ಆರಗದಲ್ಲಿ ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆ..!

ಶಿವಮೊಗ್ಗ, (ಸೆಪ್ಟೆಂಬರ್ 13): ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಂಪಿಯ ನಿರ್ದೇಶಕರಾದ(ಪುರಾತತ್ತ್ವ )(ಪ) ಡಾ.ಆರ್.ಶೇಜೇಶ್ವರ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ತೀರ್ಥಹಳ್ಳಿ ತಾಲ್ಲೂಕಿನ ಆರಗದ ವೀರಭದ್ರ ದೇವಾಲಯದ ಆವರಣದಲ್ಲಿ ಸುಮಾರು ಎರಡು ಮೀಟರ್ ಉದ್ದದ ಗ್ರಾನೈಟ್ ಶಿಲೆಯ “ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆಯಾಗಿದೆ”.

 ಶಿರ ಛೇದನ ಸ್ಮಾರಕ ಶಿಲ್ಪವು ಎರಡು ಪಟ್ಟಿಕೆಗಳಿಂದ ಕೂಡಿದ್ದು ಕೆಳಗಿನ ಪಟ್ಟಿಕೆಯಲ್ಲಿ ವೇಳಾವಳಿ/ ಗರುಡ ಹೋಗುವ ವೀರ ಕುದುರೆಯ ಮೇಲೆ ಕುಳಿತು ಕತ್ತಿಯನ್ನು ಹಿಡಿದಿದ್ದಾನೆ, ಇವನಿಗೆ ಹಿಂಭಾಗದಲ್ಲಿ ಸೇವಕ ಛತ್ರಿಯನ್ನು ಹಿಡಿದಿದ್ದಾನೆ, ಆದ್ದರಿಂದ ಇವನನ್ನು ರಾಜ ಪ್ರಮುಖನೆಂದು ತಿಳಿಯಬಹುದಾಗಿದೆ. ಹಿಂಭಾಗದಲ್ಲಿ ಮಹಿಳೆಯು ಕತ್ತಿಯನ್ನು ಹಿಡಿದು ನಿಂತಿದ್ದಾಳೆ.

 ಎರಡನೇ ಪಟ್ಟಕೆಯಲ್ಲಿ ಗರುಡ ಹೊಂದತಹ ವೀರನು ವೀರಾಸನದಲ್ಲಿ ನಿಂತಿದ್ದು ರುಂಡವನ್ನು ಕತ್ತರಿಸಲಾಗಿದ್ದು, ಬಲಗೈಯಲ್ಲಿ ಕತ್ತಿಯನ್ನು ಹಿಡಿದು ಮುಂಡದ ಮೇಲೆ ಹಲಗೆಯ ರೀತಿಯನ್ನು ಹೊತ್ತುಕೊಂಡಿದ್ದು ಇದನ್ನು ಕೈಯಲ್ಲಿ ಹಿಡಿದಿರುವಂತಿದೆ. ಈ ಶಿರ ಛೇದನ ಶಿಲ್ಪದ ಪಕ್ಕದಲ್ಲಿ ಮಹಿಳೆಯು ಶಿರ ಛೇದನವಾದ ರುಂಡವನ್ನು ಕೈಯಲ್ಲಿ ಹಿಡಿದು ನಿಂತಿದ್ದಾಳೆ.

 ಮೂರನೇ ಪಟ್ಟಿಕೆಯಲ್ಲಿ ಪಟ್ಟಿಕೆಯ ಶಿಲ್ಪಗಳ ಬದಲು ಲಿಂಗದ ರೀತಿಯಲ್ಲಿ ಇರುವ ಕಂಬವಿದ್ದು ಇದರಲ್ಲಿ ಲಿಂಗದ ಉಬ್ಬು ಶಿಲ್ಪವಿದೆ. ಈ ಲಿಂಗದ/ಕAಬದ ಮೇಲೆ ಸಮತಟ್ಟಾಗಿದೆ.

ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪದ ಮಹತ್ವ: ಆತ್ಮಬಲಿದಾನವು ಹಿಂದೂಗಳ ದೃಷ್ಟಿಯಲ್ಲಿ ಮಹತ್ವಪೂರ್ಣವಾಗಿದ್ದು, ಆತ್ಮ ಬಲಿದಾನ ಮಾಡಿಕೊಳ್ಳಲು ಶುಭ ತಿಥಿಗಳು ಒಳ್ಳೆಯವು ಎಂಬ ನಂಬಿಕೆಯಿದ್ದು, ವ್ಯಕ್ತಿಗಳು ತಮ್ಮ ಪ್ರಾಣವನ್ನು ತಾವೇ ತೆಗೆದುಕೊಳ್ಳುವಂತಹ ಅಥವಾ ಇನ್ನೊಬ್ಬರ ಸಹಾಯದಿಂದ ಮಾಡಿಕೊಳ್ಳುವಂತಹದ್ದು ಆತ್ಮ ಬಲಿದಾನ(ದೇಹತ್ಯಾಗ) ಎನ್ನಬಹುದಾಗಿದೆ.

 ಆತ್ಮಬಲಿದಾನವು ಆತ್ಮಹತ್ಯೆಗಿಂತ ವಿಶೇಷವಾಗಿದ್ದು ಇದು ಸಮಾಜದ ಒಳತಿಗೋಸ್ಕರ ಆಗಿರುವಂತಹದ್ದು ಹಾಗೂ ಪೂರ್ವ ನಿಯೋಜಿತವಾಗಿರುವಂತಹದ್ದು.

 ಈ ಆತ್ಮ ಬಲಿದಾನದಲ್ಲಿ ಹಲವು ಬಗೆಗಳಿವೆ. ಆತ್ಮಬಲಿದಾನವನ್ನು ಮಾಡಿಕೊಂಡ ವೀರರು ಯಾವುದೇ ಹೋರಾಟದಲ್ಲಿ ಹೋರಾಡಿ ಮಡಿದವರಾಗಿರುವುದಿಲ್ಲ. ಆದರೆ ಇವರು ಯಾವುದೇ ಹೋರಾಟದಲ್ಲಿ ಮಡಿದ ವೀರರಿಗಿಂತ ಕಡಿಮೆಯಿರುವುದಿಲ್ಲ. 

 ಆತ್ಮ ಬಲಿದಾನದಲ್ಲಿ ಚಿತಾಪ್ರವೇಶ, ಜಲಪ್ರವೇಶ, ಊರ್ಧ್ವಪತನದ ಬಗೆಗಳಿವೆ. ಚಿತಾ ಪ್ರವೇಶ ಎಂದರೆ ಬೆಂಕಿಗೆ ಹಾರಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು, ಜಲಪ್ರವೇಶ ಎಂದರೆ ಗಂಗೆ, ವಾರಾಣಾಸಿ, ಪ್ರಯಾಗ, ತುಂಗಭದ್ರೆ ಮೊದಲಾದೆಡೆ ನೀರಿನಲ್ಲಿ ಮುಳುಗಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು ಹಾಗೂ ಊರ್ಧ್ವ ಬಲಿದಾನವೆಂದರೆ ಬೆಟ್ಟ, ಮರ ಹಾಗೂ ದೇವಾಲಯಗಳ ಶಿಖರಗಳಿಂದ ಕೆಳಗೆ ಬಿದ್ದು ಅಥವಾ ಹಾರಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು ಎನ್ನಬಹುದು.

ಈ ಆತ್ಮಬಲಿದಾನದಲ್ಲಿ ಸಹಗಮನ ಪದ್ಧತಿ, ನಿಸಿಧಿ ಶಾಸನ ಶಿಲ್ಪಗಳು, ಸೂರ್ಯಗ್ರಹಣ ಶಾಸನ ಶಿಲ್ಪಗಳು ಇದರಲ್ಲಿ ಉರಿ ಉಯ್ಯಲೆ ಶಿಲ್ಪಗಳು, ಶೂಲ ಬಲಿ, ಶಿರ ಛೇದನ(ಬಲಿ) ಶಿಲ್ಪ, ಸಿಡಿದಲೆ ಶಾಸನ ಶಿಲ್ಪಗಳು, ಇರಿತ ಬಲಿ, ಬೆಂಕಿಬಲಿ ಶಿಲ್ಪ, ಕಿಳ್ಗುಂಟೆ, ಗರುಡ ಪದ್ಧತಿ ಹಾಗೂ ವಿಶೇಷವಾಗಿ ಚಾಟಿ ವಿಟನಿಂದ ಆತ್ಮಬಲಿದಾನ ಮಾಡಿಕೊಂಡಿದ್ದು, ಇವನ ಜೊತೆಯಲ್ಲಿ ಇವನ ಹೆಂಡತಿಯು ಸಹಗಮನ ಮಾಡಿಕೊಂಡಿರುವ ಆತ್ಮಬಲಿದಾನದ ಸ್ಮಾರಕ ಶಿಲ್ಪಮೊದಲಾದ ಆತ್ಮ ಬಲಿದಾನದ ಸ್ಮಾರಕ ಶಾಸನ ಶಿಲ್ಪಗಳು ಕರ್ನಾಟಕಲ್ಲಿ ಕಂಡುಬರುತ್ತವೆ.

ಈ ಸ್ಮಾರಕ ಶಿಲ್ಪವು ಇದುವರೆಗೂ ದೊರೆತಿರುವ ಶಿರ ಛೇದನ ಶಿಲ್ಪಗಳಲ್ಲಿ ತುಂಬಾ ಅಪರೂಪದ್ದು, ಈ ಸ್ಮಾರಕ ಶಿಲ್ಪವನ್ನು ಗರುಡ ಸ್ತಂಭವೆAದು ಕರೆಯಬಹುದು. ಕರ್ನಾಟಕದಲ್ಲಿ ಇದುವರೆಗೂ ಗರುಡರಾಗಿರುವಂತಹ ಎರಡು ಸ್ತಂಭಗಳು ಹಳೇಬೀಡು ಮತ್ತು ಅಗ್ರಹಾರ ಬಾಚಿಹಳ್ಳಿಯಲ್ಲಿ ಮಾತ್ರ ಕಂಡುಬAದಿವೆ. ಇವು ಹೊಯ್ಸಳರ ಕಾಲದ್ದಾಗಿವೆ.

     ಆರಗದಲ್ಲಿ ದೊರೆತಿರುವ ಈ ಶಿರ ಛೇದನ ಸ್ಮಾರಕ ಶಿಲ್ಪವು ಶಾಸನರಹಿತವಾಗಿದ್ದು, ಮೇಲ್ಬಾಗದಲ್ಲಿ ಲಿಂಗದ ಆಕೃತಿಯನ್ನು ಹೊಂದಿದ್ದರೂ ಹಳೇಬೀಡಿನಲ್ಲಿ ಕಂಡುಬರುವ ಸ್ತಂಭದ ರೀತಿಯಲ್ಲಿದೆ. ಕೆಳಭಾಗದಲ್ಲಿ ಚೌಕಾಕರಾವಾಗಿದ್ದು ಶಿಲ್ಪಗಳಿಂದ ಕೂಡಿದೆ.

     ಲಿಂಗದ ರೀತಿಯ ಸ್ತಂಬದ ಮೇಲ್ಬಾಗದಲ್ಲಿ ಚಪ್ಪಟೆಯಾಗಿದೆ. ಆದ್ದರಿಂದ ಇದನ್ನು ಶಿವಲಿಂಗ ಎಂದು ಹೇಳುವುದು ಕಷ್ಟವಾಗಿದೆ. ಈ ಭಾಗವು ಹಳೆಬೀಡಿನ ಗರುಡಸ್ತಂಭದ ವೃತ್ತಾಕಾರದ ರೀತಿಯಲ್ಲಿದೆ. ಆರಗ ಶಿಲ್ಪದ ವೃತ್ತಾಕಾರದ ಸ್ತಂಭದ ಬುಡದಲ್ಲಿ ಯಾವುದೇ ಚಿಕಣಿ ಶಿಲ್ಪಗಳಿಲ್ಲ ಆದರೆ ಲಿಂಗದ ಉಬ್ಬು ಶಿಲ್ಪವನ್ನು ಕಂಡರಿಸಲಾಗಿದೆ.

    ಕೆಳಭಾಗದ ಚೌಕಾಕಾರದ ಭಾಗದಲ್ಲಿ ಕೈಯಲ್ಲಿ ಹಿಡಿದಿರುವ ರುಂಡವನ್ನು ಮಹಿಳೆಯು ದೇವರಿಗೆ ಅರ್ಪಿಸಿ ಸತಿ ಹೊಗಿರಬಹುದು. ಗರುಡ ಹೋಗಿರುವಂತವರು ಶೈವರಾದಕಾರಾಗಿದ್ದು ರುಂಡವನ್ನು ಉಬ್ಬು ಶಿಲ್ಪದ ಲಿಂಗಕ್ಕೆ ಅರ್ಪಿಸಿದ್ದಾರೆ.

ಹೊಯ್ಸಳರ ಕಾಲದವರೆಗೆ ಇದ್ದಂತಹ ಗರುಡ ಪದ್ಧತಿ ವಿಜಯನಗರ ಅರಸರ ಕಾಲದಲ್ಲಿಯೂ ಮುಂದುವರೆಯಿತು ಎಂದು ಈ ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆಯಿಂದ ತಿಳಿಯಬಹುದಾಗಿದೆ. ಹಳೇಬೀಡು ಮತ್ತು ಆರಗದ ಸ್ಥಂಬಗಳನ್ನು ಗಮನಿಸಿದಾಗ ಒಟ್ಟಾರೆಯಾಗಿ ಗರುಡ ಪದ್ಧತಿಯಲ್ಲಿ ಇದೇ ರೀತಿಯ ಸ್ತಂಭಳನ್ನು ಸ್ಥಾಪಿಸಿತಿದ್ದಿರಬೇಕು ಎಂಬುದನ್ನು ಊಹಿಸಬಹುದಾಗಿದೆ.

ಈ ಗರುಡ ಪದ್ಧತಿಯ ಸ್ಮಾರಕ ಶಿಲ್ಪದ ಬಗ್ಗೆ ಮಾಹಿತಿಯನ್ನು ಒದಗಿಸಿದ ಡಾ.ದೇವರಾಜಸ್ವಾಮಿ, ಡಾ. ಜಗದೀಶ, ಟಿ.ಎಂ.ಕೇಶವ, ಡಾ.ಗಂಗಾAಬಿಕೆ ಗೋವರ್ಧನ, ರಮೇಶ ಹಿರೇಜಂಬೂರು, ಶಶಿಧರ ಹಾಗೂ ಮೋಹನ್ ಇವರುಗಳಿಗೆ ಪುರಾತತ್ತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಬಳ್ಳಾರಿ ನಿರ್ದೇಶಕರಾದ ಡಾ.ಆರ್.ಶೇಜೇಶ್ವರ ಧನ್ಯವಾದಗಳನ್ನು ತಿಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!