ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ ವಿಚ್ಚಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ: ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು, (ಸೆ15) ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. 

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾರಿತ್ರಿಕ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಉದ್ಘಾಟಿಸಿ ಮಾತನಾಡಿದರು. 

ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ. ಆ ಮೂಲಕ ಸಮಾಜ ಒಡೆಯುವ ದುಷ್ಟರ ಷಡ್ಯಂತ್ರ ಸೋಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಎಂದರು. 

ನಮ್ಮ ಬುದ್ದ, ಬಸವಣ್ಣನ ಕಾಲದಲ್ಲೇ ನಮ್ಮಲ್ಲಿ ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆ ಇತ್ತು. ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ಸಾಂಸ್ಥಿಕ ಸಂಕೇತ ಎಂದರು.

1949ರ ನವೆಂಬರ್ 25ನೇ ತಾರೀಕಿನಂದು ಬಾಬಾ ಸಾಹೇಬರು ಮಾಡಿದ ಭಾಷಣವನ್ನು ಪ್ರಸ್ತಾಪಿಸಿದ ಸಿಎಂ, ಆರ್ಥಿಕ-ಸಾಮಾಜಿಕ ಪ್ರಜಾಪ್ರಭುತ್ವ ಎಲ್ಲರಿಗೂ ಸಿಕ್ಕಾಗ ಮಾತ್ರ ರಾಜಕೀಯ ಸ್ವಾತಂತ್ರಕ್ಕೆ ಅರ್ಥ ಬರುತ್ತದೆ. ತಾರಾತಮ್ಯ ಭಾರತದಲ್ಲಿ ಆಚರಣೆಯಲ್ಲಿ ಇರುವವರೆಗೂ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದರು. 

ಸಂವಿಧಾನದ ಪೀಠಿಕೆಯಲ್ಲಿ ಅತ್ಯಂತ ದೊಡ್ಡ ಮೌಲ್ಯಗಳಿವೆ. ಹೀಗಾಗಿಯೇ ಪ್ರತಿ ಶಾಲಾ ಕಾಲೇಜುಗಳಲ್ಲಿ ಇದನ್ನು ಓದಿಸುವ, ಅರ್ಥೈಸುವ , ಪಾಲಿಸುವ ಪ್ರಯತ್ನ‌ ಮುನ್ನಡೆಸಿದ್ದೇವೆ ಎಂದರು.

ನಮ್ಮ ರಾಷ್ಟ್ರಗೀತೆ ಮತ್ತು ನಮ್ಮ‌ ನಾಡಗೀತೆಯಲ್ಲಿರುವ ಭಾರತ ಮತ್ತು ಕರ್ನಾಟಕ ನಮ್ಮದಾಗಬೇಕು. ಯಾವುದೇ ತಾರತಮ್ಯ ಇಲ್ಲದ ಶಾಂತಿಯ ತೋಟ ನಮ್ಮದಾಗಬೇಕು ಎಂದು ಕರೆ ನೀಡಿದರು. 

ಸಮಾಜದಲ್ಲಿರುವ ಅಸಮಾನತೆ ತೊಡೆದು ಹಾಕುವವರೆಗೂ ದೇಶಕ್ಕೆ ಸಿಕ್ಕ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ. ನಮ್ಮ ಸರ್ಕಾರ ಸಮಾನತೆ ಸಾಧಿಸುವ ದಿಕ್ಕಿನಲ್ಲಿ, ಎಲ್ಲಾ ಜಾತಿ-ಎಲ್ಲಾ ಧರ್ಮದ ಬಡವರಿಗೆ, ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ.

ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ ವಿಚ್ಚಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಬೇಕು. ಬನ್ನಿ ಎದ್ದು ನಿಲ್ಲೋಣ ಎಂದು ಕರೆ ನೀಡಿದರು.

ಏಕತೆ ಭಜನೆ ಮಾಡುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳು ಸಾಮಾಜಿಕ ನ್ಯಾಯ, ಸಮಾನತೆಯ ವಿರೋಧಿಗಳು. ಇವರು ಸಮಾಜದ ಶತ್ರುಗಳು ಇವರನ್ನು ಮೆಟ್ಟಿ ನಿಲ್ಲದ ಹೊರತು ಮಹಿಳೆಯರ, ದಲಿತರ, ಹಿಂದುಳಿದವರ ಹಕ್ಕುಗಳು, ಅವಕಾಶಗಳು ಸಿಗಲು ಸಾಧ್ಯವಾಗುವುದಿಲ್ಲ ಎಂದರು. 

ಈ BJP ಮತ್ತು ಇವರ ಜೊತೆಗಿರುವ ವಿಚ್ಚಿದ್ರಕಾರಕ ಶಕ್ತಿಗಳು ಬಡವರ, ಮಧ್ಯಮ ವರ್ಗದ ವಿರೋಧಿಗಳು. ಇವರು ಬಡವರ ಪರವಾದ ಕಾರ್ಯಕ್ರಮಗಳು ಜಾರಿ ಆಗಲು ಬಿಡುವುದಿಲ್ಲ. ಆದ್ದರಿಂದ ಇವರನ್ನು ನಾವು ಸೋಲಿಸಬೇಕು ಎಂದರು.

20 ಲಕ್ಷಕ್ಕೂ ಹೆಚ್ಚು ಮಂದಿಯ ಮಾನವ ಸರಪಳಿ ರಚಿಸಿರುವುದೇ ದುಷ್ಟಶಕ್ತಿಗಳಿಗೆ ಎಚ್ಚರಿಕೆ ನೀಡಿ ಮನುಷ್ಯ ಸಮಾಜವನ್ನು ಬೆಸೆಯುವುದಾಗಿದೆ ಎಂದರು. 

ಉದ್ಘಾಟನೆ ಸಂದರ್ಭದಲ್ಲಿ ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಪ್ಪ,  ಪೌರ ಕಾರ್ಮಿಕ ತಾಯಂದಿರಾದ ನಾಗಲಕ್ಷ್ಮಿ, ಮಂಜುಳ ಹಾಗೂ ತೃತೀಯ ಲಿಂಗಿ ಪ್ರಿಯಾಂಕ ಮತ್ತು ಇಬ್ಬರು ವಿಶೇಷ ಚೇತನ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಡ-ಬಲದಲ್ಲಿ ನಿಂತು ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣಗೊಳಿಸಿದರು.

ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ರುದ್ರಪ್ಪ ಲಮಾಣಿ,  ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ಯು.ಬಿ.ವೆಂಕಟೇಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ ಮತದಾರರ ವಿವರ ಪ್ರಕಟ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ

ಸುಪ್ರೀಂ ಕೋರ್ಟ್ (Supreme Court) ಕಟ್ಟುನಿಟ್ಟಾದ ಆದೇಶದ ನಂತರ ಬಿಹಾರದಲ್ಲಿ ಕರಡು ಪಟ್ಟಿಯಿಂದ ತೆಗೆದುಹಾಕಲಾದ 65 ಲಕ್ಷ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ (Election Commission) ಬಿಡುಗಡೆ ಮಾಡಿದೆ.

[ccc_my_favorite_select_button post_id="112766"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!