ಬೆಂಗಳೂರು, (ಸೆ.20); ಒಕ್ಕಲಿಗ ಸಮುದಾಯದ ಹೆಣ್ಣುಮಕ್ಕಳ ವಿರುದ್ಧ ತುಚ್ಛವಾಗಿ ಮಾತನಾಡಿರುವ ಆರೋಪ ಎದುರಿಸುತ್ತಿರುವ ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸುವಂತೆ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರು, ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.
ಇಂದು ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಈ ವೇಳೆ ಮಾಜಿ ಸಚಿವ ಮುನಿರತ್ನ ಅವರ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಮನವಿ ಸಲ್ಲಿಸಿತು.
ಸಚಿವರುಗಳಾದ ಕೃಷ್ಣ ಭೈರೇಗೌಡ, ಎಂಸಿ ಸುಧಾಕರ್, ಎಂಎಲ್ಸಿ ಪುಟ್ಟಣ್ಯ ಶಾಸಕರಾದ ರಂಗನಾಥ್, ಶರತ್ ಬಚ್ಚೇಗೌಡ, ದೊಡ್ಡಬಳ್ಳಾಪುರದ ಟಿ.ವೆಂಕಟರಮಣಯ್ಯ, ಸೇರಿದಂತೆ ಹಲವರನ್ನೊಳಗೊಮಡ ನಿಯೋಗ ಸಿಎಂಗೆ ಮನವಿ ಸಲ್ಲಿಸಿತು
ಮತ್ತೊಂದೆಡೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಜೈಲು ಸೇರಿದ್ದರು. ನಿನ್ನೆ ಮುನಿರತ್ನಗೆ ಜಾಮೀನು ಮಂಜೂರಾಗಿ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಆದರೆ ಇಂದು ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಮುನಿರತ್ನರವರನ್ನು ಮತ್ತೆ ಅರೆಸ್ಟ್ ಮಾಡಿದ್ದಾರೆ.