ನಾನು ಯಾವುದೇ ಅಧಿಕಾರಿಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ; ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ಹಿಂದೆ ಇದೇ ಸಿದ್ದರಾಮಯ್ಯ ಅವರ ಪಟಾಲಂ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಸಂಚು ಹೂಡಿತ್ತು. ಈಗಿರುವ ಅವರ ಪಟಾಲಂ ಕೂಡ ಅದೇ ರೀತಿಯಲ್ಲಿ ಕನಸು ಕಾಣುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ನವದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್ ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗೆ ಇದೆ. ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಕಳಿಸಬೇಕೆಂದು ಚರ್ಚೆ ಮಾಡಲಾಗಿದೆ ಇಂದು ಆರೋಪ ಮಾಡಿದರು.

ನಾನು ಜಾಮೀನು ತೆಗೆದುಕೊಂಡಿದ್ದೇನೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ಈ ಸರ್ಕಾರದ ಕೆಟ್ಟ ಅಧಿಕಾರಿಗಳು ಏನು ಬೇಕಾದರೂ ಮಾಡುತ್ತಾರೆ ಎಂದು ನನ್ನ ವಕೀಲರು ಜಾಮೀನು ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಅದಕ್ಕೆ ಜಾಮೀನು ಪಡೆದಿದ್ದೇನೆ ಎಂದು ಅವರು ಹೇಳಿದರು.

ಕಳೆದ ಮೂರ್ನಾಲ್ಕು ತಿಂಗಳಿಂದ ರಾಜ್ಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. 80 ಕೋಟಿ ಗುಳುಂ ಮಾಡಿರೋ ಪ್ರಕರಣದಲ್ಲಿ ಏನಾಯಿತು? ಎಸ್ ಐಟಿ ಯಾರನ್ನೋ ಬಂಧನ ಮಾಡಿದ್ದರು. ಯಾರೋ ಸಂಬಂಧವಿಲ್ಲದ ವ್ಯಕ್ತಿಯ ಹೆಸರನ್ನು ಪ್ರಕರಣದಲ್ಲಿ ಸೇರಿಸಿದಿರಿ. ನಾನು ಯಾವುದೇ ಅಧಿಕಾರಿಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ. ನಾನು ಆ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ನನ್ನ ಕೇಸ್ ಬಗ್ಗೆ ಅಲ್ಲ. ರಾಜ್ಯಪಾಲರ ಕಚೇರಿ ತನಿಖೆ ಮಾಡುವುದಕ್ಕೆ ಅವಕಾಶ ಕೇಳಿ ಪತ್ರ ಬರೆದು, ಒಂದು ಖಾಸಗಿ ಚಾನೆಲ್ ಗೆ ಲೀಕ್ ಮಾಡಿರುವ ಹಿನ್ನಲೆಯಲ್ಲಿ ನಾನು ಪ್ರಶ್ನೆ ಮಾಡಿದ್ದು ಎಂದು ಅವರು ಹೇಳಿದರು.

ನಾನು ಆ ಪೋಲಿಸ್ ಅಧಿಕಾರಿಯ ಉದ್ದಟನವನ್ನು ಖಂಡಿಸಿದ್ದೆ. ಆ ಅಧಿಕಾರಿಯ ಹಿನ್ನೆಲೆ ಏನಿದೆ ಎನ್ನುವುದನ್ನು ಹೇಳಿದ್ದೇನೆ. ಬೆಂಗಳೂರಿನ ಲ್ಯಾಂಡ್ ಮಾಫಿಯಾ, ಕಾನೂನು ಬಾಹಿರ ಚಟುವಟಿಕೆ ಮಾಡುವವರ ಜತೆ ಅವರ ನೇರ ನಂಟಿದೆ. ಸಮಾಜ ವಿದ್ರೋಹಿ ಶಕ್ತಿಗಳಿಗೆ ಸಾಥ್ ನೀಡಲು ಈ ವ್ಯಕ್ತಿಗೆ ಐಪಿಎಸ್ ಸ್ಥಾನ ಕೊಟ್ಟಿದ್ದಾರಾ? ಕ್ರಿಮಿನಲ್ ಪ್ರಕರಣದಲ್ಲಿ ಅಧಿಕಾರಿಯೇ ಆರೋಪಿ ನಂಬರ್ 2 ಆಗಿದ್ದಾರೆ. ಸದ್ಯ ಜಾಮೀನು ಮೇಲೆ ಹೊರಗಡೆ ಇದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಅಧಿಕಾರಿಗಳು ಸಿಎಂ ಬಳಿ ಬಂದು ನೀವು ಕ್ರಿಮಿನಲ್ ಸಿಎಂ ಅಂದ್ರೆ ಏನು ಮಾಡುತ್ತೀರಿ? ಶನಿವಾರ ಕಚೇರಿ ಕಚೇರಿ ರಜೆ ಇದ್ದರೂ ಸಹ ಸಹೋದ್ಯೋಗಿಗಳಿಗೆ ಪತ್ರ ಬರೆಯುವ ನೆಲದಲ್ಲಿ ನನ್ನ ಬಗ್ಗೆ ಅಶ್ಲೀಲ ಭಾಷೆ ಬಳಕೆ ಮಾಡಿದ್ದಾರೆ. ಅದು ಕಚೇರಿ ಮೆಮೊ ಅಲ್ಲ, ಅದರಲ್ಲಿ ಸೀಲ್ ಇಲ್ಲ, ಆ ಇಲಾಖೆಯ ಎಂಬಲಂ ಇಲ್ಲ ಎಂದು ಸಚಿವರು ಹೇಳಿದರು

ಗೃಹ ಸಚಿವ ಡಾ.ಪರಮೇಶ್ವರ ಶಬ್ದಪಂಡಿತರು. ನನ್ನ ಹೆಸರು ಉಲ್ಲೇಖಿಸಿಲ್ಲ ಅಂತಾರೆ. ಸಿಎಂ ಮೇಲೂ ಆರೋಪ ಇದೆ, ನಾಳೆ ಬೆಳಗ್ಗೆ ಬಂದು ನಿಮ್ಮ ಅಧಿಕಾರಿ ನಿಮ್ಮನ್ನು ಕ್ರಿಮಿನಲ್ ಮುಖ್ಯಮಂತ್ರಿ ಅಂತಾ ಕರೆದರೆ ಏನು ಮಾಡುತ್ತೀರಿ. ನನ್ನ ವಿರುದ್ಧ ಬರೆದ ಪತ್ರ ಹೇಗೆ ಹಂಚಲಾಯಿತು? ನನ್ನ ವಿರುದ್ಧ ಸಿಎಂ ಕಚೇರಿಯಿಂದ ಸೋಮವಾರ ರಾತ್ರಿ ಮತ್ತೊಂದು ಪತ್ರ ದಾಖಲೆಗಳು ಹೋಗಿವೆ. ಪತ್ರದಲ್ಲಿ ಉಲ್ಲೇಖಿಸಿರುವ ಕಿಶೋರ್ ಕುಮಾರ ಅವರನ್ನು ಇವರು ಎಲ್ಲಿಗೆ ಕರೆಸಿಕೊಂಡಿದ್ದರು? ಎಂದು ಅವರು ಪ್ರಶ್ನಿಸಿದರು.

ರಾಜಕೀಯ

ಬೇಸರ ಬದಿಗೊತ್ತಿ ದೊಡ್ಡಬಳ್ಳಾಪುರದ ಜೆಡಿಎಸ್ ಶಕ್ತಿ ತೋರಬೇಕಿದೆ: ಹರೀಶ್ ಗೌಡ ಮನವಿ

ಬೇಸರ ಬದಿಗೊತ್ತಿ ದೊಡ್ಡಬಳ್ಳಾಪುರದ ಜೆಡಿಎಸ್ ಶಕ್ತಿ ತೋರಬೇಕಿದೆ: ಹರೀಶ್ ಗೌಡ ಮನವಿ

ಸೋಲಿನ ಹತಾಶೆ, ಪಕ್ಷದ ಆಂತರಿಕ ಮಟ್ಟದಲ್ಲಿನ ಯಾವುದೇ ಬೇಸರ ಇದ್ದರೂ ಬದಿಗೊತ್ತಿ, ಮುಖಂಡರು, ಕಾರ್ಯಕರ್ತರು ಮುಂಬರುವ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿರುವ ಜೆಡಿಎಸ್ (JDS) ಪಕ್ಷದ ಶಕ್ತಿಯನ್ನು ತೋರುವ ಅನಿರ್ವಾರ್ಯತೆ ಎದುರಾಗಿದೆ ಎಂದು ಜೆಡಿಎಸ್ ಹಿರಿಯ

[ccc_my_favorite_select_button post_id="118211"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಹತ್ಯೆ ಶಂಕೆ (Murder (Suspected) ವ್ಯಕ್ತವಾಗಿದೆ.

[ccc_my_favorite_select_button post_id="118057"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!