Breaking news; ದೊಡ್ಡಬಳ್ಳಾಪುರ BEO ವಿರುದ್ಧ ಶಿಸ್ತುಕ್ರಮಕ್ಕೆ CEO ಶಿಫಾರಸ್ಸು..!

ದೊಡ್ಡಬಳ್ಳಾಪುರ, (ಸೆ.19); ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರಶಿಕ್ಷಣಾಧಿಕಾರಿ ಸೈಯೀದಾ ಆನೀಸ್ ಅವರ ವಿರುದ್ಧ ಶಿಸ್ತು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ CEO ಡಾ.ಅನುರಾಧ ಕೆ. ಅವರು ಶಿಕ್ಷಣ ಇಲಾಖೆ ಆಯುಕ್ತರಿಗೆ ಶಿಫಾರಸು ಮಾಡಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು, 2024ರ ಮಾರ್ಚ್-ಏಪ್ರಿಲ್ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-01 ರಲ್ಲಿ ಅನುತ್ತೀರ್ಣರಾದ ಸಿ ಮತ್ತು ಸಿ+ ಶ್ರೇಣಿ ಪಡೆದ ವಿದ್ಯಾರ್ಥಿಗಳ ಪಲಿತಾಂಶ ಸುಧಾರಣೆಗಾಗಿ ದಿನಾಂಕ: 14-06-2024 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆ-02ರಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳನ್ನು ತಯಾರಿಗೊಳಿಸಲು ಆಯಾ ಶಾಲೆಯ `ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ: 29-05-2024 ರಿಂದ 13-06-2024ರವರೆಗೆ ನಡೆಸಲು ತಿಳಿಸಿ ಕೆಲವು ಸೂಚನೆಗಳನ್ನು ಪಾಲಿಸಲು ಸೂಚಿಸಲಾಗಿರುತ್ತದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-02ರ ಪರೀಕ್ಷೆಗೆ ತಾಲ್ಲೂಕಿನಲ್ಲಿ 611 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ ಕೇವಲ 163 ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿರುವುದು ಕಂಡುಬಂದಿರುತ್ತದೆ.

ಮುಂದುವರೆದು, ದಿನಾಂಕ:12-08-2024 ರಂದು ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಸಂಬಂಧಿಸಿದಂತೆ ಪೂರ್ವಭಾವಿಯಾಗಿ ದಿನಾಂಕ:08-08-2024ರಂದು ಏರ್ಪಡಿಸಿದ್ದ ವಿಡಿಯೋ ಸಂವಾದ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 04 ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರುಗಳ ಸಭೆಯನ್ನು ಉಲ್ಲೇಖ-02 ರನ್ವಯ ಗೂಗಲ್ ಮೀಟ್ ಮುಖಾಂತರ ದಿನಾಂಕ: 09-08-2024 ರಂದು ವಿಡಿಯೋ ಸಂವಾದವನ್ನು ಆಯೋಜಿಸಲಾಗಿತ್ತು.

ಈ ಸಭೆಯಲ್ಲಿ ಶಿಕ್ಷಣ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು, ಈ ಸಭೆಯ ಸಂವಾದದಲ್ಲಿ 10ನೇ ತರಗತಿಯ 2023-24ನೇ ಸಾಲಿನ ಪರೀಕ್ಷಾ ಫಲಿತಾಂಶದ ವಿಶ್ಲೇಷಣೆ. ಕೆಲವು ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಗಣನೀಯವಾಗಿ ಕಡಿಮೆಯಾಗಲು ಕಾರಣಗಳು ಹಾಗೂ 2024-25 ನೇ ಸಾಲಿನಲ್ಲಿ ಜಿಲ್ಲೆಯ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಉತ್ತಮಪಡಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ BEO ಸೈಯಿದಾ ಅನೀಸ್ ಅವರನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢ ಶಾಲೆ ವಿಭಾಗ) ದೊಡ್ಡಬಳ್ಳಾಪುರ ಟೌನ್ ಶಾಲೆಯ ಫಲಿತಾಂಶ ಮತ್ತು ಸರ್ಕಾರಿ ಪ್ರೌಢಶಾಲೆ ಕೊನಘಟ್ಟ ದೊಡ್ಡಬಳ್ಳಾಪುರ ತಾಲ್ಲೂಕು ಈ ಶಾಲೆಗಳಲ್ಲಿ 2024ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ 01 ಮತ್ತು 02 ಬಾರಿ ನಡೆದ ಪರೀಕ್ಷಾ ಫಲಿತಾಂಶವನ್ನು ಗಣನೀಯವಾಗಿ ಕಡಿಮೆಯಾಗಿದ್ದು, ಈ ಕುರಿತಂತೆ ಪ್ರಶ್ನಿಸಿದರೆ ಸರಿಯಾದ ಮಾಹಿತಿ ಹೊಂದಿರುವುದಿಲ್ಲ ಮತ್ತು ಸಭೆಯಲ್ಲಿ ಸರಿಯಾಗಿ ಮಾಹಿತಿಗಳನ್ನು ನೀಡಿರುವುದಿಲ್ಲ.

ಅಲ್ಲದೆ ಮೇಲಾಧಿಕಾರಿಗಳ ಮಹತ್ವದ ಸಭೆಗೆ ಪೂರ್ವ ಸಿದ್ಧತೆ ಇಲ್ಲದೇ ಹಾಜರಾಗಿರುವುದು ಹಾಗೂ ಪರೀಕ್ಷೆ-1ರ ಫಲಿತಾಂಶವು ಶೇ.83.13ರಷ್ಟಿದ್ದು, ನಂತರ ಪರೀಕ್ಷೆ-2ರ ಫಲಿತಾಂಶವು ಶೇ.26.68ರಷ್ಟು ಇಳಿದಿರುವುದು ಕಂಡುಬಂದಿರುತ್ತದೆ.

ಈ ಫಲಿತಾಂಶದ ಕುರಿತಂತೆ ಶಾಲಾವಾರು, ವಿಷಯವಾರು ಮಾಹಿತಿಯನ್ನು ಹೊಂದಿರುವುದಿಲ್ಲ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು ಉತ್ತಮಗೊಳಿಸಲು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಹ ಸಮರ್ಪಕವಾಗಿ ಉತ್ತರಿಸಿರುವುದಿಲ್ಲ.

ಇಂತಹ ಇವರ ಧೋರಣೆಯು ಕರ್ತವ್ಯನಿರ್ಲಕ್ಷತೆ ಮತ್ತು ಕರ್ತವ್ಯಲೋಪವನ್ನು ತೋರಿಸುತ್ತಿದ್ದು, ಸದರಿಯವರು ಶೈಕ್ಷಣಿಕವಾಗಿ ತಾಲ್ಲೂಕಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸುವಲ್ಲಿ ಸರಿಯಾದ ಮಾರ್ಗದರ್ಶನವನ್ನು ನೀಡದೇ ಕರ್ತವ್ಯ ನಿರ್ಲಕ್ಷ್ಯತೆ ತೋರಿರುವುದು ಹಾಗೂ ಮೇಲಾಧಿಕಾರಿಗಳ ಆದೇಶಗಳನ್ನು ಉಲ್ಲಂಘನೆ ಮಾಡಿರುವುದು ಮೆಲ್ನೋಟಕ್ಕೆ ಕಂಡುಬಂದಿರುತ್ತದೆ. ಆದ್ದರಿಂದ BEO ಸೈಯೀದಾ ಅನೀಸ್ ಅವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!