ಚಿಕ್ಕಮಗಳೂರು: ಕಾಂಗ್ರೆಸ್ಸಿಗೆ ಚುನಾವಣಾ ಬಾಂಡ್ ಸಿಕ್ಕಿಲ್ಲವೇ ಎಂದು ಪ್ರಶ್ನಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಮೊದಲು ಅವರು ಸೂಟ್ ಕೇಸ್, ಮೂಟೆಯಲ್ಲಿ ಕದ್ದು ತೆಗೆದುಕೊಳ್ಳುತ್ತಿದ್ದರು ಎಂದು ಟೀಕಿಸಿದರು.
ಚುನಾವಣಾ ಬಾಂಡ್ ಸಂಬಂಧ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ವಿಜಯೇಂದ್ರ, ಕಟೀಲ್ ಮೇಲೆ ಪ್ರಕರಣ ದಾಖಲಿ ಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣಾ ಬಾಂಡ್ ವೈಯಕ್ತಿಕವಲ್ಲ, ಪಾರ್ಲಿಮೆಂಟ್ನಲ್ಲಿ ಪಾಸ್ ಮಾಡಿ, ಆಯೋಗದ ಗಮನಕ್ಕೂ ಬಂದಿದೆ.
ರಾಜಕೀಯ ಪಕ್ಷಗಳಿಗೆ ನಿಧಿ ಸಂಗ್ರಹಿಸಲು ಪಾರದರ್ಶಕ ವ್ಯವಸ್ಥೆ ಹುಟ್ಟು ಹಾಕಿದ್ದು, ಆಯಾ ಪಕ್ಷಗಳ ಸಾಮರ್ಥ, ಬೆಂಬಲ, ಹಿತೈಷಿ ಗಳ ಅನುಗುಣವಾಗಿ ಚುನಾವಣಾ ಬಾಂಡ್ ಸಿಕ್ಕಿದೆ ಎಂದರು. ಮೋದಿ ಅವರು ಚುನಾವಣೆ ಯಲ್ಲೂ ಪಾರದರ್ಶಕತೆ ಇರಲಿ ಎಂದು ಚುನಾವಣಾ ಬಾಂಡ್ ತಂದರು.
ಪಾರದರ್ಶಕ ವ್ಯವಸ್ಥೆ ತಪ್ಪೋ, ಕದ್ದು ಸೂಟ್ಕೇಸ್ ತೆಗೆದೊಳಿದ್ದದ್ದು ತಪ್ಪೋ ಎಂದು ಪ್ರಶ್ನಿಸಿ ದರು. ಕಾಂಗ್ರೆಸ್ ಪಕ್ಷ ಕದ್ದು ಸೂಟೇಸ್ ತೆಗೆದುಕೊಳ್ಳಿರೋದು ಸರಿ, ಪಾರ್ದ ರ್ಶಕತೆತಪ್ಪು ಎನ್ನುತ್ತಿದೆ. ಪಾರದರ್ಶಕ ವ್ಯವಸ್ಥೆಯಲ್ಲಿ ಕದ್ದು ಯಾರಿಗೆ, ಯಾರು, ಎಷ್ಟು ಅನ್ನೋದು ಗೊತ್ತಾಗ ಬಾರದು ಅನ್ನೋದು ಕಾಂಗ್ರೆಸ್ ಉದ್ದೇಶ ಎಂದು ದೂರಿದರು.
ಇಂದು ಕಾಂಗ್ರೆಸ್ ಅಕ್ರಮಕ್ಕೆ ಪೋತ್ಸಾಹ ಕೊಡುವ ಮಾತನ್ನು ಆಡುತ್ತಿದೆ. ಪಾರದರ್ಶಕ, ಪ್ರಾಮಾಣಿಕತೆ ಹುಟ್ಟು ಹಾಕಿದವರ ಮೇಲೆ ಕೇಸ್ ದಾಖಲಿಸಿದೆ. ತೊಂದರೆ ಇಲ್ಲ, ಇವೆಲ್ಲವನ್ನೂ ನಾವು ಎದುರಿಸುತ್ತೇವೆ.
ಮುಡಾ ಪ್ರಕರಣಕ್ಕೂ ಚುನಾವಣಾ ‘ಬಾಂಡ್ ಗೂ ಹೋಲಿಕೆ ಮಾಡಬಾರದು. ಮುಡಾ ವ್ಯಕ್ತಿಗತ ಸ್ವಾರ್ಥದಿಂದ, ಡಿನೋಟಿಫೈ, ಕನ್ವರ್ಷನ್ ನಿಂದ ನಿವೇಶನ ಪಡೆಯೋವರೆಗೂ ಸ್ವಹಿತಾಸಕ್ತಿ ಇದೆ ಇದೆ ಎಂದರು.