ಹರಿತಲೇಖನಿ ದಿನಕ್ಕೊಂದು ಕಥೆ: ಮೊಲ ತೋರಿದ ಮಾರ್ಗ

ಬೇಟೆಗಾರ ಭದ್ರಯ್ಯ ಯಾವಾಗಲೂ ಬಿಲ್ಲು- ಬಾಣ, ಈಟಿ- ಭರ್ಜಿ, ಕತ್ತಿ-ಮಚ್ಚುಗಳನ್ನು ಹಿಡಿದುಕೊಂಡು ಕಾಡಿನಲ್ಲಿರುವ ಪ್ರಾಣಿ- ಪಕ್ಷಿಗಳನ್ನು ಬೇಟೆಯಾಡುತ್ತಾ ಅಟ್ಟಹಾಸಗೈಯುತ್ತಿದ್ದ. ಅವನನ್ನು ಕಂಡರೆ ಸಾಕು, ಕಾಡಿನಲ್ಲಿರುವ ಪ್ರಾಣಿ- ಪಕ್ಷಿಗಳೆಲ್ಲಾ ಹೆದರಿ ಥರಥರನೆ ನಡುಗುತ್ತಾ ಓಡಿ ಹೋಗುತ್ತಿದ್ದವು.

ಹೀಗೆ ಕಾಡಿನ ಪ್ರಾಣಿ- ಪಕ್ಷಿಗಳಿಗೆಲ್ಲಾ ಯಮದೂತನಂತಿದ್ದ ಬೇಟೆಗಾರ ಭದ್ರಯ್ಯ, ಒಂದುದಿನ ಇದ್ದಕ್ಕಿದ್ದಂತೆ ತನ್ನ ಆಯುಧಗಳನ್ನು ತ್ಯಜಿಸಿ ಒಂದು ಮರದ ಕೆಳಗೆ ತಲೆ ಮೇಲೆ ಕೈಹೊತ್ತು ಚಿಂತಾಕ್ರಾಂತನಾಗಿ ಸನ್ಯಾಸಿಯಂತೆ ಕುಳಿತುಕೊಂಡಿದ್ದ. ಇಂಥ ಸ್ಥಿತಿಯಲ್ಲಿ ಅವನನ್ನು ನೋಡಿದ ಕಾಡಿನ ಪ್ರಾಣಿ- ಪಕ್ಷಿಗಳೆಲ್ಲಾ ಆಶ್ಚರ್ಯಗೊಂಡು, ‘ಇವನೇನೋ ನಾಟಕ ಮಾಡುತ್ತಿದ್ದಾನೆ’ ಎಂದು ಮಾತನಾಡಿಕೊಂಡವು. ಯಾವುದಕ್ಕೂ ತಾವು ಎಚ್ಚರಿಕೆಯಿಂದಿರಬೇಕು ಎಂದುಕೊಂಡು ಭಯದಿಂದ ಅವನ ಹತ್ತಿರಕ್ಕೆ ಹೋಗದೆ ದೂರ ದೂರ ಹೊರಟವು.

ನರಿಯೊಂದು ಬಹುದೂರದಲ್ಲೇ ನಿಂತು, ‘ಈ ಬೇಟೆಗಾರ ಭದ್ರಯ್ಯ ಸಾಮಾನ್ಯನಲ್ಲ. ಜೀವ ತೆಗೆಯುವ ರಾಕ್ಷಸ. ಇಂದು ಏನೋ ಆಟ ಕಟ್ಟುತ್ತಿದ್ದಾನೆ. ನಂಬಬೇಡಿ ಎಚ್ಚರಿಕೆಯಿಂದಿರಿ’ ಎಂದು ಕೂಗಿ ಎಚ್ಚರಿಸಿತು. ದೊಡ್ಡ ಆಲದ ಮರದ ತುದಿಯಲ್ಲಿ ಕುಳಿತಿದ್ದ ರಣಹದ್ದು ಸಹ ನರಿಯ ಎಚ್ಚರಿಕೆಯ ಕೂಗಿಗೆ ದನಿಗೂಡಿಸಿ, ‘ನರಿ ಹೇಳುತ್ತಿರುವುದು ನಿಜ. ಈ ಕೊಲೆಗಡುಕ ಬೇಟೆಗಾರ ಭದ್ರಯ್ಯ ಸನ್ಯಾಸಿಯಂತೆ ನಟಿಸುತ್ತಾ ಏನೋ ಮಸಲತ್ತು ಮಾಡುತ್ತಿದ್ದಾನೆ. ಜೋಕೇ’ ಎಂದು ಜೋರಾಗಿ ಕಿರುಚಿತು.

ಇದನ್ನೆಲ್ಲಾ ಬಹಳ ಹೊತ್ತಿನಿಂದಲೂ ಸೂಕ್ಷ್ಮವಾಗಿ ಒಂದು ಮೊಲ ಗಮನಿಸುತ್ತಿತ್ತು. ಅದಕ್ಕೆ ಬೇಟೆಗಾರ ಭದ್ರಯ್ಯ ನಾಟಕವಾಡುತ್ತಿದ್ದಾನೆ ಎಂದು ಎನಿಸಲಿಲ್ಲ. ಬದಲಿಗೆ ಅವನು ಯಾವುದೋ ಕಷ್ಟಕ್ಕೆ ಸಿಲುಕಿಕೊಂಡಿರಬಹುದು ಎನಿಸಿತು. ಏನಾದರೂ ಸರಿ, ಅವನನ್ನೇ ವಿಚಾರಿಸಿಬಿಡೋಣವೆಂದು ಮೊಲವು ಧೈರ್ಯ ತಂದುಕೊಂಡು ಭದ್ರಯ್ಯನ ಬಳಿಗೆ ಹೋಯಿತು. ಅವನು ಸುಮ್ಮನೆ ಮೊಲವನ್ನು ನೋಡಿದನೇ ಹೊರತು ಅದಕ್ಕೆ ತೊಂದರೆ ಮಾಡಲಿಲ್ಲ.

ಮೊಲ ಅವನ ಮೈಮೇಲೆಲ್ಲಾ ಹತ್ತಿ ಕುಣಿಯಿತು. ಆದರೂ ಅವನು ಸಾಧುವಿನಂತೆ ಸುಮ್ಮನಿದ್ದ. ಚಿಂತಾಕ್ರಾಂತನಾಗಿದ್ದ ಅವನ ಕಣ್ಣುಗಳಲ್ಲಿ ನೀರು ತುಂಬಿಕೊಂಡಿತ್ತು. ಮುಖ ದುಃಖದಿಂದ ಮುದುಡಿಕೊಂಡಿತ್ತು. ಅವನ ಸ್ಥಿತಿ ಕಂಡು ಮೊಲ ಮರುಗಿತು. ಬಹಳ ಒತ್ತಾಯ ಮಾಡಿ ಅವನ ಈ ಸ್ಥಿತಿಗೆ ಕಾರಣವೇನೆಂದು ಮೊಲ ಕೇಳಿತು. ಬಹಳ ಹೊತ್ತು ಸುಮ್ಮನಿದ್ದ ಅವನು, ಮೊಲದ ಒತ್ತಾಯಕ್ಕೆ ಮಣಿದು ತನ್ನ ಕಷ್ಟದ ಕಥೆ ಹೇಳಿದ.

‘ಕೇಳು ಮೊಲವೇ, ನೀವೆಲ್ಲಾ ತಿಳಿದುಕೊಂಡಿರುವಂತೆ ನಾನು ಕ್ರೂರಿಯಲ್ಲ. ನಿಜವಾದ ಕ್ರೂರಿ ನನ್ನ ಹೆಂಡತಿ. ಅವಳನ್ನು ತೃಪ್ತಿ ಪಡಿಸಲು ಈ ಬೇಟೆಗಾರ ವೃತ್ತಿಯಲ್ಲಿ ತೊಡಗಿದ್ದೇನೆ. ನಾನು ಬೇಟೆಯಾಡಿ ಎಷ್ಟು ತಂದು ಸುರಿದರೂ ಅವಳಿಗೆ ಸಾಲದು. ಮರ ಕಡಿಯುವ ನಮ್ಮ ಹಾಳು ಮನುಷ್ಯರ ದುರಾಸೆಯಿಂದಾಗಿ ಕಾಡು ಕಡಿಮೆಯಾಗಿದೆ. ಪ್ರಾಣಿ- ಪಕ್ಷಿಗಳೂ ಕಡಿಮೆಯಾಗಿವೆ. ಹಾಗಾಗಿ ನನ್ನ ಬೇಟೆಗೂ ಕುತ್ತು ಬಂದಿದೆ.

ಒಂದು ವಾರದಿಂದ ನನಗೆ ಸರಿಯಾಗಿ ಬೇಟೆಯೇ ಸಿಕ್ಕಿಲ್ಲ. ಇದು ನನ್ನ ಹೆಂಡತಿಗೆ ಅರ್ಥವಾಗುವುದಿಲ್ಲ. ಸರಿಯಾದ ಬೇಟೆ ಹೊಡೆದು ಕೊಂಡು ಬರುವ ತನಕ ನೀನು ಮನೆಗೆ ಬರಬೇಡವೆಂದು ನನ್ನ ಹೆಂಡತಿ ನನ್ನನ್ನು ಮನೆಯಿಂದ ಹೊರದಬ್ಬಿದ್ದಾಳೆ.

ಜೀವ ತೆಗೆಯುವ ಈ ಬೇಟೆಗಾರ ವೃತ್ತಿಯೇ ನನಗೆ ಬೇಸರ ತಂದಿದೆ. ಹಾಗಾಗಿ ನಿಮ್ಮನ್ನೆಲ್ಲಾ ಕೊಲ್ಲುವುದಕ್ಕಿಂತ ನನ್ನನ್ನು ನಾನು ಕೊಂದುಕೊಳ್ಳಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ಬೇಟೆಗಾರ ಭದ್ರಯ್ಯ ಮೊಲದ ಮುಂದೆ ತನ್ನ ಕಷ್ಟ ಹೇಳಿಕೊಂಡು ಗೋಳಾಡಿದ.

ಬೇಟೆಗಾರ ಭದ್ರಯ್ಯನ ಗೋಳಿನ ಕಥೆ ಕೇಳಿ ಮೊಲದ ಮನಸ್ಸು ಕರಗಿತು. ‘ನೀನೇನೂ ಸಾಯಬೇಕಾಗಿಲ್ಲ. ಬದುಕಲು ಸಾವಿರಾರು ದಾರಿಗಳಿವೆ. ಬೇಟೆಯಾಡುವ ವೃತ್ತಿ ನಿನಗೆ ಬೇಡವೆಂದರೆ ಅದನ್ನು ಬಿಟ್ಟುಬಿಡು. ನನಗೆ ಮೂರು ಮರಿಗಳಿವೆ. ಅವುಗಳಲ್ಲೊಂದು ಮರಿ ಪ್ರತಿದಿನ ಒಂದೊಂದು ಚಿನ್ನದ ನಾಣ್ಯವನ್ನು ಉಗುಳುತ್ತದೆ. ಅದು ಬಹಳ ಮಹಿಮೆಯುಳ್ಳದ್ದು.

ಆ ಮರಿಯನ್ನು ನಿನಗೆ ಕೊಡುತ್ತೇನೆ. ಅದು ಪ್ರತಿದಿನ ನೀಡುವ ಚಿನ್ನದ ನಾಣ್ಯಗಳಿಂದ ನಿನ್ನ ಹೆಂಡತಿಯೂ ಸಂತೋಷಪಡುತ್ತಾಳೆ. ಆ ಚಿನ್ನದ ನಾಣ್ಯಗಳನ್ನು ಶೇಖರಿಸಿ ಮಾರಿ ಅದರಿಂದ ಬಂದ ಹಣವನ್ನು ಬಂಡವಾಳ ಮಾಡಿಕೊಂಡು ಏನಾದರೂ ವ್ಯಾಪಾರ ಮಾಡಿಕೊಂಡು ನೀನು ಚೆನ್ನಾಗಿ ಬದುಕು’ ಎಂದು ಹೇಳಿ ಮೊಲವು ತನ್ನ ಮರಿ ಚಿನ್ನದ ಮೊಲವನ್ನು ಅವನಿಗೆ ನೀಡಿತು.

ಮೊಲ ಹೇಳಿದಂತೆ ಪ್ರತಿದಿನ ಚಿನ್ನದ ನಾಣ್ಯಕೊಡುವ ಅದರ ಮರಿ ಮೊಲವನ್ನು ತೆಗೆದುಕೊಂಡು ಮನೆಗೆ ಹೋದ ಬೇಟೆಗಾರ ಭದ್ರಯ್ಯ ಮೊಲ ತೋರಿದ ಮಾರ್ಗದಲ್ಲಿ ತನ್ನ ಜೀವನವನ್ನು ರೂಪಿಸಿಕೊಂಡನು. ಚಿನ್ನದ ನಾಣ್ಯ ನೀಡುವ ಮೊಲದ ಮರಿಯನ್ನು ಕಂಡು ಅವನ ಹೆಂಡತಿಗೂ ಸಂತಸವಾಗಿತ್ತು. ಅವಳು ಪರಿವರ್ತನೆಯಾಗಿ ಅವನನ್ನು ಪ್ರೀತಿಯಿಂದ ಕಾಣತೊಡಗಿದಳು. ಕಾಲಾನಂತರ ಮೊಲದ ಮಹಿಮೆಯಿಂದಾಗಿ ಶ್ರೀಮಂತರಾದ ಅವರು ಪ್ರಾಣಿ- ಪಕ್ಷಿಗಳನ್ನೂ ತಮ್ಮ ಮಕ್ಕಳಂತೆ ಸಾಕಿ ಸಲಹುತ್ತಾ ಸುಖವಾಗಿ ಬಾಳಿದರು.

ಕೃಪೆ : ಶಶಿಧರ್ ಹಳೆಮಣಿ ( ಸಾಮಾಜಿಕ ಜಾಲತಾಣ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

LPG ಸಮಸ್ಯೆಯನ್ನು ಕೇಂದ್ರ ಸರಕಾರ ಸಮರ್ಥವಾಗಿ ನಿಭಾಯಿಸಿದೆ; ಪ್ರಲ್ಹಾದ್ ಜೋಶಿ

LPG ಸಮಸ್ಯೆಯನ್ನು ಕೇಂದ್ರ ಸರಕಾರ ಸಮರ್ಥವಾಗಿ ನಿಭಾಯಿಸಿದೆ; ಪ್ರಲ್ಹಾದ್ ಜೋಶಿ

ಅಮೆರಿಕ ಮತ್ತು ಇಸ್ರೇಲ್ ಜತೆಗೂಡಿ ಇರಾನ್ ವಿರುದ್ದ ನಡೆಸುತ್ತಿರುವ ಯುದ್ಧ ಸೋಮವಾರ 38ನೇ ದಿನಕ್ಕೆ ಕಾಲಿಟ್ಟಿದೆ. ಯುದ್ಧದ ಕಾರಣವಾಗಿ ಇರಾನ್ ಹೊರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದರಿಂದ ನೈಸರ್ಗಿಕ ಅನಿಲ ಮತ್ತು ಎಲ್‌ಪಿಜಿ (LPG) ಪೂರೈಕೆ

[ccc_my_favorite_select_button post_id="120766"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]