2024ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ…!

ಬೆಂಗಳೂರ: ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ ಗಾಂಧಿವಾದಿ ಪ್ರೊ. ಜಿ.ಬಿ. ಶಿವರಾಜು ಹಾಗೂ ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಗಳು ಆಯ್ಕೆಯಾಗಿವೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಾವಲಂಬನೆ, ಗ್ರಾಮಸ್ವರಾಜ್, ಅಸ್ಪøಶ್ಯತೆ ನಿವಾರಣೆ, ಆರ್ಥಿಕ ಚಿಂತನೆಗಳು, ಖಾದಿ ಚಟುವಟಿಕೆ, ಜೀವನ ಶಿಕ್ಷಣ ಮತ್ತಿತರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಮಹತ್ಸಾಧನೆ ಮಾಡಿದ ಮಹನೀಯರು ಹಾಗೂ ಸಂಘ ಸಂಸ್ಥೆಗಳನ್ನು ಗುರುತಿಸಿ ಗೌರವಿಸಲು ಕರ್ನಾಟಕ ರಾಜ್ಯ ಸರ್ಕಾರವು 2014 ರಲ್ಲಿ ಕರ್ನಾಟಕ ಗಾಂಧೀ ಸೇವಾ ಪ್ರಶಸ್ತಿ ಸ್ಥಾಪಿಸಿ ಆದೇಶ ಹೊರಡಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಶಸ್ತಿ ಫಲಕ ಹಾಗೂ ರೂ.5 ಲಕ್ಷ ನಗದು ಒಳಗೊಂಡಿರುವ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು 2014 ರಿಂದ ಪ್ರದಾನ ಮಾಡುತ್ತಾ ಬಂದಿದೆ.

2023 ರ ವರೆಗೆ 8 ವ್ಯಕ್ತಿಗಳು ಹಾಗೂ 2 ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 2024ನೇ ಸಾಲಿನ ಪ್ರಶಸ್ತಿಯು ಪ್ರೊ.ಜಿ.ಬಿ. ಶಿವರಾಜು, ಗೊಟ್ಟಿಕೆರೆ, ತುರುವೇಕೆರೆ ತಾಲ್ಲೂಕು, ತುಮಕೂರು ಜಿಲ್ಲೆ ಇವರಿಗೆ ಮತ್ತು ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆ ಸಂಸ್ಥೆಗೆ ವಿಂಗಡಿಸಿ ಪ್ರದಾನ ಮಾಡಲಾಗುತ್ತಿದೆ.

ಪ್ರಶಸ್ತಿ ಮೊತ್ತವನ್ನು ತಲಾ ರೂ.2.5 ಲಕ್ಷಗಳಂತೆ ಸಮನಾಗಿ ಪುರಸ್ಕಾರ ನೀಡಿ ಸ್ಮರಣಿಕೆ, ಪ್ರಶಸ್ತಿ ಪತ್ರದೊಂದಿಗೆ ಬರುವ ಅಕ್ಟೋಬರ್ 02 ಗಾಂಧಿ ಜಯಂತಿಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾದ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತ ಸನತ್ಕುಮಾರ್ ಬೆಳಗಲಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ವೂಡೆ ಪಿ.ಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಅವರು ಸದಸ್ಯರಾಗಿದ್ದರು.

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪುರಸ್ಕೃತ ಪ್ರೊ.ಜಿ.ಬಿ. ಶಿವರಾಜು: ನಿವೃತ್ತ ಉಪನ್ಯಾಸಕರಾಗಿರುವ ಪ್ರೊ. ಜಿ.ಬಿ. ಶಿವರಾಜು ಅವರು ವೃತ್ತಿ ಜೀವನದುದ್ದಕ್ಕೂ ವಿದ್ಯಾರ್ಥಿಗಳಲ್ಲಿ ಗಾಂಧಿ ವಿಚಾರಧಾರೆಯನ್ನು ರೂಪಿಸಲು ಶ್ರಮಿಸಿದ್ದಾರೆ. 73 ವರ್ಷದ ಇವರು ತಮ್ಮ ನಿವೃತ್ತಿ ವೇತನವನ್ನು ಗಾಂಧೀ ವಿಚಾರಗಳನ್ನು ಯುವ ಜನರಿಗೆ ತಲುಪಿಸಲು ವಿನಿಯೋಗಿಸುತ್ತಿದ್ದಾರೆ.

ಗಾಂಧಿ ಪ್ರಣೀತ ಸಂಘ ಸಂಸ್ಥೆಗಳು ಮತ್ತು ಸರ್ಕಾರಿ ಸಂಸ್ಥೆಗಳು, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಮದ್ಯಪಾನ ಸಂಯಮ ಮಂಡಳಿಗಳ ಸಮನ್ವಯದ ಮೂಲಕ ಗಾಂಧಿ ವಿಚಾರಗಳನ್ನು ವಿದ್ಯಾರ್ಥಿಗಳು ಮತ್ತು ಯುವ ಸಮುದಾಯಕ್ಕೆ ತಲುಪಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದಾರೆ.

ಅರಸೀಕೆರೆಯಲ್ಲಿನ ಕಸ್ತೂರ ಬಾ ಗಾಂಧಿ ಆಶ್ರಮದ ಪುನರುಜ್ಜೀವನಗೊಳಿಸಿದ್ದಾರೆ. ಮೂಡಿಗೆರೆಯ ಭಾರತಿ ಬೈಲ್ ಕೇಂದ್ರವನ್ನು ಅಭಿವೃದ್ಧಿಗೊಳಿಸಿದ್ದಾರೆ. ಮಂಡ್ಯ ಜಿಲ್ಲೆ ಮಾರ್ನೋಮಿದೊಡ್ಡಿ ಗ್ರಾಮದಲ್ಲಿ ಕಸ್ತೂರಬಾ ಗಾಂಧಿ ಟ್ರಸ್ಟ್ನ ಉಪಕೇಂದ್ರವನ್ನು ಸ್ಥಳೀಯರ ಸಹಕಾರದಿಂದ ಗ್ರಾಮೀಣ ಮಹಿಳೆಯರ ಸ್ವ ಉದ್ಯೋಗ ಕಾರ್ಯಾಗಾರವಾಗಿ ಅಭಿವೃದ್ಧಿಪಡಿಸಿದ್ದಾರೆ.

ಸಂಸ್ಥೆಯ 20 ಎಕರೆಗೂ ಹೆಚ್ಚು ಭೂಮಿಯಲ್ಲಿ ಸುಸ್ಥಿರ ಕೃಷಿ ಚಟುವಟಿಕೆಗಳನ್ನು ಸ್ಥಳೀಯರ ಸಹಕಾರದೊಂದಿಗೆ ನಿರ್ವಹಿಸುತ್ತಿದ್ದಾರೆ. ಮೈಸೂರಿನ ಮಾನಸಗಂಗೋತ್ರಿಯಲ್ಲಿ ಸಬರಮತಿ ಮಾದರಿಯ ಆಶ್ರಮ ನಿರ್ಮಾಣ.

ಗದಗ ಜಿಲ್ಲೆಯಲ್ಲಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯದ ಆವರಣದಲ್ಲಿ ಸಬರಮತಿ ಆಶ್ರಮದ ಮಾದರಿಯನ್ನು ನಿರ್ಮಿಸಿ ಗಾಂಧೀಜಿಯವರ ಬದುಕು ಸಾಧನೆಗಳನ್ನು ಯುವಜನರು ಹಾಗೂ ಗ್ರಾಮೀಣ ಭಾಗದ ಜನರಿಗೆ ಆಕರ್ಷಕವಾಗಿ ಅನಾವರಣಗೊಳಿಸಿದ್ದಾರೆ.

ಗಾಂಧೀ ಸಾಹಿತ್ಯ ಸಂಘ, ಹರಿಜನ ಸೇವಕ ಸಂಘ ಮೊದಲಾದ ಸಂಸ್ಥೆಗಳನ್ನು ಪುನರಜ್ಜೀವಗೊಳಿಸಿದ್ದಾರೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ ಬಳಿ ಕ್ವಿನ್ ಸಿಟಿ: ಹೇಗಿರುತ್ತೆ ಗೊತ್ತಾ..? ವಿಡಿಯೋಗಳನ್ನು ನೋಡಿ

ಹಾವೇರಿ ಜಿಲ್ಲೆ ಹೊಸರಿತ್ತಿ ಗ್ರಾಮದ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆ 1984 ರ ಅಕ್ಟೋಬರ್ 02 ರಂದು ಹಾವೇರಿ ಜಿಲ್ಲೆ ಹೊಸರಿತ್ತಿ ಗ್ರಾಮದಲ್ಲಿ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನವು ಸ್ಥಾಪಿಸಿದ ಗಾಂಧೀ ಗ್ರಾಮೀಣ ಗುರುಕುಲ ವಸತಿ ಶಾಲೆಯು ಕಳೆದ 39 ವರ್ಷಗಳಿಂದ ಗಾಂಧಿ ವಿಚಾರಗಳನ್ನು ಹೊಸ ಪೀಳಿಗೆಯಲ್ಲಿ ಅಳವಡಿಸಲು ಅಹರ್ನಿಶಿ ದುಡಿಯುತ್ತಿದೆ.

ಗಾಂಧೀ ಗ್ರಾಮೀಣ ಗುರುಕುಲ ವಸತಿ ಶಾಲೆಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ 5 ರಿಂದ 10 ನೇ ತರಗತಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಸಮಾಜದ ಎಲ್ಲಾ ವರ್ಗಗಳು ಸೇರಿದಂತೆ ಗ್ರಾಮೀಣ ಕೃಷಿಕ ಹಾಗೂ ಕೂಲಿಕಾರರ ಕುಟುಂಬದ ಹಿನ್ನೆಲೆಯ ಸಾವಿರಾರು ಪ್ರತಿಭಾವಂತ ಮಕ್ಕಳಿಗೆ ಊಟ, ವಸತಿ, ಇತರೆ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ.

ಇಲ್ಲಿನ ವಿದ್ಯಾರ್ಥಿಗಳು ತಾವೇ ನೇಯ್ದ ಬಟ್ಟೆಗಳನ್ನು ಧರಿಸುತ್ತಾರೆ. ತಾವೇ ಬೆಳೆದ ಕೃಷಿ ಬೆಳೆಗಳಿಂದ ತಯಾರಿಸಿದ ಆಹಾರ ಸೇವಿಸುತ್ತಾರೆ. ದೇಶದ ಆಂತರಿಕ ಕಲಹಗಳನ್ನು ಕಿತ್ತೆಸೆಯುವ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಶಿಕ್ಷಣ ಪಡೆಯುತ್ತಿದ್ದಾರೆ.

ರಾಜ್ಯ ಪಠ್ಯಕ್ರಮದ ಜೊತೆಗೆ ಗಾಂಧೀ ವಿಚಾರಧಾರೆಯ ಅನುಸಾರ ಕೃಷಿ, ನೂಲು ಮತ್ತು ನೇಯ್ಗೆ, ಹೈನುಗಾರಿಕೆ, ತೋಟಗಾರಿಕೆ ಮುಂತಾದ ಸ್ವಾವಲಂಬಿ, ಪ್ರಾಯೋಗಿಕ ಶಿಕ್ಷಣವನ್ನು ಇಲ್ಲಿನ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇಲ್ಲಿ ಶಿಕ್ಷಣ ಪಡೆದ ಹಲವಾರು ವಿದ್ಯಾರ್ಥಿಗಳು ಅತ್ಯುತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಸಂಸ್ಥೆಯು ಶಿಕ್ಷಣದ ಜೊತೆಗೆ ಜೀವನ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು 02ನೇ ಅಕ್ಟೋಬರ್ 2024 ರಂದು ಸಂಜೆ 4.30 ಗಂಟೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಸೌಧದ ಸುಲೋಚನಾ ಸಭಾಂಗಣದಲ್ಲಿ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!