ಬೃಹತ್ ಪರಿಶಿಷ್ಟ ಜಾತಿ/ವರ್ಗ ಎಂಎಸ್ಎಂಇ ಸಮಾವೇಶ

ಬೆಂಗಳೂರು, (ಸೆ.21): ಪರಿಶಿಷ್ಟ ಜಾತಿ/ವರ್ಗಗಳ ಉದ್ಯಮಿಗಳಿಗೆ ಸೂಕ್ತ ತರಬೇತಿಯ ಅಗತ್ಯವಿದೆ. ಈ ಸಂಬಂಧ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಚರ್ಚಿಸಿ ಈ ವ್ಯವಸ್ಥೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಕರ್ನಾಟಕ ದಲಿತ ಉದ್ಯಮಿಗಳ ಸಂಘಟನೆ (ಕೆಇಡಿಎ) ಏರ್ಪಡಿಸಿದ್ದ ಬೃಹತ್ ಪ.ಜಾತಿ/ವರ್ಗಗಳ ಎಂಎಸ್ಎಂಇ ಸಮಾವೇಶದಲ್ಲಿ ಅವರು ಮಾತನಾಡಿದರು.

ಸರಿಯಾದ ರೀತಿಯಲ್ಲಿ ತರಬೇತಿ ನೀಡುವುದರಿಂದ ಪರಿಶಿಷ್ಟ ಉದ್ಯಮಿಗಳನ್ನು ಇನ್ನೂ ಹೆಚ್ಚು ಮಾಡಬಹುದು ಎಂದು ಅವರು ಹೇಳಿದರು.
ಉದ್ಯಮ ಕ್ಷೇತ್ರದಲ್ಲಿ ಪ.ಜಾತಿ/ವರ್ಗಗಳ ಉದ್ಯಮಶೀಲರ ಬೆಳವಣಿಗೆಗೆ ಸರಕಾರ ಒತ್ತಾಸೆಯಾಗಿದೆ.

ಆರ್ಥಿಕ, ಮೂಲಸೌಕರ್ಯ, ಸ್ಟಾರ್ಟಪ್ ಹಾಗೂ ಎಂಎಸ್ಎಂಇ ಗಳಿಗೆ ನಿಯಂತ್ರಕ ವ್ಯವಸ್ಥೆ ಇತ್ಯಾದಿ ಉಪಕ್ರಮಗಳನ್ನು ಜಾರಿಗೊಳಿಸಲಾಗಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೆಐಎಡಿಬಿ, ಕೆಎಸ್ಎಸ್ಐಡಿಸಿ, ಕೆಎಸ್ಎಫ್ ಸಿ, ಕೆಯುಎಂ, ಜಿಲ್ಲಾ ಕೈಗಾರಿಕಾ ಕೇಂದ್ರಗಳು ಉದ್ಯಮಿಗಳ ಅಹವಾಲುಗಳನ್ನು ನಿಯಮಿತವಾಗಿ ಆಲಿಸುತ್ತಿವೆ ಎಂದು ವಿವರಿಸಿದರು.

ಕೆಐಎಡಿಬಿ ಪ್ಲಾಟ್ ಹಾಗೂ ಕೆಎಸ್ ಎಸ್ಐಡಿಸಿ ಷೆಡ್ ಗಳ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿ/ವರ್ಗದ ಉದ್ಯಮಿಗಳಿಗೆ ಶೇ 24.1ರಷ್ಟು ಮೀಸಲು, ಭೂಮಿ ಮಂಜೂರಾತಿಯಲ್ಲಿ ಶೇ 75ರಷ್ಟು ಸಬ್ಸಿಡಿ, ಕೆಎಸ್ ಎಫ್ ಸಿಯಿಂದ ರೂ 10 ಕೋಟಿಯವರೆಗೆ ಶೇ 4ರಷ್ಟು ಬಡ್ಡಿ ದರದಲ್ಲಿ ಸಾಲ ನೆರವು, ಮಾರ್ಜಿನ್ ಮನಿಯ ಶೇ 50ರಷ್ಟು (ಗರಿಷ್ಠ ರೂ 75 ಲಕ್ಷ) ಬೀಜಧನದ ನೆರವು ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ ಎಂದರು.

ಎಸ್ಸಿ, ಎಸ್ಟಿ ಉದ್ಯಮಿಗಳಿಗೆ ಮಾಡಿರುವ ನಿವೇಶನ ಹಂಚಿಕೆಯಡಿ ಕೆಐಎಡಿಬಿಗೆ ಸರಕಾರದಿಂದ 900 ಕೋಟಿ ರೂಪಾಯಿ ಬಾಕಿ ಇದೆ. ಹಾಗೆಂದು, ನಾವು ನೆರವನ್ನು ನಿಲ್ಲಿಸಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಸಲಹೆಗಾರರಾಗಿರುವ ವೆಂಕಟಯ್ಯನವರಂಥವರು ಇತ್ತ ಗಮನ ಹರಿಸಿ, ಒತ್ತಡ ಹೇರಿದರೆ ಕೈಗಾರಿಕಾ ಇಲಾಖೆಗೂ ಒಳ್ಳೆಯದಾಗುತ್ತದೆ ಎಂದು ಅವರು ನುಡಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ.ಜಾತಿ ಉದ್ಯಮಿಗಳಿಗೆ ಶೇ 75ರಷ್ಟು ಸಬ್ಸಿಡಿ ಬಾಬ್ತಿಗೆ ರೂ 245.50 ಕೋಟಿ, ಹಾಗೆಯೇ ಪ.ವರ್ಗದವರಿಗೆ ರೂ 62.24 ಕೋಟಿ ಬಿಡುಗಡೆಗೊಳಿಸಿದೆ. ಜೊತೆಗೆ, ಕೈಗಾರಿಕಾ ಪ್ರದೇಶಗಳ ಸಿಎ ಪ್ಲಾಟ್ ಗಳಲ್ಲಿ ಶೇ 24.1ರಷ್ಟನ್ನು ಈ ಸಮುದಾಯಗಳಿಗಾಗಿ ಮೀಸಲಾತಿ ನಿಗದಿಗೊಳಿಸಿ, ಹಂಚಿಕೆ ಮಾಡಲಾಗುತ್ತಿದೆ ಎಂದು ಪಾಟೀಲ ಹೇಳಿದರು.

ಕಳೆದ 15 ತಿಂಗಳ ಅವಧಿಯಲ್ಲಿ ಸರ್ಕಾರವು ಪರಿಶಿಷ್ಟ ಜಾತಿಯ 121 ಉದ್ಯಮಿಗಳಿಗೆ 130 ಎಕರೆ ಹಾಗೂ ಪರಿಶಿಷ್ಟ ವರ್ಗದ 39 ಉದ್ಯಮಿಗಳಿಗೆ 42 ಎಕರೆ ಭೂಮಿ ಮಂಜೂರು ಮಾಡಿದೆ ಎಂದು ಇದೇ ವೇಳೆ ತಿಳಿಸಿದರು.

ಕೇಂದ್ರ ಸಚಿವೆ ಶೋಭಾ‌‌ ಕರಂದ್ಲಾಜೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಮಹೇಶ, ಕೋಲಾರ ಸಂಸದ ಮಲ್ಲೇಶ ಬಾಬು, ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ, ರಾಜ್ಯಸಭಾ ಮಾಜಿ ಸದಸ್ಯ ಡಾ.ಎಲ್.ಹನುಮಂತಯ್ಯ, ಸಿ.ಜಿ.ಶ್ರೀನಿವಾಸನ್ ಮತ್ತಿತರರು ಇದ್ದರು.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!