ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ಕಡಿತ ಮಾಡುವುದಿಲ್ಲ: ಗೃಹ ಸಚಿವ ಪರಮೇಶ್ವರ

ಬೆಂಗಳೂರು, (ಸೆ.11); ತನಿಖಾ ಸಂಸ್ಥೆಗಳ ಹಂತದಲ್ಲಿ ವಿವಿಧ ಹಗರಣಗಳ ತನಿಖೆ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ವಾರದೊಳಗೆ ಸಮಿತಿ ಸಭೆ ನಡೆಸುತ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಹಗರಣಗಳ ಪ್ರಕರಣಗಳನ್ನು ಗುರುತಿಸಿದ್ದೇವೆ.‌ ಅವುಗಳ ತನಿಖೆ ಯಾವ ಹಂತದಲ್ಲಿವೆ ಎಂಬುದನ್ನು ಪರಿಶೀಲಿಸಿ, ವರದಿಯನ್ನು ಸಚಿವ ಸಂಪುಟಕ್ಕೆ ಸಲ್ಲಿಸುತ್ತೇವೆ ಎಂದರು.

ತ್ವರಿತಗತಿಯಲ್ಲಿ ತನಿಖೆ ನಡೆಯಬೇಕು ಎಂಬ ಉದ್ದೇಶದಿಂದ ಸಮಿತಿ ರಚನೆ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪ್ರಗತಿ ಪರಿಶೀಲನೆ ವೇಳೆ ಗಮನಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ವಿಚಾರ ಕ್ಯಾಬಿನೆಟ್ ಗಮನಕ್ಕೆ ಬಂದ ಬಳಿಕ ತ್ವರಿತಗತಿಯಲ್ಲಿ ಮಾಡಲು ಸಮಿತಿ ರಚಿಸಿದ್ದಾರೆ‌ ಎಂದು ಹೇಳಿದರು.

ದ್ವೇಷದ ರಾಜಕಾರಣ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿ, ಅವರು ಏನಾದರು ಹೇಳಿಕೊಳ್ಳಲಿ. ನಮ್ಮನ್ನು ಟೀಕೆ ಮಾಡುವುದಕ್ಕೆ,‌ ಸಲಹೆ‌ ನೀಡಲು, ತಪ್ಪು ಮಾಡಿದಾಗ ಹೇಳುವುದಕ್ಕೆ ಅವರಿಗೆ ಜವಾಬ್ಧಾರಿಗಳಿರುತ್ತವೆ. ಆಡಳಿತ ನಡೆಸುವರಿಗೂ ಅವರಿಗೆ ಆದಂತಹ ಜವಾಬ್ದಾರಿಗಳಿರುತ್ತವೆ ಎಂದರು.

ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚರ್ಚೆ ಅನಗತ್ಯ.‌ ನಾವು ಜನರಿಗೆ ಕೊಟ್ಟ ಭರವಸೆಗಳನ್ನು, ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಆಡಳಿತ ಮಾಡಬೇಕು. ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸರ್ಕಾರವನ್ನು ಅಸ್ಥಿರಗೊಳಿಸಲು, ಸರ್ಕಾರದ ಕಾರ್ಯಕ್ರಮಗಳು ಅನುಷ್ಟಾನ ಆಗಬಾರದು ಎಂಬ ಉದ್ದೇಶದಿಂದ ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಇದೆಲ್ಲವನ್ನು ಬದಿಗೊತ್ತಿ ನಾವು ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸ್ಥಾನದ ಚರ್ಚೆಯ ಬಗ್ಗೆ ಶಿಸ್ತಿನ ಕ್ರಮದ ಕುರಿತು ಪಕ್ಷದ ಅಧ್ಯಕ್ಷರು ಕಡಿವಾಣ ಹಾಕುತ್ತಾರೆ. ಅಧ್ಯಕ್ಷರು ಅಮೇರಿಕ ಪ್ರವಾಸದಲ್ಲಿದ್ದು, ಬಂದನಂತರ ಈ ಬಗ್ಗೆ ಗಮನ ಹರಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.

ವಾಲ್ಮೀಕಿ ನಿಗಮ ಹಗರಣದ ಇ.ಡಿ. ಚಾರ್ಜ್‌ಶೀಟ್ ಕುರಿತು ಪ್ರತಿಕ್ರಿಯಿಸಿ, ನಾವ್ಯಾರೋ ಹೇಳಿದ ಹೇಳಿಕೆ ಮುಖ್ಯವಲ್ಲ‌. ತನಿಖಾ ಸಂಸ್ಥೆಗಳು ಸಿಕ್ಕಂತಹ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತೀರ್ಮಾನ ಮಾಡುತ್ತಾರೆ. ನಾವು ನೀಡುವ ಹೇಳಿಕೆಗಳು ಮೇಲ್ನೋಟಕ್ಕೆ ಮಾತ್ರ. ತನಿಖೆ ಕೈಗೊಂಡ ಬಳಿಕ ಸತ್ಯಾಸತ್ಯತೆ ಗೊತ್ತಾಗುತ್ತದೆ.

ಮಾಜಿ ಸಚಿವ ನಾಗೇಂದ್ರ ಅವರ ಪಾತ್ರ ಇದೆ ಎಂದು ಇ.ಡಿ.ಯವರು ಹೇಳುತ್ತಿದ್ದಾರೆ. ಬೇಕಾದಷ್ಟು ಸಲ ಹಾಗೇ ಆಗುತ್ತದೆ. ಅವರು ಹೇಳಿರುವುದಕ್ಕೆ ನಮಗೆ ಸಾಕ್ಷ್ಯ ಸಿಕ್ಕಿರುವುದಿಲ್ಲ. ನಾವು ಹೇಳಿರುವುದಕ್ಕೆ ಅವರಿಗೆ ಸಾಕ್ಷ್ಯ ಸಿಕ್ಕಿರುವುದಿಲ್ಲ. ಬೇಕಾದಷ್ಟು ಸಲ ಹೀಗಾಗಿದೆ. ವಿವಿಧ ತನಿಖಾ ಸಂಸ್ಥೆಗಳ ತನಿಖಾ ವಿಧಾನವೇ ಬೇರೆ ಇರುತ್ತದೆ. ಆ ದೃಷ್ಟಿಯಿಂದ‌ ಮಾಡುತ್ತಾರೆ. ಇ.ಡಿ.ಯವರು ಮತ್ತು ಎಸ್‌ಐಟಿಯವರು ಇಬ್ಬರು ಚಾರ್ಜ್‌ಶೀಟ್ ಸಲ್ಲಿಸುತ್ತಾರೆ ಎಂದು ಹೇಳಿದರು.

ಡಿಕೆಶಿ, ರಾಹುಲ್ ಗಾಂಧಿ ಭೇಟಿ ಆಕಸ್ಮಿಕ: ಅಮೇರಿಕಾದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಭೇಟಿಯಾಗಿರುವುದು ನನಗೆ ಗೊತ್ತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಬಂದಿರುವ ಫೋಟೊಗಳನ್ನು ಗಮನಿಸಿದ್ದೇನೆ. ಅವರು ಕುಟುಂಬ ಸಮೇತ ಅಮೇರಿಕಾ ಪ್ರವಾಸ ಹೋಗಿದ್ದಾರೆ. ಆಕಸ್ಮಿಕವಾಗಿ ಅದೇ ಹೋಟೆಲ್‌ನಲ್ಲಿ ಸಿಕ್ಕಿದ್ದಾರೆ ಎಂದರೆ, ಓಡಿ ಹೋಗಲು ಆಗುತ್ತಾ? ಅವರಿಗೆ ಸತ್ಕರಿಸಿರುತ್ತಾರೆ. ಅದು ಬಿಟ್ಟರೆ ಬೇರೆನು ಗೊತ್ತಿಲ್ಲ ಎಂದರು.

ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ಕಡಿತ ಮಾಡುವುದಿಲ್ಲ. ತೆರಿಗೆ ಪಾವತಿ ಮಾಡುತ್ತಿರುವವರು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರಲ್ಲ ಎಂಬುದು ನಿಯಮದಲ್ಲಿದೆ. ಸುಳ್ಳು ದಾಖಲೆ ಸಲ್ಲಿಸಿ, ಅಧಿಕಾರಿಗಳ ಮನವೊಲಿಸಿ ಕಾರ್ಡ್ ಪಡೆದಿರುವುದು ತಪ್ಪಲ್ಲವೇ? ಯಾರ ಕಾರ್ಡ್‌ನ್ನು ತೆಗೆಯಲು ಹೋಗುವುದಿಲ್ಲ ಎಂದ ಅವರು, ಸರ್ಕಾರ ಬಡವರ ಅನ್ನ ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದಿರುವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಏನೋ ಹೇಳುತ್ತಾರೇ ಪಾಪ. ಹೆಚ್.ಡಿ.ಕುಮಾರಸ್ವಾಮಿ ಅವರು ದೊಡ್ಡ ಜವಾಬ್ಧಾರಿಯಲ್ಲಿದ್ದಾರೆ. ರಾಜ್ಯಕ್ಕೆ ದೊಡ್ಡ ಕೈಗಾರಿಕೆ, ಸ್ಟೀಲ್ ಇಂಡಸ್ಟ್ರೀಸ್ ನೀಡಿದರೆ ಚೆಂದ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!