಿವೆ. ಬೇಟೆಯಾಡುವ ವೃತ್ತಿ ನಿನಗೆ ಬೇಡವೆಂದರೆ ಅದನ್ನು ಬಿಟ್ಟುಬಿಡು. ನನಗೆ ಮೂರು ಮರಿಗಳಿವೆ. ಅವುಗಳಲ್ಲೊಂದು ಮರಿ ಪ್ರತಿದಿನ ಒಂದೊಂದು ಚಿನ್ನದ ನಾಣ್ಯವನ್ನು ಉಗುಳುತ್ತದೆ. ಅದು ಬಹಳ ಮಹಿಮೆಯುಳ್ಳದ್ದು.

ಆ ಮರಿಯನ್ನು ನಿನಗೆ ಕೊಡುತ್ತೇನೆ. ಅದು ಪ್ರತಿದಿನ ನೀಡುವ ಚಿನ್ನದ ನಾಣ್ಯಗಳಿಂದ ನಿನ್ನ ಹೆಂಡತಿಯೂ ಸಂತೋಷಪಡುತ್ತಾಳೆ. ಆ ಚಿನ್ನದ ನಾಣ್ಯಗಳನ್ನು ಶೇಖರಿಸಿ ಮಾರಿ ಅದರಿಂದ ಬಂದ ಹಣವನ್ನು ಬಂಡವಾಳ ಮಾಡಿಕೊಂಡು ಏನಾದರೂ ವ್ಯಾಪಾರ ಮಾಡಿಕೊಂಡು ನೀನು ಚೆನ್ನಾಗಿ ಬದುಕು’ ಎಂದು ಹೇಳಿ ಮೊಲವು ತನ್ನ ಮರಿ ಚಿನ್ನದ ಮೊಲವನ್ನು ಅವನಿಗೆ ನೀಡಿತು.

ಮೊಲ ಹೇಳಿದಂತೆ ಪ್ರತಿದಿನ ಚಿನ್ನದ ನಾಣ್ಯಕೊಡುವ ಅದರ ಮರಿ ಮೊಲವನ್ನು ತೆಗೆದುಕೊಂಡು ಮನೆಗೆ ಹೋದ ಬೇಟೆಗಾರ ಭದ್ರಯ್ಯ ಮೊಲ ತೋರಿದ ಮಾರ್ಗದಲ್ಲಿ ತನ್ನ ಜೀವನವನ್ನು ರೂಪಿಸಿಕೊಂಡನು. ಚಿನ್ನದ ನಾಣ್ಯ ನೀಡುವ ಮೊಲದ ಮರಿಯನ್ನು ಕಂಡು ಅವನ ಹೆಂಡತಿಗೂ ಸಂತಸವಾಗಿತ್ತು. ಅವಳು ಪರಿವರ್ತನೆಯಾಗಿ ಅವನನ್ನು ಪ್ರೀತಿಯಿಂದ ಕಾಣತೊಡಗಿದಳು. ಕಾಲಾನಂತರ ಮೊಲದ ಮಹಿಮೆಯಿಂದಾಗಿ ಶ್ರೀಮಂತರಾದ ಅವರು ಪ್ರಾಣಿ- ಪಕ್ಷಿಗಳನ್ನೂ ತಮ್ಮ ಮಕ್ಕಳಂತೆ ಸಾಕಿ ಸಲಹುತ್ತಾ ಸುಖವಾಗಿ ಬಾಳಿದರು.

ಕೃಪೆ : ಶಶಿಧರ್ ಹಳೆಮಣಿ ( ಸಾಮಾಜಿಕ ಜಾಲತಾಣ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

BJP ಎಂಎಲ್‌ಎ ಲೋಕಾಗೆ ಲಾಕ್: ಬಿಜೆಪಿಯವರು ಬಹಳ ಪ್ರಾಮಾಣಿಕರಲ್ಲವೇ ಎಂದು ಸಿಎಂ, ಡಿಸಿಎಂ ಲೇವಡಿ

BJP ಎಂಎಲ್‌ಎ ಲೋಕಾಗೆ ಲಾಕ್: ಬಿಜೆಪಿಯವರು ಬಹಳ ಪ್ರಾಮಾಣಿಕರಲ್ಲವೇ ಎಂದು ಸಿಎಂ, ಡಿಸಿಎಂ

ಆಡಳಿತಾರೂಢ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದ ಬಿಜೆಪಿ (BJP), ಅದರ ಶಾಸಕನೇ ಕಮಿಷನ್ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವುದು ತೀವ್ರ ಮುಜುಗರಕ್ಕೆ ಎದುರಿಸುವಂತಾಗಿದೆ.

[ccc_my_favorite_select_button post_id="119653"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!