ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟು, ತನಿಖೆಗೆ ಸಹಕರಿಸಿ; ನಿಖಿಲ್ ಕುಮಾರಸ್ವಾಮಿ

ವಿಜಯಪುರ; ಸಿದ್ದರಾಮಣ್ಣ ನವರೇ ಯಡಿಯೂರಪ್ಪ ಅವರ ಮೇಲೆ ಆರೋಪ ಬಂದಾಗ ತನಿಖೆಗೆ ಹೋಗಬೇಕು, ರಾಜೀನಾಮೆ ಕೊಡಬೇಕೆಂದು ಆಗ್ರಹ ಮಾಡಿದ್ರಿ, ಅವರಿಗೆ ಒಂದು ನ್ಯಾಯ, ನಿಮಗೊಂದು ನ್ಯಾಯನಾ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ( Nikhilkumaraswami ) ತರಾಟೆಗೆ ತೆಗೆದುಕೊಂಡರು.

ಈ ಕುರಿತು ವಿಜಯಪುರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು :ಮೂಡಾ ಹಗರಣದಲ್ಲಿ ಸ್ವತಃ ಈ ರಾಜ್ಯದ ಸಿಎಂ ಭಾಗಿ ಆಗಿದ್ದಾರೆ. ಸುಳ್ಳು ದಾಖಲಾತಿ ಸೃಷ್ಟಿ ಮಾಡಿ ಇವತ್ತು ಏನು ಮಾಡಿದ್ದಾರೆ ಗೊತ್ತಿದೆ. ಸಿದ್ದರಾಮಣ್ಣನವರು ( Siddaramaiah ) ಹಿರಿಯರಿದ್ದಾರೆ.ಅನುಭವಿಗಳಿದ್ದಾರೆವಕೀಲರಿದ್ದಾರೆ. ಯಡ್ಡಿಯೂರಪ್ಪ ಸಾಹೇಬ್ರ ಮೇಲೆ ಆರೋಪ ಬಂದಾಗ ನೀವು ಆರೋಪ ಮುಕ್ತವಾಗಿ ಬರುವವರೆಗೂ ರಾಜಿನಾಮೆ ಕೊಡಿ ಅಂತಾ ಹೇಳಿದ್ರು..

ರಾಜಿನಾಮೆ ಕೊಟ್ಟು ತನಿಖೆಗೆ ಸಹಕರಿಸಿ; ಆದರೆ ಇವತ್ತು ಅವರಿಗೆ ಒಂದು ನ್ಯಾಯ. ಇವರಿಗೊಂದು ನ್ಯಾಯ ಅಂತಾ ಹೇಳುತ್ತಿರುವುದು ಸರಿಯಲ್ಲ ಸಾರ್ವಜನಿಕ ಬದುಕಲ್ಲಿ ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಾ ಅವರು ಬಂದಿದ್ದಾರೆ… ತನಿಖೆ ಪಾರದರ್ಶಕವಾಗಿ ನಡೆಯಬೇಕು ಅಂದ್ರೆ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಅವರು ಆಗ್ರಹಿಸಿದರು.

ನಾವು ಪಾದಯಾತ್ರೆ ಮಾಡಿದ್ದು ಯಾವುದೋ ಒಂದು ವ್ಯಕ್ತಿಯ ಮೇಲಿನ ದ್ವೇಷದಿಂದ ಅಲ್ಲ.. ರಾಜ್ಯದ ಸಂಪತ್ತು ಲೂಟಿ ಆದ ಸಂದರ್ಭದಲ್ಲಿ ರಾಜ್ಯದ ಜನತೆಗೆ ಜಾಗೃತಿ ಮೂಡಿಸಲು ಪಾದಯಾತ್ರೆ ಮಾಡಲಾಗಿತ್ತು… ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಈ ವಿಚಾರವಾಗಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.

ರಾಜ್ಯದ ಜನತೆ ಪ್ರಶ್ನೆಗೆ ಉತ್ತರ ಕೊಡಿ; ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು. ಕುಮಾರಸ್ವಾಮಿ ಮೊದಲು ರಾಜಿನಾಮೆ ಕೊಡಲಿ ಸಚಿವ
ಎಂ.ಬಿ ಪಾಟೀಲ್ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಇದೆಲ್ಲ ಹಳೆ ಕಥೆ ಬಿಟ್ಟು ಇದೇನು ಹೊಸದೇನಲ್ಲ… ಮೈನಿಂಗ್ ದು ಹಳೆ ಕಥೆ.. ಇದನ್ನ ತಿರುಚೋದು ಬೇಡ… ರಾಜ್ಯದ ಜನತೆ ಕೇಳುತ್ತಿರುವ ಪ್ರಶ್ನೆಗೆ ಅವರು ಉತ್ತರಿಸಲಿ ಅಷ್ಟೇ. ಹೀಗಾಗಿ ರಾಜ್ಯದ ಜನತೆ ಕೇಳುವ ಪ್ರಶ್ನೆಗೆ ಮೊದಲು ಅವರು ಉತ್ತರಿಸಲಿ ಎಂದ ಕಿಡಿಕಾರಿದರು.

ನಮ್ಮ ಮೇಲೆ ಸುಳ್ಳು ದಾಖಲೆ ಹುಡುಕುವುದರಲ್ಲಿ ಕಾಂಗ್ರೆಸ್ ಸಮಯ ಕಳೆಯುತ್ತಿದ್ದಾರೆ.ಜನ 136 ಶಾಸಕರನ್ನ ಗೆಲ್ಲಿಸಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟಿದ್ದಾರೆ. ಪಾದಯಾತ್ರೆ ಯಶಸ್ಸು ಇವರಿಗೆ ಸಹಿಸಲಾಗುತ್ತಿಲ್ಲ.ಆಡಳಿತ ಪಕ್ಷ ವಿರೋಧ ಪಕ್ಷಕ್ಕೆ ಪ್ರಶ್ನೆ ಕೇಳುವಂತ ಸನ್ನಿವೇಶ ಈ ರಾಜ್ಯ ದ ಇತಿಹಾಸದಲ್ಲಿ ಮೊದಲು ಎಂದು ಕಿಡಿಕಾರಿದರು.

ದೇವೇಗೌಡರ ಕೊಡುಗೆ ಅಪಾರ;‌ ದೇವೇಗೌಡರು ಪ್ರಧಾನ ಮಂತ್ರಿಗಳಾದ ಸಂದರ್ಭದಲ್ಲಿ ಆಲಮಟ್ಟಿ ಜಲಾಶಯಕ್ಕೆ ಸಾವಿರ ಕೋಟಿ ಅನುದಾನ ಕೊಟ್ಟಿರುವುದು ಇವತ್ತಿಗೂ ಮರೆಯುವುದಕ್ಕೆ ಆಗಲ್ಲ, ಈ ಭಾಗದ ಜನತೆಯ ಹೃದಯದಲ್ಲಿ ದಟ್ಟವಾಗಿ ನಿಂತಿದೆ ಎಂದರು.ಇವೆಲ್ಲವನ್ನು ನೋಡಿದಾಗ ಇಲ್ಲಿರುವ 8 ವಿಧಾನಸಭಾ ಕ್ಷೇತ್ರ ಗಳಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಜನತಾದಳ ಪಕ್ಷ ಅತ್ಯಂತ ಪ್ರಭಾವ ಶಾಲಿಯಾಗಿ ಮುಂಬರುವ ಚುನಾವಣೆಯಲ್ಲಿ ನಾಲ್ಕಕ್ಕೆ ನಾಲ್ಕು ಕ್ಷೇತ್ರಗಳನ್ನು ಗೆಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾನೂನುನಿಗಿಂತ ದೊಡ್ಡವರು ಇಲ್ಲ; ಜಮೀರ್ ಅಹಮದ್ ಬಳ್ಳಾರಿ ಉಸ್ತುವಾರಿ ಎನ್ನುವ ಕಾರಣಕ್ಕೆ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರಕ್ಕೆ ಮಾತನಾಡಿದ ಅವರು, ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಎಷ್ಟೇ ಬಲಿಷ್ಠ, ಪ್ರಭಾವಿಗಳಿದ್ದರು ಈ ನೆಲದ ಕಾನೂನಿಗೆ ತಲೆಬಾಗಬೇಕು. ಅಂತಿಮವಾಗಿ ಕಾನೂನು ಇದೆ. ಕೋರ್ಟ್ ಇದೆ ಸೂಕ್ತ ಕ್ರಮ ಕೈಗೊಳ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ರಾಜಕೀಯ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ಕುಮಾರಣ್ಣ ಆರೋಗ್ಯ ಸರಿ ಇಲ್ಲ ಅಂತ ರಾಜ್ಯದಲ್ಲೆಡೆ ಚರ್ಚೆಗಳು ಶುರುವಾಗಿದೆ, ಅವರ ತಂದೆ ತಾಯಿ ಆಶೀರ್ವಾದ, ಭಗವಂತನ ಕೃಪೆ, ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಕುಮಾರಣ್ಣ ಆರೋಗ್ಯವಾಗಿದ್ದಾರೆ: ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="113069"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!