ಗಾಂಧಿ ಜಯಂತಿ – ಮಹಾಲಯ ಅಮಾವಾಸ್ಯೆ; ನಾಳೆ ಮಾಂಸ, ಮದ್ಯ ನಿಷೇಧ.. ದೊಡ್ಡಬಳ್ಳಾಪುರ ನಗರಸಭೆಯಿಂದ ಪೊಲೀಸರಿಗೆ ಪತ್ರ ..!

ದೊಡ್ಡಬಳ್ಳಾಪುರ: ಪಿತೃಪಕ್ಷದ ಮಹಾಲಯ ಅಮಾವಾಸ್ಯೆ ಅ.2 ರಂದು ಆಚರಿಸಲಾಗುತ್ತಿದೆ. ಆದರೆ, ಅದೇ ದಿನ ಗಾಂಧಿ ಜಯಂತಿ ಕೂಡ ಆಗಿರುವುದರಿಂದ ಮಾಂಸ ಹಾಗೂ ಮದ್ಯ ಮಾರಾಟವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ದೊಡ್ಡಬಳ್ಳಾಪುರ ನಗರಸಭೆ ನಿಷೇಧಿಸಿದೆ. ಇದರಿಂದಾಗಿ ಹಿರಿಯರ ಪೂಜೆಗೆ ಮದ್ಯ ಮತ್ತು ಮಾಂಸವನ್ನು ಇಟ್ಟು ಪೂಜಿಸುವವರಿಗೆ ತೊಡಕಾಗಲಿದೆ.

ಮಹಾಲಯ ಅಮಾವಾಸ್ಯೆ ಮತ್ತು ಗಾಂಧಿ ಜಯಂತಿಯ ದಿನ ಬಂದಿರುವ ಕಾರಣ, ಆ ದಿನ ಮಾಂಸ ಮಾರಾಟಕ್ಕೆ ಅನುಮತಿ ನೀಡಬೇಕು ಎಂದು ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವಿ ವಿ ಸತ್ಯನಾರಾಯಣ ಹಾಗೂ ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕಯ ಅಧ್ಯಕ್ಷ ಬಿ.ಎಂ.ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್‌ ಅಸೋಸಿಯೇಷನ್‌ ಪದಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ ನಿಗದಿ ಆಗಿರುವುದರಿಂದ ಅಂದು ಮಾಂಸ ಮಾರಾಟಕ್ಕೆ ಅನುಮತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು.

ಆದಾಗ್ಯೂ ಜಿಲ್ಲಾಡಳಿತ ಹಾಗೂ ನಗರಸಭೆ ನಿಷೇಧಿಸಿದ್ದು, ಪಿತೃಪಕ್ಷಕ್ಕೆ ಹಿರಿಯರಿಗೆ ಮಾಂಸ, ಮದ್ಯ ಇಟ್ಟು ಪೂಜಿಸುವವರು ತೊಂದರೆಗೆ ಒಳಗಾಗುವಂತೆ ಮಾಡಿದೆ.

ಭದ್ರತೆಗೆ ಮನವಿ; ಗಾಂಧಿ ಜಯತಿ ಪ್ರಯುಕ್ತ, ನಗರದಲ್ಲಿ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಈ ಸಂಬಂಧ ನಗರದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮಕೈಗೊಳ್ಳ ಬೇಕೆಂದು ನಗರಸಭೆ ಪೌರಾಯುಕ್ತ ಕಾರ್ತಿಕ್ ಈಶ್ವರ್ ಅವರು ನಗರ ಠಾಣೆ ಪೊಲೀಸರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ‌. ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜಕೀಯ

ಮೋದಿ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ: ಹೆಚ್.ಡಿ. ದೇವೇಗೌಡ

ಮೋದಿ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ: ಹೆಚ್.ಡಿ. ದೇವೇಗೌಡ

ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ (Modi) ಅವರ ಜತೆ ಮದುವೆಯಾದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.

[ccc_my_favorite_select_button post_id="120397"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!