ಸುಳ್ಳಿನ‌ ಸರದಾರರ ಪಿತೂರಿ, ಷಡ್ಯಂತ್ರಗಳಿಗೆ ತಲೆ ಒತ್ತೆ ಇಡಬೇಡಿ: ಸಿಎಂ ಸಿದ್ದರಾಮಯ್ಯ ಕರೆ

ಮಳವಳ್ಳಿ, (ಸೆಪ್ಟೆಂಬರ್. 14): ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೇಳಿದಾಗೆಲ್ಲಾ ಅಗತ್ಯವಿದ್ದಷ್ಟು ಅನುದಾನ ನೀಡುತ್ತಲೇ ಇದ್ದೇವೆ. ಅಧಿಕಾರ ಇದ್ದಾಗ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ನಯಾಪೈಸೆ ಕೊಡದ ಸುಳ್ಳಿನ‌ ಸರದಾರರ ಪಿತೂರಿ, ಷಡ್ಯಂತ್ರಗಳಿಗೆ ತಲೆ ಒತ್ತೆ ಇಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. 

ಗಗನಚುಕ್ಕಿ ಜಲಪಾತೋತ್ಸವ 2024 ನ್ನು ಅದ್ದೂರಿ ವೇದಿಕೆಯಲ್ಲಿ ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಜನರ ಆರ್ಥಿಕ ಪ್ರಗತಿ-ಸಾಮಾಜಕ ನ್ಯಾಯ ಮತ್ತು ನಾಡಿನ ಸಮಗ್ರ ಪ್ರಗತಿ ವಿಚಾರದಲ್ಲಿ ರಾಜಿಯೇ ಇಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಘೋಷಿಸಿದರು. 

ರಾಜ್ಯದ ಎಲ್ಲಾ ಜಾತಿ, ಎಲ್ಲಾ ವರ್ಗ, ಎಲ್ಲಾ ಧರ್ಮದ ಜನರಿಗೆ ಆರ್ಥಿಕ ಶಕ್ತಿ ಕೊಡುವುದು ನಮ್ಮ ಗುರಿಯಾಗಿದೆ. ನಾವು ಜಾರಿ ಮಾಡಿರುವ ಐದೂ ಯೋಜನೆಗಳೂ ಎಲ್ಲಾ ಜಾತಿಯ ಬಡವರು ಮತ್ತು ಮಧ್ಯಮ ವರ್ಗದವರಿಗೆ ತಲುಪಿಸಿದ್ದು ಈ ಸಿದ್ದರಾಮಯ್ಯ. ನಮ್ಮ ಗ್ಯಾರಂಟಿಗಳನ್ನು ಟೀಕೆ ಮಾಡುತ್ತಾ ಇವುಗಳನ್ನು ಸ್ಥಗಿತಗೊಳಿಸಲು ಪಿತೂರಿ ಮಾಡುತ್ತಿರುವ ಬಿಜೆಪಿ, ಜೆಡಿಎಸ್ ಯಾವತ್ತೂ ಜನಪರ ಯೋಜನೆಗಳನ್ನು ಜಾರಿ ಮಾಡಲಿಲ್ಲ. ಆದ್ದರಿಂದ ಸುಳ್ಳಿನ‌ ಸರದಾರರ ಪಿತೂರಿ, ಷಡ್ಯಂತ್ರಗಳಿಗೆ ತಲೆ ಒತ್ತೆ ಇಡಬೇಡಿ ಎಂದು ಕರೆ ನೀಡಿದರು. 

ಗಗನಚುಕ್ಕಿ-ಬರಚುಕ್ಕಿ ಜಲಪಾತಗಳನ್ನು ಪ್ರವಾಸೋದ್ಯಮ ದೃಷ್ಟಿಯಿಂದ ಅಭಿವೃದ್ಧಿಗೊಳಿಸಲಾಗುವುದು‌. ಅಗತ್ಯವಿದ್ದಷ್ಟು ಹಣ ನೀಡಿ ಪ್ರವಾಸಿಗರಿಗೆ ಮೀಲಭೂತ ಸೌಕರ್ಯ ಒದಗಿಸಲಾಗುವುದು ಎಂದರು. 

ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರುತ್ತಿದ್ದೇವೆ. ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಅಗತ್ಯವಾದ ಆಕಷ್ಕವಾದ ನೂರಾರು ಸ್ಥಳಗಳಿವೆ. ಇವುಗಳ ಬೆಳವಣಿಗೆಗೆ ಎಷ್ಟು ಬೇಕಾದರೂ ಹಣ ಕೊಡಲು ಸರ್ಕಾರ ಸಿದ್ದವಿದೆ ಎಂದರು.

ದೇಶಕ್ಕೆ ಅತಿ ಹೆಚ್ವು ತೆರಿಗೆ ನೀಡುವ ರಾಜ್ಯ ಕರ್ನಾಟಕ. ಪ್ರವಾಸೋದ್ಯಮ ಬೆಳವಣಿಗೆಗೆ ಪ್ರಕೃತಿದತ್ತವಾದ ಪೂರಕ ವಾತಾವರಣವಿದೆ. ಪ್ರವಾಸೋದ್ಯಮ ಅಭಿವೃದ್ಧಿಯಿಂದ ರಾಜ್ಯದ ಆರ್ಥಿಕ ಪ್ರಗತಿಯೂ ಆಗುತ್ತದೆ ಎಂದರು. 

ವಿಸಿ ನಾಲೆಯ ಕೊನೆ  ಭಾಗಕ್ಕೆ ನೀರು ತಲುಪಿಸಲು ಕೂಡಲೇ ಪ್ರಸ್ತಾವನೆ ಸಲ್ಲಿಸಲು ಕಾವೇರಿ ನಿಗಮದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸ್ಥಳದಲ್ಲೇ ಸೂಚನೆ ನೀಡಿದರು.  

ಕೇಂದ್ರದಿಂದ ಹಣ ತಂದು ಅಭಿವೃದ್ಧಿ ಮಾಡ್ತಿಲ್ಲ ಏಕೆ?: ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನು ನಿಲ್ಲಿಸಲು ಪಿತೂರಿ ಮಾಡುತ್ತಿರುವವರು ಕೇಂದ್ರದಿಂದ ಹಣ ತಂದು ಮಂಡ್ಯದ ಅಭಿವೃದ್ಧಿಗೆ ಕೆಲಸ ಮಾತ್ರ ಮಾಡುತ್ತಿಲ್ಲ. ಆದ್ದರಿಂದ ಕೇವಲ ಮಾತಾಡಿಕೊಂಡು ಕಾಲ ಕಳೆಯುವವರಿಗೆ ರೈತರು, ಹಿಂದುಳಿದವರು, ದಲಿತರ ಪರವಾದ ಕಾಳಜಿಯೇ ಇಲ್ಲ ಎನ್ನುವುದು ಸಾಭೀತಾಗಿದೆ ಎಂದರು.

ರಾಜ್ಯದಲ್ಲಿ ಕೃಷಿ ಇಲಾಖೆ, ನೀರಾವರಿ ಇಲಾಖೆ, ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಹಿಂದುಳಿದ ವರ್ಗಗಳ ಇಲಾಖೆ, ಲೋಕೋಪಯೋಗಿ ಇಲಾಖೆಯ ಎಲ್ಲಾ ಕೆಲಸಗಳೂ ನಡೆಯುತ್ತಿವೆ. ಯಾವುದೇ ಇಲಾಖೆಯ ಒಂದೂ ಕೆಲಸವೂ ಸ್ಥಗಿತಗೊಂಡಿಲ್ಲ. ಆದ್ದರಿಂದ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಸುಳ್ಳಿನ ಸರದಾರರ ಮಾತಿಗೆ ಬೆಲೆ ಕೊಡಬೇಡಿ ಎಂದರು.

ಪೂರಿಗಾಲಿ ಏತನೀರಾವರಿ ಯೋಜನೆ ನಾನೇ ಉದ್ಘಾಟಿಸುತ್ತೇನೆ: ಪೂರಿಗಾಲಿ ಏತನೀರಾವರಿ ಯೋಜನೆಯನ್ನು ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗಲೇ ಆರಂಭಿಸಿದ್ದೆ. ಈ ಯೋಜನೆಯನ್ನು ನಾನೇ ಉದ್ಘಾಟಿಸುತ್ತೇನೆ. ಸದ್ಯದಲ್ಲೇ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು. 

ಮಳವಳ್ಳಿ ಶಾಸಕ ನರೇಂದ್ರಸ್ವಾಮಿಯವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವರಾದ ಚಲುವರಾಯಸ್ವಾಮಜ, ಶಾಸಕರುಗಳಾದ ಮಾಗಡಿ ಬಾಲಕೃಷ್ಣ, ಕೊಳ್ಳೇಗಾಲ ಕೃಷ್ಣಮೂರ್ತಿ, ಹನೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಸುದಾಮ್ ದಾಸ್, ಪ್ರಕಾಶ್ ರಾಥೋಡ್, ದಿನೇಶ್ ಗೂಳಿಗೌಡ, ಹಿರಿಯ IPS ಅಧಿಕಾರಿಗಳಾದ ಅರುಣ್ ಚಕ್ರವರ್ತಿ, ನಂಜುಂಡಸ್ವಾಮಿ ಮತ್ತು ಮುಖಂಡರಾದ ಮಳವಳ್ಳಿ ಶಿವಣ್ಣ ಸೇರಿ ಹಲವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!