ದೊಡ್ಡಬಳ್ಳಾಪುರ ಬಳಿ ಕ್ವಿನ್ ಸಿಟಿ: ಹೇಗಿರುತ್ತೆ ಗೊತ್ತಾ..? ವಿಡಿಯೋಗಳನ್ನು ನೋಡಿ

ಬೆಂಗಳೂರು: ಜ್ಞಾನ, ಆರೋಗ್ಯ ಮತ್ತು ಸಂಶೋಧನೆಯನ್ನು ಸಮಗ್ರವಾಗಿ ಸಂಯೋಜಿಸಲಿರುವ, ರಾಜ್ಯದ ಅರ್ಥ ವ್ಯವಸ್ಥೆ ಮರುವ್ಯಾಖ್ಯಾನಿಸಲಿರುವ ಹಾಗೂ ಕರ್ನಾಟಕದ ವಿಶಿಷ್ಟ ಹೆಗ್ಗುರುತೂ ಆಗಲಿರುವ ಹೊಸ ʼಕ್ವಿನ್‌ ಸಿಟಿʼ ಅಂದ್ರೆ ಏನು? ಅಲ್ಲಿ ಏನಿರುತ್ತೆ?

ಬನ್ನಿ ಈ ಬಗ್ಗೆ ಬೃಹತ್ ಹಾಗೂ ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಪೂರ್ಣ ವಿವರಣೆ ನೀಡಿದ್ದಾರೆ.

ಭವಿಷ್ಯದ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ವಿಶೇಷ ವಿನ್ಯಾಸ ಮಾಡಿರುವ ಈ ಕ್ವಿನ್‌ ಸಿಟಿ-ಯು (Knowledge, Wellbeing, and Innovation City- KWIN City ) ಸುಸ್ಥಿರತೆ, ಮನೆ, ಕೆಲಸದ ಸ್ಥಳ ಮತ್ತು ಅತ್ಯಾಧುನಿಕ ನಗರ ಸೇರಿದಂತೆ ಬದುಕಿನ ವಿವಿಧ ಸಂಗತಿಗಳಲ್ಲಿ ತಂತ್ರಜ್ಞಾನದ ನೆರವಿನಿಂದ ದಕ್ಷತೆ ಹಾಗೂ ಅನುಕೂಲತೆಗಳನ್ನು ಗರಿಷ್ಠ ಪ್ರಮಾಣದಲ್ಲಿ ಸುಧಾರಿಸುವ ʼಸ್ಮಾರ್ಟ್‌ ಲಿವಿಂಗ್‌ʼ ಪರಿಕಲ್ಪನೆ ಕಾರ್ಯರೂಪಕ್ಕೆ ತರಲು ದೊಡ್ಡಬಳ್ಳಾಪುರ ಮತ್ತು ದಾಬಸ್‌ಪೇಟೆ ಮಧ್ಯೆ ಅಸ್ತಿತ್ವಕ್ಕೆ ಬರಲಿದೆ.

ಕ್ವಿನ್‌ ಸಿಟಿ ಅಂದರೆ ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆ. ಇವುಗಳ ನಡುವಣ ಸಮನ್ವಯತೆಯು ಆರ್ಥಿಕ ಬೆಳವಣಿಗೆ ಉತ್ತೇಜಿಸುವುದರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಮುನ್ನಡೆಸಲಿದೆ. ಯೋಜಿತ ನಗರವಾಗಿ  ಕ್ವಿನ್‌ ಸಿಟಿಯು ಅತ್ಯಾಧುನಿಕ ತಂತ್ರಜ್ಞಾನ ಸಂಯೋಜಿಸುವ ಮೂಲಕ ಪರಿಸರ ಸ್ನೇಹಿ ಮೂಲಸೌಲಭ್ಯಗಳ ನೆರವಿನಿಂದ ಹೊಸ-ಯುಗದ, ಸುಸ್ಥಿರ ಜೀವನಶೈಲಿ ಒದಗಿಸಲಿದೆ. ಸ್ವಾವಲಂಬನೆಯ ನೀರು ಮತ್ತು ವಿದ್ಯುತ್ ಸೌಲಭ್ಯಗಳೊಂದಿಗೆ ಭವಿಷ್ಯದ ಸ್ಮಾರ್ಟ್ ನಗರಗಳಿಗೆ ಆದರ್ಶ ಉದಾಹರಣೆಯಾಗಿರಲಿದೆ ಎಂದು ಪಾಟೀಲ ವಿವರಿಸಿದರು.

ʼಕ್ವಿನ್‌ ಸಿಟಿʼಯ ದೂರದೃಷ್ಟಿ ಸಾಕಾರಗೊಳಿಸಲಿರುವ ಪ್ರಮುಖ ಜಿಲ್ಲೆಗಳು:

ಜ್ಞಾನ ಜಿಲ್ಲೆ:  ಪ್ರತ್ಯೇಕ ಜ್ಞಾನ ಕೇಂದ್ರದೊಂದಿಗೆ, ಕ್ವಿನ್‌ ಸಿಟಿ-ಯು ಆಧುನಿಕ ಪಠ್ಯಕ್ರಮ ಮತ್ತು ಉನ್ನತ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳನ್ನು ಒಳಗೊಂಡ ಪ್ರಧಾನ ಶಿಕ್ಷಣ ಕೇಂದ್ರ  ಸ್ಥಾಪಿಸಲು ಬಯಸುತ್ತದೆ. ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಯಮಾವಳಿಗಳನ್ನು  ಆಧರಿಸಿ   ಕ್ಯಾಂಪಸ್‌ಗಳನ್ನು ನಿರ್ವಹಿಸಲು 500 ಉನ್ನತ ವಿದೇಶಿ ಶಿಕ್ಷಣ ಸಂಸ್ಥೆಗಳನ್ನು ಆಕರ್ಷಿಸುವ ಗುರಿಯನ್ನು ನಗರವು  ಹೊಂದಿದೆ. ಇದು ಕರ್ನಾಟಕವನ್ನು ಜಾಗತಿಕ ಶಿಕ್ಷಣದ ಕ್ಷೇತ್ರದ ಮುಂಚೂಣಿಗೆ ಕೊಂಡೊಯ್ಯುವ ಶೈಕ್ಷಣಿಕ ವಲಯ ಹಾಗೂ ಉದ್ಯಮದ ಪಾಲುದಾರಿಕೆಗಳನ್ನು ಉತ್ತೇಜಿಸಲಿದೆ.

ಆರೋಗ್ಯ ಜಿಲ್ಲೆ: ಜೀವ ವಿಜ್ಞಾನ (ಲೈಫ್ ಸೈನ್ಸಸ್) ಪಾರ್ಕ್  ಒಳಗೊಂಡಿರುವ  ಕ್ವಿನ್‌ ಸಿಟಿಯು ಏಷ್ಯಾದ ಪ್ರಮುಖ ಶೈಕ್ಷಣಿಕ ವೈದ್ಯಕೀಯ ಕೇಂದ್ರವಾಗಿ ಬೆಳೆಯಲಿದೆ.   ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಆಸ್ಪತ್ರೆಗಳನ್ನು ಆಕರ್ಷಿಸುವ ಮೂಲಕ ಆರೋಗ್ಯ ರಕ್ಷಣೆಯ ಭವಿಷ್ಯವನ್ನು ರೂಪಿಸಲಿದೆ. ಈ ಉಪಕ್ರಮವು ವೈದ್ಯಕೀಯ ಕ್ಷೇತ್ರದಲ್ಲಿ ಕರ್ನಾಟಕದ ಸ್ಥಾನಮಾನವನ್ನು ದೇಶೀಯವಾಗಿ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಮಟ್ಟಕ್ಕೆ ಏರಿಸಲಿದೆ. ಇದು ಆರೋಗ್ಯದ ಶ್ರೇಷ್ಠತೆಗೆ ದಾರಿದೀಪವಾಗಿರಲಿದೆ.

ನಾವೀನ್ಯತಾ ಜಿಲ್ಲೆ: ಕ್ವಿನ್‌ ಸಿಟಿಯು ಜೀವ ವಿಜ್ಞಾನ, ಭವಿಷ್ಯದ ಸಂಚಾರ, ಸೆಮಿಕಂಡಕ್ಟರ್‌, ಸುಧಾರಿತ ಪರಿಕರ, ಆಧುನಿಕ ತಯಾರಿಕೆ, ವೈಮಾಂತರಿಕ್ಷ ಮತ್ತು ರಕ್ಷಣೆ ಹಾಗೂ ಬಾಹ್ಯಾಕಾಶ ತಂತ್ರಜ್ಞಾನದಂತಹ ಪ್ರವರ್ಧಮಾನಕ್ಕೆ ಬರುತ್ತಿರುವ ಉದ್ಯಮ ವಲಯಗಳ ಅಗತ್ಯಗಳನ್ನು ಪೂರೈಸಲಿದೆ. ಜಾಗತಿಕ ಬದಲಾವಣೆಗಳು ಮತ್ತು ಮಾರುಕಟ್ಟೆ ಬೇಡಿಕೆಗಳಿಗೆ ಹೊಂದಿಕೊಳ್ಳುವ ಮೂಲಕ, ಕ್ವಿನ್‌ ಸಿಟಿಯು ವಿಶಾಲವಾದ ಉದ್ಯಮ ಕ್ಷೇತ್ರದಲ್ಲಿ ಕರ್ನಾಟಕದ ಪಾತ್ರವನ್ನು ಹೆಚ್ಚಿಸುವ ಗುರಿ  ಹೊಂದಿದೆ, ನಿರಂತರವಾದ ನಾವೀನ್ಯತೆಯ ವಾತಾವರಣ  ಉತ್ತೇಜಿಸಲಿದೆ.

ಸಂಶೋಧನಾ ಜಿಲ್ಲೆ: ಜೈವಿಕ ಔಷಧ ಮತ್ತು ವೈಜ್ಞಾನಿಕ ಸಂಶೋಧನೆ ಹೆಚ್ಚಿಸಲು ಮೀಸಲಾಗಿರುವ  ಕ್ವಿನ್‌ ಸಿಟಿಯು ಕ್ಲಿನಿಕಲ್ ಪ್ರಯೋಗ ಕೇಂದ್ರಗಳು ಮತ್ತು ಸಂಶೋಧನಾ ಪ್ರಯೋಗಾಲಯಗಳನ್ನು ಸ್ಥಾಪಿಸಲು ಅತ್ಯಾಧುನಿಕ ತಂತ್ರಜ್ಞಾನವನ್ನು ಸಂಯೋಜಿಸಲಿದೆ. ಇದು ಜಾಗತಿಕ ಜ್ಞಾನ ಆಧಾರಿತ ಆರ್ಥಿಕತೆಗೆ ಗಣನೀಯವಾಗಿ ಕೊಡುಗೆ ನೀಡುವ, ಪ್ರಕಾಶನ, ಸೆಮಿನಾರ್‌ ಮತ್ತು ಸಾರ್ವಜನಿಕ ಉಪನ್ಯಾಸಗಳ ಮೂಲಕ   ಸಂಶೋಧನೆಗಳ ಪ್ರಸಾರವನ್ನು ಉತ್ತೇಜಿಸಲಿದೆ.

ಕ್ವಿನ್‌ ಸಿಟಿ-ಯು ಅಭಿವೃದ್ಧಿಗಿಂತ ಹೆಚ್ಚಿನದಾಗಿದೆ. ಇದು ಭವಿಷ್ಯದ ಕಡೆಗಿನ ಒಂದು ದಿಟ್ಟ ಹೆಜ್ಜೆಯಾಗಿದೆ. ಶಿಕ್ಷಣ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆಗಾಗಿ ವಿಶ್ವ ದರ್ಜೆಯ ಕೇಂದ್ರವನ್ನು ನಿರ್ಮಿಸಲಿದೆ.

ಮಾಹಿತಿಗೆ  kwincity.com ಅಂತರ್ಜಾಲ ತಾಣಕ್ಕೆ ಭೇಟಿ ನೀಡಿ.

ರಾಜಕೀಯ

ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಲೋಕಸಭೆ ಮತ್ತು ವಿಧಾಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇರಿಸಿರುವ ಹೆಜ್ಜೆ ಐತಿಹಾಸಿಕ ಎಂದು ಬಣ್ಣಿಸಿದ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy); ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ

[ccc_my_favorite_select_button post_id="121061"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!