ಬೆಂಗಳೂರು, (ಸೆ.12): ರಾತ್ರಿ ವೇಳೆ ಮಲಗಿದ್ದ ವ್ಯಕ್ತಿಯನ್ನು ಗಮನಿಸದೆ, ಆತನ ಮೇಲೆ ಬಸ್ ಹತ್ತಿಸಿ ಸಾವಿಗೆ ಕಾರಣನಾಗಿದ್ದ ಚಾಲಕನನ್ನು ನಗರದ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿವೇಕ್ ಬಂಧಿತ ಚಾಲಕ. ಶ್ರೀನಿವಾಸಯ್ಯ ಮೃತ ವ್ಯಕ್ತಿ. ಮಳವಳ್ಳಿ ಮೂಲದ ವಿವೇಕ್ ದೊಡ್ಡಬಳ್ಳಾಪುರದಲ್ಲಿರುವ ಟ್ರಾವೆಲ್ ಕಂಪನಿಯ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ.
ಕಂಪನಿ ಉದ್ಯೋಗಿಗಳನ್ನು ಡ್ರಾಪ್ ಅಂಡ್ ಪಿಕಪ್ ಮಾಡುತ್ತಿದ್ದ. ಇದೇ ತಿಂಗಳು 5ರ ರಾತ್ರಿ ಕಾಮಾಕ್ಷಿಪಾಳ್ಯ ಬಸ್ ನಿಲ್ದಾಣ ಬಳಿ ಬಸ್ ನಿಲ್ಲಿಸಿದ್ದ. ಅದೇ ಬಸ್ನಲ್ಲಿ ರಾತ್ರಿ ಮಲಗಿದ್ದ. ಮಾರನೇ ದಿನ ಮುಂಜಾನೆ 6 ಗಂಟೆ ಸುಮಾರಿಗೆ ಎದ್ದು, ನೇರವಾಗಿ ಬಸ್ ಚಾಲನೆ ಮಾಡಿದ್ದ.
ಈ ವೇಳೆ ನಿಲ್ಲಿಸಿದ್ದ ಬಸ್ ಪಕ್ಕದಲ್ಲಿ ಮಲಗಿದ್ದ ಶ್ರೀನಿವಾಸಯ್ಯ ನಿದ್ರೆ ಮಂಪರಿನಲ್ಲಿ ಚಕ್ರದ ಕೆಳಗೆ ಹೊರಳಾಡಿದ್ದನ್ನು ಗಮನಿಸದೆ, ವಿವೇಕ್ ಬಸ್ ಚಲಾಯಿಸಿದ ಪರಿಣಾಮ ತಲೆ ಮೇಲೆ ಚಕ್ರ ಹರಿದು ಶ್ರೀನಿವಾಸಯ್ಯ ಸಾವನ್ನಪ್ಪಿದ್ದರು.
ಅಪಘಾತವೆಸಗಿರುವ ಬಗ್ಗೆ ಚಾಲಕನ ಗಮನಕ್ಕೆ ಬಂದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….<!–