ಕೇಂದ್ರ ಸರ್ಕಾರ ಪ್ಯಾಲೆಸ್ತೀನ್‌ಗೆ ಬೆಂಬಲಿಸುತ್ತೇವೆ ಎಂದು ಹೇಳಿಕೆ ಕೊಟ್ಟಿದೆ: ಗೃಹ ಸಚಿವ ಪರಮೇಶ್ವರ

ಬೆಂಗಳೂರು, (ಸೆ.18); ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ‌ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ‌ ಮಾಡಿದ್ದೇವೆ. ಈಗ ಮೆಡಿಕಲ್‌ ಶಾಪ್‌ಗಳಲ್ಲಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳಿಂದ ನಮಗೆ ಆತಂಕವಿದೆ‌ ಎಂದರು.

ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ ಎಂದು ತಿಳಿಸಿದರು.

ಪೇನ್‌ ಕಿಲ್ಲರ್ ಮಾತ್ರೆಗಳನ್ನು ಮೆಡಿಸಿನ್ ಅಂತ ಮಾರಾಟ ಮಾಡಲಾಗುತ್ತಿದೆ. ವೈದ್ಯರು ಪ್ರಿಸ್‌ಕ್ರೈಬ್ ಮಾಡಿರುವುನ್ನು ಸುಲಭವಾಗಿ ಪಡೆಯಲಾಗುತ್ತಿದೆ. ಇದಕ್ಕೆ ಕಾನೂನು ಬೇರೆ ಇದೆ. ಈ ಕುರಿತು ಡ್ರಗ್ ಕಂಟ್ರೋಲರ್ಸ್‌ಗಳಿಗೆ ಯಾವ ರೀತಿ ಹೇಳಬೇಕಾಗುತ್ತದೆ ಎಂಬುದರ ಕುರಿತು ಚರ್ಚಿಸಲಾಗುವುದು ಎಂದರು.

ರಾಜ್ಯದಲ್ಲಿ ಗಾಂಜಾ ಸೇರಿದಂತೆ ಇನ್ನಿತರ ಮಾದಕ ದ್ರವ್ಯಗಳನ್ನು ನಿಯಂತ್ರಿಸಿದ್ದೇವೆ. ಪ್ರಕರಣಗಳ ಅಂಕಿ-ಅಂಶಗಳನ್ನು ಗಮನಿಸಿದಾಗ ಬಹಳಷ್ಟು ಕಡಿಮೆಯಾಗಿದೆ. ಎಲ್ಲ ರೀತಿಯ ನಿಯಂತ್ರಣಕ್ಕೆ‌ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಸುಮಾರು ಪ್ರಕರಣಗಳಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.

ಪಿಎಸ್ಐ ಪರೀಕ್ಷೆಯನ್ನು ಸೆ.22ರಿಂದ ಸೆ.28ಕ್ಕೆ ಮುಂದೂಡಲಾಗಿತ್ತು. ಸೆ.28ರಂದು ಸಹ ಯುಪಿಎಸ್‌ಸಿ ಇಂಗ್ಲೀಷ್ ಪರೀಕ್ಷೆ ಇದೆ ಎಂಬ ಮಾಹಿತಿ ಗೊತ್ತಾದ ಕೂಡಲೇ, ಆ ದಿನವನ್ನು ಅಕ್ಟೋಬರ್ 3ಕ್ಕೆ ಮುಂದೂಡಲಾಗಿತ್ತು. ಕರ್ನಾಟಕ ಪ್ರರೀಕ್ಷಾ ಪ್ರಾಧಿಕಾರವು ಅ.3ರಂದು ಪರೀಕ್ಷೆ ನಿಗಧಿ ಪಡಿಸಿ ಅಧಿಕೃತವಾಗಿ ಪ್ರಕಟಣೆ ಮಾಡಿದೆ ಎಂದರು. 

ಮೂರು ಜಿಲ್ಲೆಗಳಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿರುವುದು ಕಂಡು ಬಂದಿದೆ. ಈ‌ ಪ್ರಕರಣಗಳಲ್ಲಿ ಎಲ್ಲರನ್ನು ಬಂಧಿಸಲಾಗಿದೆ. ‘ಕೇಂದ್ರ ಸರ್ಕಾರ ಪ್ಯಾಲೆಸ್ತೀನ್‌ಗೆ ಬೆಂಬಲಿಸುತ್ತೇವೆ ಎಂದು ಹೇಳಿಕೆ ಕೊಟ್ಟಿದೆ. ಹೀಗಾಗಿ ಇದರಲ್ಲಿ ನಮ್ಮ ತಪ್ಪೇನಿದೆ ಎಂದು ವಾದಿಸಿದ್ದಾರೆ.’ ಆದಾಗ್ಯೂ ಸಹ ಅವರನ್ನು ಬಂಧಿಸಿದ್ದೇವೆ. ಯಾರು ಈ ಸಂದರ್ಭದಲ್ಲಿ ನಿಮಗೆ ಪ್ರಚೋದನೆ ಮಾಡಿ, ಬಾವುಟ ಹಾರಿಸಲು ಹೇಳಿದರು ಎಂಬ ಕುರಿತು ಬಂಧಿತರ ವಿಚಾರಣೆ ನಡೆಯುತ್ತಿದೆ. 17ರಿಂದ 21 ವರ್ಷ ವಯಸ್ಸಿನ ಹುಡುಗರು ಇದನ್ನು ಮಾಡಿದ್ದಾರೆ ಎಂದು ಹೇಳಿದರು.

ನಾಗಮಂಗಲ‌ ಪ್ರಕರಣದಲ್ಲಿ ತನಿಖೆಗೂ ಮುನ್ನ ಕ್ಲಿನ್‌ಚಿಟ್ ಆರೋಪದ ಕುರಿತು ಪ್ರತಿಕ್ರಿಯಿಸಿ, ಇದನ್ನು ದೊಡ್ಡ ಸಮಸ್ಯೆ ಮಾಡುವ ನಿಟ್ಟಿನಲ್ಲಿ ಬಿಜೆಪಿಯವರು ಹೇಳಿಕೆ ನೀಡುತ್ತಿದ್ದಾರೆ‌. ನಾವು ಕಾನೂನು ಪ್ರಕಾರ ಏನೆಲ್ಲ‌ ಕ್ರಮ ತೆಗೆದುಕೊಳ್ಳಬೇಕು, ಅದೆಲ್ಲವನ್ನು ಕೂಡ ಮುಲಾಜಿಲ್ಲದೆ ಮಾಡಿದ್ದೇವೆ. ಮುಂದಿನ ತನಿಖೆಯಲ್ಲಿ ಏನೆಲ್ಲ ವಿಚಾರಗಳು ಹೊರ ಬರುತ್ತವೆ, ಅದರ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ.

ಯಾವುದೇ ರೀತಿಯ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನೂರು ಸಲ ಹೇಳುತ್ತೇನೆ. ದಿನಕ್ಕೆ ಒಬ್ಬೊಬ್ಬರಂತೆ ಬಿಜೆಪಿ ಮುಖಂಡರು ನಾಗಮಂಗಲ ವಿಚಾರದಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಇದರಲ್ಲಿ ಬಿಜೆಪಿಯವರು ತಮ್ಮದೇ ಆದ ಒಂದು ಡಿಸೈನ್ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ನಾಗಮಂಗಲ‌ ಗಲಾಟೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ಬಗ್ಗೆ ಕೆಲವರು ತಪ್ಪು ಹೇಳಿಕೆ ನೀಡಿದ್ದಾರೆ ಎಂದು ನಮ್ಮ ಅಧಿಕಾರಿಗಳು ಹೇಳುತ್ತಿದ್ದಾರೆ.‌ ಇದನ್ನು ಪುನರ್ ಪರಿಶೀಲಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಶಾಸಕ ಮುನಿರತ್ನನನ್ನು ಏಕಾಏಕಿ ಬಂಧಿಸಿಲ್ಲ. ಆತನ ವಿರುದ್ಧ ದೂರು ಕೊಟ್ಟಿದ್ದರು. ಇದಕ್ಕೆ ಪೂರಕವಾದ ವಿಡಿಯೋ ನೀಡಿದ್ದರು. ಅದನ್ನು ಆಧರಿಸಿ ಬಂಧಿಸಲಾಗಿದೆ. ಈಗಾಗಲೇ ಧ್ವನಿ ಮಾದರಿಯನ್ನು ಸಂಗ್ರಹಿಸಿ ಎಫ್‌ಎಸ್ಎಲ್‌ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

ಕಳೆದ ವರ್ಷ ಗಣೇಶ ಆಚರಣೆ ವೇಳೆ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಕೋಮು ಸಂಘರ್ಷಗಳಂತಹ ಘಟನೆಗಳು ಸಂಭವಿಸಿಲ್ಲ. ಈ ವರ್ಷವೂ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಅಹಿತಕರ ಘಟನೆ ಆಗಲು ಬಿಡುವುದಿಲ್ಲ ಎಂದು ಈ ಮೊದಲೇ ಹೇಳಿದ್ದೇವೆ. ಬಿಜೆಪಿಯವರು ಎಲ್ಲವನ್ನು ತಿರುಚುತ್ತಿದ್ದಾರೆ. ಇದೆಲ್ಲವನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!