ದೊಡ್ಡಬಳ್ಳಾಪುರದಲ್ಲಿ ಎತ್ತಿನಹೊಳೆ ನೀರು ಸಂಗ್ರಹಕ್ಕೆ 5 ಸಾವಿರ ಎಕರೆ ಭೂಮಿ ಪ್ರಸ್ತಾಪ‌; ಡಿಸಿಎಂ ಜೊತೆ ಚರ್ಚೆ ಎಂದ ಗೃಹ ಸಚಿವ ಪರಮೇಶ್ವರ

ಬೆಂಗಳೂರು: ಎತ್ತಿನಹೊಳೆ ಯೋಜನೆ ವಿಚಾರವಾಗಿ ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಗಮಿಸಿದ್ದರು.‌ ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ಕೆಲಕಾಲ ಚರ್ಚಿಸಿದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಮಾತನಾಡಿದರು.

ಎತ್ತಿನಹೊಳೆ ಯೋಜನೆ ವೇಗವಾಗಿ ಆಗುತ್ತಿಲ್ಲ.‌ ಹಣ ಬಿಡುಗಡೆ ಆಗಬೇಕಿದೆ. ದೊಡ್ಡಬಳ್ಳಾಪುರದಲ್ಲಿ ನೀರು ಸಂಗ್ರಹಕ್ಕೆ ಐದು ಸಾವಿರ ಎಕರೆ ಭೂಮಿ ಪ್ರಸ್ತಾಪ‌ ಮಾಡಲಾಗಿತ್ತು. ಅದರಲ್ಲಿ 2500 ಎಕರೆ ಭೂಮಿ ಕೊರಟಗೆರೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ.‌ ಹಿಂದಿನ ಸರ್ಕಾರ ಇದನ್ನು ಬದಲಾಯಿಸಿ, ನಿಲ್ಲಿಸಿತ್ತು. ಅದು ಆಗಬಾರದು ಎಂಬ ಚರ್ಚೆ ನಡೆಯುತ್ತಿತ್ತು. ಮುಂದಿನ ವರ್ಷಕ್ಕಾದರು ಜಿಲ್ಲೆಗೆ ನೀರು ಬರಬೇಕು.‌ ಈ ಬಗ್ಗೆ ಚರ್ಚಿಸಲು ಭೇಟಿ ಮಾಡುವುದಾಗಿ ಡಿಸಿಎಂ‌ ಅವರಿಗೆ ಹೇಳಿದ್ದೆ. ಡಿಸಿಎಂ ಅವರು ನಾನೇ ಬರುತ್ತೇನೆ, ಮಾತಾಡೋಣ ಎಂದಿದ್ದರು.‌ ಬನ್ನಿ ಎಂದು ಕರೆದಿದ್ದೆ ಎಂದು ತಿಳಿಸಿದರು.

ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಿದ್ದಾರೆ. ನಾವು ಮಾತಾಡಿಕೊಳ್ಳದಿದ್ದರೆ ಇನ್ನ್ಯಾರು ಮಾತಾಡಿಕೊಳ್ಳಬೇಕು? ನಮ್ಮ ಸಮಸ್ಯೆಗಳ ಬಗ್ಗೆ ನಾವೇ ಚರ್ಚೆ ಮಾಡಬೇಕು. ನಾನು‌ ಮತ್ತು ಡಿಕೆ ಶಿವಕುಮಾರ್ ಅವರು ಹೊಸದಾಗಿ ಭೇಟಿ ಆಗುತ್ತಿದ್ದೇವೆಯೇ? ಎಂದು ಪ್ರಶ್ನಿಸಿದರು.

ಡಿಸಿಎಂ ಭೇಟಿಯನ್ನು ಬೇರೆ ರೀತಿಯ ದೃಷ್ಟಿಕೋನದಲ್ಲಿ‌ ನೋಡಬೇಕಿಲ್ಲ. ನಮ್ಮ‌ ಕೆಲಸ ಕಾರ್ಯಗಳಾಗಬೇಕಾಗುತ್ತದೆ. ಗುಬ್ಬಿಯಿಂದ‌ ಕುಣಿಗಲ್‌ವರೆಗೆ ಎಕ್ಸ್‌ಪ್ರೆಸ್ ಕೆನಲ್ ಮಾಡಲು ಅನುಮತಿ ಸಿಕ್ಕಿದೆ.‌ ಕೆಲಸ‌ ಆರಂಭಿಸುವಾಗ ಜನರು ತಡೆದಿದ್ದಾರೆ. ಈ ಬಗ್ಗೆಯೂ ಚರ್ಚಿಸಲಾಗಿದೆ. ನೀರಾವರಿ ಸಚಿವರಾದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಾಂತ್ರಿಕ ಸಮಿತಿ ಮಾಡಿದ್ದಾರೆ.‌ ಅದರ ವರದಿ ಕೊಟ್ಟಮೇಲೆ ಮುಂದುವರಿಯುತ್ತದೆ. ಭೇಟಿ‌ಮಾಡುವುದರನ್ನು ಬೇರೆಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಯತ್ನಾಳ್ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ನಾನು ಸಾವಿರ ಕೋಟಿ ರೂ.ಪಾಯಿ ನೋಡಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಸಾವಿರ ಕೋಟಿ ರೂ. ಎಲ್ಲಿಟ್ಟಿದ್ದಾರೆ ಎಂಬುದನ್ನು ಯತ್ನಾಳ್ ಅವರನ್ನೇ‌ ಕೇಳಬೇಕು. ಸಾವಿರ ಕೋಟಿ ಎಲ್ಲಿಟ್ಟಿದ್ದಾರೆ ಎಂಬುದರ ಬಗ್ಗೆ ತನಿಖೆಯಾಗಬೇಕು. ಸುಮೋಟೋ ದಾಖಲಿಸುವ ಬಗ್ಗೆ ಪರಿಶೀಲಿಸಲಾಗುವುದು.‌ ಸಂದರ್ಭ ಬಂದರೆ ದಾಖಲಿಸಬೇಕಾಗುತ್ತದೆ ಎಂದು ತಿಳಿಸಿದರು.

ಜಿಗಣಿಯಲ್ಲಿ ಬಾಂಗ್ಲಾ‌ ಪ್ರಜೆಗಳ ಬಂಧನ:
ನನಗೆ ಬಂದಿರುವ ಮಾಹಿತಿ ಪ್ರಕಾರ ಹತ್ತು ವರ್ಷದಿಂದ ಭಾರತದಲ್ಲಿದ್ದಾರೆ. ನಾಲ್ವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಯಾವ ಉದ್ದೇಶದಿಂದ ಬೆಂಗಳೂರಿಗೆ ಬಂದಿದ್ದರು ಎಂಬುದು ಹೊರಬರಲಿದೆ. ಹತ್ತು ವರ್ಷದ ಹಿಂದೆ ಭಾರತಕ್ಕೆ ಬಂದಿದ್ದರು ಎಂಬುದು ಸತ್ಯವಾಗಿದ್ದರೆ, ಕೇಂದ್ರ ಗುಪ್ತದಳದ ಗಮನಕ್ಕೆ ಬರಲಿಲ್ಲ.‌ ಬಂಧಿತರು ಪಾಸ್‌ಪೋರ್ಟ್ ಮಾಡಿಸಿಕೊಳ್ಳುವ ಮಟ್ಟಕ್ಕೆ ಹೋಗಿದ್ದರು. ಹೆಸರು ಬದಲಾಯಿಸಿಕೊಂಡಿದ್ದಾರೆ. ತನಿಖೆಯಲ್ಲಿ ಏನೆಲ್ಲ ಮಾಹಿತಿಗಳು ಹೊರಬರುತ್ತವೆ ಎಂಬುದನ್ನು ನೋಡೋಣ ಎಂದು ತಿಳಿಸಿದರು.

ಬಹಳ ಜನ ಬಾಂಗ್ಲಾ ದೇಶದವರು ಬಂದಿದ್ದಾರೆ. ಪ್ರತಿನಿತ್ಯ ಹಿಡಿದು ವರದಿ ನೀಡುತ್ತಿದ್ದೇವೆ. ಬಾಂಗ್ಲಾ ಗಡಿಯಲ್ಲಿ ನುಸುಳದಂತೆ ಬಂದೋಬಸ್ತ್ ಹೆಚ್ಚಿಸಬೇಕು. ಕೇಂದ್ರ ಸರ್ಕಾರದ ಗಮನಕ್ಕೆ‌ ತುರವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಬಾಂಗ್ಲಾ ದೇಶದ ಹೈಕಮೀಷನ್‌ಗು ತಿಳಿಸುತ್ತಿದ್ದೇವೆ ಎಂದರು.

ಫ್ರೇಜರ್‌ಟೌನ್‌ನಲ್ಲಿ‌ ಪೊಲೀಸ್ ಮನೆಗಳ ದುಸ್ಥಿತಿಯನ್ನು ಪರಿಶೀಲಿಸಲು ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸುತ್ತೇನೆ.‌ ಸಾಧ್ಯವಾದರೆ ಖುದ್ದಾಗಿ ಭೇಟಿ ನೀಡಿ, ಸೂಕ್ತ ನಿರ್ದೇಶನ‌ ನೀಡುತ್ತೇನೆ ಎಂದು ತಿಳಿಸಿದರು.

ಹಿರಿಯ ಅಧಿಕಾರಿ ಏನು ಪದ ಬಳಕೆ ಮಾಡಿದ್ದಾರೆ. ಬರ್ನಾಡ್ ಷಾ ಆ ರೀತಿ ಹೇಳಿದ್ದಾರೆ ಅಂತ‌ ಹೇಳಿದ್ದಾರೆಯೇ ಹೊರತು, ಕುಮಾರಸ್ವಾಮಿ ಅವರಿಗೆ ರೆಫರ್ ಮಾಡಿ ಹೇಳಿಲ್ಲವಲ್ಲ. ನಮಗ ಓದುವುದಕ್ಕೆ ಬರಬೇಕಲ್ಲ. ಓದುವುದಕ್ಕೆ, ಅರ್ಥ ಮಾಡಿಕೊಳ್ಳಲು ಬಂದರೆ ಈ ರೀತಿ ಪ್ರಶ್ನೆಯೇ ಬರುವುದಿಲ್ಲ ಎಂದರು.

ಬರ್ನಾಡ್ ಷಾ ಹೇಳಿರುವುದನ್ನು ಉಲ್ಲೇಖಿಸಿದ್ದಾರೆ. ಕುಮಾರಸ್ವಾಮಿ ಅವರು ನನಗೆ ಅನ್ವಯಿಸುತ್ತದೆ ಎಂದು ಯಾಕೆ ಅಂದುಕೊಳ್ಳಬೇಕು. ಗಾದೆಮಾತು, ನಾಣ್ಣುಡಿ, ದೊಡ್ಡವರು ಹೇಳಿದ ಮಾತುಗಳನ್ನು ಒಂದು ಅರ್ಥದಲ್ಲಿ ಹೇಳುತ್ತಾರೆ. ನಮಗೆ ಹೇಗೆ ಬೇಕೋ ಹಾಗೇ ಅರ್ಥ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು.

ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇ.ಡಿ ಅವರಿಗೆ ಮತ್ತೇ ದೂರು ಕೊಡಲಿ. ಅದೆಲ್ಲವನ್ನು ಕಾನೂನು ನೋಡಿಕೊಳ್ಳುತ್ತದೆ. ನಾವು ಪ್ರತಿಕ್ರಿಯಿಸಲು ಆಗುವುದಿಲ್ಲ ಎಂದರು.

ಯಾರಿಗೆ ಯಾರು ದ್ವೇಷ ಮಾಡುತ್ತಾರೋ ಗೊತ್ತಿಲ್ಲ. ದಿನಬೆಳಗಾದರೆ ಇದೇ ಆಗಿದೆ.‌ ಇವರಿಗೆ ಅವರು ಏನೋ ಅಂದರು, ಅವರಿಗೇ ಇವರು ಏನೋ ಅಂದರು ಎಂಬುದಾಗಿದೆ. ಸಾರ್ವಜನಿಕ ಜೀವನ ಇಷ್ಟರ ಮಟ್ಟಿಗೆ ಕಲುಷಿತ ಆದರೆ ಬಹಳ ಕಷ್ಟ ಎಂದು ಬೇಸರ ವ್ಯಕ್ತಪಡಿಸಿದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]