ಬೆಂಗಳೂರು, (ಸೆ.15): ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ವೇಳೆ ಯುವಕನೋರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಳಿತುಕೊಂಡಿದ್ದ ವೇದಿಕೆಯ ಮೇಲೆ ಏಕಾಏಕಿ ಏರಿ ಆತಂಕ ಸೃಷ್ಟಿಸಿದ್ದಾನೆ.
ವಿಧಾನಸೌಧದ ಮುಂದೆ ನಡೆಯುತ್ತಿದ್ದ ಕಾರ್ಯಕ್ರಮದ ವೇದಿಕೆ ಮೇಲೆ ಶಾಲು ಹಿಡಿದು ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯುವಕ ಯತ್ನಿಸಿದ್ದು ವೇದಿಕೆ ಮೇಲ್ಭಾಗಕ್ಕೆ ಏರಿದ್ದಾನೆ. ಈ ವೇಳೆ ವೇದಿಕೆ ಮೇಲಿದ್ದ ಹಲವು ಗಣ್ಯರು ತಬ್ಬಿಬ್ಬಾಗಿದ್ದಾರೆ.
ಸಿಎಂ ಅಂಗರಕ್ಷಕರು ಕೂಡಲೇ ಯುವಕನನ್ನ ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದರೂ ಯುವಕ ಸಿಎಂ ಕಡೆ ಶಾಲು ಎಸೆದಿದ್ದಾನೆ. ಏಕಾಏಕಿ ಯುವಕ ನುಗ್ಗಿದ ವೇಗಕ್ಕೆ ಗಣ್ಯರು ಗಲಿಬಿಲಿಗೊಂಡರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….