ಆರಗದಲ್ಲಿ ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆ..!

ಶಿವಮೊಗ್ಗ, (ಸೆಪ್ಟೆಂಬರ್ 13): ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಂಪಿಯ ನಿರ್ದೇಶಕರಾದ(ಪುರಾತತ್ತ್ವ )(ಪ) ಡಾ.ಆರ್.ಶೇಜೇಶ್ವರ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ತೀರ್ಥಹಳ್ಳಿ ತಾಲ್ಲೂಕಿನ ಆರಗದ ವೀರಭದ್ರ ದೇವಾಲಯದ ಆವರಣದಲ್ಲಿ ಸುಮಾರು ಎರಡು ಮೀಟರ್ ಉದ್ದದ ಗ್ರಾನೈಟ್ ಶಿಲೆಯ “ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆಯಾಗಿದೆ”.

 ಶಿರ ಛೇದನ ಸ್ಮಾರಕ ಶಿಲ್ಪವು ಎರಡು ಪಟ್ಟಿಕೆಗಳಿಂದ ಕೂಡಿದ್ದು ಕೆಳಗಿನ ಪಟ್ಟಿಕೆಯಲ್ಲಿ ವೇಳಾವಳಿ/ ಗರುಡ ಹೋಗುವ ವೀರ ಕುದುರೆಯ ಮೇಲೆ ಕುಳಿತು ಕತ್ತಿಯನ್ನು ಹಿಡಿದಿದ್ದಾನೆ, ಇವನಿಗೆ ಹಿಂಭಾಗದಲ್ಲಿ ಸೇವಕ ಛತ್ರಿಯನ್ನು ಹಿಡಿದಿದ್ದಾನೆ, ಆದ್ದರಿಂದ ಇವನನ್ನು ರಾಜ ಪ್ರಮುಖನೆಂದು ತಿಳಿಯಬಹುದಾಗಿದೆ. ಹಿಂಭಾಗದಲ್ಲಿ ಮಹಿಳೆಯು ಕತ್ತಿಯನ್ನು ಹಿಡಿದು ನಿಂತಿದ್ದಾಳೆ.

 ಎರಡನೇ ಪಟ್ಟಕೆಯಲ್ಲಿ ಗರುಡ ಹೊಂದತಹ ವೀರನು ವೀರಾಸನದಲ್ಲಿ ನಿಂತಿದ್ದು ರುಂಡವನ್ನು ಕತ್ತರಿಸಲಾಗಿದ್ದು, ಬಲಗೈಯಲ್ಲಿ ಕತ್ತಿಯನ್ನು ಹಿಡಿದು ಮುಂಡದ ಮೇಲೆ ಹಲಗೆಯ ರೀತಿಯನ್ನು ಹೊತ್ತುಕೊಂಡಿದ್ದು ಇದನ್ನು ಕೈಯಲ್ಲಿ ಹಿಡಿದಿರುವಂತಿದೆ. ಈ ಶಿರ ಛೇದನ ಶಿಲ್ಪದ ಪಕ್ಕದಲ್ಲಿ ಮಹಿಳೆಯು ಶಿರ ಛೇದನವಾದ ರುಂಡವನ್ನು ಕೈಯಲ್ಲಿ ಹಿಡಿದು ನಿಂತಿದ್ದಾಳೆ.

 ಮೂರನೇ ಪಟ್ಟಿಕೆಯಲ್ಲಿ ಪಟ್ಟಿಕೆಯ ಶಿಲ್ಪಗಳ ಬದಲು ಲಿಂಗದ ರೀತಿಯಲ್ಲಿ ಇರುವ ಕಂಬವಿದ್ದು ಇದರಲ್ಲಿ ಲಿಂಗದ ಉಬ್ಬು ಶಿಲ್ಪವಿದೆ. ಈ ಲಿಂಗದ/ಕAಬದ ಮೇಲೆ ಸಮತಟ್ಟಾಗಿದೆ.

ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪದ ಮಹತ್ವ: ಆತ್ಮಬಲಿದಾನವು ಹಿಂದೂಗಳ ದೃಷ್ಟಿಯಲ್ಲಿ ಮಹತ್ವಪೂರ್ಣವಾಗಿದ್ದು, ಆತ್ಮ ಬಲಿದಾನ ಮಾಡಿಕೊಳ್ಳಲು ಶುಭ ತಿಥಿಗಳು ಒಳ್ಳೆಯವು ಎಂಬ ನಂಬಿಕೆಯಿದ್ದು, ವ್ಯಕ್ತಿಗಳು ತಮ್ಮ ಪ್ರಾಣವನ್ನು ತಾವೇ ತೆಗೆದುಕೊಳ್ಳುವಂತಹ ಅಥವಾ ಇನ್ನೊಬ್ಬರ ಸಹಾಯದಿಂದ ಮಾಡಿಕೊಳ್ಳುವಂತಹದ್ದು ಆತ್ಮ ಬಲಿದಾನ(ದೇಹತ್ಯಾಗ) ಎನ್ನಬಹುದಾಗಿದೆ.

 ಆತ್ಮಬಲಿದಾನವು ಆತ್ಮಹತ್ಯೆಗಿಂತ ವಿಶೇಷವಾಗಿದ್ದು ಇದು ಸಮಾಜದ ಒಳತಿಗೋಸ್ಕರ ಆಗಿರುವಂತಹದ್ದು ಹಾಗೂ ಪೂರ್ವ ನಿಯೋಜಿತವಾಗಿರುವಂತಹದ್ದು.

 ಈ ಆತ್ಮ ಬಲಿದಾನದಲ್ಲಿ ಹಲವು ಬಗೆಗಳಿವೆ. ಆತ್ಮಬಲಿದಾನವನ್ನು ಮಾಡಿಕೊಂಡ ವೀರರು ಯಾವುದೇ ಹೋರಾಟದಲ್ಲಿ ಹೋರಾಡಿ ಮಡಿದವರಾಗಿರುವುದಿಲ್ಲ. ಆದರೆ ಇವರು ಯಾವುದೇ ಹೋರಾಟದಲ್ಲಿ ಮಡಿದ ವೀರರಿಗಿಂತ ಕಡಿಮೆಯಿರುವುದಿಲ್ಲ. 

 ಆತ್ಮ ಬಲಿದಾನದಲ್ಲಿ ಚಿತಾಪ್ರವೇಶ, ಜಲಪ್ರವೇಶ, ಊರ್ಧ್ವಪತನದ ಬಗೆಗಳಿವೆ. ಚಿತಾ ಪ್ರವೇಶ ಎಂದರೆ ಬೆಂಕಿಗೆ ಹಾರಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು, ಜಲಪ್ರವೇಶ ಎಂದರೆ ಗಂಗೆ, ವಾರಾಣಾಸಿ, ಪ್ರಯಾಗ, ತುಂಗಭದ್ರೆ ಮೊದಲಾದೆಡೆ ನೀರಿನಲ್ಲಿ ಮುಳುಗಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು ಹಾಗೂ ಊರ್ಧ್ವ ಬಲಿದಾನವೆಂದರೆ ಬೆಟ್ಟ, ಮರ ಹಾಗೂ ದೇವಾಲಯಗಳ ಶಿಖರಗಳಿಂದ ಕೆಳಗೆ ಬಿದ್ದು ಅಥವಾ ಹಾರಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು ಎನ್ನಬಹುದು.

ಈ ಆತ್ಮಬಲಿದಾನದಲ್ಲಿ ಸಹಗಮನ ಪದ್ಧತಿ, ನಿಸಿಧಿ ಶಾಸನ ಶಿಲ್ಪಗಳು, ಸೂರ್ಯಗ್ರಹಣ ಶಾಸನ ಶಿಲ್ಪಗಳು ಇದರಲ್ಲಿ ಉರಿ ಉಯ್ಯಲೆ ಶಿಲ್ಪಗಳು, ಶೂಲ ಬಲಿ, ಶಿರ ಛೇದನ(ಬಲಿ) ಶಿಲ್ಪ, ಸಿಡಿದಲೆ ಶಾಸನ ಶಿಲ್ಪಗಳು, ಇರಿತ ಬಲಿ, ಬೆಂಕಿಬಲಿ ಶಿಲ್ಪ, ಕಿಳ್ಗುಂಟೆ, ಗರುಡ ಪದ್ಧತಿ ಹಾಗೂ ವಿಶೇಷವಾಗಿ ಚಾಟಿ ವಿಟನಿಂದ ಆತ್ಮಬಲಿದಾನ ಮಾಡಿಕೊಂಡಿದ್ದು, ಇವನ ಜೊತೆಯಲ್ಲಿ ಇವನ ಹೆಂಡತಿಯು ಸಹಗಮನ ಮಾಡಿಕೊಂಡಿರುವ ಆತ್ಮಬಲಿದಾನದ ಸ್ಮಾರಕ ಶಿಲ್ಪಮೊದಲಾದ ಆತ್ಮ ಬಲಿದಾನದ ಸ್ಮಾರಕ ಶಾಸನ ಶಿಲ್ಪಗಳು ಕರ್ನಾಟಕಲ್ಲಿ ಕಂಡುಬರುತ್ತವೆ.

ಈ ಸ್ಮಾರಕ ಶಿಲ್ಪವು ಇದುವರೆಗೂ ದೊರೆತಿರುವ ಶಿರ ಛೇದನ ಶಿಲ್ಪಗಳಲ್ಲಿ ತುಂಬಾ ಅಪರೂಪದ್ದು, ಈ ಸ್ಮಾರಕ ಶಿಲ್ಪವನ್ನು ಗರುಡ ಸ್ತಂಭವೆAದು ಕರೆಯಬಹುದು. ಕರ್ನಾಟಕದಲ್ಲಿ ಇದುವರೆಗೂ ಗರುಡರಾಗಿರುವಂತಹ ಎರಡು ಸ್ತಂಭಗಳು ಹಳೇಬೀಡು ಮತ್ತು ಅಗ್ರಹಾರ ಬಾಚಿಹಳ್ಳಿಯಲ್ಲಿ ಮಾತ್ರ ಕಂಡುಬAದಿವೆ. ಇವು ಹೊಯ್ಸಳರ ಕಾಲದ್ದಾಗಿವೆ.

     ಆರಗದಲ್ಲಿ ದೊರೆತಿರುವ ಈ ಶಿರ ಛೇದನ ಸ್ಮಾರಕ ಶಿಲ್ಪವು ಶಾಸನರಹಿತವಾಗಿದ್ದು, ಮೇಲ್ಬಾಗದಲ್ಲಿ ಲಿಂಗದ ಆಕೃತಿಯನ್ನು ಹೊಂದಿದ್ದರೂ ಹಳೇಬೀಡಿನಲ್ಲಿ ಕಂಡುಬರುವ ಸ್ತಂಭದ ರೀತಿಯಲ್ಲಿದೆ. ಕೆಳಭಾಗದಲ್ಲಿ ಚೌಕಾಕರಾವಾಗಿದ್ದು ಶಿಲ್ಪಗಳಿಂದ ಕೂಡಿದೆ.

     ಲಿಂಗದ ರೀತಿಯ ಸ್ತಂಬದ ಮೇಲ್ಬಾಗದಲ್ಲಿ ಚಪ್ಪಟೆಯಾಗಿದೆ. ಆದ್ದರಿಂದ ಇದನ್ನು ಶಿವಲಿಂಗ ಎಂದು ಹೇಳುವುದು ಕಷ್ಟವಾಗಿದೆ. ಈ ಭಾಗವು ಹಳೆಬೀಡಿನ ಗರುಡಸ್ತಂಭದ ವೃತ್ತಾಕಾರದ ರೀತಿಯಲ್ಲಿದೆ. ಆರಗ ಶಿಲ್ಪದ ವೃತ್ತಾಕಾರದ ಸ್ತಂಭದ ಬುಡದಲ್ಲಿ ಯಾವುದೇ ಚಿಕಣಿ ಶಿಲ್ಪಗಳಿಲ್ಲ ಆದರೆ ಲಿಂಗದ ಉಬ್ಬು ಶಿಲ್ಪವನ್ನು ಕಂಡರಿಸಲಾಗಿದೆ.

    ಕೆಳಭಾಗದ ಚೌಕಾಕಾರದ ಭಾಗದಲ್ಲಿ ಕೈಯಲ್ಲಿ ಹಿಡಿದಿರುವ ರುಂಡವನ್ನು ಮಹಿಳೆಯು ದೇವರಿಗೆ ಅರ್ಪಿಸಿ ಸತಿ ಹೊಗಿರಬಹುದು. ಗರುಡ ಹೋಗಿರುವಂತವರು ಶೈವರಾದಕಾರಾಗಿದ್ದು ರುಂಡವನ್ನು ಉಬ್ಬು ಶಿಲ್ಪದ ಲಿಂಗಕ್ಕೆ ಅರ್ಪಿಸಿದ್ದಾರೆ.

ಹೊಯ್ಸಳರ ಕಾಲದವರೆಗೆ ಇದ್ದಂತಹ ಗರುಡ ಪದ್ಧತಿ ವಿಜಯನಗರ ಅರಸರ ಕಾಲದಲ್ಲಿಯೂ ಮುಂದುವರೆಯಿತು ಎಂದು ಈ ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆಯಿಂದ ತಿಳಿಯಬಹುದಾಗಿದೆ. ಹಳೇಬೀಡು ಮತ್ತು ಆರಗದ ಸ್ಥಂಬಗಳನ್ನು ಗಮನಿಸಿದಾಗ ಒಟ್ಟಾರೆಯಾಗಿ ಗರುಡ ಪದ್ಧತಿಯಲ್ಲಿ ಇದೇ ರೀತಿಯ ಸ್ತಂಭಳನ್ನು ಸ್ಥಾಪಿಸಿತಿದ್ದಿರಬೇಕು ಎಂಬುದನ್ನು ಊಹಿಸಬಹುದಾಗಿದೆ.

ಈ ಗರುಡ ಪದ್ಧತಿಯ ಸ್ಮಾರಕ ಶಿಲ್ಪದ ಬಗ್ಗೆ ಮಾಹಿತಿಯನ್ನು ಒದಗಿಸಿದ ಡಾ.ದೇವರಾಜಸ್ವಾಮಿ, ಡಾ. ಜಗದೀಶ, ಟಿ.ಎಂ.ಕೇಶವ, ಡಾ.ಗಂಗಾAಬಿಕೆ ಗೋವರ್ಧನ, ರಮೇಶ ಹಿರೇಜಂಬೂರು, ಶಶಿಧರ ಹಾಗೂ ಮೋಹನ್ ಇವರುಗಳಿಗೆ ಪುರಾತತ್ತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಬಳ್ಳಾರಿ ನಿರ್ದೇಶಕರಾದ ಡಾ.ಆರ್.ಶೇಜೇಶ್ವರ ಧನ್ಯವಾದಗಳನ್ನು ತಿಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!