ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಬೆಂ.ಗ್ರಾ.ಜಿಲ್ಲೆಯಲ್ಲಿ 77 ಕಿ.ಮೀ ಮಾನವ ಸರಪಳಿ ರಚನೆ.. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಡಿಸಿ ಕರೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಸೆಪ್ಟೆಂಬರ್ 14): ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ 77 ಕಿ.ಮೀ ಮಾನವ ಸರಪಳಿ ರಚನೆಯಾಗಲಿದ್ದು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಾನವ ಸರಪಳಿಗೆ ಕೈ ಜೋಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಕೋರಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಮಾನವ ಸರಪಳಿ ರಚನೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ  ಚರ್ಚಿಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಕಕಾಲಕ್ಕೆ ಎರಡು ಕಡೆಗಳಲ್ಲಿ ಮಾನವ ಸರಪಳಿ ರಚನೆಯಾಗಲಿದೆ. ಮೊದಲ ಭಾಗದಲ್ಲಿ ನೆಲಮಂಗಲ ತಾಲ್ಲೂಕಿನ ಹಳೆ ನಿಜಗಲ್ ನಿಂದ ಮಾನವ ಸರಪಳಿ ಪ್ರಾರಂಭವಾಗಿ ಡಾಬಸ್ ಪೇಟೆಯ ಮುಖಾಂತರ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಕ್ರಾಸ್ (ನಂದಿ ಬೆಟ್ಟದ ಹತ್ತಿರ) ವರೆಗೆ ಒಟ್ಟು 54 ಕಿಲೋ ಮೀಟರ್ ಮಾನವ ಸರಪಳಿ ರಚನೆಯಾಗಲಿದೆ. 2ನೇ ಭಾಗವಾಗಿ ಹೊಸಕೋಟೆ ತಾಲ್ಲೂಕಿನ ವೆಂಕಟಪುರ ದಿಂದ ಪ್ರಾರಂಭವಾಗಿ ಮುಗಬಾಳ ಮುಖಾಂತರ ಹೊಸಕೋಟೆಯ ದೊಡ್ಡಮಾನಿಕೆರೆಯವರೆಗೆ ಒಟ್ಟು 23 ಕಿಲೋಮೀಟರ್ ಸೇರಿದಂತೆ ಒಟ್ಟು 77 ಕಿಲೋಮೀಟರ್ ವರೆಗೆ ಜಿಲ್ಲೆಯಲ್ಲಿ ಮಾನವ ಸರಪಳಿ ರಚನೆಯಾಗಲಿದೆ.

      ಸೆಪ್ಟೆಂಬರ್ 15 ರಂದು ಬೆಳಗ್ಗೆ 9:30 ಗಂಟೆಗೆ ಮಾನವ ಸರಪಳಿ ರಚನೆ ಪ್ರಕ್ರಿಯೆ ನಡೆಯಲಿದ್ದು, ಬೆಳಗ್ಗೆ 10 ಕ್ಕೆ ಮಾನವ ಸರಪಳಿ ಬಿಡುವ ಮುನ್ನ ಸಂವಿಧಾನ ಪೀಠಿಕೆ ವಾಚನ ನಡೆಯಲಿದೆ, ಬೆಳಗ್ಗೆ 10 ರಿಂದ 10:30 ರವರೆಗೆ ಸಸಿಗಳನ್ನು ನೆಡುವ ಹಾಗೂ ವೇದಿಕೆ ಕಾರ್ಯಕ್ರಮ ನಡೆಯಲಿದೆ.

    ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳಿಂದ ಗ್ರಾಮ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಸೂಚಿಸಿದರು.

    ಮಾನವ ಸರಪಳಿಯಲ್ಲಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ವಿನೂತನ ದಾಖಲೆ ನಿರ್ಮಾಣದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕೋರಿದರು.

ವೇದಿಕೆ ಕಾರ್ಯಕ್ರಮದ ಸ್ಥಳ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ತಾಲ್ಲೂಕು ಮಟ್ಟದ ವೇದಿಕೆ ಕಾರ್ಯಕ್ರಮವು ನೆಲಮಂಗಲ ತಾಲ್ಲೂಕಿನ ಡಾಬಸ್ ಪೇಟೆಯಲ್ಲಿ ನಡೆಯಲಿದೆ, ಹೊಸಕೋಟೆ ತಾಲ್ಲೂಕು ವೇದಿಕೆ ಕಾರ್ಯಕ್ರಮವು ತಾವರೆಕೆರೆ ಗ್ರಾಮ ಪಂಚಾಯಿತಿಯ ಬಳಿ ನಡೆಯಲಿದೆ, ದೊಡ್ಡಬಳ್ಳಾಪುರ ತಾಲೂಕಿನ ವೇದಿಕೆ ಕಾರ್ಯಕ್ರಮವು ಐ.ಬಿ ಸರ್ಕಲ್ ಬಳಿ ನಡೆಯಲಿದೆ. ದೇವನಹಳ್ಳಿ ಹಾಗೂ ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮವು ಹೆಗ್ಗಡೆ ಹಳ್ಳಿ ಗ್ರಾಮ ಪಂಚಾಯಿತಿ ಬಳಿ ನಡೆಯಲಿದೆ.

ಜಿಲ್ಲೆಯ ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಸ್ವಸಹಾಯ ಗುಂಪುಗಳ ಸದಸ್ಯರು ಭಾಗವಹಿಸಲು ವ್ಯಾಪಕ ಪ್ರಚಾರ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸದಂತೆ ಹಾಗೂ ಸ್ವಚ್ಚತೆಗೆ ಆದ್ಯತೆ ನೀಡಲು ಕ್ರಮ ವಹಿಸಲಾಗಿದೆ: ಡಾ.ಕೆ.ಎನ್ ಅನುರಾಧ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಮಾನವ ಸರಪಳಿ ನಡೆಯುವ ರಸ್ತೆ ಮಾರ್ಗದಲ್ಲಿ ಭದ್ರತಾ ದೃಷ್ಟಿಯಿಂದ ಹಾಗೂ ರಸ್ತೆ ಸುರಕ್ಷತೆಗಾಗಿ 500 ಪೋಲಿಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಅಗತ್ಯ ಪೋಲಿಸ್ ಬಂದೋಬಸ್ತ್ ವ್ಯವಸ್ಥೆಗೆ ಕ್ರಮ ವಹಿಸಲಾಗಿದೆ; ಸಿ.ಕೆ ಬಾಬಾ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಅಪರ ಪೋಲಿಸ್ ವರಿಷ್ಠಾಧಿಕಾರಿ ನಾಗೇಶ್, ಉಪವಿಭಾಗಾಧಿಕಾರಿ ದುರ್ಗಶ್ರೀ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪ್ರೇಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾನವ ಸರಪಳಿ ರಚನೆಯ ಹಿನ್ನೋಟ: ಪ್ರಜಾಪ್ರಭುತ್ವದ ಮೌಲ್ಯಗಳಾದ ಸ್ವಾತಂತ್ರ‍್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸಾರುವ ಉದ್ದೇಶದಿಂದ ಕರ್ನಾಟಕ ಸರ್ಕಾರವು, ಸೆಪ್ಟಂಬರ್ 15 ರ ಅಂತಾರಾಷ್ಟಿಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಅಂದು ರಾಜ್ಯದ ಜನ ಸಾಮಾನ್ಯರೊಂದಿಗೆ ಸೇರಿ ಜಗತ್ತಿನ ಅತಿ ಉದ್ದದ ಮಾನವ ಸರಪಳಿಯು ರಚಿಸುವ ಮಹತ್ವದ ಕಾರ್ಯಕ್ರಮ ರೂಪಿಸಿದೆ.

ರಾಜ್ಯದಲ್ಲಿ ಈ ಮಾನವ ಸರಪಳಿಯು ಸುಮಾರು 2500 ಕಿಲೋಮೀಟರ್ ಉದ್ದ ಇರಲಿದ್ದು ಜಗತ್ತಿನ ಅತಿ ಉದ್ದದ ಮಾನವ ಸರಪಳಿ ಆಗಲಿದೆ. ಇದರಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಪ್ರತಿ ಕಿಲೋಮೀಟರ್‌ಗೆ 1000 ಜನರು ಇರಲಿದ್ದಾರೆ. ಈ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಜನರ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಕುರಿತು ಸಂದೇಶವನ್ನು ಬಿತ್ತರಿಸುವುದು ಮಾತ್ರವಲ್ಲದೇ, ಸರ್ಕಾರದ ಬಗೆಗಿನ ಜನರ ಭಾವನೆಯನ್ನು ಸಂಗ್ರಹಿಸಿ ಬಿತ್ತರಿಸಲಾಗುತ್ತದೆ.

ಈ ಮಾನವ ಸರಪಳಿಯಲ್ಲಿ ಸ್ವಾತಂತ್ರ‍್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ‍್ಯದ ಪರಿಕಲ್ಪನೆಯನ್ನು ಒತ್ತಿಹೇಳುವ ಪ್ರಜಾಪ್ರಭುತ್ವದ ಬ್ಯಾನರ್ ಮತ್ತು ಭಿತ್ತಿಪತ್ರಗಳನ್ನು ಪ್ರದರ್ಶಿಸುವ ಜೊತೆಗೆ ಈ ಸಂದರ್ಭದಲ್ಲಿ ಮಾನವ ಸರಪಳಿಯಲ್ಲಿ ಭಾಗವಹಿಸುವವರಿಂದ ರಾಜ್ಯಾದ್ಯಂತ 10 ಲಕ್ಷ ಸಸಿಗಳನ್ನು ನೆಡಲು ಆಯೋಜಿಸಲಾಗಿದೆ. ಆ ಮೂಲಕ ನಮ್ಮ ಪರಿಸರವನ್ನು ರಕ್ಷಿಸುವಂತಹ ಕಾಳಜಿಯನ್ನೂ ಮಾಡಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ ಮತದಾರರ ವಿವರ ಪ್ರಕಟ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ

ಸುಪ್ರೀಂ ಕೋರ್ಟ್ (Supreme Court) ಕಟ್ಟುನಿಟ್ಟಾದ ಆದೇಶದ ನಂತರ ಬಿಹಾರದಲ್ಲಿ ಕರಡು ಪಟ್ಟಿಯಿಂದ ತೆಗೆದುಹಾಕಲಾದ 65 ಲಕ್ಷ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ (Election Commission) ಬಿಡುಗಡೆ ಮಾಡಿದೆ.

[ccc_my_favorite_select_button post_id="112766"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!