ವಿರೋಧಿಗಳಿಗೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೇ ಉತ್ತರ ನೀಡಿ: ಸಿಎಂ ಸಿದ್ದರಾಮಯ್ಯ ಕರೆ

ಮೈಸೂರು ಸೆ 28: ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಾನು ಅನ್ನ ಭಾಗ್ಯ ಜಾರಿಗೆ ತರಲು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ಕಾರಣ ಎಂದು ಮುಖ್ಯಮಂತ್ರಿಗಳು ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ “ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ” ಕೃತಿ ಬಿಡುಗಡೆ ಮಾಡಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

1949 ನವೆಂಬರ್ 25 ರಂದು ಸಂವಿಧಾನ ಜಾರಿ ಸಭೆಯಲ್ಲಿ ಮಾಡಿದ ಭಾಷಣ ನನ್ನ ಗ್ಯಾರಂಟಿಗಳಿಗೆ ಸ್ಫೂರ್ತಿ.‌ ಅವಕಾಶಗಳಿಂದ ವಂಚಿತರಾಗಿರುವವರಿಗೆ ಸಮಾನ ಅವಕಾಶಗಳು ಸಿಕ್ಕಾಗ ಸಮ ಸಮಾಜ ನಿರ್ಮಾಣ ಸಾಧ್ಯ. ಬಸವಾದಿ ಶರಣರು, ಬುದ್ದ ಕೂಡ ಸಮ ಸಮಾಜದ ಬಗ್ಗೆ ಹೇಳಿದ್ದಾರೆ. ಕೇವಲ ಭಾಷಣಳಿಂದ ಸಮ ಸಮಾಜದ ಆಶಯ ಈಡೇರಲ್ಲ. ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜಾರಿ ಮಾಡಿದೆ ಎನ್ನುತ್ತಾ ತಮ್ಮ ಬಾಲ್ಯದ ಬಡತನದ ದಿನಗಳನ್ನು ಸ್ಮರಿಸಿದರು.

ವಿರೋಧಿಗಳಿಗೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೇ ಉತ್ತರ ನೀಡಿ: ಸಿಎಂ ಸಿದ್ದರಾಮಯ್ಯ ಕರೆ

ಹಬ್ಬ ಬಂದಾಗ ಮಾತ್ರ ನಮ್ಮ ಮನೆಯಲ್ಲಿ ಅನ್ನ ಮಾಡ್ತಿದ್ರು. ಅಕ್ಕ ಪಕ್ಕದವರ ಮನೆಯಲ್ಲಿ ಯಾರಿಗಾದ್ರೂ ಹುಷಾರು ತಪ್ಪಿದರೆ ಅವರಿಗೆ ಅನ್ನ ಮಾಡ್ತಿದ್ರು. ಅವರ ಮನೆ ಬಾಗಿಲಲ್ಲಿ ಒಂದು ತುತ್ತು ಅನ್ನಕ್ಕಾಗಿ ಕಾದು ನಿಂತಿದ್ದ ದಿನಗಳು ಇದ್ದವು‌. ಹೀಗೆ ಅನ್ನಕ್ಕೆ ಯಾರೂ ಕಾದು ನಿಲ್ಲಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದದ್ದನ್ನು ವಿವರಿಸಿದರು.

ಜಾತಿ ಕಾರಣಕ್ಕಾಗಿ ಸಮಾಜದಲ್ಲಿ ಆರ್ಥಿಕ‌ ಅಸಮಾನತೆ ಸೃಷ್ಟಿ ಆಯಿತು. ಆದ್ದರಿಂದ ಎಲ್ಲರಿಗೂ ಆರ್ಥಿಕ ಶಕ್ತಿ ಕೊಡುವ ಕಾರಣಕ್ಕೆ 2013-18 ರ ವರೆಗೆ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡಿದೆವು. ಹಾಗೆಯೇ ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಗ್ಯಾರಂಟಿಗಳ ಮೂಲಕ ಆರ್ಥಿಕ ಶಕ್ತಿ ನೀಡಿದೆವು ಎಂದರು.

ನಮ್ಮ ಭಾಗ್ಯಗಳನ್ನು, ಗ್ಯಾರಂಟಿಗಳನ್ನು ವಿರೋಧಿಗಳು ಆಡಿಕೊಂಡರು. ಈಗಲೂ ಅಪ ಪ್ರಚಾರ ಮಾಡುತ್ತಿದ್ದಾರೆ. ಆದರೆ ನಾನು ಹೋದಲ್ಲಿ ಬಂದಲ್ಲಿ ಗ್ಯಾರಂಟಿಗಳ ಫಲಾನುಭವಿಗಳು ಕಾಂಗ್ರೆಸ್ ಸರ್ಕಾರಕ್ಕೆ ಧನ್ಯತೆ ಅರ್ಪಿಸುತ್ತಿದ್ದಾರೆ ಎನ್ನುತ್ತಾ ಉಚಿತ ಯೋಜನೆಗಳ ಫಲಾನುಭವಿಗಳು ಗೃಹಲಕ್ಷ್ಮಿ ಹಣದಲ್ಲಿ ಮಾಡಿದ ಸಾಧನೆಗಳನ್ನು ವಿವರಿಸಿದರು.

ನರೇಗಾ ಮತ್ತು ಅನ್ನಭಾಗ್ಯ ಯೋಜನೆಗಳು ಕೊರೋನಾ ಸಂದರ್ಭದಲ್ಲಿ ಬಡವರನ್ನು, ಕೆಳ ಮಧ್ಯಮ ವರ್ಗದವರನ್ನು ಬದುಕಿಸಿತು. ಹೀಗಾಗಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹೆಚ್ಚೆಚ್ಚು ಮಾತಾಡಬೇಕು ಎಂದರು.

ಅನ್ನಭಾಗ್ಯದ ಮೇಲೆ “ಅನ್ನ” ಅಂತಲೇ ಸಿನಿಮಾ ಬಂದಿದೆ. ನಾನೂ ಸಿನಿಮಾ ನೋಡಿದೆ ಎಂದರು.

ಗ್ಯಾರಂಟಿ ಯೋಜನೆಗಳು ಪ್ರಜಾತಂತ್ರವನ್ನು ಗಟ್ಟಿಗೊಳಿಸಿವೆ. ಡಾ.ಬಿ.ಆರ್.ಅಂಬೇಡ್ಕರ್ ಆಶಯವನ್ನು ಘೋಷಿಸದೇ ಈಡೇರಿಸಿವೆ. ಬಡವರಿಗೆ ಈ ಗ್ಯಾರಂಟಿಗಳು ಸಾಮಾಜಿಕವಾಗಿ ಚಾಲನಾ ಸಾಮರ್ಥ್ಯವನ್ನು ನೀಡಿವೆ. ಸಿದ್ದರಾಮಯ್ಯ ಅವರು ಸೂಕ್ಷ್ಮ ಮನಸ್ಸಿನ ನಾಯಕರು. ಇವರಿಂದ ಮಾತ್ರ ಸಮಾಜಕ್ಕೆ ಈ ಚಾಲನಾ ಸಾಮರ್ಥ್ಯ ನೀಡಲು ಸಾಧ್ಯ. ಹಸಿದವರ ಹೊಟ್ಟೆಗೆ ಅನ್ನ ಕೊಡುವುದೇ ದೇವರಿಗೆ ಕೊಡುವ ಕಾಣಿಕೆ. ಇದನ್ನು ನಾವು ಪ್ರಾಮಾಣಿಕವಾಗಿ ಒಪ್ಪಿ, ಸಾರ್ವಜನಿಕವಾಗಿ ಹೇಳಬೇಕಿದೆ: ಕೆ.ವೈ.ನಾರಾಯಣಸ್ವಾಮಿ, ನಾಟಕಕಾರರು, ಪ್ರಾಧ್ಯಾಪಕರು.

ಉಚಿತ ಯೋಜನೆಗಳನ್ನು ಜಾರಿ ತಂದ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಮೊದಲ ಸ್ಥಾನಗಳಲ್ಲಿ ಇದ್ದು ಜಿಡಿಪಿ ಬೆಳವಣಿಗೆ ಉತ್ತಮವಾಗಿವೆ. ಉಚಿತ ಯೋಜನೆಗಳನ್ನು ಜಾರಿ ಮಾಡದ ಉತ್ತರಪ್ರದೇಶ, ಬಿಹಾರ, ಮಧ್ಯಪ್ರದೇಶ ರಾಜ್ಯಗಳು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಅತ್ಯಂತ ಕುಸಿದು, ಜಿಡಿಪಿ ಕೂಡ ಕುಸಿದಿದೆ: ಪ್ರೊ.ಎಂ.ಚಂದ್ರ ಪೂಜಾರಿ, ನಿರ್ದೇಶಕರು, ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ, ಧಾರವಾಡ.

2017 ರಿಂದ ಭಾರತದ ಆರ್ಥಿಕ ಪರಿಸ್ಥಿತಿ ಕುಸಿಯುತ್ತಾ, ಕೊರೋನಾ ಕಾಲದಲ್ಲಿ ಇನ್ನಷ್ಟು ನೆಲಕಚ್ಚಿತು. ನಿರುದ್ಯೋಗ, ಬಡತನ ಇಮ್ಮಡಿಯಾಗಿ ಜಿಡಿಪಿ ಕುಸಿದಿತ್ತು. ಇಂಥಾ ಭಯಾನಕ ಆರ್ಥಿಕ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿಗಳು ರಾಜ್ಯ ಸ್ಮಶಾನ ಆಗದಂತೆ ತಡೆದಿದೆ. ಕೊರೊನಾ ಕಾಲದ ಬಿಕ್ಕಟ್ಟುಗಳಿಗೆ ಗ್ಯಾರಂಟಿಗಳು ಪರಿಹಾರವಾಯಿತು. ಇದನ್ನು ನಾವೆಲ್ಲಾ ಧೈರ್ಯದಿಂದ ಹೇಳಬೇಕು. ದೇಶಕ್ಕೆ ಮಾದರಿಯಾದ ಈ ಯೋಜನೆಗಳು ಜನಕಲ್ಯಾಣಕ್ಕೆ ಹೇಗೆ ಸಹಕರಿಸಿತು ಎಂಬುದನ್ನು ಹೇಳಬೇಕು: ಪುರುಷೋತ್ತಮ ಬಿಳಿಮಲೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು.

ಡಾ.ಡಿ.ಶ್ರೀನಿವಾಸ ಮಣಗಳ್ಳಿ ಅವರ ಸಂಪಾದನಾ ಕೃತಿ ಬಿಡುಗಡೆಯ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪುರುಷೋತ್ತಮ ಬಿಳಿಮಲೆ, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ನಾಟಕಕಾರರಾದ ಕೆ.ವೈ.ನಾರಾಯಣಸ್ವಾಮಿ, ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾದ ಪ್ರೊ.ಎಂ.ಚಂದ್ರ ಪೂಜಾರಿ, ಕುಲಪತಿಗಳಾದ ಪ್ರೊ.ಎನ್.ಕೆ.ಲೋಕನಾಥ್, ಸಾಮಾಜಿಕ ಕಾರ್ಯಕರ್ತರಾದ ಅಹಿಂದ ಜವರಪ್ಪ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]