ದೊಡ್ಡಬಳ್ಳಾಪುರದಲ್ಲಿ ಎತ್ತಿನಹೊಳೆ ನೀರು ಸಂಗ್ರಹಕ್ಕೆ 5 ಸಾವಿರ ಎಕರೆ ಭೂಮಿ ಪ್ರಸ್ತಾಪ‌; ಡಿಸಿಎಂ ಜೊತೆ ಚರ್ಚೆ ಎಂದ ಗೃಹ ಸಚಿವ ಪರಮೇಶ್ವರ

ಬೆಂಗಳೂರು: ಎತ್ತಿನಹೊಳೆ ಯೋಜನೆ ವಿಚಾರವಾಗಿ ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಗಮಿಸಿದ್ದರು.‌ ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ಕೆಲಕಾಲ ಚರ್ಚಿಸಿದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಮಾತನಾಡಿದರು.

ಎತ್ತಿನಹೊಳೆ ಯೋಜನೆ ವೇಗವಾಗಿ ಆಗುತ್ತಿಲ್ಲ.‌ ಹಣ ಬಿಡುಗಡೆ ಆಗಬೇಕಿದೆ. ದೊಡ್ಡಬಳ್ಳಾಪುರದಲ್ಲಿ ನೀರು ಸಂಗ್ರಹಕ್ಕೆ ಐದು ಸಾವಿರ ಎಕರೆ ಭೂಮಿ ಪ್ರಸ್ತಾಪ‌ ಮಾಡಲಾಗಿತ್ತು. ಅದರಲ್ಲಿ 2500 ಎಕರೆ ಭೂಮಿ ಕೊರಟಗೆರೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ.‌ ಹಿಂದಿನ ಸರ್ಕಾರ ಇದನ್ನು ಬದಲಾಯಿಸಿ, ನಿಲ್ಲಿಸಿತ್ತು. ಅದು ಆಗಬಾರದು ಎಂಬ ಚರ್ಚೆ ನಡೆಯುತ್ತಿತ್ತು. ಮುಂದಿನ ವರ್ಷಕ್ಕಾದರು ಜಿಲ್ಲೆಗೆ ನೀರು ಬರಬೇಕು.‌ ಈ ಬಗ್ಗೆ ಚರ್ಚಿಸಲು ಭೇಟಿ ಮಾಡುವುದಾಗಿ ಡಿಸಿಎಂ‌ ಅವರಿಗೆ ಹೇಳಿದ್ದೆ. ಡಿಸಿಎಂ ಅವರು ನಾನೇ ಬರುತ್ತೇನೆ, ಮಾತಾಡೋಣ ಎಂದಿದ್ದರು.‌ ಬನ್ನಿ ಎಂದು ಕರೆದಿದ್ದೆ ಎಂದು ತಿಳಿಸಿದರು.

ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಿದ್ದಾರೆ. ನಾವು ಮಾತಾಡಿಕೊಳ್ಳದಿದ್ದರೆ ಇನ್ನ್ಯಾರು ಮಾತಾಡಿಕೊಳ್ಳಬೇಕು? ನಮ್ಮ ಸಮಸ್ಯೆಗಳ ಬಗ್ಗೆ ನಾವೇ ಚರ್ಚೆ ಮಾಡಬೇಕು. ನಾನು‌ ಮತ್ತು ಡಿಕೆ ಶಿವಕುಮಾರ್ ಅವರು ಹೊಸದಾಗಿ ಭೇಟಿ ಆಗುತ್ತಿದ್ದೇವೆಯೇ? ಎಂದು ಪ್ರಶ್ನಿಸಿದರು.

ಡಿಸಿಎಂ ಭೇಟಿಯನ್ನು ಬೇರೆ ರೀತಿಯ ದೃಷ್ಟಿಕೋನದಲ್ಲಿ‌ ನೋಡಬೇಕಿಲ್ಲ. ನಮ್ಮ‌ ಕೆಲಸ ಕಾರ್ಯಗಳಾಗಬೇಕಾಗುತ್ತದೆ. ಗುಬ್ಬಿಯಿಂದ‌ ಕುಣಿಗಲ್‌ವರೆಗೆ ಎಕ್ಸ್‌ಪ್ರೆಸ್ ಕೆನಲ್ ಮಾಡಲು ಅನುಮತಿ ಸಿಕ್ಕಿದೆ.‌ ಕೆಲಸ‌ ಆರಂಭಿಸುವಾಗ ಜನರು ತಡೆದಿದ್ದಾರೆ. ಈ ಬಗ್ಗೆಯೂ ಚರ್ಚಿಸಲಾಗಿದೆ. ನೀರಾವರಿ ಸಚಿವರಾದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಾಂತ್ರಿಕ ಸಮಿತಿ ಮಾಡಿದ್ದಾರೆ.‌ ಅದರ ವರದಿ ಕೊಟ್ಟಮೇಲೆ ಮುಂದುವರಿಯುತ್ತದೆ. ಭೇಟಿ‌ಮಾಡುವುದರನ್ನು ಬೇರೆಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಯತ್ನಾಳ್ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ನಾನು ಸಾವಿರ ಕೋಟಿ ರೂ.ಪಾಯಿ ನೋಡಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಸಾವಿರ ಕೋಟಿ ರೂ. ಎಲ್ಲಿಟ್ಟಿದ್ದಾರೆ ಎಂಬುದನ್ನು ಯತ್ನಾಳ್ ಅವರನ್ನೇ‌ ಕೇಳಬೇಕು. ಸಾವಿರ ಕೋಟಿ ಎಲ್ಲಿಟ್ಟಿದ್ದಾರೆ ಎಂಬುದರ ಬಗ್ಗೆ ತನಿಖೆಯಾಗಬೇಕು. ಸುಮೋಟೋ ದಾಖಲಿಸುವ ಬಗ್ಗೆ ಪರಿಶೀಲಿಸಲಾಗುವುದು.‌ ಸಂದರ್ಭ ಬಂದರೆ ದಾಖಲಿಸಬೇಕಾಗುತ್ತದೆ ಎಂದು ತಿಳಿಸಿದರು.

ಜಿಗಣಿಯಲ್ಲಿ ಬಾಂಗ್ಲಾ‌ ಪ್ರಜೆಗಳ ಬಂಧನ:
ನನಗೆ ಬಂದಿರುವ ಮಾಹಿತಿ ಪ್ರಕಾರ ಹತ್ತು ವರ್ಷದಿಂದ ಭಾರತದಲ್ಲಿದ್ದಾರೆ. ನಾಲ್ವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಯಾವ ಉದ್ದೇಶದಿಂದ ಬೆಂಗಳೂರಿಗೆ ಬಂದಿದ್ದರು ಎಂಬುದು ಹೊರಬರಲಿದೆ. ಹತ್ತು ವರ್ಷದ ಹಿಂದೆ ಭಾರತಕ್ಕೆ ಬಂದಿದ್ದರು ಎಂಬುದು ಸತ್ಯವಾಗಿದ್ದರೆ, ಕೇಂದ್ರ ಗುಪ್ತದಳದ ಗಮನಕ್ಕೆ ಬರಲಿಲ್ಲ.‌ ಬಂಧಿತರು ಪಾಸ್‌ಪೋರ್ಟ್ ಮಾಡಿಸಿಕೊಳ್ಳುವ ಮಟ್ಟಕ್ಕೆ ಹೋಗಿದ್ದರು. ಹೆಸರು ಬದಲಾಯಿಸಿಕೊಂಡಿದ್ದಾರೆ. ತನಿಖೆಯಲ್ಲಿ ಏನೆಲ್ಲ ಮಾಹಿತಿಗಳು ಹೊರಬರುತ್ತವೆ ಎಂಬುದನ್ನು ನೋಡೋಣ ಎಂದು ತಿಳಿಸಿದರು.

ಬಹಳ ಜನ ಬಾಂಗ್ಲಾ ದೇಶದವರು ಬಂದಿದ್ದಾರೆ. ಪ್ರತಿನಿತ್ಯ ಹಿಡಿದು ವರದಿ ನೀಡುತ್ತಿದ್ದೇವೆ. ಬಾಂಗ್ಲಾ ಗಡಿಯಲ್ಲಿ ನುಸುಳದಂತೆ ಬಂದೋಬಸ್ತ್ ಹೆಚ್ಚಿಸಬೇಕು. ಕೇಂದ್ರ ಸರ್ಕಾರದ ಗಮನಕ್ಕೆ‌ ತುರವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಬಾಂಗ್ಲಾ ದೇಶದ ಹೈಕಮೀಷನ್‌ಗು ತಿಳಿಸುತ್ತಿದ್ದೇವೆ ಎಂದರು.

ಫ್ರೇಜರ್‌ಟೌನ್‌ನಲ್ಲಿ‌ ಪೊಲೀಸ್ ಮನೆಗಳ ದುಸ್ಥಿತಿಯನ್ನು ಪರಿಶೀಲಿಸಲು ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸುತ್ತೇನೆ.‌ ಸಾಧ್ಯವಾದರೆ ಖುದ್ದಾಗಿ ಭೇಟಿ ನೀಡಿ, ಸೂಕ್ತ ನಿರ್ದೇಶನ‌ ನೀಡುತ್ತೇನೆ ಎಂದು ತಿಳಿಸಿದರು.

ಹಿರಿಯ ಅಧಿಕಾರಿ ಏನು ಪದ ಬಳಕೆ ಮಾಡಿದ್ದಾರೆ. ಬರ್ನಾಡ್ ಷಾ ಆ ರೀತಿ ಹೇಳಿದ್ದಾರೆ ಅಂತ‌ ಹೇಳಿದ್ದಾರೆಯೇ ಹೊರತು, ಕುಮಾರಸ್ವಾಮಿ ಅವರಿಗೆ ರೆಫರ್ ಮಾಡಿ ಹೇಳಿಲ್ಲವಲ್ಲ. ನಮಗ ಓದುವುದಕ್ಕೆ ಬರಬೇಕಲ್ಲ. ಓದುವುದಕ್ಕೆ, ಅರ್ಥ ಮಾಡಿಕೊಳ್ಳಲು ಬಂದರೆ ಈ ರೀತಿ ಪ್ರಶ್ನೆಯೇ ಬರುವುದಿಲ್ಲ ಎಂದರು.

ಬರ್ನಾಡ್ ಷಾ ಹೇಳಿರುವುದನ್ನು ಉಲ್ಲೇಖಿಸಿದ್ದಾರೆ. ಕುಮಾರಸ್ವಾಮಿ ಅವರು ನನಗೆ ಅನ್ವಯಿಸುತ್ತದೆ ಎಂದು ಯಾಕೆ ಅಂದುಕೊಳ್ಳಬೇಕು. ಗಾದೆಮಾತು, ನಾಣ್ಣುಡಿ, ದೊಡ್ಡವರು ಹೇಳಿದ ಮಾತುಗಳನ್ನು ಒಂದು ಅರ್ಥದಲ್ಲಿ ಹೇಳುತ್ತಾರೆ. ನಮಗೆ ಹೇಗೆ ಬೇಕೋ ಹಾಗೇ ಅರ್ಥ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು.

ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇ.ಡಿ ಅವರಿಗೆ ಮತ್ತೇ ದೂರು ಕೊಡಲಿ. ಅದೆಲ್ಲವನ್ನು ಕಾನೂನು ನೋಡಿಕೊಳ್ಳುತ್ತದೆ. ನಾವು ಪ್ರತಿಕ್ರಿಯಿಸಲು ಆಗುವುದಿಲ್ಲ ಎಂದರು.

ಯಾರಿಗೆ ಯಾರು ದ್ವೇಷ ಮಾಡುತ್ತಾರೋ ಗೊತ್ತಿಲ್ಲ. ದಿನಬೆಳಗಾದರೆ ಇದೇ ಆಗಿದೆ.‌ ಇವರಿಗೆ ಅವರು ಏನೋ ಅಂದರು, ಅವರಿಗೇ ಇವರು ಏನೋ ಅಂದರು ಎಂಬುದಾಗಿದೆ. ಸಾರ್ವಜನಿಕ ಜೀವನ ಇಷ್ಟರ ಮಟ್ಟಿಗೆ ಕಲುಷಿತ ಆದರೆ ಬಹಳ ಕಷ್ಟ ಎಂದು ಬೇಸರ ವ್ಯಕ್ತಪಡಿಸಿದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]