ಬೃಹತ್ ಪರಿಶಿಷ್ಟ ಜಾತಿ/ವರ್ಗ ಎಂಎಸ್ಎಂಇ ಸಮಾವೇಶ

ಬೆಂಗಳೂರು, (ಸೆ.21): ಪರಿಶಿಷ್ಟ ಜಾತಿ/ವರ್ಗಗಳ ಉದ್ಯಮಿಗಳಿಗೆ ಸೂಕ್ತ ತರಬೇತಿಯ ಅಗತ್ಯವಿದೆ. ಈ ಸಂಬಂಧ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಚರ್ಚಿಸಿ ಈ ವ್ಯವಸ್ಥೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಕರ್ನಾಟಕ ದಲಿತ ಉದ್ಯಮಿಗಳ ಸಂಘಟನೆ (ಕೆಇಡಿಎ) ಏರ್ಪಡಿಸಿದ್ದ ಬೃಹತ್ ಪ.ಜಾತಿ/ವರ್ಗಗಳ ಎಂಎಸ್ಎಂಇ ಸಮಾವೇಶದಲ್ಲಿ ಅವರು ಮಾತನಾಡಿದರು.

ಸರಿಯಾದ ರೀತಿಯಲ್ಲಿ ತರಬೇತಿ ನೀಡುವುದರಿಂದ ಪರಿಶಿಷ್ಟ ಉದ್ಯಮಿಗಳನ್ನು ಇನ್ನೂ ಹೆಚ್ಚು ಮಾಡಬಹುದು ಎಂದು ಅವರು ಹೇಳಿದರು.
ಉದ್ಯಮ ಕ್ಷೇತ್ರದಲ್ಲಿ ಪ.ಜಾತಿ/ವರ್ಗಗಳ ಉದ್ಯಮಶೀಲರ ಬೆಳವಣಿಗೆಗೆ ಸರಕಾರ ಒತ್ತಾಸೆಯಾಗಿದೆ.

ಆರ್ಥಿಕ, ಮೂಲಸೌಕರ್ಯ, ಸ್ಟಾರ್ಟಪ್ ಹಾಗೂ ಎಂಎಸ್ಎಂಇ ಗಳಿಗೆ ನಿಯಂತ್ರಕ ವ್ಯವಸ್ಥೆ ಇತ್ಯಾದಿ ಉಪಕ್ರಮಗಳನ್ನು ಜಾರಿಗೊಳಿಸಲಾಗಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೆಐಎಡಿಬಿ, ಕೆಎಸ್ಎಸ್ಐಡಿಸಿ, ಕೆಎಸ್ಎಫ್ ಸಿ, ಕೆಯುಎಂ, ಜಿಲ್ಲಾ ಕೈಗಾರಿಕಾ ಕೇಂದ್ರಗಳು ಉದ್ಯಮಿಗಳ ಅಹವಾಲುಗಳನ್ನು ನಿಯಮಿತವಾಗಿ ಆಲಿಸುತ್ತಿವೆ ಎಂದು ವಿವರಿಸಿದರು.

ಕೆಐಎಡಿಬಿ ಪ್ಲಾಟ್ ಹಾಗೂ ಕೆಎಸ್ ಎಸ್ಐಡಿಸಿ ಷೆಡ್ ಗಳ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿ/ವರ್ಗದ ಉದ್ಯಮಿಗಳಿಗೆ ಶೇ 24.1ರಷ್ಟು ಮೀಸಲು, ಭೂಮಿ ಮಂಜೂರಾತಿಯಲ್ಲಿ ಶೇ 75ರಷ್ಟು ಸಬ್ಸಿಡಿ, ಕೆಎಸ್ ಎಫ್ ಸಿಯಿಂದ ರೂ 10 ಕೋಟಿಯವರೆಗೆ ಶೇ 4ರಷ್ಟು ಬಡ್ಡಿ ದರದಲ್ಲಿ ಸಾಲ ನೆರವು, ಮಾರ್ಜಿನ್ ಮನಿಯ ಶೇ 50ರಷ್ಟು (ಗರಿಷ್ಠ ರೂ 75 ಲಕ್ಷ) ಬೀಜಧನದ ನೆರವು ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ ಎಂದರು.

ಎಸ್ಸಿ, ಎಸ್ಟಿ ಉದ್ಯಮಿಗಳಿಗೆ ಮಾಡಿರುವ ನಿವೇಶನ ಹಂಚಿಕೆಯಡಿ ಕೆಐಎಡಿಬಿಗೆ ಸರಕಾರದಿಂದ 900 ಕೋಟಿ ರೂಪಾಯಿ ಬಾಕಿ ಇದೆ. ಹಾಗೆಂದು, ನಾವು ನೆರವನ್ನು ನಿಲ್ಲಿಸಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಸಲಹೆಗಾರರಾಗಿರುವ ವೆಂಕಟಯ್ಯನವರಂಥವರು ಇತ್ತ ಗಮನ ಹರಿಸಿ, ಒತ್ತಡ ಹೇರಿದರೆ ಕೈಗಾರಿಕಾ ಇಲಾಖೆಗೂ ಒಳ್ಳೆಯದಾಗುತ್ತದೆ ಎಂದು ಅವರು ನುಡಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ.ಜಾತಿ ಉದ್ಯಮಿಗಳಿಗೆ ಶೇ 75ರಷ್ಟು ಸಬ್ಸಿಡಿ ಬಾಬ್ತಿಗೆ ರೂ 245.50 ಕೋಟಿ, ಹಾಗೆಯೇ ಪ.ವರ್ಗದವರಿಗೆ ರೂ 62.24 ಕೋಟಿ ಬಿಡುಗಡೆಗೊಳಿಸಿದೆ. ಜೊತೆಗೆ, ಕೈಗಾರಿಕಾ ಪ್ರದೇಶಗಳ ಸಿಎ ಪ್ಲಾಟ್ ಗಳಲ್ಲಿ ಶೇ 24.1ರಷ್ಟನ್ನು ಈ ಸಮುದಾಯಗಳಿಗಾಗಿ ಮೀಸಲಾತಿ ನಿಗದಿಗೊಳಿಸಿ, ಹಂಚಿಕೆ ಮಾಡಲಾಗುತ್ತಿದೆ ಎಂದು ಪಾಟೀಲ ಹೇಳಿದರು.

ಕಳೆದ 15 ತಿಂಗಳ ಅವಧಿಯಲ್ಲಿ ಸರ್ಕಾರವು ಪರಿಶಿಷ್ಟ ಜಾತಿಯ 121 ಉದ್ಯಮಿಗಳಿಗೆ 130 ಎಕರೆ ಹಾಗೂ ಪರಿಶಿಷ್ಟ ವರ್ಗದ 39 ಉದ್ಯಮಿಗಳಿಗೆ 42 ಎಕರೆ ಭೂಮಿ ಮಂಜೂರು ಮಾಡಿದೆ ಎಂದು ಇದೇ ವೇಳೆ ತಿಳಿಸಿದರು.

ಕೇಂದ್ರ ಸಚಿವೆ ಶೋಭಾ‌‌ ಕರಂದ್ಲಾಜೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಮಹೇಶ, ಕೋಲಾರ ಸಂಸದ ಮಲ್ಲೇಶ ಬಾಬು, ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ, ರಾಜ್ಯಸಭಾ ಮಾಜಿ ಸದಸ್ಯ ಡಾ.ಎಲ್.ಹನುಮಂತಯ್ಯ, ಸಿ.ಜಿ.ಶ್ರೀನಿವಾಸನ್ ಮತ್ತಿತರರು ಇದ್ದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!