ದೊಡ್ಡಬಳ್ಳಾಪುರದಲ್ಲಿ ಎತ್ತಿನಹೊಳೆ ನೀರು ಸಂಗ್ರಹಕ್ಕೆ 5 ಸಾವಿರ ಎಕರೆ ಭೂಮಿ ಪ್ರಸ್ತಾಪ‌; ಡಿಸಿಎಂ ಜೊತೆ ಚರ್ಚೆ ಎಂದ ಗೃಹ ಸಚಿವ ಪರಮೇಶ್ವರ

ಬೆಂಗಳೂರು: ಎತ್ತಿನಹೊಳೆ ಯೋಜನೆ ವಿಚಾರವಾಗಿ ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಗಮಿಸಿದ್ದರು.‌ ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ಕೆಲಕಾಲ ಚರ್ಚಿಸಿದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಮಾತನಾಡಿದರು.

ಎತ್ತಿನಹೊಳೆ ಯೋಜನೆ ವೇಗವಾಗಿ ಆಗುತ್ತಿಲ್ಲ.‌ ಹಣ ಬಿಡುಗಡೆ ಆಗಬೇಕಿದೆ. ದೊಡ್ಡಬಳ್ಳಾಪುರದಲ್ಲಿ ನೀರು ಸಂಗ್ರಹಕ್ಕೆ ಐದು ಸಾವಿರ ಎಕರೆ ಭೂಮಿ ಪ್ರಸ್ತಾಪ‌ ಮಾಡಲಾಗಿತ್ತು. ಅದರಲ್ಲಿ 2500 ಎಕರೆ ಭೂಮಿ ಕೊರಟಗೆರೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ.‌ ಹಿಂದಿನ ಸರ್ಕಾರ ಇದನ್ನು ಬದಲಾಯಿಸಿ, ನಿಲ್ಲಿಸಿತ್ತು. ಅದು ಆಗಬಾರದು ಎಂಬ ಚರ್ಚೆ ನಡೆಯುತ್ತಿತ್ತು. ಮುಂದಿನ ವರ್ಷಕ್ಕಾದರು ಜಿಲ್ಲೆಗೆ ನೀರು ಬರಬೇಕು.‌ ಈ ಬಗ್ಗೆ ಚರ್ಚಿಸಲು ಭೇಟಿ ಮಾಡುವುದಾಗಿ ಡಿಸಿಎಂ‌ ಅವರಿಗೆ ಹೇಳಿದ್ದೆ. ಡಿಸಿಎಂ ಅವರು ನಾನೇ ಬರುತ್ತೇನೆ, ಮಾತಾಡೋಣ ಎಂದಿದ್ದರು.‌ ಬನ್ನಿ ಎಂದು ಕರೆದಿದ್ದೆ ಎಂದು ತಿಳಿಸಿದರು.

ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಿದ್ದಾರೆ. ನಾವು ಮಾತಾಡಿಕೊಳ್ಳದಿದ್ದರೆ ಇನ್ನ್ಯಾರು ಮಾತಾಡಿಕೊಳ್ಳಬೇಕು? ನಮ್ಮ ಸಮಸ್ಯೆಗಳ ಬಗ್ಗೆ ನಾವೇ ಚರ್ಚೆ ಮಾಡಬೇಕು. ನಾನು‌ ಮತ್ತು ಡಿಕೆ ಶಿವಕುಮಾರ್ ಅವರು ಹೊಸದಾಗಿ ಭೇಟಿ ಆಗುತ್ತಿದ್ದೇವೆಯೇ? ಎಂದು ಪ್ರಶ್ನಿಸಿದರು.

ಡಿಸಿಎಂ ಭೇಟಿಯನ್ನು ಬೇರೆ ರೀತಿಯ ದೃಷ್ಟಿಕೋನದಲ್ಲಿ‌ ನೋಡಬೇಕಿಲ್ಲ. ನಮ್ಮ‌ ಕೆಲಸ ಕಾರ್ಯಗಳಾಗಬೇಕಾಗುತ್ತದೆ. ಗುಬ್ಬಿಯಿಂದ‌ ಕುಣಿಗಲ್‌ವರೆಗೆ ಎಕ್ಸ್‌ಪ್ರೆಸ್ ಕೆನಲ್ ಮಾಡಲು ಅನುಮತಿ ಸಿಕ್ಕಿದೆ.‌ ಕೆಲಸ‌ ಆರಂಭಿಸುವಾಗ ಜನರು ತಡೆದಿದ್ದಾರೆ. ಈ ಬಗ್ಗೆಯೂ ಚರ್ಚಿಸಲಾಗಿದೆ. ನೀರಾವರಿ ಸಚಿವರಾದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಾಂತ್ರಿಕ ಸಮಿತಿ ಮಾಡಿದ್ದಾರೆ.‌ ಅದರ ವರದಿ ಕೊಟ್ಟಮೇಲೆ ಮುಂದುವರಿಯುತ್ತದೆ. ಭೇಟಿ‌ಮಾಡುವುದರನ್ನು ಬೇರೆಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಯತ್ನಾಳ್ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ನಾನು ಸಾವಿರ ಕೋಟಿ ರೂ.ಪಾಯಿ ನೋಡಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಸಾವಿರ ಕೋಟಿ ರೂ. ಎಲ್ಲಿಟ್ಟಿದ್ದಾರೆ ಎಂಬುದನ್ನು ಯತ್ನಾಳ್ ಅವರನ್ನೇ‌ ಕೇಳಬೇಕು. ಸಾವಿರ ಕೋಟಿ ಎಲ್ಲಿಟ್ಟಿದ್ದಾರೆ ಎಂಬುದರ ಬಗ್ಗೆ ತನಿಖೆಯಾಗಬೇಕು. ಸುಮೋಟೋ ದಾಖಲಿಸುವ ಬಗ್ಗೆ ಪರಿಶೀಲಿಸಲಾಗುವುದು.‌ ಸಂದರ್ಭ ಬಂದರೆ ದಾಖಲಿಸಬೇಕಾಗುತ್ತದೆ ಎಂದು ತಿಳಿಸಿದರು.

ಜಿಗಣಿಯಲ್ಲಿ ಬಾಂಗ್ಲಾ‌ ಪ್ರಜೆಗಳ ಬಂಧನ:
ನನಗೆ ಬಂದಿರುವ ಮಾಹಿತಿ ಪ್ರಕಾರ ಹತ್ತು ವರ್ಷದಿಂದ ಭಾರತದಲ್ಲಿದ್ದಾರೆ. ನಾಲ್ವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಯಾವ ಉದ್ದೇಶದಿಂದ ಬೆಂಗಳೂರಿಗೆ ಬಂದಿದ್ದರು ಎಂಬುದು ಹೊರಬರಲಿದೆ. ಹತ್ತು ವರ್ಷದ ಹಿಂದೆ ಭಾರತಕ್ಕೆ ಬಂದಿದ್ದರು ಎಂಬುದು ಸತ್ಯವಾಗಿದ್ದರೆ, ಕೇಂದ್ರ ಗುಪ್ತದಳದ ಗಮನಕ್ಕೆ ಬರಲಿಲ್ಲ.‌ ಬಂಧಿತರು ಪಾಸ್‌ಪೋರ್ಟ್ ಮಾಡಿಸಿಕೊಳ್ಳುವ ಮಟ್ಟಕ್ಕೆ ಹೋಗಿದ್ದರು. ಹೆಸರು ಬದಲಾಯಿಸಿಕೊಂಡಿದ್ದಾರೆ. ತನಿಖೆಯಲ್ಲಿ ಏನೆಲ್ಲ ಮಾಹಿತಿಗಳು ಹೊರಬರುತ್ತವೆ ಎಂಬುದನ್ನು ನೋಡೋಣ ಎಂದು ತಿಳಿಸಿದರು.

ಬಹಳ ಜನ ಬಾಂಗ್ಲಾ ದೇಶದವರು ಬಂದಿದ್ದಾರೆ. ಪ್ರತಿನಿತ್ಯ ಹಿಡಿದು ವರದಿ ನೀಡುತ್ತಿದ್ದೇವೆ. ಬಾಂಗ್ಲಾ ಗಡಿಯಲ್ಲಿ ನುಸುಳದಂತೆ ಬಂದೋಬಸ್ತ್ ಹೆಚ್ಚಿಸಬೇಕು. ಕೇಂದ್ರ ಸರ್ಕಾರದ ಗಮನಕ್ಕೆ‌ ತುರವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಬಾಂಗ್ಲಾ ದೇಶದ ಹೈಕಮೀಷನ್‌ಗು ತಿಳಿಸುತ್ತಿದ್ದೇವೆ ಎಂದರು.

ಫ್ರೇಜರ್‌ಟೌನ್‌ನಲ್ಲಿ‌ ಪೊಲೀಸ್ ಮನೆಗಳ ದುಸ್ಥಿತಿಯನ್ನು ಪರಿಶೀಲಿಸಲು ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸುತ್ತೇನೆ.‌ ಸಾಧ್ಯವಾದರೆ ಖುದ್ದಾಗಿ ಭೇಟಿ ನೀಡಿ, ಸೂಕ್ತ ನಿರ್ದೇಶನ‌ ನೀಡುತ್ತೇನೆ ಎಂದು ತಿಳಿಸಿದರು.

ಹಿರಿಯ ಅಧಿಕಾರಿ ಏನು ಪದ ಬಳಕೆ ಮಾಡಿದ್ದಾರೆ. ಬರ್ನಾಡ್ ಷಾ ಆ ರೀತಿ ಹೇಳಿದ್ದಾರೆ ಅಂತ‌ ಹೇಳಿದ್ದಾರೆಯೇ ಹೊರತು, ಕುಮಾರಸ್ವಾಮಿ ಅವರಿಗೆ ರೆಫರ್ ಮಾಡಿ ಹೇಳಿಲ್ಲವಲ್ಲ. ನಮಗ ಓದುವುದಕ್ಕೆ ಬರಬೇಕಲ್ಲ. ಓದುವುದಕ್ಕೆ, ಅರ್ಥ ಮಾಡಿಕೊಳ್ಳಲು ಬಂದರೆ ಈ ರೀತಿ ಪ್ರಶ್ನೆಯೇ ಬರುವುದಿಲ್ಲ ಎಂದರು.

ಬರ್ನಾಡ್ ಷಾ ಹೇಳಿರುವುದನ್ನು ಉಲ್ಲೇಖಿಸಿದ್ದಾರೆ. ಕುಮಾರಸ್ವಾಮಿ ಅವರು ನನಗೆ ಅನ್ವಯಿಸುತ್ತದೆ ಎಂದು ಯಾಕೆ ಅಂದುಕೊಳ್ಳಬೇಕು. ಗಾದೆಮಾತು, ನಾಣ್ಣುಡಿ, ದೊಡ್ಡವರು ಹೇಳಿದ ಮಾತುಗಳನ್ನು ಒಂದು ಅರ್ಥದಲ್ಲಿ ಹೇಳುತ್ತಾರೆ. ನಮಗೆ ಹೇಗೆ ಬೇಕೋ ಹಾಗೇ ಅರ್ಥ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು.

ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇ.ಡಿ ಅವರಿಗೆ ಮತ್ತೇ ದೂರು ಕೊಡಲಿ. ಅದೆಲ್ಲವನ್ನು ಕಾನೂನು ನೋಡಿಕೊಳ್ಳುತ್ತದೆ. ನಾವು ಪ್ರತಿಕ್ರಿಯಿಸಲು ಆಗುವುದಿಲ್ಲ ಎಂದರು.

ಯಾರಿಗೆ ಯಾರು ದ್ವೇಷ ಮಾಡುತ್ತಾರೋ ಗೊತ್ತಿಲ್ಲ. ದಿನಬೆಳಗಾದರೆ ಇದೇ ಆಗಿದೆ.‌ ಇವರಿಗೆ ಅವರು ಏನೋ ಅಂದರು, ಅವರಿಗೇ ಇವರು ಏನೋ ಅಂದರು ಎಂಬುದಾಗಿದೆ. ಸಾರ್ವಜನಿಕ ಜೀವನ ಇಷ್ಟರ ಮಟ್ಟಿಗೆ ಕಲುಷಿತ ಆದರೆ ಬಹಳ ಕಷ್ಟ ಎಂದು ಬೇಸರ ವ್ಯಕ್ತಪಡಿಸಿದರು.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!